No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ರಾಜ್ಯದಲ್ಲಿ ನಿರ್ಮಾಣವಾಗಲಿದೆ ಕ್ವಿನ್ ಸಿಟಿ | ಏನಿದು? ಹೇಗಿರುತ್ತೆ? ಏನೆಲ್ಲಾ ಇರುತ್ತೆ?

ಈ ಕಲ್ಪನೆ ಸಾಕಾರವಾದರೆ ಇದೊಂದು ರಾಜ್ಯ ಅದ್ಬುತವಾಗಲಿದೆ

kalpa News by kalpa News
September 28, 2024
in ಬೆಂಗಳೂರು ನಗರ
0
ರಾಜ್ಯದಲ್ಲಿ ನಿರ್ಮಾಣವಾಗಲಿದೆ ಕ್ವಿನ್ ಸಿಟಿ | ಏನಿದು? ಹೇಗಿರುತ್ತೆ? ಏನೆಲ್ಲಾ ಇರುತ್ತೆ?
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜ್ಞಾನ, ಆರೋಗ್ಯ ಮತ್ತು ಸಂಶೋಧನೆಯನ್ನು ಸಮಗ್ರವಾಗಿ ಸಂಯೋಜಿಸಲಿರುವ, ರಾಜ್ಯದ ಅರ್ಥ ವ್ಯವಸ್ಥೆ ಮರುವ್ಯಾಖ್ಯಾನಿಸಲಿರುವ ಹಾಗೂ ಕರ್ನಾಟಕದ ವಿಶಿಷ್ಟ ಹೆಗ್ಗುರುತೂ ಆಗಲಿರುವ ಹೊಸ ʼಕ್ವಿನ್ ಸಿಟಿʼ #KWIN City ಅಂದ್ರೆ ಏನು? ಅಲ್ಲಿ ಏನಿರುತ್ತೆ?

ಬನ್ನಿ ಈ ಬಗ್ಗೆ ಬೃಹತ್ ಹಾಗೂ ಮಧ್ಯಮ ಕೈಗಾರಿಕೆಗಳು ಮತ್ತು ಮೂಲಸೌಲಭ್ಯ ಅಭಿವೃದ್ಧಿ ಸಚಿವ ಎಂ.ಬಿ.ಪಾಟೀಲ ಅವರು ಪೂರ್ಣ ವಿವರಣೆ ನೀಡಿದ್ದಾರೆ.
ಭವಿಷ್ಯದ ಅಗತ್ಯಗಳನ್ನು ಪೂರೈಸುವ ರೀತಿಯಲ್ಲಿ ವಿಶೇಷ ವಿನ್ಯಾಸ ಮಾಡಿರುವ ಈ ಕ್ವಿನ್ ಸಿಟಿ-ಯು (Knowledge, Wellbeing, and Innovation City- KWIN City ) ಸುಸ್ಥಿರತೆ, ಮನೆ, ಕೆಲಸದ ಸ್ಥಳ ಮತ್ತು ಅತ್ಯಾಧುನಿಕ ನಗರ ಸೇರಿದಂತೆ ಬದುಕಿನ ವಿವಿಧ ಸಂಗತಿಗಳಲ್ಲಿ ತಂತ್ರಜ್ಞಾನದ ನೆರವಿನಿಂದ ದಕ್ಷತೆ ಹಾಗೂ ಅನುಕೂಲತೆಗಳನ್ನು ಗರಿಷ್ಠ ಪ್ರಮಾಣದಲ್ಲಿ ಸುಧಾರಿಸುವ ʼಸ್ಮಾರ್ಟ್ ಲಿವಿಂಗ್ʼ ಪರಿಕಲ್ಪನೆ ಕಾರ್ಯರೂಪಕ್ಕೆ ತರಲು ದಾಬಸ್ಪೇಟೆ ಮತ್ತು ದೊಡ್ಡಬಳ್ಳಾಪುರ ಮಧ್ಯೆ ಅಸ್ತಿತ್ವಕ್ಕೆ ಬರಲಿದೆ.

