ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿಕ್ಷಣ ಎಂಬುದು ಅದ್ಭುತ ಶಕ್ತಿಯಾಗಿದ್ದು, ಬದುಕಿನಲ್ಲಿ ಕೊನೆಯ ತನಕ ಉಳಿಯುವ ಶಾಶ್ವತ ಆಸ್ತಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣ ರಾವ್ ಅಭಿಪ್ರಾಯಪಟ್ಟರು.
ಸೋಮವಾರ ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿ ಕಛೇರಿಯ ಸಭಾಂಗಣದಲ್ಲಿ ಎನ್ಇಎಸ್ ಎಜುಕೇಷನ್ ಅಸಿಸ್ಟೆಂಟ್ ಟ್ರಸ್ಟ್ ವತಿಯಿಂದ ವಿವಿಧ ವಿದ್ಯಾಸಂಸ್ಥೆಗಳ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವಿ
ಬದುಕಿನ ಉನ್ನತಿಗೆ ಲಭ್ಯವಾಗುವ ಎಲ್ಲಾ ಉನ್ನತ ಅವಕಾಶಗಳನ್ನು ಸಮರ್ಪಕವಾಗಿ ಸದುಪಯೋಗಪಡಿಸಿಕೊಳ್ಳಿ. ಮಕ್ಕಳು ವಿದ್ಯಾಭ್ಯಾಸದ ಕಡೆಗೆ ಹೆಚ್ಚು ಒತ್ತನ್ನು ನೀಡಬೇಕಿದೆ. ಕಲಿಕೆಯ ಸಂದರ್ಭದಲ್ಲಿ ಎದುರಾಗುವ ಆರ್ಥಿಕ ಸಂಕಷ್ಟಗಳು ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕೆ ತೊಡಕಾಗಬಾರದೆಂಬ ಕಾಳಜಿಯಿಂದ ಎಜುಕೇಷನ್ ಅಸಿಸ್ಟೆಂಟ್ ಟ್ರಸ್ಟ್ ಕಾರ್ಯನಿರ್ವಹಿಸುತ್ತಿದೆ. ಸಂಸ್ಥೆಗೆ ದಾಖಲಾತಿಯ ವೇಳೆಯಲ್ಲಿ ಪೋಷಕರಿಗಿರುವ ಆರ್ಥಿಕ ಅನಾನುಕೂಲತೆಗಳನ್ನು ಅರಿತು ಪ್ರಾಂಶುಪಾಲರೊಂದಿಗೆ ಚರ್ಚಿಸಿ ಅಗತ್ಯ ಸಹಾಯಧನ ನೀಡಲಾಗುತ್ತಿದೆ. ಈ ಮೂಲಕ ಉತ್ತಮ ಅಧ್ಯಯನ, ಫಲಿತಾಂಶ ಮತ್ತು ಸಾಧನೆಗೆ ಪೂರಕ ವೇದಿಕೆಯಾಗಿ ನಿಂತಿದೆ. ಇದರ ಲಾಭಾಂಶ ಪಡೆದ ವಿದ್ಯಾರ್ಥಿಗಳು, ಉನ್ನತ ಸ್ಥಾನ ತಲುಪಿದ ನಂತರ ಭವಿಷ್ಯದಲ್ಲಿ ತಮ್ಮಂತಹ ಇತರೆ ವಿದ್ಯಾರ್ಥಿಗಳಿಗೂ ಸಹಾಯ ಮಾಡುವಂತಹ ಸಮಾಜಮುಖಿ ಕಾಳಜಿ ಬೆಳೆಸಿಕೊಳ್ಳಿ ಎಂದು ಹೇಳಿದರು.
Also read: ಪ್ರತಿಯೊಬ್ಬರೂ ಸುರಕ್ಷಿತ ವಾಹನ ಚಾಲನೆಗೆ ಆದ್ಯತೆ ನೀಡಿ: ಅಶೋಕ್ ನಾಯ್ಕ್ ಸಲಹೆ
ಎನ್ಇಎಸ್ ಎಜುಕೇಷನ್ ಅಸಿಸ್ಟೆಂಟ್ ಟ್ರಸ್ಟ್ ಮ್ಯಾನೇಜಿಂಗ್ ಟ್ರಸ್ಟಿ ಟಿ.ಆರ್.ಅಶ್ವಥನಾರಾಯಣ ಶೆಟ್ಟಿ ಮಾತನಾಡಿ, ಕಳೆದ ಒಂಬತ್ತು ವರ್ಷಗಳಿಂದ ಸಂಸ್ಥೆಯ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಚಟುವಟಿಕೆಗಳಿಗೆ ಅನುಕೂಲಕರವಾಗುವಂತೆ, ವಿದ್ಯಾರ್ಥಿ ವೇ
ರಾಷ್ಟ್ರೀಯ ಶಿಕ್ಷಣ ಸಮಿತಿ ಉಪಾಧ್ಯಕ್ಷರಾದ ಸಿ.ಆರ್.ನಾಗರಾಜ, ಕಾರ್ಯದರ್ಶಿಗಳಾದ ಎಸ್.ಎನ್.ನಾಗರಾಜ, ಖಜಾಂಚಿಗಳಾದ ಡಿ.ಜಿ.ರಮೇಶ್, ನಿರ್ದೇಶಕರಾದ ಹೆಚ್.ಸಿ.ಶಿವಕುಮಾರ್, ಮೈಲಾರಪ್ಪ, ಅನಂತದತ್ತಾ, ಆಜೀವ ಸದಸ್ಯರಾದ ರಾಮಪ್ರಸಾದ್, ಕುಲಸಚಿವರಾದ ಪ್ರೊ.ಎನ್.ಕೆ.ಹರಿಯಪ್ಪ, ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ, ಸಾರ್ವಜನಿಕ ಸಂಪರ್ಕಾಧಿಕಾರಿ ಸಿ.ಎಂ.ನೃಪತುಂಗ, ಲೆಕ್ಕಪತ್ರ ವಿಭಾಗದ ಸಂಜಯ್, ಮುಖ್ಯ ಶಿಕ್ಷಕ ಇಮ್ತಿಯಾಜ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

















