ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಧು ಸಂತರು ಧರ್ಮವನ್ನು ಉಳಿಸಲು ಆಕ್ರೋಶದಲ್ಲಿ ಕೆಲವು ಮಾತುಗಳನ್ನು ಹೇಳಿದರೆ, ಕಾಂಗ್ರೆಸ್ ಸರ್ಕಾರ ಇಂತವರ ವಿರುದ್ಧ ಕೇಸ್ ದಾಖಲಿಸಿಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಕೆ.ಎಸ್.ಈಶ್ವರಪ್ಪ ಪ್ರಶ್ನೆ ಮಾಡಿದ್ದಾರೆ.
ಪತ್ರಿಕಾಗೋಷ್ಟಿಯಲ್ಲಿಂದು ಮಾತನಾಡಿದ ಅವರು, ಚಂದ್ರಶೇಖರ ಸ್ವಾಮೀಜಿಯವರು ಆಕ್ರೋದಲ್ಲಿ ಮುಸ್ಲಿಂರಿಗೆ ಮತದಾನ ಹಕ್ಕನ್ನು ನೀಡಬಾರದು ಎಂದು ಹೇಳಿದ್ದನ್ನೇ ಇಟ್ಟುಕೊಂಡು ಅವರ ವಿರುದ್ಧ ಕೇಸ್ ದಾಖಲಿಸಿಕೊಂಡಿರುವುದು ಸರಿಯಲ್ಲಿ ಮತ್ತು ಈಗಾಗಲೇ ಅವರು ಕ್ಷಮೆಯನ್ನು ಕೂಡ ಕೇಳಿದ್ದಾರೆ. ಸಾಧು ಸಂತರು ಕೆಲವೊಮ್ಮೆ ಧರ್ಮಕ್ಕಾಗಿ ಈ ರೀತಿ ಮಾತನಾಡುತ್ತಿರುವುದು ಸಹಜ ಎಂದರು.
Also read: ಆಯೋಧ್ಯೆ-ಕಾಶಿ ಯಾತ್ರೆಯಿಂದ ನಮ್ಮ ಜನ್ಮ ಸಾರ್ಥಕ: ಕೆ.ಈ. ಕಾಂತೇಶ್
ನನ್ನ ಮೇಲೆ ಕೇಸ್ ದಾಖಲಿಸಿಕೊಂಡಿರುವ ಕಾಂಗ್ರೆಸ್ ಸರ್ಕಾರ ಮಲ್ಲಿಕಾರ್ಜುನ ಖರ್ಗೆಯವರ ಮೇಲೂ ಕೂಡ ದಾಖಲಿಸಬೇಕಿತ್ತು. ಇದೇ ಮಾತು ಸ್ವಾಮೀಜಿಯವರ ಮೇಲೂ ಕೇಸ್ ಹಾಕಿದ್ದಕ್ಕೂ ಅನ್ವಯವಾಗುತ್ತದೆ ಎಂದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















