No Result
View All Result
Rani KoHEnur Calls Transgender Bill “Absurd”, Questions Lawmakers in Explosive Podcast Interview
English Articles

Rani KoHEnur Calls Transgender Bill “Absurd”, Questions Lawmakers in Explosive Podcast Interview

by ಕಲ್ಪ ನ್ಯೂಸ್
April 9, 2026
0

Kalpa Media House  |  Mumbai | Artist, drag performer, and activist Rani KoHEnur (Sushant Divgikar) has ignited widespread conversation following...

Read moreDetails
RPF team Seized 40.495 Kgs Ganja at Ballari Railway station

RPF team Seized 40.495 Kgs Ganja at Ballari Railway station

April 7, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Extension of Special Train Services to Manage Summer Rush

April 7, 2026
Interior / upgradation of Next-Generation Amrit Bharat Coaches. Sample coach ready

Interior / upgradation of Next-Generation Amrit Bharat Coaches. Sample coach ready

April 6, 2026
ಶ್ರೀ ಕೊಟ್ಟೂರೇಶ್ವರ ಜಾತ್ರೆ ಪ್ರಯುಕ್ತ | ಹೊಸಪೇಟೆ – ತೊಳಹುಣಸೆ ನಡುವೆ ವಿಶೇಷ ರೈಲು ಸಂಚಾರ

Special Train Between Bengaluru Cantt and Chennai

April 3, 2026
  • Advertise With Us
  • Grievances
  • About Us
  • Contact Us
Saturday, April 11, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಇನ್ವೆಸ್ಟ್‌ ಕರ್ನಾಟಕ 2025 | ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿ ಕೇಂದ್ರ | ಸಚಿವ ಎಂ.ಬಿ. ಪಾಟೀಲ

ಫೆ. 11ರಂದು ಭವ್ಯ ಉದ್ಘಾಟನೆ | ಈ ಬಾರಿಯ ಜಿಮ್ ನಲ್ಲಿ ಏನಿರುತ್ತೆ? ಯಾವ ಚರ್ಚೆ ಯಲ್ಲಿ ಯಾರು ಭಾಗವಹಿಸುತ್ತಾರೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 10, 2025
in ಬೆಂಗಳೂರು ನಗರ
0
Land will be handed over to Foxconn by July 1: Minister MB Patil
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶ ಇನ್ವೆಸ್ಟ್‌ ಕರ್ನಾಟಕ 2025ಕ್ಕೆ #Invest Karnataka 2025 ಆತಿಥ್ಯ ವಹಿಸಲು ಕರ್ನಾಟಕ ರಾಜ್ಯ ಸರ್ಕಾರವು ಸಜ್ಜಾಗಿದ್ದು, ಮಂಗಳವಾರ (ಫೆ. 11) ಮಧ್ಯಾಹ್ನ ನಡೆಯಲಿರುವ ಭವ್ಯ ಉದ್ಘಾಟನಾ ಸಮಾರಂಭವು ನಾಲ್ಕು ದಿನಗಳ ಹೂಡಿಕೆ ಉತ್ಸವಕ್ಕೆ ಮುನ್ನುಡಿ ಬರೆಯಲಿದೆ.

ʼಈ ಹೂಡಿಕೆದಾರರ ಸಮಾವೇಶವು, ಕರ್ನಾಟಕವನ್ನು ಜಾಗತಿಕ ಬಂಡವಾಳ ಹೂಡಿಕೆಯ ಶಕ್ತಿಕೇಂದ್ರವನ್ನಾಗಿ ಅಭಿವೃದ್ಧಿಪಡಿಸಲು ನೆರವಾಗಲಿದೆ. ನಾವೀನ್ಯತೆ, ಕೈಗಾರಿಕಾ ಪ್ರಗತಿ ಮತ್ತು ಜಾಗತಿಕ ಪಾಲುದಾರಿಕೆಗೆ ರಾಜ್ಯದಲ್ಲಿನ ಸೌಲಭ್ಯಗಳನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ #Minister M B Patil ಅವರು ಹೇಳಿದ್ದಾರೆ.
ಉದ್ದಿಮೆ, ನೀತಿ ನಿರೂಪಣೆ ಹಾಗೂ ನಾವೀನ್ಯತೆ ಕ್ಷೇತ್ರದ ದಿಗ್ಗಜರ ಸಮಾಗಮಕ್ಕೆ, ಚಿಂತನ ಮಂಥನಕ್ಕೆ ಇದು ವೇದಿಕೆ ಒದಗಿಸಲಿದೆ. ವಿವಿಧ ಕ್ಷೇತ್ರಗಳ ದಿಗ್ಗಜರು ಕರ್ನಾಟಕದಲ್ಲಿನ ಬಂಡವಾಳ ಹೂಡಿಕೆ ಮತ್ತು ಕೈಗಾರಿಕಾ ಪ್ರಗತಿಯ ಭವಿಷ್ಯ ರೂಪಿಸಲು ತಮ್ಮ ಒಳನೋಟಗಳನ್ನು ನೀಡಲಿದ್ದಾರೆ.

ಸಮಾವೇಶದ ವಿವಿಧ ಕಾರ್ಯಕ್ರಮಗಳ ವಿವರ ಹೀಗಿದೆ:

ಮೊದಲ ದಿನ. ಫೆಬ್ರುವರಿ 12:

  • ಬೆಳಿಗ್ಗೆ 10:35 – 11:05 | ಸಭಾಂಗಣ ಎ | ಸಂವಾದ ಕಾರ್ಯಕ್ರಮ – ಕೃತಕ ಬುದ್ಧಿಮತ್ತೆ, ಸೈಬರ್ ಸುರಕ್ಷತೆ ಮತ್ತು ಸರ್ಕಾರ: ಅನಿಶ್ಚಿತ ಜಗತ್ತಿನಲ್ಲಿ ಡಿಜಿಟಲ್ ಕ್ಷಮತೆ ನಿರ್ಮಾಣ (AI, Cybersecurity, and Government: Building Digital Resilience in an Uncertain World)
    ಭಾಷಣಕಾರರು: ಸೈಮನ್ ಲಾಂಗ್ (ದಿ ಎಕನಾಮಿಸ್ಟ್-ನ ಸಂಪಾದಕ)
    ಕಾರ್ಯಕ್ರಮ ನಿರೂಪಣೆ: ಆನ್ ಡಂಕಿನ್ (ಅಮೆರಿಕದ ಇಂಧನ ಇಲಾಖೆಯ ಮಾಜಿ ಸಿಐಒ)
  • ಮಧ್ಯಾಹ್ನ 12:00 ರಿಂದ 1:00 | ಸಭಾಂಗಣ ಎ | ಸಂವಾದ ಕಾರ್ಯಕ್ರಮ – ಕ್ಷಮತೆಯ ಮಾರ್ಗೋಪಾಯಗಳು: ಜಾಗತಿಕ ಸವಾಲುಗಳ ಮಧ್ಯೆ ಭಾರತದ ಆರ್ಥಿಕ ಬೆಳವಣಿಗೆ ಸಾಧಿಸುವುದು (Resilient Pathways: Charting India’s Economic Growth Amid Global Challenges)
    ಮುಖ್ಯ ಭಾಷಣ: ಮೊಂಟೆಕ್ ಸಿಂಗ್ ಅಹ್ಲುವಾಲಿಯಾ (ಭಾರತದ ಅರ್ಥಶಾಸ್ತ್ರಜ್ಞ, ಭಾರತದ ಯೋಜನಾ ಆಯೋಗದ ಮಾಜಿ ಉಪಾಧ್ಯಕ್ಷ)
    ಕಾರ್ಯಕ್ರಮ ನಿರ್ವಹಣೆ: ಸಲ್ಮಾನ್ ಸೋಜ್ (ಅರ್ಥಶಾಸ್ತ್ರಜ್ಞ ಮತ್ತು ಲೇಖಕ)
  • ಮಧ್ಯಾಹ್ನ 2:00 ರಿಂದ 3:00 | ಸಭಾಂಗಣ ಎ | ಸಂವಾದ ಕಾರ್ಯಕ್ರಮ: ಭವಿಷ್ಯಕ್ಕೆ ನಾವೀನ್ಯತೆ (Innovating the Future)
    ಮುಖ್ಯ ಭಾಷಣ: ಅಕಿಸ್ ಇವಾಂಜೆಲಿಡಿಸ್ (ನಥಿಂಗ್‌-ನ ಸಹ-ಸಂಸ್ಥಾಪಕ ಮತ್ತು ಮಾರಾಟ ಮುಖ್ಯಸ್ಥ,) ಕಾರ್ಯಕ್ರಮ ನಿರೂಪಣೆ: ಶಿವ್ ಅರೂರ್ (ಭಾರತದ ಪತ್ರಕರ್ತ ಮತ್ತು ಬರಹಗಾರ)
  • ಮಧ್ಯಾಹ್ನ 4:30 ರಿಂದ 5:30 | ಸಭಾಂಗಣ ಎ |
    ತಜ್ಞರ ಸಮೂಹ ಚರ್ಚೆ – ಮುಂದಾಳತ್ವ: ಭಾರತದ ಭವಿಷ್ಯ ರೂಪಿಸುತ್ತಿರುವ ಯುವ ನಾವೀನ್ಯಕಾರರು (Leading the Charge: Young Innovators Shaping India’s Future)
  • ಭಾಷಣಕಾರರು: ಪಾರ್ಥ್ ಜಿಂದಾಲ್ ( ಜೆಎಸ್‌ಡಬ್ಲ್ಯು ಸಿಮೆಂಟ್‌ನ ವ್ಯವಸ್ಥಾಪಕ ನಿರ್ದೇಶಕ), ಜಯ್‌ ಕೋಟಕ್ (ಕೋಟಕ್‌811-ನ ಸಹ-ಮುಖ್ಯಸ್ಥ), ಸುಜನ್ನಾಹ ಮುತ್ತೂಟ್ (ಮುತ್ತೂಟ್ ಹೌಸಿಂಗ್ ಫೈನಾನ್ಸ್ ಕಂಪನಿಯ ಕಾರ್ಯನಿರ್ವಾಹಕ ನಿರ್ದೇಶಕಿ)
    ಕಾರ್ಯಕ್ರಮ ನಿರೂಪಣೆ: ನಿಖಿಲ್ ಕಾಮತ್ (ಜಿರೋಧಾ, ಟ್ರೂ ಬಿಯಕಾನ್, ಗೃಹಸ್-ನ ಸಹ-ಸಂಸ್ಥಾಪಕ)

ದಿನ 2 – ಫೆಬ್ರುವರಿ 13, 2025

  • ಬೆಳಿಗ್ಗೆ 11:05 ರಿಂದ 11:45 | ಸಭಾಂಗಣ ಎ | ಸಂವಾದ ಕಾರ್ಯಕ್ರಮ– ಕೃತಕ ಬುದ್ಧಿಮತ್ತೆ ಸೀಮಾರೇಖೆ: ದೈತ್ಯ ಜಿಗಿತದಿಂದ ನೈಜ-ಪ್ರಪಂಚದ ಪ್ರಭಾವಗಳವರೆಗೆ (Pioneering the AI Frontier: From Moonshots to Real-World Impact)
  • ಭಾಷಣಕಾರರು: ಸೆಬಾಸ್ಟಿಯನ್ ಥ್ರನ್ (ಗೂಗಲ್‌ ಎಕ್ಸ್‌ನ ಸ್ಥಾಪಕ), ಪ್ರಶಾಂತ್ ಪ್ರಕಾಶ್ (ಆ್ಯಕ್ಸೆಲ್ ಪಾರ್ಟನರ್ಸ್‌ನ ಸ್ಥಾಪಕ ಪಾಲುದಾರ)
    ಕಾರ್ಯಕ್ರಮ ನಿರೂಪಣೆ: ಮಿಷೆಲ್ ಹೆನ್ನೆಸ್ಸಿ (ದಿ ಎಕನಾಮಿಸ್ಟ್‌ನ ಗ್ರಾಫಿಕ್ ಡಿಟೆಲ್‌ ಸಂಪಾದಕ)
  • ಮಧ್ಯಾಹ್ನ 4:30 – 5:30 | ಸಭಾಂಗಣ ಎ | ಗುಂಪು ಚರ್ಚೆ – ವೈವಿಧ್ಯಮಯ ಪಥಗಳಿಂದ ಸಾಮಾನ್ಯ ಗುರಿಯವರೆಗೆ (From Diverse Paths to a Common Goal)
    ಭಾಷಣಕಾರರು: ಕಿರಣ್ ರಾವ್ (ಚಲನಚಿತ್ರ ನಿರ್ದೇಶಕಿ, ನಿರ್ಮಾಪಕಿ ಮತ್ತು ಬರಹಗಾರ್ತಿ), ಐರಿನಾ ಘೋಸ್ (ಮೈಕ್ರೋಸಾಫ್ಟ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕಿ), ಸುಖಿ ಸಿಂಗ್ (ಸುಖೀಸ್ ಗೌರ್ಮೆಟ್ ಫುಡ್ಸ್ನ ಸಂಸ್ಥಾಪಕಿ)
    ಕಾರ್ಯಕ್ರಮ ನಿರೂಪಣೆ: ಲಕ್ಷ್ಮಿ ಪ್ರತುರಿ (ಇಂಕ್ಟಾಲ್ಕ್ಸ್ ಸಂಸ್ಥಾಪಕಿ ಮತ್ತು ಸಿಇಒ)

Also read: Invest Karnataka 2025: A Global Investment Powerhouse with Key Sessions to Watch: MB Patil

ದಿನ 3 – ಫೆಬ್ರುವರಿ 14, 2025:

  • ಬೆಳಿಗ್ಗೆ 10:30 ರಿಂದ 11:30 | ಸಭಾಂಗಣ ಎ | ಸಂವಾದ ಕಾರ್ಯಕ್ರಮ- ಪ್ರಕ್ಷುಬ್ಧತೆಯಲ್ಲಿ ಅಭಿವೃದ್ಧಿ ಸಾಧಿಸುವುದು: ದೇಶಗಳು ಶಾಶ್ವತ ಕ್ಷಮತೆ ಹೇಗೆ ನಿರ್ಮಿಸಬಹುದು (Thriving in Turbulence: How Nations Can Build Lasting Resilience)
    ಭಾಷಣಕಾರರು: ಜಾರ್ಜ್ ಪಪಂಡ್ರಿಯೊ (ಗ್ರೀಸ್‌ನ ಮಾಜಿ ಪ್ರಧಾನಿ), ಶಶಿ ತರೂರ್ (ಲೋಕಸಭಾ ಸದಸ್ಯ) ಕಾರ್ಯಕ್ರಮ ನಿರೂಪಣೆ: ಲಕ್ಷ್ಮಿ ಪ್ರತುರಿ (ಇಂಕ್ಟಾಲ್ಕ್ಸ್ ಸಂಸ್ಥಾಪಕಿ ಮತ್ತು ಸಿಇಒ)‌

ಕರ್ನಾಟಕದ ಭವಿಷ್ಯಕ್ಕೆ ದೂರದೃಷ್ಟಿಯ ಮಾರ್ಗಸೂಚಿ

ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಇನ್ವೆಸ್ಟ್ ಕರ್ನಾಟಕ 2025 ಕೈಗಾರಿಕಾ ಬೆಳವಣಿಗೆ, ನಾವೀನ್ಯತೆ ಮತ್ತು ಜಾಗತಿಕ ಸಹಯೋಗ ಬೆಳೆಸುವ ರಾಜ್ಯದ ಬದ್ಧತೆಗೆ ನಿದರ್ಶನವಾಗಿದೆ.

ವಿಶ್ವದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಜೊತೆಗಿನ ಒಪ್ಪಂದಗಳ ಮೂಲಕ ಶೈಕ್ಷಣಿಕ ಹಾಗೂ ಉದ್ಯಮದ ಪಾಲುದಾರಿಕೆಗಳನ್ನು ಬಲಪಡಿಸುವಂತಹ ಪ್ರಮುಖ ಉಪಕ್ರಮಗಳನ್ನು ಮುನ್ನಡೆಸುವಲ್ಲಿ ಸಚಿವ ಪಾಟೀಲ್ ಪ್ರಮುಖ ಪಾತ್ರ ವಹಿಸಿದ್ದಾರೆ.
ಕರ್ನಾಟಕವು ಅತ್ಯಾಧುನಿಕ ಕೈಗಾರಿಕೆಗಳಲ್ಲಿ ಜಾಗತಿಕವಾಗಿ ಮುಂಚೂಣಿ ಸ್ಥಾನದಲ್ಲಿ ಮುಂದುವರೆಯುವುದನ್ನು ಖಚಿತಪಡಿಸಿಕೊಳ್ಳಲು ಇವರು ಕ್ವಿನ್‌ ಸಿಟಿ ಉಪಕ್ರಮವನ್ನು ಮುನ್ನಡೆಸುವಲ್ಲಿಯೂ ಪ್ರಮುಖ ಪಾತ್ರ ವಹಿಸಿದ್ದಾರೆ.

ಈ ಶೃಂಗಸಭೆಯು, ವಿವಿಧ ಕೈಗಾರಿಕಾ ವಲಯಗಳಲ್ಲಿ ಜಾಗತಿಕ ಪಾಲುದಾರಿಕೆ ಬೆಳೆಸುವುದರ ಜೊತೆಗೆ, ನಾವೀನ್ಯತೆ ಮತ್ತು ಹೂಡಿಕೆ ಕೇಂದ್ರವಾಗಿರುವ ಕರ್ನಾಟಕದ ಮಹತ್ವವನ್ನು ಇಡೀ ವಿಶ್ವಕ್ಕೆ ಪರಿಚಯಿಸಲಿದೆ.

ಸಮಾವೇಶದ ಕಾರ್ಯಕ್ರಮಗಳ ವಿವರಗಳಿಗೆ https://investkarnataka.co.in/gim2025/events-schedule/ ಭೇಟಿ ನೀಡಿ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: BangaloreInvest Karnataka 2025Kannada News WebsiteKannada_NewsKannada_News_LiveKannada_News_OnlineKannada_WebsiteLatest News KannadaMinister M B PatilNews_in_KannadaNews_Kannadaಇನ್ವೆಸ್ಟ್‌ ಕರ್ನಾಟಕ 2025ಬೆಂಗಳೂರುಸಚಿವ ಎಂ.ಬಿ. ಪಾಟೀಲ
Share196Tweet123Send
Previous Post

Invest Karnataka 2025: A Global Investment Powerhouse with Key Sessions to Watch: MB Patil

Next Post

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಕೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಕೆ

ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಹರ್ಷಿತ್ ಗೌಡ ಆಯ್ಕೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

ಜಾಗತಿಕ ತಾಪಮಾನ ನಿಯಂತ್ರಣ, ಭೂಮಿ ಹಸಿರು ಸಮತೋಲನಕ್ಕೆ ಆಧುನಿಕ ತಂತ್ರಜ್ಞಾನದ ಸಕ್ರಿಯ ಪಾತ್ರ ಅನಿವಾರ್ಯ

April 10, 2026
ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

ಕೃಷಿ, ಸಾಮಾಜಿಕ ಬುನಾದಿ ರಕ್ಷಿಸಲು ಕೂಡಲೇ ವಿಶೇಷ ಅಧಿವೇಶನ ಕರೆಯಲಿ: ಪ್ರಕಾಶ್ ಕಮ್ಮರಡಿ ಆಗ್ರಹ

April 10, 2026
ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

ರಾಷ್ಟ್ರೀಯ ರಕ್ಷಾ ವಿವಿ | ಶೈಕ್ಷಣಿಕ ವರ್ಷಕ್ಕೆ ಅರ್ಜಿ ಆಹ್ವಾನ: ಡಾ.ಕಾವೇರಿ ಟಂಡನ್

April 10, 2026
ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

ಕೆಪಿಎಸ್‍ಸಿ ಅಕ್ರಮ ಸಿಬಿಐ ತನಿಖೆಗೆ ಒಪ್ಪಿಸಿ: ಸ್ಟೇಟ್ ಸ್ಟೂಡೆಂಟ್ ಅಸೋಸಿಯೇಷನ್ ಆಗ್ರಹ

April 10, 2026
ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

ಮುಂದಿನ ದಿನಗಳಲ್ಲಿ ಪೇಸ್ ಪಿಯು ಕಾಲೇಜು ರಾಜ್ಯಕ್ಕೆ ಪ್ರಥಮ: ಕೆ.ಎಸ್. ಈಶ್ವರಪ್ಪ ಆಶಯ

April 10, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL