Saturday, June 21, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪದವಿ ಜೊತೆ ಕೌಶಲ್ಯ ಅಭಿವೃದ್ಧಿ ಕೋರ್ಸ್ ಅನಿವಾರ್ಯ

ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ಅಧ್ಯಕ್ಷ ಬ್ರಿಗೇಡಿಯರ್ ಡಾ. ಸುರಜಿತ್ ಸಿಂಗ್ ಪಾಬ್ಲಾ ಅಭಿಪ್ರಾಯ

March 21, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಇಂದು ಔದ್ಯೋಗಿಕ ಕ್ಷೇತ್ರಕ್ಕೆ ಆಯ್ಕೆಯಾಗಲು ಪ್ರತಿಯೊಬ್ಬ ವಿದ್ಯಾರ್ಥಿಗೆ ಕೇವಲ ಪದವಿ ಪ್ರಶಸ್ತಿ ಪತ್ರಗಳು ಸಾಕಾಗುವುದಿಲ್ಲ, ವಿದ್ಯಾರ್ಥಿಯೊಬ್ಬನಲ್ಲ್ರಿರುವ ಔದ್ಯೋಗಿಕ ಕೌಶಲ್ಯಗಳಿಗೂ ಅಷ್ಟೇ ಪ್ರಾಶಸ್ತ್ಯವನ್ನು ನೀಡಲಾಗುತ್ತಿದೆ. ಇದಕ್ಕಾಗಿಯೇ ವಿದ್ಯಾರ್ಥಿಯು ತನ್ನ ಪದವಿ ಅಧ್ಯಯನದ ಸಂದರ್ಭದಲ್ಲಿಯೇ ಕೌಶಲ್ಯ ಅಭಿವೃದ್ಧಿಯ ಡಿಪ್ಲೋಮಾ ಅಥವಾ ಸರ್ಟಿಫಿಕೇಟ್ ಕೋರ್ಸ್ ಗಳನ್ನು ಮಾಡಿಕೊಳ್ಳುವ ಅನಿವಾರ್ಯತೆ ಇದೆ ಎಂದು ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ಅಧ್ಯಕ್ಷರಾದ ಬ್ರಿಗೇಡಿಯರ್ ಡಾ. ಸುರಜಿತ್ ಸಿಂಗ್ ಪಾಬ್ಲಾ ಹೇಳಿದರು.

ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನ ಬಹುಮುಖಿ ಸಭಾಂಗಣದಲ್ಲಿ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರದ ಸಹಯೋಗದೊಂದಿಗೆ ನಡೆಸಲಾಗುವ ಟ್ಯಾಲಿ ಹಾಗೂ ಐಟಿ ಕೋರ್ಸುಗಳನ್ನು ಉದ್ಘಾಟಿಸಿ ಅವರು ಮಾತನಾಡಿ, ಕಟೀಲು ಅಶೋಕ ಪೈ ಸ್ಮಾರಕ ಕಾಲೇಜು ಒಂದು ಬಹಳ ಮುಖ್ಯವಾದ ಹೆಜ್ಜೆಯನ್ನು ಇಟ್ಟಿದೆ ಎಂದು ಶ್ಲಾಘಿಸಿದರು.
ಔದ್ಯೋಗಿಕ ಕ್ಷೇತ್ರಗಳ ಅವಶ್ಯಕತೆ ಹಾಗೂ ಪದವಿ ಪಠ್ಯಕ್ರಮದ ನಡುವೆ ಇರುವ ಅಂತರವನ್ನು ಕಡಿಮೆ ಮಾಡಿ ಉದ್ಯೋಗಕ್ಕೆ ತಕ್ಕ ಜ್ಞಾನ ಹಾಗೂ ಕೌಶಲ್ಯಗಳನ್ನು ರೂಪಿಸಿಕೊಳ್ಳಲು ಇಂದು ವಿದ್ಯಾರ್ಥಿಗಳಿಗೆ ಬಹಳ ಅವಕಾಶಗಳಿವೆ. ಇದನ್ನೆಲ್ಲ ಮನಗಂಡು ಮಣಿಪಾಲ ಶಿಕ್ಷಣ ಸಂಸ್ಥೆಯ ಮೂಲಕ ಮಣಿಪಾಲ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಪ್ರಾರಂಭಿಸಿ ಒಂದು ವಿಶ್ವವಿದ್ಯಾಲಯ ಮಟ್ಟದ ವಿವಿಧ ಕೌಶಲ್ಯ ಅಭಿವೃದ್ಧಿ ಕೋರ್ಸ್ ಗಳನ್ನು ನಡೆಸಲಾಗುತ್ತಿದೆ. ಇಲ್ಲಿ ಕೊಡ ಮಾಡುವ ಇಪ್ಪತ್ತು ಕೋರ್ಸುಗಳು ಕೂಡ ರಾಷ್ಟ್ರೀಯ ಕೌಶಲ್ಯ ಅಭಿವೃದ್ಧಿ ಕೌನ್ಸಿಲ್ ನ ಮಾನ್ಯತೆಯನ್ನು ಪಡೆದಿವೆ ಎಂದು ತಿಳಿಸಿದರು.

ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರವು ತನ್ನ ಕೇಂದ್ರದ ವಿದ್ಯಾರ್ಥಿಗಳಿಗೆ ನೇರವಾಗಿ ಕೌಶಲ್ಯಗಳ ಪ್ರಾಯೋಗಿಕ ಕಲಿಕೆಗೆ ಅಗತ್ಯವಾದ ಪಠ್ಯಕ್ರಮವನ್ನು ಹಾಗೂ ಸುವ್ಯವಸ್ಥಿತ ಪ್ರಯೋಗಾಲಯಗಳನ್ನು ಹೊಂದಿದೆ. ಇಲ್ಲಿಯವರೆಗೂ ಮಣಿಪಾಲ್ ನಲ್ಲಿರುವ ಈ ಕೇಂದ್ರವು ಉಡುಪಿ ಜಿಲ್ಲೆಗಷ್ಟೇ ತನ್ನ ವ್ಯಾಪ್ತಿಯನ್ನು ಸೀಮಿತಗೊಳಿಸಿತ್ತು. ಆದರೆ ಮೊತ್ತ ಮೊದಲ ಬಾರಿಗೆ ಮಾನಸ ಸಂಸ್ಥೆಯ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ಮಣಿಪಾಲ್ ನ ಕೌಶಲ್ಯ ಅಭಿವೃದ್ಧಿ ಕೇಂದ್ರದೊಂದಿಗೆ ಒಡಂಬಡಿಕೆಯನ್ನು ಮಾಡಿಕೊಂಡು ವಿದ್ಯಾರ್ಥಿಗಳಿಗಾಗಿ ಬಿಕಾಂ ಜೊತೆಗೆ ಟ್ಯಾಲಿ ಕೋರ್ಸ್ ಗಳನ್ನು ಬಿಸಿಎ ಜೊತೆಗೆ ವಿವಿಧ ಐಟಿ ಕೋರ್ಸ್ ಗಳನ್ನು ಪ್ರಾರಂಭಿಸಲು ನಿರ್ಧಾರ ಮಾಡಿರುವುದು ಎರಡು ಸಂಸ್ಥೆಗಳ ಶೈಕ್ಷಣಿಕ ಹಾದಿಯಲ್ಲಿ ಬಹಳ ಮುಖ್ಯವಾದ ಮೈಲಿಗಲ್ಲು ಆಗಿದೆ ಎಂದರು.
ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಬಿಕಾಂ ಅಥವಾ ಬಿಸಿಎ ಮಾಡುವ ವಿದ್ಯಾರ್ಥಿಗಳಿಗೆ ಟ್ಯಾಲಿ ಕೋರ್ಸ್‌ಗಳು ಹಾಗೂ ಐಟಿ ಕೋರ್ಸ್‌ಗಳು ಲಭ್ಯವಾಗಲಿರುವುದು ಅವರ ಉದ್ಯೋಗಾವಕಾಶಗಳನ್ನು ವಿಪುಲವಾಗಿ ವಿಸ್ತರಿಸಬಲ್ಲದು. ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಸಂಸ್ಥೆಯು ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನೊಂದಿಗೆ ಸಹಯೋಗವನ್ನು ನೀಡುವ ಮೂಲಕ ಉತ್ತಮ ಗುಣಮಟ್ಟದ ಕೌಶಲ್ಯ ತರಬೇತಿಗೆ ಬದ್ದತೆಯೊಂದಿಗೆ ಮುಂದುವರಿಯವುದು ಎಂದು ಅವರು ತಿಳಿಸಿದರು.

ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ಕುಲ ಸಚಿವ ಡಾ. ಅಂಜನಯ್ಯ ದೇವಿನೇನಿಯವರು ಮಾತನಾಡಿ, ಕೌಶಲ್ಯ ಅಭಿವೃದ್ಧಿ ಎಂಬುದು ಯಾವುದೇ ವಿದ್ಯಾರ್ಥಿಯು ತನ್ನ ಪದವಿಯೊಂದಿಗೆ ಪಡೆದುಕೊಳ್ಳಬೇಕಾದ ಬಹಳ ಮುಖ್ಯವಾದ ಪರಿಣತಿ. ಈ ಮೂಲಕವಾಗಿ ತನ್ನ ವೃತ್ತಿಪರತೆಯನ್ನು ಔದ್ಯೋಗಿಕ ಬದ್ಧತೆಯನ್ನು ಉತ್ತಮಪಡಿಸಿಕೊಳ್ಳಲು ಸಾಧ್ಯವಿದೆ ಎಂದು ತಿಳಿಸಿದರು.

Also read: ಸೊರಬ | ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರವು, ಕಟೀಲ್ ಅಶೋಕ್ ವೈ ಸ್ಮಾರಕ ಕಾಲೇಜಿಗೆ ಸಹಯೋಗವನ್ನು ನೀಡುವ ಮೂಲಕ ತನ್ನ ಕೌಶಲ್ಯ ಅಭಿವೃದ್ಧಿ ಕೇಂದ್ರವನ್ನು ಪ್ರಾದೇಶಿಕವಾಗಿ ವಿಸ್ತರಿಸಿದಂತಾಗಿದೆ. ಇದು ಎರಡು ಸಂಸ್ಥೆಗಳು ಉತ್ತಮ ಗುಣಮಟ್ಟದ ಶಿಕ್ಷಣಕ್ಕೆ ನೀಡಬಹುದಾದ ಅತ್ಯಮೂಲ್ಯ ಕೊಡುಗೆ ಎಂದು ಅವರು ತಿಳಿಸಿದರು.

ಮಾನಸ ಸಂಸ್ಥೆಯ ನಿರ್ದೇಶಕರಾದ ಡಾ. ರಜನಿ ಪೈ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಈ ಕಾರ್ಯಕ್ರಮದಲ್ಲಿ ಪ್ರಾಸ್ತಾವಿಕ ನುಡಿಗಳನ್ನಾಡಿದ ಆಡಳಿತ ಅಧಿಕಾರಿಗಳಾದ ಪ್ರೊ. ರಾಮಚಂದ್ರ ಬಾಳಿಗಾರವರು ಮಾನಸ ಸಂಸ್ಥೆಯ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜು ವಿದ್ಯಾರ್ಥಿಗಳನ್ನು ಔದ್ಯೋಗಿಕವಾಗಿ ಹಾಗೂ ವೃತ್ತಿಪರತೆಯೊಂದಿಗೆ ಅಭಿವೃದ್ಧಿಪಡಿಸಲು ಈ ಒಡಂಬಡಿಕೆಯನ್ನು ಮಾಡಿಕೊಂಡಿದೆ. ವಿದ್ಯಾರ್ಥಿಗಳು ತಮ್ಮ ವಿಶೇಷ ಕೌಶಲ್ಯದ ಮೂಲಕ ತಮ್ಮ ಪದವಿ ಮುಗಿಸುವ ಸಂದರ್ಭದಲ್ಲಿ ಉದ್ಯೋಗಿಕ ಕ್ಷೇತ್ರಗಳು ಇವರತ್ತ ಆಕರ್ಷಿತರಾಗುವಂತೆ ಮಾಡಬೇಕಿದೆ ಅಂತಹ ಸಾಮರ್ಥ್ಯ ಹಾಗೂ ವ್ಯಕ್ತಿತ್ವ ರೂಪಿಸುವುದು ಸಂಸ್ಥೆಯ ದೂರ ದೃಷ್ಟಿ ಎಂದು ತಿಳಿಸಿದರು.
ಇನ್ನು ಮುಂದೆ ಕಟೀಲ್ ಅಶೋಕ್ ಪೈ ಸ್ಮಾರಕ ಕಾಲೇಜಿನಲ್ಲಿ ಬಿಕಾಂ ಅಧ್ಯಯನ ಮಾಡಲಿರುವ ಎಲ್ಲ ವಿದ್ಯಾರ್ಥಿಗಳು ಕೂಡ ಪ್ರತಿಷ್ಠಿತ ಟ್ಯಾಲಿ ಕೋರ್ಸ್ ಗಳನ್ನು ಕೂಡ ಪೂರೈಸಿಕೊಳ್ಳಲಿರುವರು ಹಾಗೂ ಬಿಸಿಎ ಅಧ್ಯಯನ ಮಾಡುವ ಎಲ್ಲ ವಿದ್ಯಾರ್ಥಿಗಳಿಗೂ ವಿವಿಧ ಐಟಿ ಕೋರ್ಸ್ ಗಳನ್ನು ಮಾಡುವ ಅವಕಾಶವಿರುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಡಾ. ಸಂಧ್ಯಾ ಕಾವೇರಿ ಅವರು ಮಾನಸ ಟ್ರಸ್ಟ್ ಹಾಗೂ ಮಣಿಪಾಲ ಶಿಕ್ಷಣ ಸಂಸ್ಥೆಗಳು ಕೊಟ್ಟಿರುವ ಅವಕಾಶವನ್ನು ನಿರ್ವಹಿಸುವ ಜವಾಬ್ದಾರಿ ಹಾಗೂ ಬದ್ಧತೆಯನ್ನು ಕಟೀಲ್ ಅಶೋಕ್ ಪೈಸ್ಮಾರಕ ಕಾಲೇಜು ಅತ್ಯಂತ ಸಂತೋಷದಿಂದ ನಿರ್ವಹಿಸುತ್ತದೆ. ಬಿಕಾಂ ಹಾಗೂ ಬಿಸಿಎ ಪದವಿಗಳು ವಿವಿಧ ಔದ್ಯೋಗಿಕ ಅವಕಾಶಗಳನ್ನು ಒದಗಿಸುತ್ತಿರುವ ಇಂದಿನ ಕಾಲದಲ್ಲಿ ಇದರೊಂದಿಗೆ ದೊರೆಯುವ ಕೌಶಲ್ಯ ಅಭಿವೃದ್ಧಿ ಕೋರ್ಸುಗಳು ಈ ಕಾಲೇಜಿನಲ್ಲಿ ಕಲಿಯುವ ವಿದ್ಯಾರ್ಥಿಗಳಿಗೆ ಅತ್ಯುತ್ತಮ ವೃತ್ತಿಪರ ಸಾಮರ್ಥ್ಯವನ್ನು ಒದಗಿಸುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದಲ್ಲಿ ಬಿಸಿಎ ವಿಭಾಗದ ಮುಖ್ಯಸ್ಥರಾದ ಮಂಗೇಶ್ ಪೈ, ಬಿಕಾಂ ವಿಭಾಗದ ಮುಖ್ಯಸ್ಥರಾದ ಕಾವ್ಯ ರಾಯ್ಕರ್, ಪ್ಲೇಸ್ಮೆಂಟ್ ಆಫೀಸರ್ ಅನುಮೋಲ್ ಉಪಸ್ಥಿತರಿದ್ದರು.
ಉದ್ಘಾಟನಾ ಸಮಾರಂಭದ ನಂತರ ಮಣಿಪಾಲ್ ಕೌಶಲ್ಯ ಅಭಿವೃದ್ಧಿ ಕೇಂದ್ರದ ಡಾ. ರಾಜಲಕ್ಷ್ಮೀ ಆನಂದ್, ವಿದ್ಯಾರ್ಥಿಗಳಿಗೆ ಟ್ಯಾಲಿ ಕೋರ್ಸ್ ನ ಮೂಲಭೂತ ಅಂಶಗಳ ಸ್ಥೂಲ ಪರಿಚಯವನ್ನು ಮಾಡಿಕೊಟ್ಟರು. ಹಾಗೂ ವಿದ್ಯಾರ್ಥಿಗಳಿಗೆ ಇಂದು ಅತಿ ಅಗತ್ಯವಾಗಿ ಬೇಕಾಗಿರುವ ಪವರ್ ಬಿ ಐ, ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಹಾಗೂ ಇನ್ನಿತರ ಐಟಿ ಕೋರ್ಸ್ಗಳ ಪ್ರಾಮುಖ್ಯತೆ ಹಾಗೂ ಪ್ರಮುಖ ಅಂಶಗಳನ್ನು ಪರಿಚಯಿಸಿದರು.

ವಿದ್ಯಾರ್ಥಿನಿ ಕಾವ್ಯ ಕಾರ್ಯಕ್ರಮವನ್ನು ನಿರೂಪಿಸಿದರು. ಕು. ಲಾವಣ್ಯ ಅತಿಥಿಗಳ ಪರಿಚಯವನ್ನು ಮಾಡಿಕೊಟ್ಟರು. ತನ್ಮಯಿ ಹಾಗೂ ಸಂಗಡಿಗರು ಪ್ರಾರ್ಥನೆಯನ್ನು ಹಾಡಿದರು .ಉದ್ಘಾಟನಾ ಕಾರ್ಯಕ್ರಮದ ವಂದನಾರ್ಪಣೆಯನ್ನು ಉಪನ್ಯಾಸಕ ಅನುಮೋಲ್ ರವರು ನಡೆಸಿಕೊಟ್ಟರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

 

Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಸೊರಬ | ಸುನಿತಾ ವಿಲಿಯಮ್ಸ್ ಭೂಮಿಗೆ ಮರಳಿದ ಹಿನ್ನೆಲೆ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Next Post

ಅಬ್ಬಾ ಗ್ರೇಟ್ ಪಾಲಿಕೆ! ಲೋಕಾಯುಕ್ತರ ಚಾಟಿ | ಆ ಜಾಗ ಕ್ಷಣದಲ್ಲೇ ಫುಲ್ ಕ್ಲೀನ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಅಬ್ಬಾ ಗ್ರೇಟ್ ಪಾಲಿಕೆ! ಲೋಕಾಯುಕ್ತರ ಚಾಟಿ | ಆ ಜಾಗ ಕ್ಷಣದಲ್ಲೇ ಫುಲ್ ಕ್ಲೀನ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025

ಶಿವಮೊಗ್ಗ | ಉಚಿತ ಸೀಳು ತುಟಿ ಶಸ್ತ್ರಚಿಕಿತ್ಸಾ ಶಿಬಿರ

June 21, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಪ್ರತಿಭೆ ಅಂದರೆ Exam result ಅಲ್ಲ: ಶ್ರಮ, ಸಾಧನೆಯ ಮಿಶ್ರಣ: ಕೆ.ವಿ. ಪ್ರಭಾಕರ್

June 21, 2025

ಮತಬ್ಯಾಂಕ್ ಗಟ್ಟಿಗೊಳಿಸಲು ವಸತಿ ಜಿಹಾದ್ | ರಾಜ್ಯಸರ್ಕಾರದ ವಿರುದ್ಧ ಕಾಂತೇಶ್ ಆಕ್ರೋಶ

June 21, 2025

ಮನಸ್ಸು- ದೇಹವನ್ನು ಸಮನ್ವಯವಾಗಿಡುವ ದಾರಿ ಯೋಗ: ಕೃಷ್ಣಮೂರ್ತಿ

June 21, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!