No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
  • Advertise With Us
  • Grievances
  • About Us
  • Contact Us
Tuesday, August 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿ ನೇಮಕ

ಹೆಚ್ಚುವರಿ ಜಿಲ್ಲಾಧಿಕಾರಿಯಾಗಿದ್ದ ನಾಗರಾಜ್ ಗೆ ಪಟ್ಟಾಧಿಕಾರ: ಚಂದ್ರಶೇಖರನಾಥ ಸ್ವಾಮೀಜಿ ಘೋಷಣೆ

kalpa News by kalpa News
December 14, 2024
in ಬೆಂಗಳೂರು ನಗರ
0
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ ಉತ್ತರಾಧಿಕಾರಿ ನೇಮಕ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠಕ್ಕೆ #Vishwa Okkaligara Mahasamsthana Mutt ಉತ್ತರಾಧಿಕಾರಿಯಾಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿ, ಸ್ವಯಂ ನಿವೃತ್ತಿ ಪಡೆದಿರುವ ಕೆಎಎಸ್ ಅಧಿಕಾರಿ, 49 ವರ್ಷದ ಡಾ.ಎಚ್.ಎಲ್.ನಾಗರಾಜ್ ಅವರನ್ನು ನೇಮಿಸಲಾಗಿದ್ದು, ಶನಿವಾರ ವಿಧಿ ವಿಧಾನಗಳೊಂದಿಗೆ ಪಟ್ಟಾಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ವಿಶ್ವಒಕ್ಕಲಿಗರ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

ಶುಕ್ರವಾರ ಮಠದಲ್ಲಿ ಸುದ್ದಿಗೋಷ್ಠಿ ನಡೆಸಿದ ಸ್ವಾಮೀಜಿ, ನನಗೆ ಈಗ 81 ವರ್ಷ ಆಗಿದೆ. ಹೀಗಾಗಿ, ನಮ್ಮ ಮಠದೊಂದಿಗೆ ಅನೇಕ ವರ್ಷಗಳಿಂದ ಸಂಪರ್ಕದಲ್ಲಿರುವ, ಸೇವಾ ಕಾರ್ಯಗಳನ್ನು ಮಾಡತ್ತಾ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿರುವ ಎಚ್.ಎಲ್.ನಾಗರಾಜ್ ಅವರನ್ನು ಉತ್ತರಾಧಿಕಾರಿಯಾಗಿ ಭಗವಂತನ ಇಚ್ಛೆಯಂತೆ ಆಯ್ಕೆ ಮಾಡಲಾಗಿದೆ. ಈ ಆಯ್ಕೆಗೆ ಮಠದ ಟ್ರಸ್ಟ್‌ನ ಎಲ್ಲಾ ಸದಸ್ಯರು ಸರ್ವಾನುಮಂತದಿಂದ ಒಪ್ಪಿಗೆ ಸೂಚಿಸಿದ್ದಾರೆ. ಮಠದ ಉತ್ತರಾಧಿಕಾರಿಯಾಗಿ ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಕಾರ್ಯಗಳನ್ನು ‘ನಾಥ’ ಪರಂಪರೆಯಂತೆ ನಡೆಸಿಕೊಂಡು ಹೋಗಲಿದ್ದಾರೆ ಎಂದು ತಿಳಿಸಿದರು.
ಶನಿವಾರ (ಡಿ.14) ಸಂಜೆ ಆರಂಭವಾಗುವ ವಿಧಿ ವಿಧಾನಗಳು, ಕಾರ್ಯಕ್ರಮಗಳು ಭಾನುವಾರ ಸಂಜೆವರೆಗೂ ಜರುಗಲಿವೆ. ಹತ್ತು ಸಾವಿರ ಜನ ಭಾಗವಹಿಸುವ ನಿರೀಕ್ಷೆ ಇದೆ. ಆದಿಚುಂಚನಗಿರಿ ಪೀಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ, ನಿಡುಮಾಮಿಡಿ ಜಗದ್ಗುರು ಮಠದ ಶ್ರೀ ವೀರಭದ್ರ ಚನ್ನಮಲ್ಲ ದೇಶೀಕೇಂದ್ರ ಸ್ವಾಮೀಜಿ ಸೇರಿದಂತೆ ನಾಡಿನ ಅನೇಕ ಮಠಗಳ ಪೀಠಾಧ್ಯಕ್ಷರ ಸಮ್ಮುಖದಲ್ಲಿ ಸನ್ಯಾಸ ದೀಕ್ಷೆ ನೀಡಿ ಉತ್ತರಾಧಿಕಾರಿಯಾಗಿ ನೇಮಿಸಲಾಗುತ್ತದೆ ಎಂದು ಚಂದ್ರಶೇಖರನಾಥ ಸ್ವಾಮೀಜಿ ಹೇಳಿದರು.

Also read: KREDL launches Energy Conservation Week from December 14

ಧಾರ್ಮಿಕತೆ ಮತ್ತು ಸಮಾಜ ಸೇವಾ ಮನೋಭಾವ ಹೊಂದಿದ್ದ ನಾಗರಾಜ್ ಅವರು ಅವಿವಾಹಿತರಾಗಿಯೇ ಇದ್ದಾರೆ. ಅವರು ಶನಿವಾರದಿಂದ ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಮಹಾಸ್ವಾಮೀಜಿಯಾಗಿ ಮಠದ ಕಾರ್ಯಗಳು, ಶ್ರೀಮಠದ ಶಿಕ್ಷಣ ಸಂಸ್ಥೆಗಳನ್ನು ಇನ್ನಷ್ಟು ಉನ್ನತ ಸ್ಥಾನಕ್ಕೆ ತೆಗೆದುಕೊಂಡು ಹೋಗಲಿದ್ದಾರೆ. ಸೇವಾ ಕಾರ್ಯಗಳನ್ನು ಇನ್ನಷ್ಟು ವಿಸ್ತರಿಸಿಕೊಂಡು ಹೋಗುತ್ತಾರೆ ಎಂದು ಚಂದ್ರಶೇಖರನಾಥ ಸ್ವಾಮೀಜಿ ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಠದ ಟ್ರಸ್ಟಿಗಳಾದ ದೊಡ್ಡಮನೆ ವೆಂಕಟೇಶ, ಆಡಿಟರ್ ನಾಗರಾಜ್, ಪಂಚಲಿಂಗಯ್ಯ, ಶಿವಲಿಂಗಯ್ಯ, ಮಾರಪ್ಪಣ್ಣ, ವಕೀಲರಾದ ಸಿದ್ದರಾಜು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಉತ್ತರಾಧಿಕಾರಿ ಡಾ.ಎಚ್.ಎಲ್.ನಾಗರಾಜ್ ಅವರ ಹಿನ್ನೆಲೆ

ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಹೊನ್ನೆನಹಳ್ಳಿ ಗ್ರಾಮದ ಲಿಂಗಯ್ಯ ಮತ್ತು ಗಂಗಮ್ಮನವರ ಸುಪುತ್ರರಾಗಿರುವ ಎಚ್.ಎಲ್.ನಾಗರಾಜ್ ಅವರು ಬಾಲ್ಯದ ಪ್ರಾಥಮಿಕ ಶಿಕ್ಷಣವನ್ನು ತುಮಕೂರಿನ ಸಿದ್ದಗಂಗಾ ಮಠದಲ್ಲಿ ಮುಗಿಸಿದ್ದಾರೆ. ನಂತರ ಪದವಿ ಮುಗಿಸಿ, ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಹಾಗೂ ಮೈಕ್ರೋಫೈನಾನ್ಸ್‌ನಲ್ಲಿ ಸಂಶೋಧನೆ (ಪಿಎಚ್‌ಡಿ) ಮಾಡಿದ್ದಾರೆ. ಸಿದ್ದಗಂಗಾ ಮಠದಲ್ಲಿ ವ್ಯಾಸಂಗ ಮಾಡುವಾಗಿನಿಂದಲೂ ನಾಗರಾಜ್ ಅವರಿಗೆ ಧಾರ್ಮಿಕ ಕಾರ್ಯಗಳ ಕುರಿತು ಆಸಕ್ತಿ ಬೆಳೆದಿತ್ತು. ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರನ್ನು ಆದರ್ಶವಾಗಿ ತೆಗೆದುಕೊಂಡಿದ್ದರು. ಶಿಕ್ಷಣ ಮುಂದುವರೆಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಾಗ ಅವರು ಆದಿಚುಂಚನಗಿರಿ ಮಠದ ಹಾಸ್ಟೇಲ್‌ನಲ್ಲಿ ಉಳಿದುಕೊಂಡಿದ್ದರು. ಈ ಅವಧಿಯಲ್ಲಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಸೇವಾ ಕಾರ್ಯಗಳಿಂದ ಪ್ರಭಾವಿತರಾದರು. ಸನ್ಯಾಸತ್ವ ಮತ್ತು ಧಾರ್ಮಿಕ, ಶೈಕ್ಷಣಿಕ, ಸಾಂಸ್ಕೃತಿಕ ಸೇವಾ ಕಾರ್ಯ ಮಾಡಬೇಕು ಎನ್ನುವ ಮನಸ್ಸು ಮಾಡಿದರು.

ತಹಸೀಲ್ದಾರ್ ಆಗಿ ಹೆಚ್ಚುವರಿ ಜಿಲ್ಲಾಧಿಕಾರಿಯಾಗಿ, ಮೈಶುಗರ್ ಕಾರ್ಖಾನೆಯ ಎಂ.ಡಿ. ಆಗಿ ಕೆಲಸ ಮಾಡಿರುವ ನಾಗರಾಜ್ ಅವರ ಪ್ರಾಮಾಣಿಕತೆ, ದಕ್ಷತೆ ಮತ್ತು ಜನಸೇವಾ ಮನೋಭಾವವನ್ನು ರೂಢಿಸಿಕೊಂಡಿದ್ದಾರೆ ಎಂದು ಮಠದ ಟ್ರಸ್ಟಿಗಳು ಉತ್ತರಾಧಿಕಾರಿಯವರ ಕುರಿತಾದ ಹಿನ್ನೆಲೆ ಹಂಚಿಕೊಂಡರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

                                               

Tags: BangaloreKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaVishwa Okkaligara Mahasamsthana Muttಬೆಂಗಳೂರುವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠ
Share197Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

KREDL launches Energy Conservation Week from December 14

Next Post

ಉತ್ತರ ಕರ್ನಾಟಕ ಭಾಗದಲ್ಲಿ 432 ನವೋದ್ಯಮಗಳ ನೋಂದಣಿ: ಸಚಿವ ಪ್ರಿಯಾಂಕ್ ಖರ್ಗೆ

kalpa News

kalpa News

Next Post
ಸಂವಿಧಾನ ವಿರೋಧ ಹೇಳಿಕೆ ಹಿನ್ನೆಲೆ ಸಚಿವ ಈಶ್ವರಪ್ಪ ರಾಜೀನಾಮೆಗೆ ಒತ್ತಾಯ

ಉತ್ತರ ಕರ್ನಾಟಕ ಭಾಗದಲ್ಲಿ 432 ನವೋದ್ಯಮಗಳ ನೋಂದಣಿ: ಸಚಿವ ಪ್ರಿಯಾಂಕ್ ಖರ್ಗೆ

Leave a Reply Cancel reply

Your email address will not be published. Required fields are marked *

No Result
View All Result
Hubballi drucc meeting passenger friendly initiatives
English Articles

41st DRUCC Meeting Held at Hubballi; Division Applauded for Passenger-Friendly Initiatives

by kalpa News
August 10, 2026
1

Kalpa Media House  |  Hubballi   | The 41st meeting of the Divisional Railway Users' Consultative Committee (DRUCC) of Hubballi Railway...

Read moreDetails
World Padel League august 16 Scores Big Brand Support

World Padel League Secures Strong Brand Backing Ahead of Its Biggest Season Yet

August 8, 2026
Olectra Deploys 4,000 Electric Buses in India Milestone

Olectra Creates History | First Company in India to Deploy 4,000 Electric Buses

July 31, 2026
Indian Railways Recruits 5.56 Lakh Since 2014

Indian Railways Recruits 5.56 Lakh Since 2014 | 1.61 Lakh More Vacancies Underway

July 30, 2026
11-Year-Old Mysuru Girl Writes Children's Ramayana in Just 15 Days

11-Year-Old Mysuru Girl Writes Children’s Ramayana in Just 15 Days

July 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL