No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Saturday, April 18, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಬೆಂಗಳೂರು ನಗರ

ಕರ್ನಾಟಕವು ದೇಶದ ಇಂಧನ ಭವಿಷ್ಯ: ಕೆ.ಜೆ. ಜಾರ್ಜ್‌

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಆಸ್ಟ್ರೇಲಿಯಾ ವಾಣಿಜ್ಯ ನಿಯೋಗದ ಜತೆ ಇಂಧನ ಸಚಿವರ ಸಭೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
February 14, 2025
in ಬೆಂಗಳೂರು ನಗರ
0
ಕರ್ನಾಟಕವು ದೇಶದ ಇಂಧನ ಭವಿಷ್ಯ: ಕೆ.ಜೆ. ಜಾರ್ಜ್‌
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಬೆಂಗಳೂರು  |

ನವೀಕರಿಸಬಹುದಾದ ಇಂಧನವೂ ಸೇರಿದಂತೆ ಇಂಧನ ಉತ್ಪಾದನೆ ವಲಯದಲ್ಲಿ ಮುಂಚೂಣಿಯಲ್ಲಿರುವ ಕರ್ನಾಟಕವು ದೇಶದ ಇಂಧನ ವಲಯದ ಭವಿಷ್ಯ ಎಂದು ಇಂಧನ ಸಚಿವ ಕೆ.ಜೆ. ಜಾರ್ಜ್‌ #Energy Minister K J George ಅವರು ಹೇಳಿದ್ದಾರೆ.

ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ #Global Investors Conference ಗುರುವಾರ ನಡೆದ ನವೀಕರಿಸಬಹುದಾದದ ಇಂಧನ ಹಾಗೂ ಹಸಿರು ಆರ್ಥಿಕತೆ ಜಾಗತಿಕ ಮಾರುಕಟ್ಟೆಯ ಅವಕಾಶಗಳ ಕುರಿತ ಭಾರತ ಮತ್ತು ಆಸ್ಟ್ರೇಲಿಯಾ ದ್ವೀಪಕ್ಷೀಯ ಸಭೆಯಲ್ಲಿ ಸಚಿವರು ಪಾಲ್ಗೊಂಡು ಮಾತನಾಡಿದರು.
ರಾಜ್ಯದಲ್ಲಿ ಹೂಡಿಕೆದಾರರ ಸ್ನೇಹಿ ಸರ್ಕಾರವಿದೆ. ನವೀಕರಿಸಬಹುದಾದ ಇಂಧನ ವಲಯದಲ್ಲಿ ಹೂಡಿಕೆಗೆ ವಿಫುಲ ಅವಕಾಶಗಳಿದ್ದು, ಆಸ್ಟ್ರೇಲಿಯಾದ ಸಂಸ್ಥೆಗಳು ಕರ್ನಾಟಕದಲ್ಲಿ ಬಂಡವಾಳ ಹೂಡಿಕೆ ಮಾಡಬೇಕು. ಅದಕ್ಕೆ ಅಗತ್ಯ ಸಹಕಾರ ನೀಡಲಾಗುವುದು ಎಂದರು.

“ಉದ್ಯಮ ಸ್ನೇಹಿ ರಾಜ್ಯ ಎನಿಸಿಕೊಂಡಿರುವ ಕರ್ನಾಟಕದಲ್ಲಿ ಅತ್ಯುತ್ತಮ ಕೈಗಾರಿಕಾ ನೀತಿ ಇದ್ದು, ಅಗತ್ಯ ಪ್ರೋತ್ಸಾಹಗಳನ್ನು ಒದಗಿಸುತ್ತಿದೆ. ಈ ಹಿಂದೆ ನಾನು ಕೈಗಾರಿಕಾ ಸಚಿವನಾಗಿದ್ದಾಗಲೂ ಉದ್ಯಮಗಳ ಸ್ಥಾಪನೆಗೆ ಒತ್ತು ನೀಡಿದ್ದೆ. ಬಂಡವಾಳ ಹೂಡಿಕೆಗೂ ಇದು ಪ್ರಶಸ್ತ ರಾಜ್ಯ. ಇಲ್ಲಿನ ಜನರು ಸ್ನೇಹಪರರರು. ಕೇರಳ ದೇವರ ನಾಡು ಎನಿಸಿಕೊಂಡರೆ ಕರ್ನಾಟಕದವರನ್ನು ‘ದೇವರ ಜನ’ (ಗಾಡ್ಸ್‌ ಓನ್‌ ಪೀಪಲ್‌) ಎನ್ನುತ್ತೇವೆ,”ಎಂದರು.
“ಶುದ್ಧ ಇಂಧನಕ್ಕೆ ಒತ್ತು ನೀಡುವ ನಿಟ್ಟಿನಲ್ಲಿ ಆಸ್ಟ್ರೇಲಿಯಾದ ಸ್ಮಾರ್ಟ್ ಎನರ್ಜಿ ಕೌನ್ಸಿಲ್‌ ಹಾಗೂ ನವೀಕರಿಸಬಹುದಾದ ಇಂಧನ ವಲಯದ ಸ್ಟಾರ್ಟ್‌ಅಪ್‌ಗಳನ್ನು ಉತ್ತೇಜಿಸಿ, ಅಭಿವೃದ್ಧಿಪಡಿಸಲು ಆಸ್ಟ್ರೇಲಿಯಾದ ಸೌತ್ ವೇಲ್ಸ್ ವಿಶ್ವವಿದ್ಯಾಲಯದೊಂದಿಗೆ ಇಂಧನ ಇಲಾಖೆ ಇತ್ತೀಚೆಗೆ ಒಪ್ಪಂದ ಮಾಡಿಕೊಳ್ಳಲಾಗಿದೆ. ಈ ಒಪ್ಪಂದವು ಶುದ್ಧ ಇಂಧನ, ನವೀಕರಿಸಬಹುದಾದ ಇಂಧನ, ಗ್ರೀನ್‌ ಹೈಡ್ರೋಜನ್‌, ಬ್ಯಾಟರಿ ಪವರ್‌ ಸ್ಟೋರೇಜ್‌ ವ್ಯವಸ್ಥೆಗಳು ಮತ್ತು ಸಂಬಂಧಿತ ವಲಯಗಳಲ್ಲಿ ಸಹಕಾರ ಹೆಚ್ಚಿಸುವ ಗುರಿ ಹೊಂದಿದೆ,” ಎಂದು ಅವರು ತಿಳಿಸಿದರು.

Also read: ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ

“ನವೀಕರಿಸಬಹುದಾದ ಇಂಧನ ವಲಯದ ಸಾಮರ್ಥ್ಯ ವರ್ಧನೆ ಮತ್ತು ಹೊಸ ತಂತ್ರಜ್ಞಾನಗಳನ್ನು ಆವಿಷ್ಕರಿಸುವ ಸ್ಟಾರ್ಟ್ಅಪ್‌ಗಳಿಗೆ ರಾಜ್ಯದಲ್ಲಿ ಪೂರಕ ಪರಿಸರವಿದೆ. ಸಂಶೋಧನೆ ಮತ್ತು ಆವಿಷ್ಕಾರ ವಲಯಕ್ಕೆ ಸಂಬಂಧಿಸಿದ ಪರಿಣಿತಿಯನ್ನು ಆಸ್ಟ್ರೇಲಿಯಾ ನಮ್ಮ ಜತೆ ಹಂಚಿಕೊಳ್ಳುವುದರಿಂದ ಜಾಗತಿಕ ಮಟ್ಟದ ಪರಿಸರ ವ್ಯವಸ್ಥೆಯನ್ನು ರೂಪಿಸುವ ನಿಟ್ಟಿನಲ್ಲಿ ಹಾಕಿಕೊಂಡಿರುವ ನಮ್ಮ ಗುರಿಗೆ ಒಪ್ಪಂದಗಳು ನೆರವಾಗಲಿವೆ. ಉದ್ಯಮಗಳು, ಸರ್ಕಾರ ಮತ್ತು ನಾಗರಿಕರಿಗೆ ಇದು ಲಾಭದಾಯಕವಾಗಲಿದೆ” ಎಂದು ಅವರು ಹೇಳಿದರು.

“ಶುದ್ಧ ಇಂಧನ, ಗ್ರೀನ್ ಹೈಡ್ರೋಜನ್, ಬ್ಯಾಟರಿ ಪವರ್‌ ಸ್ಟೋರೇಜ್‌ ಮತ್ತು ಸಂಬಂಧಿತ ವಲಯಗಳಲ್ಲಿ ಪರಸ್ಪರ ಸಹಕಾರ ಇದೆ. ನೂತನ ತಂತ್ರಜ್ಞಾನಗಳನ್ನು ಸದುಪಯೋಗಪಡಿಸಿಕೊಳ್ಳುವ ಜತೆಗೆ ಹೂಡಿಕೆ ಅವಕಾಶಗಳನ್ನು ಅನ್ವೇಷಿಸಲಾಗುವುದು,” ಎಂದು ಅವರು ಹೇಳಿದರು.
ಕರ್ನಾಟಕದಲ್ಲಿ ಬಂಡವಾಳ ಹೂಡಿ

ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ ಮಾತನಾಡಿ, “ನವೀಕರಿಸಬಹುದಾದ ಇಂಧನದ ಅತ್ಯಧಿಕ ಸ್ಥಾಪಿತ ಸಾಮರ್ಥ್ಯ ಹೊಂದಿರುವ ದೇಶದ ಮೊದಲ 5 ರಾಜ್ಯಗಳಲ್ಲಿ ಕರ್ನಾಟಕವು ಒಂದಾಗಿದೆ. ಸೌರ ಹಾಗೂ ಪವನ ವಿದ್ಯುತ್ ಉತ್ಪಾದನಾ ಸಾಮರ್ಥ್ಯದಲ್ಲಿ ರಾಜ್ಯವು ದೇಶದಲ್ಲೇ 3ನೇ ಸ್ಥಾನದಲ್ಲಿದ್ದೇವೆ. ನವೀಕರಿಸಬಹುದಾದದ ಇಂಧನ ವಲಯದಲ್ಲಿ ಹೂಡಿಕೆ ಅವಕಾಶಗಳಿದ್ದು, ಆಸ್ಟ್ರೇಲಿಯಾದ ಸಂಸ್ಥೆಗಳು ಕರ್ನಾಟಕದಲ್ಲಿ ಬಂಡವಾಳ ಹೂಡಲು ಮುಂದೆ ಬರಬೇಕು,” ಎಂದು ಮನವಿ ಮಾಡಿದರು.

ಸಭೆಯಲ್ಲಿ ಕ್ರೆಡಲ್‌ ಅಧ್ಯಕ್ಷರಾದ ಟಿ.ಡಿ. ರಾಜೇಗೌಡ, ಇಂಧನ ಇಲಾಖೆಯ ಅಪರ ಮುಖ್ಯಕಾರ್ಯದರ್ಶಿ ಗೌರವ್‌ ಗುಪ್ತ, ಕ್ರೆಡಲ್‌ ವ್ಯವಸ್ಥಾಪಕ ನಿರ್ದೇಶಕ ಕೆ.ಪಿ. ರುದ್ರಪ್ಪಯ್ಯ ಹಾಗೂ ಆಸ್ಟ್ರೇಲಿಯಾ ಇಂಡಿಯಾ ಬಿಸಿನೆಸ್‌ ಕೌನ್ಸಿಲ್‌ನ ಅಧ್ಯಕ್ಷ ಇರ್ಫಾನ್‌ ಮಲ್ಲಿಕ್‌, ಆಸ್ಟ್ರೇಲಿಯಾದ ವಾಣಿಜ್ಯ ಮತ್ತು ಹೂಡಿಕೆ ಇಲಾಖೆಯ ಆಯುಕ್ತೆ ಡೆನ್ನಿಸ್‌ ಇಟಾನ್‌, ಆಸ್ಟ್ರೇಲಿಯಾದ ವಾಣಿಜ್ಯ ಮತ್ತು ಹೂಡಿಕೆ (ಭಾರತದಲ್ಲಿನ ಹೂಡಿಕೆ) ಮುಖ್ಯಸ್ಥೆ ಮಾಲಿನಿ ದತ್‌ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4
Tags: BangaloreEnergy Minister K.J. GeorgeGlobal Investors ConferenceKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_Kannadaಇಂಧನ ಸಚಿವ ಕೆ.ಜೆ. ಜಾರ್ಜ್ಜಾಗತಿಕ ಹೂಡಿಕೆದಾರರ ಸಮಾವೇಶಬೆಂಗಳೂರು
Share196Tweet123Send
Previous Post

ಪರಿಸರದ ಮೇಲಿನ ಮಾನವ ದೌರ್ಜನ್ಯವೇ ಹವಾಮಾನ ವೈಪರಿತ್ಯಕ್ಕೆ ಕಾರಣ: ಸಚಿವ ಈಶ್ವರ ಖಂಡ್ರೆ

Next Post

ಬೆಂಗಳೂರು | ಇಂದಿನಿಂದ‌ 3 ದಿನ ಅನುಗ್ರಹ ಸಂಗೀತ‌ – ನೃತ್ಯ ‌ಮಹೋತ್ಸವ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಬೆಂಗಳೂರು | ಇಂದಿನಿಂದ‌ 3 ದಿನ ಅನುಗ್ರಹ ಸಂಗೀತ‌ – ನೃತ್ಯ ‌ಮಹೋತ್ಸವ

ಬೆಂಗಳೂರು | ಇಂದಿನಿಂದ‌ 3 ದಿನ ಅನುಗ್ರಹ ಸಂಗೀತ‌ - ನೃತ್ಯ ‌ಮಹೋತ್ಸವ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

ಯುದ್ಧ ವಿಮಾನ ತುರ್ತು ಭೂಸ್ಪರ್ಶ: ದೇಶೀಯ ವಿಮಾನ ಸಂಚಾರದಲ್ಲಿ ಭಾರಿ ವ್ಯತ್ಯಯ

April 18, 2026
ಅಡಿಕೆ ತೋಟದಲ್ಲಿ ಔಷಧಿ ಸಿಂಪಡಣೆ ಮಾಡುತ್ತಿದ್ದ ಕಾರ್ಮಿಕ ಸಾವು

ಗಂಟಲಲ್ಲಿ ಆಹಾರ ಸಿಲುಕಿಕೊಂಡು ಯುವಕ ಸಾವು

April 18, 2026
ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

ಲೋಕಸಭೆ, ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33ರಷ್ಟು ಮೀಸಲಾತಿ ಸ್ವಾಗತಾರ್ಹ: ಲಕ್ಷ್ಮೀದೇವಿ ಗೋಪಿನಾಥ್

April 17, 2026
ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

ಮೈಸೂರು ರೈಲ್ವೆ ನಿಲ್ದಾಣಕ್ಕೆ ವಿಕಲಾಂಗ ಕುರ್ಚಿ, ನೀರಿನ ಮಡಕೆಗಳ ಕೊಡುಗೆ

April 17, 2026
ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

ಮಳೆಗಾಲ ಆರಂಭಕ್ಕೂ ಮುನ್ನ ಸಮಸ್ಯೆ ಸರಿಪಡಿಸಿ: ಅಧಿಕಾರಿಗಳಿಗೆ ಶಾಸಕ ಚನ್ನಬಸಪ್ಪ ತಾಕೀತು

April 17, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL