ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಮೈಕ್ರೋ ಫೈನಾನ್ಸ್ #Micro finance ಕಂಪನಿಗಳ ಹಾವಳಿ ತಪ್ಪಿಸಬೇಕು. ಮತ್ತು ಬಗುರ್ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ (ಸಾಮೂಹಿಕ ನಾಯಕತ್ವ) ಕಾರ್ಯಕರ್ತರು ಇಂದು ಜಿಲ್ಲಾಧಿಕಾರಿಗಳ ಕಚೇರಿ ಎದುರು ಧರಣಿ ನಡೆಸಿದರು.
ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಂಪನಿಗಳು ಕಾನೂನುಬಾಹಿರವಾಗಿ ಸಾಲ ವಸೂಲಾತಿ ಮಾಡುತ್ತಿವೆ. ಕಂಪನಿಯ ಸಿಬ್ಬಂದಿಗಳು ಗೂಂಡಾಗಿರಿ ನಡೆಸುತ್ತಿದ್ದಾರೆ. ಸಾಲದ ಕಿರುಕುಳಕ್ಕೆ ಸಿಕ್ಕ ರೈತರು, ಬಡವರು ಆತ್ಮಹತ್ಯೆಯ ದಾರಿ ತುಳಿಯುತ್ತಿದ್ದಾರೆ. ಕೂಡಲೇ ಇದರ ವಿರುದ್ಧ ಕ್ರಮತೆಗೆದುಕೊಳ್ಳಬೇಕು ಎಂದು ಧರಣಿನಿರತರು ಆಗ್ರಹಿಸಿದರು.

Also read: ಮಹಿಳಾ ಅಧಿಕಾರಿ ಕರ್ತವ್ಯಕ್ಕೆ ಅಡ್ಡಿ | ಶ್ರೀ ಪ್ರಣವಾನಂದ ಸ್ವಾಮೀಜಿ ಖಂಡನೆ
ರೈತರ ಕೃಷಿ ಪಂಪ್ಸೆಟ್ ಗಳಿಗೆ ತಂತಿ ಇನ್ನಿತರೆ ವಸ್ತುಗಳನ್ನು ರೈತರೇ ಭರಿಸಬೇಕು ಎನ್ನುವ ಆದೇಶ ವಾಪಸ್ ಪಡೆದು ಈ ಹಿಂದೆ ಇದ್ದಂತೆ ಆದೇಶ ಜಾರಿಗೊಳಿಸಬೇಕು. ಭದ್ರಾ ಜಲಾಶಯಕ್ಕೆ ತುಂಗಾ ಜಲಾಶಯದಿಂದ ನೀರು ತುಂಬಿಸುವ ಯೋಜನೆಯನ್ನು ಶೀಘ್ರವೇ ಮುಗಿಸಬೇಕು. ರೈತರ ಆರ್ಥಿಕ ಸ್ಥಿತಿ ಸುಧಾರಿಸಲು ನಬಾರ್ಡ್ ಮೂಲಕ ಕೋಆಪರೇಟಿವ್ ಸೊಸೈಟಿಗಳಿಗೆ ನೀಡುವಂತಹ ಸಾಲದ ಮೊತ್ತವನ್ನು ಕಡಿತಗೊಳಿಸಬಾರದು ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಮನವಿಯಲ್ಲಿ ಆಗ್ರಹಿಸಲಾಗಿದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news










Discussion about this post