ಕಲ್ಪ ಮೀಡಿಯಾ ಹೌಸ್ | ದಾವಣಗೆರೆ |
ಜಿಲ್ಲೆಯ ಜಗಳೂರು ತಾಲೂಕು ಇನ್ಮುಂದೆ ಬರದನಾಡಲ್ಲ,ಬಂಗಾರದ ನಾಡು. ಇಲ್ಲಿನ ರೈತರು ಬಂಗಾರ ಬೆಳೆಬೆಳೆಯಲಿದ್ದಾರೆ ಎಂದು ಸಿರಿಗೆರೆಯ ತರಳಬಾಳು ಬೃಹನ್ಮಠದ ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳವರು ವಿಶ್ವಾಸ ವ್ಯಕ್ತಪಡಿಸಿದರು.
ಜಗಳೂರು ಕೆರೆ ಕೋಡಿ ಬಿದ್ದ ಹಿನ್ನಲೆಯಲ್ಲಿ ಕೆರೆಗೆ ಬಾಗಿನ ಅರ್ಪಿಸಿ ಸಮಾರಂಭದಲ್ಲಿ ದಿವ್ಯ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು. 50 ವರ್ಷಗಳ ನಂತರ ಜಗಳೂರು ಕೆರೆ ಕೋಡಿ ಬಿದ್ದಿರುವುದು ಈ ಭಾಗದ ರೈತರಲ್ಲಿ ಸಂತಸ ಹಿಮ್ಮಡಿಗೊಂಡಿದೆ. ಮುಂದೆ ಜಗಳೂರು ಕೆರೆ ಸೇರಿ ಪ್ರತಿ ವರ್ಷವೂ ತಾಲೂಕಿನ ಎಲ್ಲಾ ಕೆರೆಗಳು ಕೋಡಿ ಬೀಳಲಿ ಎಂದರು.

Also read: ವಿಧಾನಸೌಧ, ವಿಕಾಸಸೌಧಗಳನ್ನು ಕನ್ನಡದ ಅಸ್ಮಿತೆಯ ಕೇಂದ್ರಗಳನ್ನಾಗಿ ಮಾಡಿ: ಡಾ. ಪುರುಷೋತ್ತಮ ಬಿಳಿಮಲೆ ಆಗ್ರಹ
8 ಮೋಟರ್ಗಳಲ್ಲಿ ಕೇವಲ 4 ಮೋಟರ್ ಮಾತ್ರ ಚಾಲನೆ ಮಾಡಲಾಗುತ್ತಿದೆ. ಮುಂದಿನ ಒಂದು ತಿಂಗಳೊಳಗಾಗಿ ತುಪ್ಪದಹಳ್ಳಿ ಕೆರೆಗೆ ದೊಡ್ಡ ಪೈಪ್ಲೈನ್ ಗೇಟ್ ವಾಲ್ ಅಳವಡಿಸಿ, ಗೇಟ್ ವಾಲ್ಗೆ ಸಣ್ಣ ಕೊಠಡಿ ಮಾಡಿ ಎಲ್ಲಾ 8 ಮೋಟರ್ ಚಾಲನೆ ಮಾಡಿಸಬೇಕು. ಈ ಜವಾಬ್ದಾರಿಯನ್ನು ಶಾಸಕರು ವಹಿಸಿಕೊಳ್ಳಬೇಕು ಎಂದರು.

ಈ ಸಂದರ್ಭದಲ್ಲಿ ಪಪಂ ಆಧ್ಯಕ್ಷ ನವೀನ್ ಕುಮಾರ್, ಡಾ.ರವಿಕುಮಾರ್ , ಪಿ.ಸುರೇಶ್ ಗೌಡ್ರು, ಕೆ.ಪಿ. ಪಾಲಯ್ಯ, ಎಂ.ಡಿ.ಕೀರ್ತಿಕುಮಾರ್, ಜಗಳೂರು ಕೆರೆಸಮಿತಿ ಅಧ್ಯಕ್ಷ ಶಿವನಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ಷೆ ವೀಣಾ, ಎನ್. ಎಸ್.ರಾಜಣ್ಣ, ವಕೀಲರಾದ ಬಸವರಾಜಪ್ಪ, ಡಿ.ವಿ.ನಾಗಪ್ಪ, ಶಶಿಕುಮಾರ್, ತಹಸೀಲ್ದಾರ್ ಸಯಿದ್ ಕಲೀಂ ಉಲ್ಲಾ, ಇಒ ಕೆಂಚಪ್ಪ ಸೇರಿ ಮತ್ತಿತರರು ಉಪಸ್ಥಿರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post