Sunday, June 22, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ ಸಾಗರ

ಪರಿಸರ ಸಂಘಟನೆಗಳ ಧ್ವನಿಗೆ ಸರ್ಕಾರದ ನಿರ್ಲಕ್ಷ್ಯ | ನ್ಯಾಯಾಲಯದ ಮೊರೆ ಅನಿವಾರ್ಯ | ಅನಂತಹೆಗಡೆ ಅಶಿಸರ ಕಳವಳ

December 24, 2024
in ಸಾಗರ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಸಾಗರ  |

ಕರ್ನಾಟಕ ಪವರ್ ಕಾರ್ಪೋರೇಶನ್ ಶರಾವತಿ ಕಣಿವೆಯಲ್ಲಿ ಭೂಗತ ಬೃಹತ್ ಜಲವಿದ್ಯುತ್ ಯೋಜನೆಯ ತಯಾರಿಯಲ್ಲಿದ್ದು ಪರಿಸರ ಸಂಘಟನೆಗಳು ಹೊನ್ನಾವರ ಮತ್ತು ಸಾಗರಗಳಲ್ಲಿ ಜನರ ಅಹವಾಲು ಸಭೆ ನಡೆಸಲು ಆಗ್ರಹ ಮಾಡುತ್ತಲೇ ಇವೆ. ಅಲ್ಲಿ ಬೆಂಗಳೂರಲ್ಲಿ ರಾಜ್ಯ ಅರಣ್ಯ ಇಲಾಖೆ ಶರಾವತಿ ಕಣಿವೆ ಧ್ವಂಸ ಮಾಡುವ ಜಲವಿದ್ಯುತ್ ಯೋಜನೆಗೆ ಒಪ್ಪಿಗೆ ನೀಡಿದೆ. ಇಂತಹ ಪಾರಿಸಾರಿಕ ವಿಕೃತಿ ಕುರಿತು ಪರಿಸರ ತಜ್ಞರು ಸೇರಿದಂತೆ ವನವಾಸಿಗಳು, ರೈತರು ಆತಂಕಕ್ಕೊಳಗಾಗುವಂತೆ ಮಾಡಿದೆ ಎಂದು ವೃಕ್ಷಲಕ್ಷ ಆಂದೋಲನದ ಅಧ್ಯಕ್ಷ ಅನಂತಹೆಗಡೆ ಅಶಿಸರ ಕಳವಳ ವ್ಯಕ್ತಪಡಿಸಿದ್ದಾರೆ.

ಶಿರಸಿಯಲ್ಲಿ ನಡೆದ ರಾಜ್ಯ ಪರಿಸರ ಸಮ್ಮೇಳನ, ಮೂಡಬಿದ್ರಿಯ ಕೆರೆ ಸಮ್ಮೇಳನ, ಹೊಸನಗರ, ಸಾಗರದ ಮಲೆನಾಡು ಪರಿಸರ ಸಮಾವೇಶಗಳಲ್ಲಿ ಶರಾವತಿ ಕಣಿವೆ ಉಳಿಸಿ ನಿರ್ಣಯ ಕೈಗೊಳ್ಳಲಾಗಿದೆ. 4 ತಿಂಗಳು ಹಿಂದೆ ಶಿವಮೊಗ್ಗಾದಲ್ಲಿ ಅರಣ್ಯ ಸಚಿವರು, ರಾಜ್ಯ ಅರಣ್ಯ ಅಧಿಕಾರಿಗಳ ಸಭೆಯಲ್ಲಿ ಶರಾವತಿ ಕಣಿವೆಯಲ್ಲಿ ಬೃಹತ್ ಯೋಜನೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಲಾಗಿದೆ. ಆದಾಗ್ಯೂ ಅರಣ್ಯ ಪರವಾನಿಗೆ ಪ್ರಸ್ತಾವನೆಗೆ ಭಾರತ ಸರ್ಕಾರದ ಅರಣ್ಯ ಮಂತ್ರಾಲಯದ ಅನುಮತಿ ಪಡೆಯಲು ಗಡಿಬಿಡಿ ತಯಾರಿ ನಡೆದಿದೆ. ಈಗಾಗಲೇ ಬೃಹತ್ ಜಲವಿದ್ಯುತ್ ಯೋಜನೆಯ ಗುತ್ತಿಗೆಯನ್ನು ನೀಡಲಾಗಿದೆ.
ನಾಲ್ಕು ವರ್ಷ ಹಿಂದೆ ವಿಜ್ಞಾನಿಗಳು ಶರಾವತಿ ಕಣಿವೆ ಧಾರಣ ಸಾಮರ್ಥ್ಯ ಮುಗಿದಿದೆ ಎಂದು ಎತ್ತಿ ಹೇಳಿದ್ದಾರೆ, ಮಂಗನ ಕಾಯಿಲೆಯಿಂದ ಜೋಗದ ಸುತ್ತಲಿನ ಹಳ್ಳಿಗಳಲ್ಲಿ ಪ್ರತಿವರ್ಷ ಸಾಗರ-ಸಿದ್ದಾಪುರ ತಾಲೂಕುಗಳಲ್ಲಿ ಜನ ಸಾಯುತ್ತಿದ್ದಾರೆ. ಶರಾವತಿ ಕಣಿವೆ ಸೇರಿದಂತೆ ಘಟ್ಟ ಪ್ರದೇಶದಲ್ಲಿ ಭಾರೀ ಭೂ ಕುಸಿತ ಸಾಮಾನ್ಯವಾಗಿದೆ. ಶರಾವತಿ ನದಿ ಸಮುದ್ರ ಸೇರುವ ಸ್ಥಳದಿಂದ ಗೇರುಸೊಪ್ಪಾದವರೆಗೆ ನದಿಯಲ್ಲಿ ಉಪ್ಪುನೀರು ಪ್ರತಿವರ್ಷ ಮೇಲೇರುತ್ತಿದೆ. ಭೂಗತ ಯೋಜನೆ ಜಾರಿಯಿಂದ ಗೇರುಸೊಪ್ಪಾ ಡ್ಯಾಂನಿಂದ ಬೇಸಿಗೆಯಲ್ಲಿ ನದಿಗೆ ನೀರೇ ಬರುವುದಿಲ್ಲ. ಗೇರುಸೊಪ್ಪಾದಿಂದ ಹೊನ್ನಾವರದವರೆಗೆ ಶರಾವತಿ ನದಿ ಉಪ್ಪು ನೀರಿನ ನದಿ ಆಗಲಿದೆ ಎಂಬ ಸಂಗತಿ ರೈತರಿಗೆ, ಮೀನುಗಾರರಿಗೆ ತಿಳಿದೇ ಇಲ್ಲ. ಆದರೆ ಈ ಬಗ್ಗೆ ಗೊತ್ತಿದ್ದೂ, ಜನಪ್ರತಿನಿಧಿಗಳು ಇತ್ತೀಚಿನ ಅಧಿವೇಶನದಲ್ಲಿ ಧ್ವನಿ ಎತ್ತಿಲ್ಲ ಎಂದು ಆಕ್ಷೇಪಿಸಿದ್ದಾರೆ.

Also read: Herbalife India Won Prestigious IIT Madras CSR Award 2024

ಭಾರತೀಯ ವಿಜ್ಞಾನ ಸಂಸ್ಥೆ ೨೧ನೇ ಶತಮಾನದ ಆರಂಭದಲ್ಲೇ ಶರಾವತಿ ನದಿ ನೀರಿನ ಕಣಿವೆ ಪರಿಸ್ಥಿತಿ ಬಗ್ಗೆ ಸಮಗ್ರ ವರದಿ ನೀಡಿದೆ. ಈ ವರದಿಯನ್ನು ಕರ್ನಾಟಕ ಪವರ್ ಕಾರ್ಪೋರೇಶನ್ ಕಪಾಟಿನಲ್ಲಿ ಬೀಗ ಹಾಕಿ ಭದ್ರವಾಗಿ ಇಟ್ಟಿದೆ. ಪರಿಸರ ಸಂಘ ಸಂಸ್ಥೆಗಳು, ರೈತರ ವಿರೋಧ, ಪ್ರತಿಭಟನೆ ಬಗ್ಗೆ ಕೆ.ಪಿ.ಸಿ. ಸರ್ಕಾರ ನಿರ್ಲಕ್ಷ್ಯ ತೋರಿದೆ. ರಾಜ್ಯ ಅರಣ್ಯ ಪರಿಸರ ಸಚಿವರು ಯೋಜನೆಗೆ ಬೆಂಬಲ ನೀಡಿದ್ದಾರೆಯೇ ಎಂಬ ಪ್ರಶ್ನೆಯನ್ನು ಮುಂದಿಡಲಾಗಿದೆ. ಉ.ಕ. ಜಿಲ್ಲಾ ಉಸ್ತುವಾರಿ ಸಚಿವರೇ, ತಮ್ಮ ಕ್ಷೇತ್ರದ ಗಂಭೀರ ಜ್ವಲಂತ ಸಮಸ್ಯೆ ಇದು.ಹಾಗಾಗಿ, ಹೊನ್ನಾವರ- ಕುಮಟಾ ಶಾಸಕರು ಕೆನರಾ ಲೋಕ ಸಭಾ ಸದಸ್ಯರು ಶರಾವತಿ ಕಣಿವೆ ರಕ್ಷಣೆಗೆ, ನದಿ ತೀರದ ರೈತರು, ಮೀನುಗಾರರ ಉಳಿವಿಗೆ ಪಕ್ಷಾತೀತವಾಗಿ ಧ್ವನಿ ಎತ್ತಬೇಕು ಎಂದು ಆಗ್ರಹಿಸಿದ್ದಾರೆ.

ಮಲೆನಾಡಿನ ಕರಾವಳಿಯ ರೈತರು, ವನವಾಸಿಗಳು, ಮೀನುಗಾರರ ಹಕ್ಕೊತ್ತಾಯವಿದ್ದು ಜೀವ ವೈವಿಧ್ಯ ಮಂಡಳಿ ಅಧ್ಯಕ್ಷರಾದ ಅರಣ್ಯ ಸಚಿವರು ಗೇರುಸೊಪ್ಪಾಕ್ಕೆ ಭೇಟಿ ನೀಡಬೇಕು ಎಂದು ಒತ್ತಾಯಿಸಲಾಗಿದೆ. ಅರಣ್ಯನಾಶ, ಗಣಿಗಾರಿಕೆ, ಬೃಹತ್ ಅಣೆಕಟ್ಟು, ಬೃಹತ್ ಕಾಮಗಾರಿಗಳು, ಹೈವೇಗಳು, ತಂತಿ ಮಾರ್ಗಗಳು, ಜನಸಂಖ್ಯಾ ಒತ್ತಡ, ಒತ್ತುವರಿಯಿಂದ ಈಗಾಗಲೇ ಶರಾವತಿ ಕಣಿವೆ ಛಿದ್ರ ಛಿದ್ರವಾಗಿದೆ, ಸಮಗ್ರ ಸಂರಕ್ಷಣಾ ತಂತ್ರವಾಗಿ ಅರಣ್ಯ ಇಲಾಖೆ ಶರಾವತಿ ಅಭಯಾರಣ್ಯ ವಿಸ್ತರಣೆ ಮಾಡಿದೆ. ಈಗ ಭೂಗತ ಜಲವಿದ್ಯುತ್ ಯೋಜನೆ ಕಣಿವೆಯ ಉಳಿವಿಗೆ ಆತಂಕ ತಂದಿದೆ ಎಂದು ವಿಜ್ಞಾನಿಗಳು ಪರಿಸರ ಕಾರ್ಯಕರ್ತರು ಅಭಿಪ್ರಾಯ ನೀಡಿದ್ದಾರೆ. ಶರಾವತಿ ಭೂಗತ ಜಲವಿದ್ಯುತ್ ಯೋಜನೆ ಕೈ ಬಿಡಬೇಕು ಎಂದು ಒತ್ತಾಯಿಸಿದ್ದಾರೆ.

2025 ಜನವರಿ 2ನೇ ವಾರದಲ್ಲಿ ಗೇರುಸೊಪ್ಪಾ ಮತ್ತು ಹೊನ್ನಾವರಗಳಲ್ಲಿ ಜಾಗೃತಿ ಸಭೆ ಜಾಥಾ ನಡೆಯಲಿದೆ ಎಂದು ವೃಕ್ಷ ಆಂದೋಲನ ತಿಳಿಸಿದೆ.

ಅನಂತ ಹೆಗಡೆ ಅಶೀಸರ, ಪ್ರೊ ಬಿ.ಎಂ. ಕುಮಾರ ಸ್ವಾಮಿ, ಡಾ.ಟಿ.ವಿ.ರಾಮಚಂದ್ರ, ಡಾ.ವೈ.ಬಿ.ರಾಮಕೃಷ್ಣ, ಡಾ. ಪ್ರಕಾಶ್ ಮೇಸ್ತ, ಡಾ.ಕೇಶವ ಹೆಚ್. ಕೊರ್ಸೆ, ಡಾ. ವಾಮನ್ ಆಚಾರ್ಯ, ನಾಗೇಶ್ ಹೆಗಡೆ, ಡಾ.ಬಾಲಚಂದ್ರ ಸಾಯಿಮನೆ, ಡಾ. ಶ್ರೀಪತಿ,
ಕೆ. ವೆಂಕಟೇಶ್, ಶ್ರೀಪಾದ ಬಿಚ್ಚುಗತ್ತಿ ಮುಂತಾದ ಪರಿಸರ ತಜ್ಞರು, ಸಂಸ್ಥೆಗಳ ಗಣ್ಯರು ಸರ್ಕಾರದ ಮುಂದೆ ಪುನಃ ಹಕ್ಕೊತ್ತಾಯ ಮಂಡಿಸಿದ್ದಾರೆ.

ವರದಿ: ಮಧುರಾಮ್, ಸೊರಬ

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaSagaraShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗ_ನ್ಯೂಸ್ಸಾಗರ
Previous Post

Herbalife India Won Prestigious IIT Madras CSR Award 2024

Next Post

MIT Manipal organized a Guest Talk on AI and the Future of the Humanity

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

MIT Manipal organized a Guest Talk on AI and the Future of the Humanity

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!