ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ನಗರದ ಸ್ವಾಮಿ ವಿವೇಕಾನಂದ ವಿದ್ಯಾ ಸಂಸ್ಥೆಯ ಕುಮದ್ವತಿ ಪ್ರೌಢಶಾಲೆ ಗೆ 2024-2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ನೂರಕ್ಕೆ ನೂರು ಫಲತಾಂಶ ಲಭಿಸಿದೆ.
ಪರೀಕ್ಷೆ ತಗೆದುಕೊಂಡ ವಿದ್ಯಾರ್ಥಿಗಳಲ್ಲಿ ಉನ್ನತ ಶ್ರೇಣಿಯಲ್ಲಿ 12 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ 18 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ಪ್ರಜ್ಞಾ ಎಸ್ 625 ಕ್ಕೆ 613, ಶ್ರೇಯಸ್.ಎಸ್.ಆರ್ 625ಕ್ಕೆ 604 ಮತ್ತು ಸೃಜನ್ ಎನ್ 625 ಕ್ಕೆ 602 ಅಂಕಗಳನ್ನು ಪಡೆಯುವುದರ ಮೂಲಕ ಕ್ರಮವಾಗಿ ಶಾಲೆಗೆ ಪ್ರಥಮ,ದ್ವಿತೀಯ ಮತ್ತು ತೃತೀಯ ಸ್ಥಾನ ಗಳನ್ನು ಪಡೆದುಕೊಂಡಿರುತ್ತಾರೆ.
ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ, ಆಡಳಿತ ಮಂಡಳಿಯವರು, ಶಾಲಾ ಪ್ರಾಚಾರ್ಯರಾದ ವಿಶ್ವನಾಥ. ಪಿ ಶಿಕ್ಷಕರಾದ ಪ್ರಶಾಂತ ಕುಬಸದ, ರೇಷ್ಮಾ ಭಾನು, ಮಂಜುಳಾ ಪಾಟೀಲ್, ಲಲಿತ, ರೇಖಾ, ಹಾಲಸ್ವಾಮಿ, ಚಂದ್ರಶೇಖರ, ಚಂದ್ರಮತಿ, ಚಂದನ್ ಎಲ್ಲಾ ಸಿಬ್ಬಂದಿ ವರ್ಗದವರು ಮತ್ತು ಪೋಷಕರು ಅಭಿನಂದನೆ ಸಲ್ಲಿಸಿರುತ್ತಾರೆ. ಈ ಫಲಿತಾಂಶ ಬರಲು ಸಂಸ್ಥೆಯ ಆಡಳಿತ ಮಂಡಳಿಯವರ ಪ್ರೋತ್ಸಾಹ, ಶಿಕ್ಷಕರ ಪರಿಶ್ರಮ ಮತ್ತು ಪೋಷಕರ ಸಹಕಾರ ಮುಖ್ಯವಾಗಿದೆ ಎಂದು ಶಾಲಾ ಪ್ರಾಚಾರ್ಯರರು ತಿಳಿಸಿರುತ್ತಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post