ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
ರಾಜ್ಯ ಸರ್ಕಾರದ ಸರ್ಕಾರಿ ಗುತ್ತಿಗೆಯಲ್ಲಿ ಮುಸ್ಲಿಂ ಸಮುದಾಯದವರಿಗೆ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ #CM Siddaramaiah ಘೋಷಿಸಿದ್ದಾರೆ.
ತಮ್ಮ ಬಜೆಟ್ #Budget ಭಾಷಣದಲ್ಲಿ ಮಾತನಾಡಿದ ಅವರು, ಸರ್ಕಾರಿ ಗುತ್ತಿಗೆಗಳಲ್ಲಿ ಮುಸ್ಲಿಮರಿಗೆ ಮೀಸಲಾತಿ ನೀಡಲು ನಮ್ಮ ಸರ್ಕಾರ ಉದ್ದೇಶಿಸಿದೆ ಎಂದು ತಿಳಿಸಿದ್ದಾರೆ.
2 ಕೋಟಿ ರೂ.ವರೆಗಿನ ಕಾಮಗಾರಿಗಳ ಗುತ್ತಿಗೆಯಲ್ಲಿ ಮುಸ್ಲಿಮರಿಗೆ ಮೀಸಲಾತಿಯನ್ನು ನೀಡಲಾಗುತ್ತದೆ ಎಂದಿದ್ದಾರೆ.
ಅಲ್ಲದೇ, ಎಸ್’ಸಿ, ಎಸ್’ಟಿ, 2ಎ ಹಾಗೂ 2ಬಿ ಪ್ರವರ್ಗದ ಗುತ್ತಿಗೆದಾರರಿಗೂ ಸಹ ರಾಜ್ಯ ಸರ್ಕಾರಿ ಗುತ್ತಿಗೆಯಲ್ಲಿ ಮೀಸಲಾತಿಯನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.
ಇನ್ನು, ಕೈಗಾರಿಕೆ ಸ್ಥಾಪನೆಯಲ್ಲೂ ಸಹ ಕೆಐಎಡಿಬಿ ಜಾಗ ಹಂಚಿಕೆಯಲ್ಲೂ ಸಹ ಮುಸ್ಲೀಮರಿಗೆ ಶೇ.20ರಷ್ಟು ಜಾಗವನ್ನು ಮೀಸಲಾತಿ ಅಡಿಯಲ್ಲಿ ನೀಡಲಾಗುವುದು ಎಂದು ತಿಳಿಸಿದ್ದಾರೆ.
Also read: ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಆರಂಭ | ತಾಲೂಕು ಆಸ್ಪತ್ರೆ ಉನ್ನತೀಕರಣ | ಸಿಎಂ ಘೋಷಣೆ
ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜು ಆರಂಭ
ಪುತ್ತೂರು ತಾಲೂಕಿನಲ್ಲಿ ನೂತನ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಉದ್ದೇಶಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ತಮ್ಮ ಬಜೆಟ್ ಭಾಷಣದಲ್ಲಿ ಮಾತನಾಡಿದ ಅವರು, ಪುತ್ತೂರಿನಲ್ಲಿ ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ಉz್ದÉÃಶಿಸಲಾಗಿದೆ ಎಂದಿದ್ದಾರೆ.
ಅಲ್ಲದೇ, ಇದಕ್ಕಾಗಿ ಈಗಿರುವ 100 ಹಾಸಿಗೆ ಸಾಮರ್ಥ್ಯದ ತಾಲ್ಲೂಕು ಆಸ್ಪತ್ರೆಯನ್ನು ಉನ್ನತೀಕರಿಸಲು ಪ್ರಸಕ್ತ ವರ್ಷದಲ್ಲಿ ಕ್ರಮವಹಿಸಲಾಗುವುದು ಎಂದು ತಿಳಿಸಿದ್ದಾರೆ.
ಆರೋಗ್ಯ ಕೇಂದ್ರಗಳ ಉನ್ನತೀಕರಣ
ಹೊಸದಾಗಿ ಘೋಷಣೆಯಾಗಿರುವ ತಾಲ್ಲೂಕುಗಳಾದ ಹನೂರು, ಅಳ್ನಾವರ, ಅಣ್ಣಿಗೇರಿ, ಮಸ್ಕಿ, ಸಿರಿವಾರ, ಕಾಪು, ಬಬಲೇಶ್ವರ, ಕೊಲ್ಹಾರ, ಚೇಳೂರು, ತೇರದಾಳದ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಉನ್ನತೀಕರಿಸಲಾಗುವುದು. ಪೊನ್ನಂಪೇಟೆಯಲ್ಲಿ ಹೊಸದಾಗಿ ಸಮುದಾಯ ಆರೋಗ್ಯ ಕೇಂದ್ರವನ್ನು ಆರಂಭಿಸಲಾಗುವುದು ಎಂದು ತಿಳಿಸಿದ್ದಾರೆ.
ಇನ್ನು, ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲ್ಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗಳನ್ನು ಒಟ್ಟು 650 ಕೋಟಿ ರೂ. ವೆಚ್ಚದಲ್ಲಿ ನವೀಕರಣ ಮಾಡಲಾಗುವುದು ಎಂದಿದ್ದಾರೆ.
ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರಿನಲ್ಲಿ 200 ಹಾಸಿಗೆ ಹಾಗೂ ಕೊಡಗು ಜಿ¯್ಲÉಯ ವಿರಾಜಪೇಟೆಯಲ್ಲಿ 400 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು ಎಂದು ಘೋಷಣೆ ಮಾಡಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post