ಕಲ್ಪ ಮೀಡಿಯಾ ಹೌಸ್ | ಭದ್ರಾವತಿ |
ದೇಶದ ಆರ್ಥಿಕ ಸುಧಾರಣೆಗಳ ಹರಿಕಾರ, ಮಾಜಿ ಪ್ರಧಾನಿ ಮನಮೋಹನ ಸಿಂಗ್ರವರ #Manmohan Singh ನಿಧನಕ್ಕೆ ನಗರದ ಹಿರಿಯ ನಾಣ್ಯ, ನೋಟು ಹಾಗೂ ಅಂಚೆ ಚೀಟಿ ಸಂಗ್ರಹಗಾರ ಗಣೇಶ್ ರವರು ವಿಶೇಷವಾಗಿ ಸಂತಾಪ ಸೂಚಿಸಿದ್ದಾರೆ.
ಸಿಂಗ್ರವರ ಜನ್ಮದಿನ ಹಾಗೂ ನಿಧನ ಹೊಂದಿದ ದಿನದ ದಿನಾಂಕ ಹೊಂದಿರುವ 10ರೂ, ಮುಖಬೆಲೆಯ ನೋಟುಗಳ ಮೂಲಕ ಸಂತಾಪ ಸೂಚಿಸಿದ್ದಾರೆ.
Also read: ಕುಂಭಮೇಳಕ್ಕಾಗಿ ಮೈಸೂರಿನಿಂದ ಲಕ್ನೋಗೆ ಸಂಚರಿಸಲಿದೆ ವಿಶೇಷ ರೈಲು
ಗಣೇಶ್ ರವರು ಸುಮಾರು 5 ದಶಕ್ಕೂ ಹೆಚ್ಚು ಕಾಲದಿಂದ ನಾಣ್ಯ, ನೋಟು ಹಾಗೂ ಅಂಚೆ ಚೀಟಿ ಸಂಗ್ರಹ ಹವ್ಯಾಸದಲ್ಲಿ ತೊಡಗಿಸಿಕೊಂಡಿದ್ದು, ಗಣ್ಯ ವ್ಯಕ್ತಿಗಳ ಹುಟ್ಟು, ನಿಧನ ಹೊಂದಿದ ದಿನ ಹಾಗೂ ಪ್ರಮುಖ ಐತಿಹಾಸಿಕ ಘಟನೆಗಳ ಸಂದರ್ಭದಲ್ಲಿ ನೋಟುಗಳ ಮೂಲಕ ಶುಭ ಹಾರೈಕೆ, ಸಂತಾಪ ಸೂಚಿಸುವ ಮೂಲಕ ವಿಶೇಷವಾಗಿ ಗಮನ ಸೆಳೆಯುತ್ತಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















