ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಫೆ. 4ರಂದು ಬಸವನಬಾಗೇವಾಡಿಯಲ್ಲಿ ಸಾವಿರಾರು ಸ್ವಾಮೀಜಿಗಳ ನೇತೃತ್ವದಲ್ಲಿ ‘ಕ್ರಾಂತಿವೀರ ಬ್ರಿಗೇಡ್’ಗೆ #Krantiveera Briged ಚಾಲನೆ ನೀಡಲಾಗುವುದು ಎಂದು ರಾಷ್ಟ್ರಭಕ್ತರ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಹೇಳಿದರು.
ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕ್ರಾಂತಿವೀರ ಬ್ರಿಗೇಡ್ ಎನ್ನುವುದು ಪಕ್ಷಾತೀತವಾಗಿದೆ. ಹಿಂದೂ ಸಮಾಜದ ಒಗ್ಗೂಡುವಿಕೆಗಾಗಿ ಇದನ್ನು ಸ್ಥಾಪಿಸಲಾಗುತ್ತಿದೆ. ಬಸವಣ್ಣ ಹುಟ್ಟಿದ ನಾಡಾದ ಬಸವನ ಬಾಗೇವಾಡಿಯಿಂದಲೇ ಇದಕ್ಕೆ ಚಾಲನೆ ಸಿಗಲಿದೆ. ಫೆ. 4ರಂದು ಇದರ ಉದ್ಘಾಟನೆಯಾಗಲಿದೆ. ಉತ್ತರ ಕರ್ನಾಟಕದಿಂದ 1008 ಸ್ವಾಮೀಜಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಲಿದ್ದು, ಶಿವಮೊಗ್ಗದಿಂದಲೂ ಕೂಡ ಸುಮಾರು 250ಕ್ಕೂ ಅಧಿಕ ರಾಷ್ಟ್ರಭಕ್ತರ ಬಳಗದ ಕಾರ್ಯಕರ್ತರು ಇದರಲ್ಲಿ ಭಾಗವಹಿಸಲಿದ್ದಾರೆ ಎಂದರು.
ಕರ್ನಾಟಕ ರಾಜ್ಯದÀಲ್ಲಿ ಹಿಂದೂ ಸಮಾಜದ ವಿವಿಧ ಜಾತಿಯ ಮಠಾಧೀಶರು ಸಾವಿರಾರು ಸಂಖ್ಯೆಯಲ್ಲಿದ್ದಾರೆ. ಅವರೆಲ್ಲರೂ ಕೂಡಾ ಒಟ್ಟು ಮಾಡಬೇಕು ಸಮಾಜದ ಏಳಿಗೆಗೆ ಯಶಸ್ವಿಯಾಗಿ ಜೀವನವನ್ನು ಕೊಟ್ಟಿದ್ದೇವೆ. ಆದರೆ ಎಲ್ಲ ಸಮಾಜಗಳು ಒಂದಾಗಬೇಕು ಎಂಬ ನಿಟ್ಟಿನಲ್ಲಿ ನಮ್ಮನ್ನು ಕರೆದಿದ್ದರಿಂದÀ ಹಿಂದೂ ಸಮಾಜಕ್ಕೆ ಏನೇ ಸಮಸ್ಯೆ ಯಾದರೂ ನೀವು ಬಂದಿದ್ದೀರಾ, ಕ್ರಾಂತಿ ವೀರ ಬ್ರಿಗೇಡ್ ಎಂಬ ಹೆಸರನ್ನೂ ಕೂಡಾ ಕೊಟ್ಟರು. ಬ್ರಿಗೇಡ್ ನ ಉದ್ಘಾಟನಾ ಸಮಾರಂಭಕ್ಕೆ 1008 ಸ್ವಾಮೀಜಿಗಳನ್ನು ಒಟ್ಟಿಗೆ ಸೇರಿಸಿ ಅವರ ಪಾದ ಪೂಜೆ ಮಾಡಿ ಬ್ರಿಗೇಡ್ ಉದ್ಘಾಟನೆ ಮಾಡಲಾಗುತ್ತದೆ ಎಂದರು.
ಅತಿಹೆಚ್ಚಿನ ಮಠಗಳು ಎಲ್ಲ ಸಮಾಜದ ಮಠಗಳು ಕೂಡ ಬಹಳ ದುಸ್ಥಿತಿಯಲ್ಲಿವೆ. ಗುಡಿಸಿಲಿನಲ್ಲಿ ಮಠಗಳಿವೆ. ಆರ್ಥಿಕವಾಗಿ ತುಂಬಾ ತೊಂದರೆಯಲ್ಲಿದ್ದಾರೆ. ಅದ್ಯಾವುದನ್ನೂ ಗಮನಿಸದೆ ಸಮಾಜವನ್ನು ಜಾಗೃತಿ ಮಾಡುವುದೇ ನಮ್ಮ ಉದ್ದೇಶ. ಅವರೆಲ್ಲರೂ ಹಿಂದೂ ಧರ್ಮದ ಉಳಿವಿಗಾಗಿ ತಪಸ್ಸಿನ ರೂಪದಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದರು.
ಶಿವಮೊಗ್ಗದ ಆಶ್ರಯ ಮನೆಗಳಿಗೆ ಸಂಬಂಧಿಸಿದಂತೆ ಮಾತನಾಡಿದ ಅವರು, ಒಬ್ಬರಿಗೆ ಒಬ್ಬರು ಟೀಕೆ ಮಾಡುವುದು ರಾಜಕಾರಣದಲ್ಲಿ ತಪ್ಪಲ್ಲ. ಆದರೆ ನಾವು ದ್ವೇಷ ಮಾಡಿಲ್ಲ. ಸ್ನೇಹದಿಂದಲೇ ರಾಜಕಾರಣ ಮಾಡಿದ್ದೇವೆ. ಗೆಲುವು ಸೋಲು ರಾಜಕಾರಣದಲ್ಲಿ ಇದ್ದಿದ್ದೇ, ಯಾರೂ ಕೂಡ ಸಿದ್ಧಾಂತ ಬಿಡುವ ಪ್ರಶ್ನೆ ಬರುವುದಿಲ್ಲ. ಆದರೆ ಆ ಬಡವರು 7 ವರ್ಷ ಆಗಿದೆ. ಹಣ ನೀಡಿ, ಕೊಟ್ಟಿರುವ ಹಣವನ್ನಾದರೂ ವಾಪಾಸ್ ಕೊಡಿ ಎನ್ನುವ ನಿಟ್ಟಿನಲ್ಲಿ ಕೆಲವರು ಇದ್ದಾರೆ. ರೆಡಿಯಾಗಿರುವ ಮನೆಯನ್ನಾದರೂ ಅವರಿಗೆ ಕೊಡಿ ಎನ್ನುವಂತೆ ಶಾಸಕರು ಹೇಳಿದ್ದಾರೆ, ಮೂಲಭೂತ ಸೌಕರ್ಯಗಳನ್ನು ಕಲ್ಪಿಸಿ ನಂತರ ಕೊಡುವ ಯೋಚನೆಯಲ್ಲಿರುವ ಸಚಿವರ ಯೊಚನೆ ಇದೆ, ಇಬ್ಬರದೂ ಸರಿ ಇದೆ ಎಂದರು.
ಆದರೆ ಅಲ್ಲಿ ಸಜ್ಜನರು ವಾಸಿಸುವ ಮನೆಯಲ್ಲಿ ಅವ್ಯವಹಾರಕ್ಕೆ ಆಸ್ಪದ ನೀಡದೆ ಒಂದು ಟೈಮ್ ಬಾಂಡ್ ಇಟ್ಟುಕೊಂಡು, ಒಂದು ಅಥವಾ ಎರಡು ತಿಂಗಳಿನಲ್ಲಿ ಬಡವರಿಗೆ ನೀಡುವ ವ್ಯವಸ್ಥೆ ಮಾಡಿ. ಇಲ್ಲದಿದ್ದಲ್ಲಿ ಹೋರಾಟ ಮಾಡುವ ಅನಿವಾರ್ಯತೆ ಸೃಷ್ಟಿಯಾಗುತ್ತದೆ ಎಂದು ಸಚಿವರಿಗೆ ಎಚ್ಚರಿಕೆ ನೀಡಿದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಯಸ್ಸು 80+ ಆದರೆ 2 ವರ್ಷದ ಹುಡುಗನ ರೀತಿ ಆಡುತ್ತಿದ್ದಾರೆ. ಹಿಂದೂ ಸಮಾಜದ ಮೇಲೆ ಯಾಕೆ ನಿಮಗೆ ಚಿಂತೆ, ಈ ಸಮಾಜದಲ್ಲಿ ಪುಣ್ಯ ಕ್ಷೇತ್ರದ ಬಗ್ಗೆ, ಹಸು ಬಗ್ಗೆ, ನದಿ ಬಗ್ಗೆ ಹಗುರವಾಗಿ ಮಾತನಾಡುವ ಅನೇಕರು ಕಾಂಗ್ರೆಸ್ ನಲ್ಲಿದ್ದಾರೆ. ಮೋದಿ ಬಗ್ಗೆ ಅಮಿತ್ ಶಾ ಬಗ್ಗೆ ಟೀಕೆ ಮಾಡಲು ನೀವು ಯಾರು, ಇಡೀ ಹಿಂದೂ ಸಮಾಜದ ಬಗ್ಗೆ, ನಮ್ಮ ತೀರ್ಥ ಕ್ಷೇತ್ರದ ಬಗ್ಗೆ ಹಗುರವಾಗಿ ಮಾತನಾಡಬೇಡಿ ಎಂದರು.
ಇದೂವರೆಗೂ ಚುನಾವಣೆ ನಡೆಸಿಕೊಂಡು ಬರುತ್ತಿರುವುದು ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ. ಪ್ರಜಾಪ್ರಭುತ್ವ ವ್ಯವಸ್ಥೆ ಇರುವುದು ಭಾರತೀಯ ಜನತಾ ಪಕ್ಷದಲ್ಲಿ ಮಾತ್ರ. ರಾಜ್ಯದ ರಾಜಕಾರಣವೇ ಕುಲಗೆಟ್ಟು ಹೋಗಿದೆ. ನಮ್ಮ ಪಕ್ಷ ಹೀಗಾಗಿದೆಯಲಾ ಎಂದು ತುಂಬಾ ನೋವಿದೆ. ಎಷ್ಟೋ ಜನರ ನೋವು ಬಲಿದಾನ ಆಗಿದೆ ಪಕ್ಷ ಕಟ್ಟುವಲ್ಲಿ. ಅವರೆಲ್ಲರ ತಪಸ್ಸು ಅವರೆಲ್ಲರ ಬಲಿದಾನದ ಪಕ್ಷ ಕೆಲವು ರಾಜಕಾರಣಿಗಳ ಕೈಗೆ ಸಿಕ್ಕಿದೆ. ಸಿದ್ಧಾಂತದ ರಾಜಕಾರಣ ಮತ್ತೆ ಬರುತ್ತದೆ ಎಂಬ ನಂಬಿಕೆ ಇದೆ. ಪಕ್ಷ ಶುದ್ಧೀಕರಣ ಆಗಬೇಕಿದೆ. ಪಕ್ಷಾತೀತವಾಗಿ ಎಲ್ಲ ರಾಜಕೀಯದವರು ಬರುತ್ತಿದ್ದಾರೆ. ಬಿಜೆಪಿ ಶುದ್ಧೀಕರಣ ಆಗುತ್ತದೆ ಎಂದು ಹೇಳಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಎಂ.ಶAಕರ್, ಇ. ವಿಶ್ವಾಸ್, ಕಾಚನಕಟ್ಟೆ ಸತ್ಯನಾರಾಯಣ್, ಬಾಲು, ಟಾಕ್ರಾನಾಯ್ಕ್, ಮಂಜು, ಕುಬೇರ, ಜಾಧವ್, ಶಿವಾಜಿ, ಮೋಹನ್, ಕುಬೇರಪ್ಪ ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post