ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕೆಎಸ್ಅರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ಗೆ ಗುದ್ದಿದ ಘಟನೆ ನಗರದ ಹೊಳೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಬಸ್ ಡಿವೈಡರ್ ಏರಿದೆ ಪರಿಣಾಮ ಬಸ್ಸಿನ ಮುಂಭಾಗದ ಬಾಗಿಲು ತೆಗೆಯಲಾಗದೆ ಪ್ರಯಾಣಿಕರು ತುರ್ತು ನಿರ್ಗಮನ ಕಿಟಕಿಯಿಂದ ಕೆಳಗಿಳಿದರು. ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದು, ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ವ್ಯಕ್ತಿಯೋರ್ವರಿಗೆ ಬಸ್ ತಾಗಿದ್ದರಿಂದ ಸಣ್ಣ ಪ್ರಮಾಣಗಳಾಗಿವೆ ಎಂದು ತಿಳಿದುಬಂದಿದೆ.
Also read: ಅಮೂಲ್ಯ ಇತಿಹಾಸದ ಕುರುಹುಗಳನ್ನು ಕಾಪಾಡಿಕೊಂಡು ಬಂದಿರುವುದು ಸಂತಸದ ಸಂಗತಿ
ಬಸ್ಸಿನ ಬಾಗಿಲು ನಜ್ಜುಗುಜ್ಜು ಆದರೂ ಸಹ ಚಾಲಕ ಪ್ರಯಾಣಿಕರನ್ನು ಅಲ್ಲಿಯೇ ಇಳಿಸಿ ನೇರವಾಗಿ ಡಿಪೋಗೆ ಬಸ್ ಚಾಲನೆ ಮಾಡಿಕೊಂಡು ಹೋಗಿದ್ದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















