ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಬಸ್ಗಾಗಿ ಕಾಯುತ್ತಿದ್ದ ವಿದ್ಯಾರ್ಥಿಯೋರ್ವನ ಮೇಲೆ ಬಸ್ ಢಿಕ್ಕಿಯಾಗಿ ಸಾವನ್ನಪ್ಪಿರುವ ಘಟನೆ ಇಂದು ಬೆಳಿಗ್ಗೆ ತಾಲೂಕಿನ ಬೆಜ್ಜವಳ್ಳಿಯಲ್ಲಿ ನಡೆದಿದೆ.
ತನಿಕಲ್ ಗ್ರಾಮದ ಪ್ರಥಮ್ ಮೃತ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ತೀರ್ಥಹಳ್ಳಿಯಲ್ಲಿ ಪ್ರಥಮ ವರ್ಷದ ಡಿಪ್ಲೊಮೋ ಓದುತ್ತಿದ್ದ ಪ್ರಥಮ್ ಇಂದು ಬೆಳಿಗ್ಗೆ ಕಾಲೇಜಿಗೆ ತೆರಳಲು ಬಸ್ಗಾಗಿ ಕಾಯುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ ಎನ್ನಲಾಗಿದೆ.
ಗೋವಾ, ಮಂಗಳೂರು ಪ್ರವಾಸ ಮುಗಿಸಿ ಸಕ್ರೆಬೈಲ್ ಕಡೆಗೆ ಹೋಗುತ್ತಿದ್ದ ಬಸ್ ಬೆಜ್ಜವಳ್ಳಿ ಸಮೀಪ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡಲು ಮುಂದಾದಾಗ, ಬಸ್ ಕಂಟ್ರೋಲ್ಗೆ ಸಿಗದೇ ವಿದ್ಯಾರ್ಥಿಗೆ ಡಿಕ್ಕಿಯಾಗಿದೆ. ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡ ವಿದ್ಯಾರ್ಥಿಯನ್ನು ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿಯೇ ಸಾವನ್ನಪ್ಪಿದ್ದಾನೆ ಎಂದು ವರದಿಯಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
















