No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
  • Advertise With Us
  • Grievances
  • About Us
  • Contact Us
Sunday, July 12, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಸಚಿವ ಕೃಷ್ಣ ಭೈರೇಗೌಡ ಅತಿ ಬುದ್ಧಿವಂತಿಕೆ ಪ್ರದರ್ಶಿಸಿ ಸಿಎಂ ಕುರ್ಚಿಗೆ ಟವಲ್ ಹಾಕುತ್ತಿದ್ದಾರೆ: ಪ್ರತಿಪಕ್ಷ ನಾಯಕ ಆರ್‌. ಅಶೋಕ್ ಟೀಕೆ

kalpa News by kalpa News
October 16, 2024
in ಬೆಂಗಳೂರು ನಗರ
0

File Image

Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು #Krishna Bairegowda ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್‌. ಅಶೋಕ #R Ashok ಟೀಕಿಸಿದ್ದಾರೆ.

ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಅವರು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ.
ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು ‘ಕನಿಷ್ಠ ಜ್ಞಾನ’ ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದೀರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ ಎಂದು ಹೇಳಿದ್ದಾರೆ.

Also read: ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ | ಅವರ ತಂದೆ ಹೇಳಿದ್ದೇನು?

ಜಿಎಸ್‌ಟಿ ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ ಅರಿವು ನನಗೂ ಇದೆ. ಆದರೆ ಜಿಎಸ್‌ಟಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು, ರಾಜ್ಯಗಳ ಹಣಕಾಸು ಸಚಿವರು ಅಥವಾ ಇನ್ಯಾರಾದರೂ ಪ್ರತಿನಿಧಿ ಸಚಿವರು ಬಂದಿರುತ್ತಾರೆ ಅಲ್ಲವೇ? ಇಂತಹ ವೇದಿಕೆಯಲ್ಲಿ ಅನೌಪಚಾರಿಕವಾಗಿ ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಿ ಒಂದು ಒಮ್ಮತ ಸೃಷ್ಟಿಸುವ ಪ್ರಯತ್ನ ಮಾಡಬಹುದಿತ್ತಲ್ಲವೇ? ನನ್ನ ಮಾತಿನ ಅರ್ಥ ಇದಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಕೇರಳದಲ್ಲಿ ಇತ್ತೀಚೆಗೆ ಐದು ಬಿಜೆಪಿಯೇತರ ಸರ್ಕಾರಗಳ ಪ್ರತಿನಿಧಿಗಳು ಒಟ್ಟಿಗೆ ಸೇರಿ ಸಭೆ ಮಾಡಿದ್ದರು. ಅದು ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸುವ ವೇದಿಕೆಯೇ? ವೇದಿಕೆಗಳ ಮೇಲೆ ರಾಜಕೀಯ ಭಾಷಣ ಮಾಡಿ ಕೇಂದ್ರ ಸಚಿವರಿಗೆ ಬಹಿರಂಗ ಚರ್ಚೆಗೆ ಬರಲು ಸವಾಲು ಹಾಕುತ್ತೀರಲ್ಲ, ತೆರಿಗೆ ಹಂಚಿಕೆ ಬಗ್ಗೆ ಚರ್ಚಿಸಲು ಅದು ವೇದಿಕೆಯೇ? ದೆಹಲಿ ಚಲೋ ಅಂತ ಬೀದಿನಾಟಕ ಮಾಡಿ, ಜಂತರ್ ಮಂತರ್‌ನಲ್ಲಿ ಫೋಟೋ ಶೂಟ್ ಮಾಡಿಸಿಕೊಂಡರಲ್ಲ, ತೆರಿಗೆ ಹಂಚಿಕೆ ಬಗ್ಗೆ ಚರ್ಚೆ ಮಾಡಲು ಅದು ವೇದಿಕೆಯೇ? ಚುನಾವಣೆ ಬಂದರೆ ಸಾಕು, ಸರ್ಕಾರಕ್ಕೆ ಒಂಚೂರು ಮುಜುಗರ ಆದರೆ ಸಾಕು, ಜನರ ಗಮನ ಬೇರೆಡೆ ಸೆಳೆಯಲು ‘ನನ್ನ ತೆರಿಗೆ ನನ್ನ ಹಕ್ಕು’ ಅಂತ ನಾಟಕ ಶುರು ಮಾಡುತ್ತೀರಲ್ಲ, ಸಾಮಾಜಿಕ ಜಾಲತಾಣಗಳು ತೆರಿಗೆ ಹಂಚಿಕೆ ಬಗ್ಗೆ ಚರ್ಚೆ ಮಾಡಲು ವೇದಿಕೆಯೇ? ಈ ತಂತ್ರಗಾರಿಕೆ, ಟೂಲ್ ಕಿಟ್ ರಾಜಕಾರಣ ಜನಸಾಮಾನ್ಯರಿಗೆ ಅರ್ಥ ಆಗೋದಿಲ್ಲ ಅಂತ ಎಣಿಸಿದ್ದೀರಾ? ಎಂದು ಅವರು ಪ್ರಶ್ನಿಸಿದ್ದಾರೆ.