Also read: ಜೋಗ | ಪ್ರವಾಸಿಗರಿಗೆ ಸಿಹಿ ಹಂಚಿ ವಿಶ್ವ ಪ್ರವಾಸೋದ್ಯಮ ದಿನ ಆಚರಣೆ

ಕ್ವಿನ್ ಸಿಟಿ ಅಂದರೆ ಜ್ಞಾನ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆ. ಇವುಗಳ ನಡುವಣ ಸಮನ್ವಯತೆಯು ಆರ್ಥಿಕ ಬೆಳವಣಿಗೆ ಉತ್ತೇಜಿಸುವುದರ ಜೊತೆಗೆ ವಿವಿಧ ಕ್ಷೇತ್ರಗಳಲ್ಲಿ ಗಮನಾರ್ಹ ಪ್ರಗತಿಯನ್ನು ಮುನ್ನಡೆಸಲಿದೆ. ಯೋಜಿತ ನಗರವಾಗಿ ಕ್ವಿನ್ ಸಿಟಿಯು ಅತ್ಯಾಧುನಿಕ ತಂತ್ರಜ್ಞಾನ ಸಂಯೋಜಿಸುವ ಮೂಲಕ ಪರಿಸರ ಸ್ನೇಹಿ ಮೂಲಸೌಲಭ್ಯಗಳ ನೆರವಿನಿಂದ ಹೊಸ-ಯುಗದ, ಸುಸ್ಥಿರ ಜೀವನಶೈಲಿ ಒದಗಿಸಲಿದೆ. ಸ್ವಾವಲಂಬನೆಯ ನೀರು ಮತ್ತು ವಿದ್ಯುತ್ ಸೌಲಭ್ಯಗಳೊಂದಿಗೆ ಭವಿಷ್ಯದ ಸ್ಮಾರ್ಟ್ ನಗರಗಳಿಗೆ ಆದರ್ಶ ಉದಾಹರಣೆಯಾಗಿರಲಿದೆ ಎಂದು ಪಾಟೀಲ ವಿವರಿಸಿದರು.

ʼಕ್ವಿನ್ ಸಿಟಿʼಯ ದೂರದೃಷ್ಟಿ ಸಾಕಾರಗೊಳಿಸಲಿರುವ ಪ್ರಮುಖ ಜಿಲ್ಲೆಗಳು:

ಜ್ಞಾನ ಜಿಲ್ಲೆ: ಪ್ರತ್ಯೇಕ ಜ್ಞಾನ ಕೇಂದ್ರದೊಂದಿಗೆ, ಕ್ವಿನ್ ಸಿಟಿ-ಯು ಆಧುನಿಕ ಪಠ್ಯಕ್ರಮ ಮತ್ತು ಉನ್ನತ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಸಂಸ್ಥೆಗಳನ್ನು ಒಳಗೊಂಡ ಪ್ರಧಾನ ಶಿಕ್ಷಣ ಕೇಂದ್ರ ಸ್ಥಾಪಿಸಲು ಬಯಸುತ್ತದೆ. ವಿಶ್ವವಿದ್ಯಾಲಯ ಅನುದಾನ ಆಯೋಗದ (ಯುಜಿಸಿ) ನಿಯಮಾವಳಿಗಳನ್ನು ಆಧರಿಸಿ ಕ್ಯಾಂಪಸ್ಗಳನ್ನು ನಿರ್ವಹಿಸಲು 500 ಉನ್ನತ ವಿದೇಶಿ ಶಿಕ್ಷಣ ಸಂಸ್ಥೆಗಳನ್ನು ಆಕರ್ಷಿಸುವ ಗುರಿಯನ್ನು ನಗರವು ಹೊಂದಿದೆ. ಇದು ಕರ್ನಾಟಕವನ್ನು ಜಾಗತಿಕ ಶಿಕ್ಷಣದ ಕ್ಷೇತ್ರದ ಮುಂಚೂಣಿಗೆ ಕೊಂಡೊಯ್ಯುವ ಶೈಕ್ಷಣಿಕ ವಲಯ ಹಾಗೂ ಉದ್ಯಮದ ಪಾಲುದಾರಿಕೆಗಳನ್ನು ಉತ್ತೇಜಿಸಲಿದೆ.

ಆರೋಗ್ಯ ಜಿಲ್ಲೆ: ಜೀವ ವಿಜ್ಞಾನ (ಲೈಫ್ ಸೈನ್ಸಸ್) ಪಾರ್ಕ್ ಒಳಗೊಂಡಿರುವ ಕ್ವಿನ್ ಸಿಟಿಯು ಏಷ್ಯಾದ ಪ್ರಮುಖ ಶೈಕ್ಷಣಿಕ ವೈದ್ಯಕೀಯ ಕೇಂದ್ರವಾಗಿ ಬೆಳೆಯಲಿದೆ. ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಟ್ಟದ ಆಸ್ಪತ್ರೆಗಳನ್ನು ಆಕರ್ಷಿಸುವ ಮೂಲಕ ಆರೋಗ್ಯ ರಕ್ಷಣೆಯ ಭವಿಷ್ಯವನ್ನು ರೂಪಿಸಲಿದೆ. ಈ ಉಪಕ್ರಮವು ವೈದ್ಯಕೀಯ ಕ್ಷೇತ್ರದಲ್ಲಿ ಕರ್ನಾಟಕದ ಸ್ಥಾನಮಾನವನ್ನು ದೇಶೀಯವಾಗಿ ಮತ್ತು ಅಂತರರಾಷ್ಟ್ರೀಯ ಮಟ್ಟದಲ್ಲಿ ಉನ್ನತ ಮಟ್ಟಕ್ಕೆ ಏರಿಸಲಿದೆ. ಇದು ಆರೋಗ್ಯದ ಶ್ರೇಷ್ಠತೆಗೆ ದಾರಿದೀಪವಾಗಿರಲಿದೆ.
ನಾವೀನ್ಯತಾ ಜಿಲ್ಲೆ: ಕ್ವಿನ್ ಸಿಟಿಯು ಜೀವ ವಿಜ್ಞಾನ, ಭವಿಷ್ಯದ ಸಂಚಾರ, ಸೆಮಿಕಂಡಕ್ಟರ್, ಸುಧಾರಿತ ಪರಿಕರ, ಆಧುನಿಕ ತಯಾರಿಕೆ, ವೈಮಾಂತರಿಕ್ಷ ಮತ್ತು ರಕ್ಷಣೆ ಹಾಗೂ ಬಾಹ್ಯಾಕಾಶ ತಂತ್ರಜ್ಞಾನದಂತಹ ಪ್ರವರ್ಧಮಾನಕ್ಕೆ ಬರುತ್ತಿರುವ ಉದ್ಯಮ ವಲಯಗಳ ಅಗತ್ಯಗಳನ್ನು ಪೂರೈಸಲಿದೆ. ಜಾಗತಿಕ ಬದಲಾವಣೆಗಳು ಮತ್ತು ಮಾರುಕಟ್ಟೆ ಬೇಡಿಕೆಗಳಿಗೆ ಹೊಂದಿಕೊಳ್ಳುವ ಮೂಲಕ, ಕ್ವಿನ್ ಸಿಟಿಯು ವಿಶಾಲವಾದ ಉದ್ಯಮ ಕ್ಷೇತ್ರದಲ್ಲಿ ಕರ್ನಾಟಕದ ಪಾತ್ರವನ್ನು ಹೆಚ್ಚಿಸುವ ಗುರಿ ಹೊಂದಿದೆ, ನಿರಂತರವಾದ ನಾವೀನ್ಯತೆಯ ವಾತಾವರಣ ಉತ್ತೇಜಿಸಲಿದೆ.

ಸಂಶೋಧನಾ ಜಿಲ್ಲೆ: ಜೈವಿಕ ಔಷಧ ಮತ್ತು ವೈಜ್ಞಾನಿಕ ಸಂಶೋಧನೆ ಹೆಚ್ಚಿಸಲು ಮೀಸಲಾಗಿರುವ ಕ್ವಿನ್ ಸಿಟಿಯು ಕ್ಲಿನಿಕಲ್ ಪ್ರಯೋಗ ಕೇಂದ್ರಗಳು ಮತ್ತು ಸಂಶೋಧನಾ ಪ್ರಯೋಗಾಲಯಗಳನ್ನು ಸ್ಥಾಪಿಸಲು ಅತ್ಯಾಧುನಿಕ ತಂತ್ರಜ್ಞಾನವನ್ನು ಸಂಯೋಜಿಸಲಿದೆ. ಇದು ಜಾಗತಿಕ ಜ್ಞಾನ ಆಧಾರಿತ ಆರ್ಥಿಕತೆಗೆ ಗಣನೀಯವಾಗಿ ಕೊಡುಗೆ ನೀಡುವ, ಪ್ರಕಾಶನ, ಸೆಮಿನಾರ್ ಮತ್ತು ಸಾರ್ವಜನಿಕ ಉಪನ್ಯಾಸಗಳ ಮೂಲಕ ಸಂಶೋಧನೆಗಳ ಪ್ರಸಾರವನ್ನು ಉತ್ತೇಜಿಸಲಿದೆ.

ಕ್ವಿನ್ ಸಿಟಿ-ಯು ಅಭಿವೃದ್ಧಿಗಿಂತ ಹೆಚ್ಚಿನದಾಗಿದೆ. ಇದು ಭವಿಷ್ಯದ ಕಡೆಗಿನ ಒಂದು ದಿಟ್ಟ ಹೆಜ್ಜೆಯಾಗಿದೆ. ಶಿಕ್ಷಣ, ಆರೋಗ್ಯ, ನಾವೀನ್ಯತೆ ಮತ್ತು ಸಂಶೋಧನೆಗಾಗಿ ವಿಶ್ವ ದರ್ಜೆಯ ಕೇಂದ್ರವನ್ನು ನಿರ್ಮಿಸಲಿದೆ.

ಮಾಹಿತಿಗೆ kwincity.com ಅಂತರ್ಜಾಲ ತಾಣಕ್ಕೆ ಭೇಟಿ ನೀಡಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteKWIN CityLatest News KannadaNews_in_KannadaNews_Kannadaʼಕ್ವಿನ್ ಸಿಟಿʼಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಜೋಗ | ಪ್ರವಾಸಿಗರಿಗೆ ಸಿಹಿ ಹಂಚಿ ವಿಶ್ವ ಪ್ರವಾಸೋದ್ಯಮ ದಿನ ಆಚರಣೆ

Next Post

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ

kalpa News

kalpa News

Next Post
ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ

ಮೈಸೂರು ದಸರಾ ಮಹೋತ್ಸವ ಉದ್ಘಾಟನೆಗೆ ಸಾಹಿತಿ ಪ್ರೊ.ಹಂಪನಾಗೆ ಆಹ್ವಾನ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL