Wednesday, June 25, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಬ್ರಹ್ಮ ಬಂದರೂ ಶಿವಮೊಗ್ಗದ ಈ ಮೈದಾನವನ್ನು ಮುಸ್ಲಿಮರಿಗೆ ಬಿಟ್ಟುಕೊಡಲ್ಲ | ಈಶ್ವರಪ್ಪ ಖಡಕ್ ನುಡಿ

ಅದು ಈದ್ಗಾ ಮೈದಾನವಲ್ಲ, ಆಟದ ಗ್ರೌಂಡ್ | ಈಶ್ವರಪ್ಪ ಹೇಳಿದ ದಾಖಲೆಗಳೇನು?

April 3, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ತಿಲಕ್‍ನಗರದ ಡಿಸಿ ಕಚೇರಿ ಎದುರಿರುವ ಜಾಗ ಆಟದ ಮೈದಾನವೇ ಹೊರತು ಈದ್ಗಾ ಮೈದಾನವಲ್ಲ. #Edga Ground ಅದು ಆಟದ ಮೈದಾನ ಎನ್ನುವುದಕ್ಕೆ ಹಲವು ದಾಖಲೆಗಳು ನಮ್ಮಲ್ಲಿವೆ, “ಆ ಬ್ರಹ್ಮ ಬಂದರೂ ಈ ಜಾಗವನ್ನು ಮುಸ್ಲಿಂರಿಗೆ ಬಿಟ್ಟುಕೊಡುವುದಿಲ್ಲ ” ಎಂದು ರಾಷ್ಟ್ರಭಕ್ತ ಬಳಗದ ಸಂಚಾಲಕ ಕೆ.ಎಸ್. ಈಶ್ವರಪ್ಪ #K S Eshwarappa ಗುಡುಗಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಈ ಮುಸ್ಲಿಂರು ಆಟದ ಮೈದಾನವನ್ನೇ ಕಬಳಿಸಲು ಹೊರಟಿದ್ದಾರೆ. ಅದನ್ನು ಈದ್ಗಾ ಮೈದಾನವೆಂದು ಕರೆಯುತ್ತಿದ್ದಾರೆ. ಆದರೆ ಅದು ಆಟದ ಮೈದಾನವಾಗಿದೆ. ನಗರಾಭಿವೃದ್ಧಿ ಪ್ರಾಧಿಕಾರದ ನಕ್ಷೆಯಲ್ಲಿ ಇದು ಸ್ಪಷ್ಟವಾಗಿದೆ. ಬೇಕಾದರೆ ಇದನ್ನು ಪರಿಶೀಲಿಸಬಹುದು ಎಂದು ಪತ್ರಿಕಾಗೋಷ್ಠಿಯಲ್ಲಿ ನಗರಾಭಿವೃದ್ಧಿ ಪ್ರಾಧಿಕಾರದ ನಕ್ಷೆಯನ್ನು ಹಾಜರುಪಡಿಸಿದರು.

http://kalpa.news/wp-content/uploads/2025/03/PES-Video.mp4

ಮುಸ್ಲಿಂ ಮುಖಂಡರು ಇದು ಮಹಾನಗರ ಪಾಲಿಕೆಯಿಂದ ನಮಗೆ ಖಾತೆಯಾಗಿದೆ ಎಂದು ಹೇಳುತ್ತಾರೆ. ಆದರೆ ಈ ಖಾತೆಯೇ ಕಾನೂನು ಬಾಹಿರವಾಗಿದೆ. ಯಾವುದೇ ಕಾರಣಕ್ಕೂ ಈ ಆಟದ ಮೈದಾನವನ್ನು ವಕ್ಫ್ ಆಸ್ತಿಯೆಂದು ಖಾತೆ ಮಾಡಲು ಬರುವುದಿಲ್ಲ. ಈ ಖಾತೆ ಮಾಡಿಕೊಟ್ಟ ಅಧಿಕಾರಿಯ ವಿರುದ್ಧ ಕಠಿಣ ಶಿಕ್ಷೆ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಅಲ್ಲದೇ ಮತ್ತೊಂದು ದಾಖಲೆಯನ್ನು ಬಿಡುಗಡೆ ಮಾಡಿದ ಅವರು, ಶಿವಮೊಗ್ಗ ಮಹಾನಗರ ಪಾಲಿಕೆಯ 2018ರಲ್ಲಿ ಆಯುಕ್ತರಾಗಿದ್ದವರು ಜಿಲ್ಲಾಧಿಕಾರಿಗಳಿಗೆಯೇ ಅಂದು ಪತ್ರ ಬರೆದಿರುತ್ತಾರೆ. ಜಿಲ್ಲಾ ವಕ್ಫ್ ಕಚೇರಿಯಿಂದ ಪಾಲಿಕೆಗೆ ಪತ್ರ ಬಂದಿದ್ದು, ಆ ಪತ್ರದ ಪ್ರಕಾರ ವಕ್ಫ್ ಸ್ವತ್ತು ಎಂದು ದಾಖಲಿಸಲು ಹೇಳಿರುತ್ತಾರೆ. ಆದರೆ ತನಿಖೆಗೆ ನಡೆಸಿದಾಗ ಅದು ವಕ್ಫ್ ಆಸ್ತಿಯಲ್ಲ ಎಂದು ಗೊತ್ತಾಗುತ್ತದೆ ಎಂದು ಆಯುಕ್ತರು ಅಂದೇ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದರು ಎಂದರು.
ಸರ್ವೆ ನಕ್ಷೆ 2015ನ್ನು ಪರಿಶೀಲಿಸಲಾಗಿ, ತಿಲಕ್‍ನಗರ ಮಹಾವೀರ ವೃತ್ತದಲ್ಲಿರುವ ಸೈಯ್ಯದ್‍ಶಾ, ಆಲೀಂ ದಿವಾನ್, ದರ್ಗಾದ ಸ್ಕೆಚ್ ಎಂದು ಇದ್ದು, ಇದರಲ್ಲಿ ಈದ್ಗಾ ಮೈದಾನ 0.36ಗುಂಟೆ ಎಂದು ಇರುತ್ತದೆ. ಆದರೆ ಈ ನಕ್ಷೆಯಲ್ಲಿ ಭೂ ಮಾಪಕರ ಸಹಿ ಇದ್ದು, ಸದರಿ ಇಲಾಖೆಯ ಮುಖ್ಯಸ್ಥರ ಸಹಿಯೇ ಇಲ್ಲ. ಅಲ್ಲದೇ ಸದರಿ ಜಾಗದ ರಸ್ತೆ ಮಾರ್ಜಿನ್‍ಗೆ ಹಾಗೂ ಇತರೆ ಕಾಮಗಾರಿಗಳಿಗಾಗಿ ಸರಿಯಾದ ಮಾಹಿತಿಯೇ ಇರುವುದಿಲ್ಲ ಎಂದರು.

Also read: ಏಪ್ರಿಲ್ 16 | ಸುದೀಪ್ ಕೊಡಲಿದ್ದಾರೆ ಬಿಗ್ ನ್ಯೂಸ್ | ವೈರಲ್ ಆಯ್ತು ಕಿಚ್ಚನ ಪೋಸ್ಟ್

ಗೆಜೆಟ್ ನೋಟಿಫೀಕೇಷನ್‍ನಲ್ಲಿ 7,8,12 ಮತ್ತು 16ರಲ್ಲಿ ಈದ್ಗಾ ಸುನ್ನಿ ಶಿವಮೊಗ್ಗ ನಗರ ಎಂದು ಇದ್ದು, 1.20 ಗುಂಟೆ ಅಳತೆ ಇರುತ್ತದೆ. ಆದರೆ ಸ್ಥಳದ ವಿಳಾಸದ ವಿವರ ಗೆಜೆಟ್ ನೋಟಿಫೀಕೆಷನ್‍ನಲ್ಲಿ ಇರುವುದಿಲ್ಲ. ಕೇವಲ ರಾಜಸ್ವ ನಿರೀಕ್ಷಕರ ಸ್ಥಳ ತನಿಖೆ ವರದಿ ಮೇರೆಗೆ ಹಾಗೂ ಗೆಜೆಟ್ ನೋಟಿಫೀಕೇಷನ್ ಆಧಾರದ ಮೇರೆಗೆ ಮನವಿದಾರರ ಕೋರಿಕೆಯಂತೆ ಈ ಜಾಗವನ್ನು ಅಳತೆ ದಾಖಲಿಸಲು ಸೂಕ್ತವಾಗಿರುವುದಿಲ್ಲ ಎಂದು ಆಯುಕ್ತರೇ ಹೇಳಿದ್ದಲ್ಲದೇ ವಕ್ಫ್ ಅರ್ಜಿದಾರರ ಮನವಿಯನ್ನು ಪುರಸ್ಕರಿಸಲು ಬರುವುದಿಲ್ಲ ಎಂದು ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದಿದ್ದಾರೆ ಎಂದರು.

ಅಪ್ಪ, ಅಮ್ಮನೇ ಇಲ್ಲದ ಗೆಜೆಟ್ ನೋಟಿಫಿಕೇಷನ್ ಮಹಾನಗರ ಪಾಲಿಕೆ ಆಯುಕ್ತರು ಬರೆದಿರುವ ಪತ್ರ , ಸೂಡಾದ ನಕ್ಷೆ ಮುಂತಾದವುಗಳನ್ನು ನೋಡಿದರೆ ಇದು ಆಟದ ಮೈದಾನವೇ ಹೊರತು ವಕ್ಫ್ ಆಸ್ತಿ ಅಲ್ಲ ಎಂದು ಸ್ಪಷ್ಟವಾಗುತ್ತದೆ. ಜಿಲ್ಲಾಧಿಕಾರಿ, ಜಿಲ್ಲಾರಕ್ಷಣಾಧಿಕಾರಿ, ಮಹಾನಗರಪಾಲಿಕೆ ಆಯುಕ್ತರು, ಈ ಸೂಕ್ಷ್ಮ ವಿಚಾರದ ಬಗ್ಗೆ ಸತ್ಯ ದಾಖಲೆಗಳನ್ನು ಪರಿಶೀಲಿಸಬೇಕು. ಮೂಲದಾಖಲೆಗಳನ್ನು ಪರಿಶೀಲಿಸಬೇಕು. ಯಾವುದೇ ಒತ್ತಡಕ್ಕೆ ಮಣಿಯಬಾರದು ಎಂದರು.

ಈ ವಿಷಯ ಈಗಿದ್ದು, ಕೂಡ ಕೆಲವು ಮುಸ್ಲಿಂ ಕಿಡಿಗೇಡಿಗಳು ಈ ಜಾಗ ತಮ್ಮದೇ ಎಂದು ಬೇಲಿ ಹಾಕಿರುವುದು ಸರಿಯಲ್ಲ. ಅದರಲ್ಲೂ ರೈಲ್ವೆ ಹಳಿಗಳನ್ನು ಬಳಸಿದ್ದಾರೆ. ಈ ಹಳಿಗಳನ್ನು ಬಳಸುವಂತಿಲ್ಲ. ಯಾರು ರೈಲ್ವೆ ಹಳಿ ಬಳಸಿದ್ದಾರೋ ಅಂತವರನ್ನು ಹುಡುಕಿ ಕೇಸ್ ಹಾಕಬೇಕು. ಇದುವರೆಗೂ ಹೇಗೇಗೋ ಏನೇನೋ ಮಾಡಿ ಈ ಜಾಗವನ್ನು ತಮ್ಮದೇ ಎಂದು ಹೇಳಿಕೊಳ್ಳುತ್ತಿದ್ದಾರೆ. ಇನ್ನು ಮುಂದೆ ಇದೆಲ್ಲ ಸಾಧ್ಯವಿಲ್ಲ ಎಂದರು.
ಈ ಎಲ್ಲಾ ಘಟನೆಗಳನ್ನು ಇಟ್ಟುಕೊಂಡು ರಾಷ್ಟ್ರಭಕ್ತ ಬಳಗವು ಏ.05ರಂದು ಡಿ.ಸಿ. ಕಚೇರಿ ಮುಂದೆ ಬೃಹತ್ ಪ್ರತಿಭಟನಾ ಧರಣಿ ಹಮ್ಮಿಕೊಂಡಿದೆ. ಎಲ್ಲಾ ಜಾಗೃತ ಹಿಂದೂಗಳು ಈ ಪ್ರತಿಭಟನೆಗೆ ಆಗಮಿಸಬೇಕು ಎಂದು ಮನವಿ ಮಾಡಿದರು.

ಪತ್ರಿಕಾಗೋಷ್ಠಿಯಲ್ಲಿ ರಾಷ್ಟ್ರಭಕ್ತ ಬಳಗದ ಪ್ರಮುಖರಾದ ಈ.ವಿಶ್ವಾಸ್, ವಕೀಲ ವಾಗೀಶ್, ಶ್ರೀಕಾಂತ್, ಮಹಾಲಿಂಗಶಾಸ್ತ್ರಿ, ಮೋಹನ್ ಜಾಧವ್, ರಾಜು, ಕಾಚಿನಕಟ್ಟೆ ಸತ್ಯನಾರಾಯಣ, ರವಿ, ಬಾಲು ಮುಂತಾದವರು ಇದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Edga GroundK S EshwarappaKannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಈದ್ಗಾ ಮೈದಾನಕೆ.ಎಸ್. ಈಶ್ವರಪ್ಪಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಏಪ್ರಿಲ್ 16 | ಸುದೀಪ್ ಕೊಡಲಿದ್ದಾರೆ ಬಿಗ್ ನ್ಯೂಸ್ | ವೈರಲ್ ಆಯ್ತು ಕಿಚ್ಚನ ಪೋಸ್ಟ್

Next Post

ಬೇಸಿಗೆ ರಜೆ | ಬೆಂಗಳೂರು-ಮಂತ್ರಾಲಯ-ಕಲಬುರಗಿ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಬೇಸಿಗೆ ರಜೆ | ಬೆಂಗಳೂರು-ಮಂತ್ರಾಲಯ-ಕಲಬುರಗಿ ರೈಲು ಪ್ರಯಾಣಿಕರಿಗೆ ಬಿಗ್ ಗುಡ್ ನ್ಯೂಸ್

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025

ಜೂನ್ 30ಕ್ಕೆ ಅನ್ವಯಿಸುವಂತೆ ಮೈಸೂರು-ಶಿವಮೊಗ್ಗ-ತಾಳಗುಪ್ಪ ಎಕ್ಸ್’ಪ್ರೆಸ್ ರೈಲಿನ ಬಿಗ್ ಅಪ್ಡೇಟ್

June 25, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಮಾದಕ ವ್ಯಸನ ವಿರೋಧಿ ದಿನ: ಎಚ್‌ಪಿಆರ್ ನರ್ಸಿಂಗ್ ಕಾಲೇಜಿನಲ್ಲಿ ಜಾಗೃತಿ ಕಾರ್ಯಕ್ರಮ

June 25, 2025

ಕಾಂಗ್ರೆಸ್ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆ: ಶಾಸಕ ಚನ್ನಬಸಪ್ಪ

June 25, 2025

ಮುಸ್ಲಿಮರಿಗೆ ವಸತಿ ಯೋಜನೆಯಲ್ಲಿ ಶೇ.15ರಷ್ಟು ಮೀಸಲಾತಿ ಕೂಡಲೇ ಹಿಂಪಡೆಯಿರಿ

June 25, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!