ಗೂಬೆ ಕೂರಿಸುವ ಉದ್ದೇಶ ಮಾತ್ರ

ರಾಜ್ಯದ ಹಿತಾಸಕ್ತಿ ಕಾಪಾಡಬೇಕು, ರಾಜ್ಯದ ಬೊಕ್ಕಸಕ್ಕೆ ನಾಲ್ಕು ಕಾಸು ಹೆಚ್ಚು ಬರಬೇಕು ಎನ್ನುವ ಉದ್ದೇಶ ತಮಗೆ ಮತ್ತು ಕಾಂಗ್ರೆಸ್ ಪಕ್ಷಕ್ಕೆ ಕಿಂಚಿತ್ತಾದರೂ ಇದ್ದಿದ್ದರೆ, ತಾವು ಮತ್ತು ತಮ್ಮ ಕಾಂಗ್ರೆಸ್ ಸರ್ಕಾರ, ಕೇಂದ್ರ ಸರ್ಕಾರದ ಜೊತೆ ವ್ಯವಹರಿಸುವ ರೀತಿಯೇ ಬೇರೆ ಇರುತ್ತಿತ್ತು. ಆದರೆ ಸತ್ಯ ಏನೆಂದರೆ, ನಿಮಗೆ ಅದ್ಯಾವ ಸದುದ್ದೇಶವೂ ಇಲ್ಲ. ತಮಗೆ ಬೇಕಾಗಿರುವುದೆಲ್ಲವೂ ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ಮೇಲೆ ಗೊಬೆ ಕೂರಿಸುವುದು ಮಾತ್ರ. ಆ ಮೂಲಕ ತಮ್ಮ ಸರ್ಕಾರದ ವೈಫಲ್ಯಗಳನ್ನು, ಭ್ರಷ್ಟಾಚಾರವನ್ನು, ತಪ್ಪುಗಳನ್ನು ಮುಚ್ಚಿಕೊಳ್ಳುವುದು, ಜನರ ಗಮನ ಬೇರೆಡೆ ಸೆಳೆಯುವುದು, ಬಿಜೆಪಿ ವಿರುದ್ಧ ಒಂದು ಕಟ್ಟುಕಥೆ ಸೃಷ್ಟಿಸುವುದು ಇವರ ಉದ್ದೇಶ ಎಂದು ಅವರು ದೂರಿದ್ದಾರೆ.

http://kalpa.news/wp-content/uploads/2024/04/VID-20240426-WA0008.mp4

ಜವಾಬ್ದಾರಿಯುತ ಸ್ಥಾನದಲ್ಲಿರುವವರು ಮನೆಹಾಳು ಕೆಲಸ ಮಾಡಬಾರದು. ಇವತ್ತು ನೀವು “ನಮ್ಮ ತೆರಿಗೆ ನಮ್ಮ ಹಕ್ಕು” ಎನ್ನುತ್ತೀರಿ. ನಾಳೆ ಬೆಂಗಳೂರಿನ ಜನತೆ ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಮುಂದೊಂದು ದಿನ ಮಹದೇವಪುರದ ಜನ ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಹೀಗೆ ಮುಂದುವರಿದರೆ ಪ್ರತಿಯೊಂದು ಧರ್ಮ, ಜಾತಿಯವರು ನಮ್ಮ ತೆರಿಗೆ ನಮ್ಮ ಹಕ್ಕು ಎನ್ನುತ್ತಾರೆ. ಹೀಗಾದರೆ ಇದಕ್ಕೆ ಕೊನೆ ಎಲ್ಲಿ? ಎಂದು ಆರ್‌.ಅಶೋಕ ಪ್ರಶ್ನಿಸಿದ್ದಾರೆ.

