ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಧೀಮಂತ ರಾಜಕಾರಣಿ ಮಾಜಿ ಮುಖ್ಯಮಂತ್ರಿ ದಿ. ಎಸ್. ಬಂಗಾರಪ್ಪ #S Bangarappa ಅವರ ಕೊಡುಗೆ ಅಪಾರ ಹಾಗೂ ಅನನ್ಯ. ಆ ನಿಟ್ಟಿನಲ್ಲಿ ಬಂಗಾರಪ್ಪ ಅವರ ಪುತ್ಥಳಿಯನ್ನು ಮೆಗ್ಗಾನ್ ಆಸ್ಪತ್ರೆಯ #McGan Hospital ಆವರಣದಲ್ಲಿ ಸ್ಥಾಪಿಸಬೇಕು ಎಂದು ಕೆಪಿಸಿಸಿ ಸಂಯೋಜಕ ಹಾಗೂ ಅಖಿಲ ಕರ್ನಾಟಕ ಡಿ.ಕೆ.ಶಿವಕುಮಾರ್ ಅಭಿಮಾನಿಗಳ ಸಂಘದ ಜಿಲ್ಲಾಧ್ಯಕ್ಷರಾದ ಆರ್. ಮೋಹನ್ ರಾಜ್ಯ ಸರ್ಕಾರವನ್ನು ಆಗ್ರಹಿಸಿದರು.
ಸೋಮವಾರ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, ನಾಡು ಕಂಡ ಧೀಮಂತ ರಾಜಕಾರಣಿ, ಬಡವರ ಬಂಧು, ಅಲ್ಪಸಂಖ್ಯಾತರು, ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲಾ ವರ್ಗದವರ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಬಂಗಾರಪ್ಪ ನವರು ನಾಯಕರಲ್ಲ ನಾಯಕರನ್ನು ಸೃಷ್ಟಿ ಮಾಡುವ ವಿಶ್ವ ವಿದ್ಯಾಲಯ. ನಾವು ಇಂದು ಸಮೃದ್ಧಿಯಿಂದ ನೀರು ಕುಡಿಯಲು ಬಂಗಾರಪ್ಪ ಅವರ ಕೊಡುಗೆ ಕಾರಣ ಎಂದು ಸ್ಮರಿಸಿದರು.

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈ ಹಿಂದೆ ಇಂಧನ ಸಚಿವರಾಗಿದ್ದಾಗ, ಮೆಗ್ಗಾನ್ ಆಸ್ಪತ್ರೆಯ ಆವರಣದಲ್ಲಿ ನಡೆದ ವಿದ್ಯುತ್ ವಿತರಣಾ ಘಟಕ ಉದ್ಘಾಟನಾ ಸಮಾರಂಭದಲ್ಲಿ ಈ ಬಗ್ಗೆ ಪ್ರಸ್ತಾಪಿಸಿದರು. ಆದರೆ ಇದುವರೆಗೂ ಈ ಆಶಯ ಈಡೇರಿಲ್ಲ. ಬಂಗಾರಪ್ಪನವರ ಮಗ ಮಧು ಬಂಗಾರಪ್ಪನವರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಈ ಸಂದರ್ಭದಲ್ಲಿ ಬಂಗಾಪ್ಪನವರು ಪ್ರತಿಮೆ ಸ್ಥಾಪಿಸಿದಲ್ಲಿ ಇದಕ್ಕೆ ಮತ್ತಷ್ಟು ಮಹತ್ವ ಬಂದಂತಾಗುತ್ತದೆ.

Also read: ಯಾವುದೇ ದಿನಾಚರಣೆಗಳು ಅರ್ಥಪೂರ್ಣವಾಗಿರಬೇಕು: ವಾಗ್ದೇವಿ ಬಸವರಾಜ್ ಅಭಿಮತ
ರೈತರ ಪಂಪ್ಸೆಟ್ಗಳಿಗೆ ಉಚಿತ ವಿದ್ಯುತ್ ಪೂರೈಕೆ, ಗಾಜನೂರಿನಿಂದ ಶಿವಮೊಗ್ಗ ನಗರಕ್ಕೆ ಕುಡಿಯುವ ನೀರು ಪೂರೈಕೆ ಯೋಜನೆ ಅಸ್ತು ಸೇರಿದಂತೆ ಅನೇಕಾನೇಕ ಅಭಿವೃದ್ಧಿ ಹಾಗೂ ಜನಪರ ಕಾರ್ಯಗಳು ನಡೆದಿವೆ.

ಬಂಗಾರಪ್ಪನವರ ಕಂಚಿನ ಪ್ರತಿಮೆಯನ್ನು ನಿರ್ಮಿಸಬೇಕೆಂದುಕೊಂಡಿದ್ಡು, ಈ ಪ್ರತಿಮೆಗೆ ಜಾಗ ಗುರುತಿಸಿ ಅದನ್ನು ಸ್ಥಾಪಿಸಲು ರಾಜ್ಯ ಸರ್ಕಾರಕ್ಕೆ 6 ತಿಂಗಳ ಗಡುವನ್ನು ನೀಡುತ್ತೇವೆ. ಅದರೊಳಗೆ ಈ ಪ್ರತಿಮೆಯನ್ನು ಸ್ಥಾಪಿಸಬೇಕೆಂದು ಆಗ್ರಹಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಪ್ರಮುಖರಾದ ಸಿದ್ದಪ್ಪ, ಚಲುವಾದಿ, ಯಲವಟ್ಟಿ ವಿಜಯ್ ಕುಮಾರ್, ತಂಗರಾಜ್, ದೇವೇಂದ್ರಪ್ಪ, ಮಹೇಶ್ ಕುಮಾರ್, ರಮೇಶ್, ರಾಮಲು, ರಾಜಣ್ಣ, ಮಣಿಕಂಠ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post