No Result
View All Result
ಎಲ್ಲವನ್ನೂ ಎದುರಿಸಿ ಕೃಷ್ಣನ ಬಾಳಿಗೆ ಬೆಳಕಾಗ್ತಾಳಾ ರುಕ್ಕು?
English Articles

A tale of love, revenge and destiny: Krishna Rukku to premiere on March 9 on Zee Kannada and ZEE5 Kannada

by ಕಲ್ಪ ನ್ಯೂಸ್
March 5, 2026
0

Kalpa Media House  |  Bengaluru | Zee Kannada, which continues to entertain audiences with fresh and engaging content and has...

Read moreDetails

Record Budget: Chief Minister Must Fulfill Hometown Demands, Urges Dr. Shushrutha Gowda

March 2, 2026
Hotel Management Students Participate in Tree Census

Hotel Management Students Participate in Tree Census

March 2, 2026
Minister Somanna Inspects & Inaugurates Road Under Bridges in Tumkur District eliminating level Crossing gates

Minister Somanna Inspects & Inaugurates Road Under Bridges in Tumkur District eliminating level Crossing gates

February 26, 2026
Le Méridien Dehradun in the Foothills of the Himalayas, Inviting Guests to Slow Down and Savour the Good Life

Le Méridien Dehradun in the Foothills of the Himalayas, Inviting Guests to Slow Down and Savour the Good Life

February 25, 2026
  • Advertise With Us
  • Grievances
  • About Us
  • Contact Us
Friday, March 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಪುಸ್ತಕ ಓದುವ ಅಭ್ಯಾಸದಿಂದ ಕಲ್ಪನಾಶಕ್ತಿ ವೃದ್ಧಿ: ರವೀಂದ್ರ ಭಟ್ ಅಭಿಪ್ರಾಯ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
November 29, 2024
in ಬೆಂಗಳೂರು ನಗರ
0
ಪುಸ್ತಕ ಓದುವ ಅಭ್ಯಾಸದಿಂದ ಕಲ್ಪನಾಶಕ್ತಿ ವೃದ್ಧಿ: ರವೀಂದ್ರ ಭಟ್ ಅಭಿಪ್ರಾಯ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಪುಸ್ತಕಗಳು ಕೊಡುವ ಕಲ್ಪನಾಶಕ್ತಿಯನ್ನು ನಾವು ಬಳಸುತ್ತಿರುವ ಮೊಬೈಲ್‌ಗಳು ನಾಶಪಡಿಸುತ್ತಿವೆ. ಇಂದಿನ ಮಕ್ಕಳು ಅತಿಯಾದ ಮೊಬೈಲ್ ಬಳಕೆಯಿಂದಾಗಿ ತಮ್ಮ ಕಲ್ಪನಾಶಕ್ತಿಯನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ಪ್ರಜಾವಾಣಿ ಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ ಹೇಳಿದ್ದಾರೆ.

