No Result
View All Result
Interior / upgradation of Next-Generation Amrit Bharat Coaches. Sample coach ready
English Articles

Interior / upgradation of Next-Generation Amrit Bharat Coaches. Sample coach ready

by ಕಲ್ಪ ನ್ಯೂಸ್
April 6, 2026
0

Kalpa Media House  |  New Delhi  | The Hon’ble Minister of Railways inspected sample coaches developed with proposed interior design...

Read moreDetails
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
SWR Mysuru Division Excels with Record Passenger Revenue and Strong Commercial Growth

SWR Mysuru Division Excels with Record Passenger Revenue and Strong Commercial Growth

April 2, 2026
SWR to run special trains for Good Friday, Easter rush

Summer Special Train Between Tiruchchirappalli & SMVT Bengaluru

April 2, 2026
PESITM hosts Mock CET 2026 to Strengthen KCET Preparation

PESITM hosts Mock CET 2026 to Strengthen KCET Preparation

March 31, 2026
  • Advertise With Us
  • Grievances
  • About Us
  • Contact Us
Monday, April 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಮೈಸೂರು

ವಿಶ್ವದ ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಲು ಸಂಸ್ಕೃತ ಪೂರಕ | ವಿದ್ಯಾಶ್ರೀಶ ಸ್ವಾಮೀಜಿ ಅಭಿಮತ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
August 30, 2024
in ಮೈಸೂರು
0
ವಿಶ್ವದ ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಲು ಸಂಸ್ಕೃತ ಪೂರಕ | ವಿದ್ಯಾಶ್ರೀಶ ಸ್ವಾಮೀಜಿ ಅಭಿಮತ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಮೈಸೂರು  |

ಸಂಸ್ಕೃತ #Sanskrit ಭಾಷಾ ಕಲಿಕೆಯು ಮನುಷ್ಯನನ್ನು ಸುಸಂಸ್ಕೃತನನ್ನಾಗಿಸುತ್ತದೆ ಎಂದು ಶ್ರೀಮನ್ ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಸೋಸಲೆ #Sosale ವ್ಯಾಸರಾಜರ ಮಠಾಧೀಶ ಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ ಹೇಳಿದರು.

ಸಂಸ್ಕೃತ ಮಾಸಾಚರಣೆ ಅಂಗವಾಗಿ ಸೋಸಲೆ ವ್ಯಾಸರಾಜ ಮಠ ಮತ್ತು ತಿ. ನರಸೀಪುರದ ವಿಶ್ವಚೇತನ ಸಂಸ್ಕೃತ ಪಾಠಶಾಲೆ ಸಂಯುಕ್ತವಾಗಿ ಸೋಸಲೆ ಗ್ರಾಮದ ಶ್ರೀಮಠದಲ್ಲಿ ‘ಅಸ್ಮಾಕಂ ಸಂಸ್ಕೃತಂ’ ಶೀರ್ಷಿಕೆಯಡಿ ಹಮ್ಮಿಕೊಂಡಿದ್ದ ಸಂಸ್ಕೃತೋತ್ಸವ ಹಾಗೂ ಶ್ರೀ ಕೃಷ್ಣ ಜಯಂತ್ಯುತ್ಸವ #KrishnaJayanthi ಸಮಾರಂಭದ ಸಾನ್ನಿಧ್ಯ ವಹಿಸಿ ಅವರು ಆಶೀರ್ವಚನ ನೀಡಿದರು.

ಸಂಸ್ಕೃತ ಅತ್ಯಂತ ಸಮೃದ್ಧವಾದ ಭಾಷೆ. ಅದರ ಆಳವಾದ ಅಧ್ಯಯನದಿಂದ ನಮ್ಮ ಜ್ಞಾನ ವಿಸ್ತಾರವಾಗುತ್ತದೆ. ವಿಶ್ವದ ಬಹುತೇಕ ಭಾಷೆಗಳ ಮೇಲೆ ಪ್ರಭುತ್ವ ಸಾಧಿಸಲು ಪೂರಕವಾಗುತ್ತದೆ. ಇದರಿಂದ ವ್ಯಕ್ತಿತ್ವಕ್ಕೆ ಶೋಭೆ ಬರುತ್ತದೆ ಎಂದವರು ಅಭಿಪ್ರಾಯಪಟ್ಟರು.
ಕೃಷ್ಣ ಭಕ್ತಿ ಜಾಗೃತವಾಗಬೇಕು
ಶ್ರೀ ಕೃಷ್ಣ ಸಜ್ಜನರನ್ನ ರಕ್ಷಿಸಿ, ದುರ್ಜನರನ್ನು ಸಂಹಾರ ಮಾಡಲು ದ್ವಾಪರಯುಗದಲ್ಲಿ ಅವತಾರ ತಾಳಿದ. ಇಂದು ಅಂದರೆ ಕಲಿಗಾಲದಲ್ಲಿ ನಮ್ಮ ಹೃದಯದಲ್ಲೇ ಇರುವ ದುಷ್ಟತನವನ್ನು ನಿವಾರಿಸಿಕೊಳ್ಳುವುದು, ದೈವಿಕ ಶಕ್ತಿಗಳನ್ನು ಜಾಗೃತಗೊಳಿಸಿಕೊಳ್ಳುವ ಕಾರ್ಯ ಸಾಧನೆ ಆಗಬೇಕು. ಅದಕ್ಕಾಗಿ ನಮ್ಮಲ್ಲಿ ಕೃಷ್ಣ ಭಕ್ತಿ ಜಾಗೃತವಾಗಬೇಕು. ಇದು ಅತ್ಯಂತ ಪ್ರಮುಖವಾಗಿ ಕಾರ್ಯರೂಪಕ್ಕೆ ಬಂದರೆ ಮಾತ್ರ ಸುಖೀ ಸಮಾಜವನ್ನು, ಸಮೃದ್ಧ ಭಾರತವನ್ನು ನಾವು ನೋಡಲು ಸಾಧ್ಯವಾಗುತ್ತದೆ ಎಂದು ಸ್ವಾಮೀಜಿ ಹೇಳಿದರು.

ಕ್ಷೇತ್ರ ಶಿಕ್ಷಣಾಧಿಕಾರಿ ಸಿ.ಎಸ್. ಶಿವಮೂರ್ತಿ ಮಾತನಾಡಿ, ವಿದ್ಯಾರ್ಥಿಗಳು ಸ್ಪರ್ಧಾ ಮನೋಭಾವವನ್ನು ಬೆಳೆಸಿಕೊಳ್ಳಬೇಕು. ಆಗ ಕಲಿಕೆ ಮತ್ತು ಬೆಳವಣಿಗೆ ಎರಡೂ ಏಕ ಕಾಲದಲ್ಲಿ ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.

ವಿಜಯ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ವೀರಭದ್ರ ಸ್ವಾಮಿ ಮಾತನಾಡಿ, ಸಂಸ್ಕೃತ ಕಲಿಕೆ ಮತ್ತು  ಕೃಷ್ಣ ಭಕ್ತಿ ಎರಡೂ ನಮ್ಮೆಲ್ಲರಿಗೆ ಪ್ರಮಖ ಧ್ಯೇಯ ಆಗಬೇಕು. ಆಗ ಬದುಕು ನಂದನವನ ಆಗುತ್ತದೆ. ವಿದ್ಯಾರ್ಥಿ ದಿಸೆಯಲ್ಲಿಯೇ ಈ ರೀತಿಯ ಸಂಸ್ಕಾರ ರೂಢಿಸಿಕೊಂಡರೆ ಮಕ್ಕಳು ಜವಾಬ್ದಾರಿಯುತ ಪ್ರಜೆಗಳಾಗಲು ಮತ್ತು ಸಾಂಸ್ಕೃತಿಕ ರಾಯಭಾರಿಗಳಾಗಲು ನೆರವಾಗುತ್ತದೆ ಎಂದರು.
ಭಾಷೆಗೆ ಸೀಮಿತ ಚೌಕಟ್ಟು ಇಲ್ಲ
ಕಾರ್ಯಕ್ರಮದ ಪ್ರಧಾನ ಸಂಯೋಜಕ ಡಾ. ಸಿ.ಎಚ್. ಗುರುರಾಜ ರಾವ್ ಮಾತನಾಡಿ, ಅಂತರ್ಲೋಕೀಯ ಭಾಷೆಯಾದ ಸಂಸ್ಕೃತವು ಯಾವುದೇ ಒಂದು ಜಾತಿ, ಮತ ಅಥವಾ ಪಂಗಡದ ನುಡಿ ಅಲ್ಲ. ಇದಕ್ಕೆ ಯಾವುದೇ ಪ್ರದೇಶದ ಗಡಿ-ಮಿತಿಗಳು ಇಲ್ಲ. ಸಾರ್ವಕಾಲಿಕ ಮತ್ತು ಸಾರ್ವತ್ರಿಕ ಮಾನ್ಯತೆ ಹೊಂದಿರುವ ಭಾಷೆ ಸಂಸ್ಕೃತ. ಇದನ್ನು ಒಂದು ವರ್ಗದ ಕಲಿಕೆಗೆ ಮಿತಿ ಮಾಡಿ ಇಟ್ಟರೆ ನಮಗೆ ನಾವೇ ಅನ್ಯಾಯ ಮಾಡಿಕೊಂಡಂತೆ. ಅನಗತ್ಯ ಟೀಕೆ, ಸಲ್ಲದ ವಿಚಾರವಂತಿಕೆ ಬಿಟ್ಟು ಪುರಾತನ ಭಾಷಾ ಕಲಿಕೆ ಮೂಲಕ ಜೀವನಾನುಭವ ವಿಸ್ತರಿಸಿಕೊಳ್ಳೋಣ ಎಂದು ಅವರು ಹೇಳಿದರು.

ವಿಶ್ವಚೇತನ ಸಂಸ್ಕೃತ ಪಾಠಶಾಲೆ ಅಧ್ಯಕ್ಷ ಎಂ.ಎಂ. ನಾಗರಾಜು ಅಧ್ಯಕ್ಷತೆ ವಹಿಸಿದ್ದರು.
ಚಿಣ್ಣರಿಂದ ಭಾಷಾ ಜಾಗೃತಿ ಜಾಥಾ
‘ಅಸ್ಮಾಕಂ ಸಂಸ್ಕೃತಂ’ ಎಂಬ ಧ್ಯೇಯ ವಾಕ್ಯದೊಡನೆ ಹಮ್ಮಿಕೊಂಡಿದ್ದ ‘ಸಂಸ್ಕೃತ ವಸ್ತು ಪ್ರದರ್ಶನಿ’ಗೆ ಬಿಇಒ ಸಿ.ಎಸ್. ಶಿವಮೂರ್ತಿ ಚಾಲನೆ ನೀಡಿದರು.

‘ಪಠತ ಸಂಸ್ಕೃತಂ-ವದತ ಸಂಸ್ಕೃತಂ-ಜಯತು ಭಾರತಂ-ಮುಂತಾದ ಘೋಷಣೆಗಳೊಂದಿಗೆ ಗ್ರಾಮದ ಪ್ರಮುಖ ರಸ್ತೆಗಳಲ್ಲಿ ಮಕ್ಕಳು ಭಾಷಾ ಜಾಗೃತಿ ಜಾಥಾ ನಡೆಸಿ ಗಮನ ಸೆಳೆದರು. ವಿವಿಧ ಶಾಲೆಗಳ ಶಿಕ್ಷಕರು, ಪಾಲಕರು, ಗ್ರಾಮಸ್ಥರು ಭಾಗಿಗಳಾಗಿದ್ದರು.

ವಿವಿಧ ಸ್ಪರ್ಧೆ
ಈ ಸಂದರ್ಭದಲ್ಲಿ ಗೀತಾ ಕಂಠಪಾಠ ಸ್ಪರ್ಧೆ, ಕೃಷ್ಣ- ರಾಧೆ ವೇಷಭೂಷಣ ಸ್ಪರ್ಧೆ, ದೇವರನಾಮ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಗಳಲ್ಲಿ ತಿ. ನರಸೀಪುರ ತಾಲೂಕಿನ 52 ಶಾಲೆಗಳ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಿದ್ದರು. ವಿಜೇತರಿಗೆ ಸೋಸಲೆ ಶ್ರೀಗಳು ಬಹುಮಾನ ವಿತರಿಸಿದರು.

ಬಾಗಲಕೋಟೆಯ 9 ವರ್ಷದ ಬಾಲಕ ಸುಧಾಂಶು ಕಟ್ಟಿ ಕೊಳಲು ವಾದನ, ಸುಘೋಷನ ದಾಸವಾಣಿ ಗಮನ ಸೆಳೆಯಿತು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Kalahamsa Infotech private limited

Tags: Kannada News WebsiteLatest News KannadamysoreSosaleVyasaraja Mathaಮಧ್ವಾಚಾರ್ಯರುಮೈಸೂರುವ್ಯಾಸರಾಜ ಮಠಶ್ರೀ ಕೃಷ್ಣಶ್ರೀ ಕೃಷ್ಣ ಜಯಂತ್ಯುತ್ಸವಶ್ರೀ ವಿದ್ಯಾಶ್ರೀಶ ತೀರ್ಥ ಸ್ವಾಮೀಜಿಸಂಸ್ಕೃತಸಂಸ್ಕೃತ ಪಾಠಶಾಲೆಸೋಸಲೆ
Share196Tweet123Send
Previous Post

ಶಿವಮೊಗ್ಗ | ಗಾಂಜಾ ಮಾರಾಟ: ಇಬ್ಬರ ಬಂಧನ

Next Post

ಚೆಸ್ ಸ್ಪರ್ಧೆ | ಸತತ 6ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ | ದಾಖಲೆ ಮೆರೆದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಚೆಸ್ ಸ್ಪರ್ಧೆ | ಸತತ 6ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ | ದಾಖಲೆ ಮೆರೆದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ

ಚೆಸ್ ಸ್ಪರ್ಧೆ | ಸತತ 6ನೇ ಬಾರಿಗೆ ರಾಜ್ಯಮಟ್ಟಕ್ಕೆ ಆಯ್ಕೆ | ದಾಖಲೆ ಮೆರೆದ ಕ್ರೈಸ್ಟ್‌ಕಿಂಗ್ ವಿದ್ಯಾರ್ಥಿನಿ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

ಏ.7 ರಿಂದ 10 | ಸೋಸಲೆ ಶ್ರೀ ವ್ಯಾಸರಾಜ ಮಠದಲ್ಲಿ ಧಾರ್ಮಿಕ – ಸಾಂಸ್ಕೃತಿಕ ಕಾರ್ಯಕ್ರಮ

April 6, 2026
ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

ಗೋವಾ ವಿರುದ್ಧ ಬೆಂಗಳೂರು ಎಫ್‌ಸಿ ತಂಡಕ್ಕೆ 2-0 ಅಂತರದ ಜಯ!

April 6, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
SWR to run special trains for Good Friday, Easter rush

ಮೈಸೂರು – ಬಾಗಲಕೋಟೆ ಬಸವ ಎಕ್ಸ್‌ಪ್ರೆಸ್‌ ಲಚ್ಯಾಣ ರೈಲು ನಿಲ್ದಾಣದಲ್ಲಿ ತಾತ್ಕಾಲಿಕ ನಿಲುಗಡೆ

April 6, 2026
ಚಾಮರಾಜನಗರ | ಶಂಕರ ಪುರಶ್ರೀ ರಾಮ ಮಂದಿರದಲ್ಲಿ ಶ್ರೀ ಹನುಮಂತೋತ್ಸವ, ಓಕುಳಿ ಕಾರ್ಯಕ್ರಮ

ಚಾಮರಾಜನಗರ | ಶಂಕರ ಪುರಶ್ರೀ ರಾಮ ಮಂದಿರದಲ್ಲಿ ಶ್ರೀ ಹನುಮಂತೋತ್ಸವ, ಓಕುಳಿ ಕಾರ್ಯಕ್ರಮ

April 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL