ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಸಂಸತ್ ಚಳಿಗಾಲದ ಅಧಿವೇಶನದ ಆರಂಭದಲ್ಲೇ ಭಾರೀ ವಿವಾದ ಸೃಷ್ಠಿಯಾಗಿದ್ದು, ರಾಜ್ಯಸಭೆಯಲ್ಲಿ ಕಾಂಗ್ರೆಸ್ #Rajyasabha ಸಂಸದ ಅಭಿಷೇಕ್ ಮನು ಸಿಂಘ್ವಿ ಆಸನದ ಕೆಳಗೆ ಕಂತೆ ಕಂತೆ ನೋಟು ಪತ್ತೆಯಾಗಿದೆ.
ಕಾಂಗ್ರೆಸ್ #Congress ಸಂಸದರಾಗಿರುವ ಅಭಿಷೇಕ್ ಮನು ಸಿಂಘ್ವಿ ಅವರಿಗೆ ಮೀಸಲಾಗಿದ್ದ ಆಸನದ ಕೆಳಗೆ ಕಂತೆ ಕಂತೆ ನೋಟು ಪತ್ತೆಯಾಗಿದ್ದು, ಈ ಕುರಿತಂತೆ ಸಭಾಪತಿ ಜಗದೀಪ್ ಧನಕರ್ ಅವರು ತನಿಖೆಗೆ ಆದೇಶಿಸಿದ್ದಾರೆ.
Also read: ಈಶ್ವರಪ್ಪರಿಗೆ ಮತ್ತೊಂದು ಸಂಕಷ್ಟ | ಕೋಟೆ ಠಾಣೆಯಲ್ಲಿ ಸುಮೋಟೋ ಕೇಸ್ ದಾಖಲು
ಗುರುವಾರ ಸದನವನ್ನು ಮುಂದೂಡಿದ ಬಳಿಕ ಪರಿಶೀಲನೆ ವೇಳೆ ಆಸನ ಸಂಖ್ಯೆ 222ರಲ್ಲಿ ಭದ್ರತಾ ಸಿಬ್ಬಂದಿ ಕಂತೆ ಕಂತೆ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಸಭಾಪತಿ ಜಗದೀಶ್ ಧನಕರ್ ಅವರು, ಘಟನೆ ಕುರಿತಂತೆ ಸದನಕ್ಕೆ ತಿಳಿಸುವುದು ನನ್ನ ಕರ್ತವ್ಯವಾಗಿದೆ. ನೋಟುಗಳು ನಕಲಿಯೋ ಅಥವಾ ಅಸಲಿಯೋ ಎಂಬುದು ತಿಳಿದು ಬಂದಿಲ್ಲ. ಸದನದ ಶಿಷ್ಟಾಚಾರದಂತೆ ತನಿಖೆಗೆ ಆದೇಶಿಸಲಾಗಿದೆ ಎಂದಿದ್ದಾರೆ.
ಯಾರಾದರೂ ಕರೆನ್ಸಿ ನೋಟುಗಳು ತಮ್ಮದು ಎಂದು ಕೇಳುತ್ತಾರೆ ಎಂದು ನಾನು ನಿರೀಕ್ಷಿಸುತ್ತಿದ್ದೆ. ಆದರೆ ಯಾರೂ ಅದನ್ನು ಇಲ್ಲಿಯವರೆಗೆ ತಮ್ಮದೆಂದು ಒಪ್ಪಿಕೊಂಡಿಲ್ಲ. ಜನರು ಅದನ್ನು ಮರೆತುಬಿಡುವ ಆರ್ಥಿಕತೆಯ ಸ್ಥಿತಿಯನ್ನು ಇದು ಪ್ರತಿಬಿಂಬಿಸುತ್ತದೆಯೇ ಎಂದು ಅವರು ಅಚ್ಚರಿ ವ್ಯಕ್ತಪಡಿಸಿದರು.
ಈ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿಂಘ್ವಿ, ಆ ಹಣ ನನ್ನದಲ್ಲ. ಬೇರೆ ಯಾರೋ ತಂದು ನನ್ನ ಆಸನದ ಕೆಳಗೆ ಇರಿಸಿರಬಹುದು. ಈ ಕುರಿತು ಸಮಗ್ರ ತನಿಖೆ ನಡೆಯಬೇಕು. ಆಗ ಸತ್ಯ ಹೊರಬರುತ್ತದೆ ಎಂದಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post