ಅವರು ಇಂದು ಕನ್ನಡ ಪುಸ್ತಕ ಪ್ರಾಧಿಕಾರ ಆರಂಭಿಸಿರುವ “ಅಂಗಳದಲ್ಲಿ ತಿಂಗಳ ಪುಸ್ತಕ” ನೂತನ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಿ ಮಾತನಾಡುತ್ತಿದ್ದರು. ಕನ್ನಡ ಭವನದ ವರ್ಣಗ್ಯಾಲರಿಯಲ್ಲಿ ಆಯೋಜಿಸಿದ್ದ ಈ ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಸುವರ್ಣ ಸಂಭ್ರಮದ ಅಂಗವಾಗಿ ಪ್ರಕಟಮಾಡಿದ್ದ ಆರು ವಿಶೇಷ ಸಂಪುಟಗಳನ್ನು ಪರಿಚಯ ಮಾಡಿಕೊಡಲಾಯಿತು. ಈ ಸಮಾರಂಭದಲ್ಲಿ ಅವರು ಮಾತನಾಡಿದರು.
ಇಂದು ಪುಸ್ತಕ ಓದುವ ಅಭಿರುಚಿಯಿಂದ ಮಕ್ಕಳು ವಂಚಿತರಾಗುತ್ತಿದ್ದಾರೆ. ಪೋಷಕರು ಪುಸ್ತಕ ಓದುವ ಅಭ್ಯಾಸ ರೂಢಿಸುವ ಬದಲು ಮಕ್ಕಳನ್ನು ರಮಿಸಲು ಮೊಬೈಲ್ ಕೈಗೆ ಕೊಡುವ ಅಭ್ಯಾಸ ಮಾಡುತ್ತಿದ್ದಾರೆ. ಊಟ ಮಾಡದ ಮಕ್ಕಳನ್ನು ಒಲಿಸಲು, ರಚ್ಚೆ ಹಿಡಿದ ಮಕ್ಕಳನ್ನು ಸುಮ್ಮನಾಗಿಸಲು ಪೋಷಕರು ಮಕ್ಕಳ ಕೈಗೆ ಮೊಬೈಲ್ಗಳನ್ನು ಕೊಡುವ ಅಭ್ಯಾಸ ಮಾಡಿದ್ದಾರೆ. ಅದರ ಬದಲಾಗಿ ಪುಸ್ತಕ ತೋರಿಸುವ, ಪುಸ್ತಕ ಓದುವ ಅಭ್ಯಾಸವನ್ನು ರೂಢಿಸಿದ್ದಲ್ಲಿ ಮಕ್ಕಳ ಕಲ್ಪನಾಶಕ್ತಿ ಹಿಗ್ಗುತ್ತದೆ. ಈಗ ನಾವು ಟಿ.ವಿ., ಸಿನಿಮಾ, ಮೊಬೈಲ್ಗಳಲ್ಲಿ ನೋಡುವ ರಾಮ, ಹನುಮ ಇತ್ಯಾದಿ ವ್ಯಕ್ತಿ ಹಾಗೂ ಚಿತ್ರಗಳ ರೂಪವನ್ನು ಸಿದ್ಧಮಾದರಿಯಲ್ಲಿ ಅವರಿಗೆ ದೃಶ್ಯ ರೂಪದಲ್ಲಿ ನೀಡುತ್ತಿದ್ದೇವೆ. ಆದರೆ ಪುಸ್ತಕಗಳು ಅವರ ರೂಪವನ್ನು ಕಲ್ಪಿಸಿಕೊಳ್ಳಲು ಮಕ್ಕಳಿಗೆ ಅವಕಾಶ ಕೊಡುತ್ತಿದ್ದವು. ಹಾಗಾಗಿ ಇಂದಿನ ಮಕ್ಕಳ ಕಲ್ಪನಾಶಕ್ತಿಯನ್ನು ಪೋಷಕರೇ ಕುಗ್ಗಿಸುತ್ತಿದ್ದಾರೆ ಎಂದು ಅವರು ಹೇಳಿದರು.

Also read: ಮಕ್ಕಳ ದಿನಾಚರಣೆ ಹಿನ್ನೆಲೆ | ಡಿ.1ರಂದು ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

ನಮ್ಮಲ್ಲಿ ಪುಸ್ತಕಗಳಿಗೆ ಕೊರತೆ ಇಲ್ಲ, ಪ್ರತಿ ವರ್ಷವೂ ಅಸಂಖ್ಯಾತ ಪುಸ್ತಕಗಳು ಪ್ರಕಟವಾಗುತ್ತಿವೆ, ಅವು ಮಾರಾಟವೂ ಆಗುತ್ತವೆ. ಆದರೆ ಅವುಗಳನ್ನು ಜನರು ಓದುತಿದ್ದಾರೆಯೇ ಎಂಬುದೇ ಮೂಲಭೂತ ಪ್ರಶ್ನೆ. ಲೇಖನ ನೋಡಿದೆ, ಪುಸ್ತಕ ನೋಡಿದೆ ಎನ್ನುವವರೇ ಹೆಚ್ಚಾಗಿದ್ದಾರೆಯೇ ಹೊರತು, ಲೇಖನ ಓದಿದೆ ಎಂದು ಹೇಳುವವರು ಕಡಿಮೆ. ಮೊದಲು ನಾವು ನೋಡುವ ಕ್ರಿಯೆಯನ್ನು ತಪ್ಪಿಸಿ ಓದುವ ಕ್ರಿಯೆಗೆ ಮರಳಿ ಬರಬೇಕಾದ ಅವಶ್ಯಕತೆ ಇದೆ. ಅದರಿಂದ ಪುಸ್ತಕ ಸಂಸ್ಕೃತಿ ನಿಜವಾಗಿ ಬೆಳೆಯುತ್ತದೆ ಎಂದು ರವೀಂದ್ರ ಭಟ್ ತಿಳಿಸಿದರು. ಮನಸ್ಸು ಹಾಗೂ ಹೃದಯಕ್ಕೆ ಸಂವೇದನೆಯನ್ನು ಕಲ್ಪಿಸಬಲ್ಲ ಶಕ್ತಿ ಕೇವಲ ಪುಸ್ತಕಗಳಿಗೆ ಮಾತ್ರ ಇದೆ. ಓದು ಮತ್ತು ಬರಹ ನಮ್ಮ ಹೃದಯ ಮತ್ತು ಮನಸ್ಸುಗಳಿಗೆ ಮಿಡಿತವನ್ನು ಕೊಡುತ್ತದೆ. ಆದರೆ ಆಧುನಿಕತೆ ಕೀಲೀಮಣೆಗಳಿಗೆ ನಮ್ಮ ಕೈ ಮತ್ತು ಮನಸ್ಸುಗಳನ್ನು ಹಿಡಿತಕ್ಕೆ ಕೊಟ್ಟುಬಿಟ್ಟಿದೆ. ಅದನ್ನು ಮೀರಿ ಪುಸ್ತಕಗಳು ನಮಗೆ ಮಾನಸಿಕ ಸ್ಥೈರ್ಯ, ಧೈರ್ಯ ಕೊಡುತ್ತವೆ. ಹಾಗಾಗಿ ಪುಸ್ತಕಗಳು ನಮ್ಮ ಬದುಕಿಗೆ ಮುಖ್ಯ ಎಂದು ಅವರು ಹೇಳಿದರು.

ಸಮಾರಂಭದಲ್ಲಿ ಆಶಯ ಭಾಷಣ ಮಾಡಿದ ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ ಡಾ. ಮಾನಸ ಅವರು ಪುಸ್ತಕ ಪ್ರಾಧಿಕಾರ ಅತ್ಯಂತ ಮಹತ್ವಾಕಾಂಕ್ಷೆಯಿಂದ “ಅಂಗಳದಲ್ಲಿ ತಿಂಗಳ ಪುಸ್ತಕ” ಯೋಜನೆ ರೂಪಿಸಿದೆ. ಪ್ರತೀ ತಿಂಗಳು ಒಂದು ಪ್ರಮುಖ ಪುಸ್ತಕದ ಬಗ್ಗೆ ಲೇಖಕರು ಪರಿಚಯ ಮಾಡಿಕೊಡುತ್ತಾರೆ. ಪುಸ್ತಕ ಸಂಸ್ಕೃತಿಯನ್ನು ಬೆಳೆಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ಮಹತ್ವದ್ದಾಗಿದೆ ಎಂದು ಹೇಳಿದರು.

ಒಂದು ಪ್ರಬುದ್ಧ ಮಸ್ತಕ ಹಲವು ಪ್ರಬುದ್ಧ ಪುಸ್ತಕಗಳ ರಚನೆಗೆ ಕಾರಣವಾಗುತ್ತದೆ ಹಾಗೆಯೇ ಒಂದು ಪ್ರಬುದ್ಧ ಪುಸ್ತಕ ಪ್ರಬುದ್ಧ ಮಸ್ತಕದ ಬೆಳವಣಿಗೆಗೆ ಪೂರಕವಾಗುತ್ತದೆ ಇವೆರಡೂ ಪರಸ್ಪರ ಸಂಬಂಧವಿರುವ ಕ್ರಿಯೆಗಳು. ಇಂದು ಪುಸ್ತಕ ಹಿಡಿಯುವ ಕೈಗಳನ್ನು ಮೊಬಲ್ಗಳು ಆಕ್ರಮಿಸಿದೆ. ನಾವು ಆ ಕೈಗಳಲ್ಲಿ ಮತ್ತೆ ಪುಸ್ತಕ ಹಿಡಿಯುವಂತೆ ಮಾಡಬೇಕಿದೆ ಎಂದರು. ಪುಸ್ತಕವನ್ನು ಪ್ರೀತಿಸಿದರೆ ನಾವು ನಮ್ಮನ್ನು ನಾವೇ ಪ್ರೀತಿಸಿದಂತೆ. ಹಾಗಾಗಿ ಪುಸ್ತಕ ಸಂಸ್ಕೃತಿಯ ಬೆಳವಣಿಗೆಗೆ ನಾವೆಲ್ಲರು ಪ್ರಯತ್ನಿಸಬೇಕಿದೆ ಎಂದರು. ಮನೆಗೊಂದು ಗ್ರಂಥಾಲಯ ಎಂಬ ಪರಿಕಲ್ಪನೆ ಇದಕ್ಕೆ ಪೂರಕವಾಗಿಯೇ ರೂಪಿಸಲಾಗಿದೆ ಎಂದು ಅವರು ತಿಳಿಸಿದರು.
ಸಮಾರಂಭದಲ್ಲಿ ಕಲೆ ಕುರಿತ ಪುಸ್ತಕವನ್ನು ಕೆ.ವಿ. ಸುಬ್ರಹ್ಮಣ್ಯಂ ಪರಿಚಯಿಸಿದರು. ಸಾಹಿತ್ಯ ಕುರಿತಾದ ಸಂಪುಟದ ಬಗ್ಗೆ ಲಕ್ಷ್ಮಣ ಕೊಡಸೆ ಅವರು ಮಾತನಾಡಿದರು. ಕೃಷಿ ಹಾಗೂ ತೋಟಗಾರಿಕೆ ಬಗ್ಗೆ ರೂಪುಗೊಂಡ ಸಂಪುಟದ ಬಗ್ಗೆ ಶಿವಾನಂದ ಕಳವೆಯವರು ವಿವರಿಸಿದರು. ಹಾಗೆಯೇ ವಿಜ್ಞಾನ-ತಂತ್ರಜ್ಞಾನ- ಕೈಗಾರಿಕೆ ಕುರಿತ ಸಂಪುಟದ ಬಗ್ಗೆ ಇಂಡಸ್ ಕೆ. ಜಯರಾಂ ಅವರು ವಿಶ್ಲೇಷಿಸಿದರು. ಸುವರ್ಣ ಸಂಭ್ರಮ ಅಭಿಯಾನವನ್ನು ಕುರಿತಂತೆ ರೂಪುಗೊಂಡ ಸ್ಮರಣ ಸಂಚಿಕೆ ರೂಪಗೊಂಡ ಬಗೆಯನ್ನು ಅದರ ಸಂಪಾಕರಾದ ಬಿ.ಎಸ್. ವಿದ್ಯಾರಣ್ಯ ವಿವರಿಸಿದರು.

ಸಮಾರಂಭದಲ್ಲಿ ಈ ಐದು ಜನ ಸಂಪಾದಕರನ್ನು ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಗೌರವಿಸಲಾಯಿತು. ಕನ್ನಡ ಪುಸ್ತಕ ಪ್ರಾಧಿಕಾರದ ಸದಸ್ಯರಾದ ಡಾ. ಕುಶಾಲ ಬರಗೂರು ಹಾಗೂ ಬಿ.ಹೆಚ್. ನಿರಗುಡಿ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಸಮಾರಂಭದಲ್ಲಿ ಕರ್ನಾಟಕ ಲಲಿತಕಲಾ ಅಕಾಡೆಮಿ ಅಧ್ಯಕ್ಷರಾದ ಪ.ಸ. ಕುಮಾರ್, ಕರ್ನಾಟಕ ಶಿಲ್ಪಕಲಾ ಅಕಾಡೆಮಿ ಅಧ್ಯಕ್ಷ ಎಂ.ಸಿ. ರಮೇಶ್ ಹಾಗೂ ಬಂಜಾರ ಸಂಸ್ಕೃತಿ ಮತ್ತು ಭಾಷಾ ಅಕಾಡೆಮಿ ಅಧ್ಯಕ್ಷ ಗೋವಿಂದಸ್ವಾಮಿ ಹಾಜರಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತಾಧಿಕಾರಿ ಕೆ.ಬಿ. ಕಿರಣ್ ಸಿಂಗ್ ಸ್ವಾಗತಿಸಿದರು. ಸಹಾಯಕ ನಿರ್ದೇಶಕರಾದ ಶ್ರೀಮತಿ ಸೌಭಾಗ್ಯ ವಂದನಾರ್ಪಣೆ ಸಲ್ಲಿಸಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

http://kalpa.news/wp-content/uploads/2024/04/VID-20240426-WA0008.mp4

    

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಬೆಂಗಳೂರು
Share196Tweet123Send
Previous Post

ಮಕ್ಕಳ ದಿನಾಚರಣೆ ಹಿನ್ನೆಲೆ | ಡಿ.1ರಂದು ಜಿಲ್ಲಾ ಮಟ್ಟದ ಚಿತ್ರಕಲಾ ಸ್ಪರ್ಧೆ

Next Post

ಶಿವಮೊಗ್ಗ | ಬಿಜೆಪಿಯಿಂದ ಸೊರಬ ಮಂಡಲದ ಐವರ ಉಚ್ಛಾಟನೆ | ಕಾರಣವೇನು?

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ದೆಹಲಿಯ ಎಲ್ಲ 7 ಕ್ಷೇತ್ರಗಳೂ ಬಿಜೆಪಿ ತೆಕ್ಕೆ ಸಾಧ್ಯತೆ | ಲೀಡ್’ನಲ್ಲಿ ಕಮಲ ಪಕ್ಷ

ಶಿವಮೊಗ್ಗ | ಬಿಜೆಪಿಯಿಂದ ಸೊರಬ ಮಂಡಲದ ಐವರ ಉಚ್ಛಾಟನೆ | ಕಾರಣವೇನು?

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ಪೊಂಗಲ್ ಹಬ್ಬದ ಪ್ರಯುಕ್ತ ಕೊಟ್ಟಾಯಂ – ಬೆಂಗಳೂರು ಕ್ಯಾಂಟೋನ್ಮೆಂಟ್ ನಡುವೆ ವಿಶೇಷ ರೈಲು ಸಂಚಾರ

ಈ ಎಲ್ಲಾ ದಿನಗಳು ಮೈಸೂರು-ಶಿವಮೊಗ್ಗ ಎಕ್ಸ್’ಪ್ರೆಸ್, ಅರಸೀಕೆರೆ ರೈಲುಗಳ ಬಿಗ್ ಅಪ್ಡೇಟ್

February 6, 2026
ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

ಕುವೆಂಪು ವಿವಿ ನಿವೃತ್ತ ಬೋಧಕೇತರ ನೌಕರರ ಸಂಘದ ಅಧ್ಯಕ್ಷರಾಗಿ ರಮೇಶ್ ಶಂಕರಘಟ್ಟ ಆಯ್ಕೆ

March 5, 2026
ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

ಶ್ರೀ ನಾಗಯಕ್ಷೆ ದೇವಿ ವಾರ್ಷಿಕೋತ್ಸವ | ಮಾ.8ರವರೆಗೆ ವಿಶೇಷ ಧಾರ್ಮಿಕ ಕಾರ್ಯಕ್ರಮ

March 5, 2026
ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

ರಾಜ್ಯದಲ್ಲಿ `ಅಪ್ರಾಪ್ತ’ ಹೆಸರಿನ ದುರ್ಬಳಕೆ | ಸಂಕೇತ್‍ ಹತ್ಯೆ ಸಮಗ್ರ ತನಿಖೆಯಾಗಲಿ | ಶಾಸಕ ಚನ್ನಬಸಪ್ಪ ಆಗ್ರಹ

March 5, 2026
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ದಿವಾಳಿಯಾಗಿದೆ: ಮಾಜಿ ಡಿಸಿಎಂ ಈಶ್ವರಪ್ಪ

March 5, 2026
ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

ಡಾ. ಮೈತ್ರೇಯಿ ಅವರಿಗೆ ಸಂಸ್ಕೃತ ವಿವಿಯ ಗ್ರಂಥ ಪುರಸ್ಕಾರ

March 5, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL