ಕಲ್ಪ ಮೀಡಿಯಾ ಹೌಸ್ | ನವದೆಹಲಿ |
ಮಂಡ್ಯ ಕೃಷಿ ವಿಶ್ವವಿದ್ಯಾಲಯದ #Mandya Agricultural Univeristy ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಛತ್ರಿಬುದ್ಧಿ ನನಗಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ #H D Kumaraswamy ಅವರು ತಿರುಗೇಟು ನೀಡಿದ್ದಾರೆ.
ಈ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು; ಮಂಡ್ಯ ಕೃಷಿ ವಿಶ್ವವಿದ್ಯಾಲಯ ಕುರಿತು ನನ್ನ ಬಗ್ಗೆ ಹುಟ್ಟಿಕೊಂಡಿರುವ ಸಂದೇಹಾತ್ಮಕ, ರಾಜಕೀಯ ದುರುದ್ದೇಶದ ಅಪಪ್ರಚಾರದ ನಡವಳಿಕೆ ದುಃಖಕರ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

Also read: ಹುಟ್ಟಿನಿಂದಲೇ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ 9 ವರ್ಷದ ಬಾಲಕನಿಗೆ ಯಶಸ್ವಿ “ಹೃದಯ ಕಸಿ”
ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಶ್ರಮಿಸಿದವನು ನಾನು. ಮಂಡ್ಯ ಜಿಲ್ಲೆ ಹಿತಕ್ಕೆ ಸಂಬಂಧಿಸಿ ಅಲ್ಲಿನ ಜನಪ್ರತಿನಿಧಿಯಾಗಿ ನನ್ನದೂ ಹೊಣೆಗಾರಿಕೆ ಇದೆ. ಈ ಬಗ್ಗೆ ನನ್ನಲ್ಲಿ ಗೊಂದಲ ಇಲ್ಲ, ಇದು ಸ್ಪಷ್ಟ. ಮುಖ್ಯಮಂತ್ರಿಯಾಗಿ ಮಂಡ್ಯ ಜಿಲ್ಲೆಗೆ ನೀಡಿರುವ ಬಜೆಟ್ ಕೊಡುಗೆ ಬಗ್ಗೆ ನಾನು ಹೊಸದಾಗಿ ಹೇಳಬೇಕಿಲ್ಲ. ನನಗೆ ರಾಜಕೀಯವಾಗಿ ಶಕ್ತಿ ತುಂಬಿದ, ರಕ್ತಸಂಬಂಧಕ್ಕೂ ಮೀರಿ ಅವಿನಾಭಾವ ಬಾಂಧವ್ಯದ ದ್ಯೋತಕವಾಗಿರುವ ಮಂಡ್ಯ ಜನರ- ನನ್ನ ನಡುವೆ ಹುಳಿ ಹಿಂಡುವ ವ್ಯರ್ಥ ಪ್ರಯತ್ನ ಬೇಡ ಎಂದು ಅವರು ಕಿವಿಮಾತು ಹೇಳಿದ್ದಾರೆ.

ಜಾಲತಾಣಗಳಲ್ಲಿ ಅಪಪ್ರಚಾರ ಮಾಡುತ್ತಿರುವ ತಿಳಿಗೇಡಿಗಳು, ಅದಕ್ಕೆ ತುಪ್ಪ ಸುರಿಯುವ ಸೋಗಲಾಡಿಗಳು ಸತ್ಯ ಅರಿತುಕೊಳ್ಳಲಿ ಎಂದು ಆಶಿಸುತ್ತೇನೆ ಎಂದು ಅವರು ಕೋರಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post