ಇದೆಲ್ಲಾ ತಮಗೆ ಗೊತ್ತಿಲ್ಲ ಎಂದೇನಿಲ್ಲ. ಬಹುಶಃ ಅತಿ ಬುದ್ಧಿವಂತಿಕೆ ಪ್ರದರ್ಶನ ಮಾಡುವ ಮೂಲಕ ಹೈಕಮಾಂಡ್ ಗಮನ ಸೆಳೆದು ಮುಖ್ಯಮಂತ್ರಿ ಕುರ್ಚಿಗೆ ನನ್ನದೂ ಒಂದು ಇರಲಿ ಅಂತ ಟವಲ್ ಹಾಕುತ್ತಿರಬಹುದು. ದುರಾಡಳಿತದಿಂದ ಬೇಸತ್ತಿರುವ ಕರ್ನಾಟಕಕ್ಕೆ ನಿಮ್ಮಂತಹ ಸುಶಿಕ್ಷಿತ, ಸಭ್ಯ, ಬುದ್ಧಿವಂತ ನಾಯಕರು ಮುಖ್ಯಮಂತ್ರಿ ಆದರೆ ಒಳ್ಳೆಯದೇ! ಆದರೆ ನಿಮ್ಮ ಕಾಂಗ್ರೆಸ್ ಹೈಕಮಾಂಡ್‌ಗೆ ಬೇಕಾಗಿರುವುದು ‘ಸಂಪನ್ಮೂಲ’ ಒದಗಿಸುವ ಮಹಾನಾಯಕರೇ ಹೊರತು ನಿಮ್ಮಂತಹ ಸಂಪನ್ಮೂಲ ವ್ಯಕ್ತಿಗಳಲ್ಲ. ಒಟ್ಟಿನಲ್ಲಿ ನಿಮಗೆ ಶುಭವಾಗಲಿ ಎಂದು ಆರ್‌.ಅಶೋಕ ವ್ಯಂಗ್ಯವಾಡಿದ್ದಾರೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteKrishna BairegowdaLatest News KannadaNews_in_KannadaNews_KannadaR Ashokಆರ್. ಅಶೋಕಕೃಷ್ಣ ಭೈರೇಗೌಡಬೆಂಗಳೂರು
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಂಡು ಮಗುವಿಗೆ ಜನ್ಮ ನೀಡಿದ ರೇಣುಕಾಸ್ವಾಮಿ ಪತ್ನಿ | ಅವರ ತಂದೆ ಹೇಳಿದ್ದೇನು?

Next Post

ಜಾತಿ ಪ್ರಮಾಣ ಪತ್ರದ ಗೊಂದಲ ನಿವಾರಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

kalpa News

kalpa News

Next Post
ರನ್ನ ಸಕ್ಕರೆ ಕಾರ್ಖಾನೆ ಪುನಶ್ಚೇತನಕ್ಕೆ ಟೆಂಡರ್ ಆಹ್ವಾನಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಜಾತಿ ಪ್ರಮಾಣ ಪತ್ರದ ಗೊಂದಲ ನಿವಾರಿಸಿ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

Leave a Reply Cancel reply

Your email address will not be published. Required fields are marked *

No Result
View All Result
ಚಿತ್ರೋದ್ಯಮಕ್ಕೆ‌ ಹೊಸ ಕಳೆ ತಂದ ಹೇಮಂತ್ ಹವಾ!
English Articles

Indian Railways | Partial Cancellation of Trains on Bengaluru–Chennai

by kalpa News
July 10, 2026
0

Kalpa Media House  | Bengaluru | Southern Railway has announced the partial cancellation of certain train services to facilitate the...

Read moreDetails
ಫೆ.1 ರಿಂದ 7ರವರೆಗೆ ಈ ಪ್ರದೇಶಗಳಲ್ಲಿ ನಿಷೇಧಾಜ್ಞೆ ಜಾರಿ: ಡಿಸಿ ಪ್ರಭುಲಿಂಗ ಕವಳಿಕಟ್ಟಿ

Shivamogga SIR | District Achieves 81% e-Form Distribution

July 8, 2026
Messi Creates History Again as Argentina Reach Quarterfinals

Messi Creates History Again as Argentina Reach Quarterfinals

July 8, 2026
Culture & Tradition Shine as Rudraksham Marks Milestone Achievement

Culture & Tradition Shine as Rudraksham Marks Milestone Achievement

July 8, 2026
MEIL Completes Historic Largest Concrete Pour for PHWR at Kaiga

MEIL Completes Historic Largest Concrete Pour for PHWR at Kaiga

July 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL