ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಭದ್ರಾವತಿಯಿಂದ ಚನ್ನಗಿರಿ ಮಾರ್ಗವಾಗಿ ಚಿಕ್ಕಜಾಜೂರಿಗೆ ಸಂಪರ್ಕ ಕಲ್ಪಿಸುವ ನೂತನ ರೈಲು ಮಾರ್ಗದ ಅಂತಿಮ ಸ್ಥಳ ಸಮೀಕ್ಷಾ ವರದಿ ಸಲ್ಲಿಕೆಗೆ ಕೇಂದ್ರದ ರೈಲ್ವೆ ಮಂಡಳಿ #Central Railway Board ಒಪ್ಪಿಗೆ ಸೂಚಿಸಿದ್ದು, ಅದಕ್ಕಾಗಿ 1.825 ಕೋಟಿ ರೂ. ಹಣ ಬಿಡುಗಡೆ ಮಾಡಿದೆ ಎಂದು ಸಂಸದ ರಾಘವೇಂದ್ರ #MP Raghavendra ತಿಳಿಸಿದ್ದಾರೆ.
ಶಿವಮೊಗ್ಗ-ಭದ್ರಾವತಿ, ಚನ್ನಗಿರಿ, ಚಿಕ್ಕಜಾಜೂರು, ಚಿತ್ರದುರ್ಗ, ಬಳ್ಳಾರಿ ಗುಂತಕಲ್ ಮಾರ್ಗವಾಗಿ ಮಲೆನಾಡು, ಬಯಲು ಸೀಮೆ ಹಾಗೂ ಗುಂತಕಲ್. ಆಂಧ್ರಪ್ರದೇಶ, ತೆಲಂಗಾಣದ ನಡುವೆ ನೇರ ಸಂಪರ್ಕವನ್ನು ಈ ರೈಲು ಮಾರ್ಗ ಬೆಸೆಯಲಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯ ಜನತೆ ಮಂತ್ರಾಲಯಂ. ಶಿರಡಿ, ಮುಂಬೈ, ದೆಹಲಿಗೆ ಪ್ರಯಾಣ ಬೆಳೆಸಬೇಕಾದರೆ ಬೀರೂರಿಗೆ ಹೋಗಿ ಅಲ್ಲಿ ರೈಲನ್ನು ಬದಲಾವಣೆ ಮಾಡಿ ಹೋಗಬೇಕಿತ್ತು. ಈ ನೂತನ ಮಾರ್ಗದಿಂದ ನೇರವಾಗಿ ಸಂಪರ್ಕ ಸಿಗಲಿದೆ. ಹಾಗೂ ರೈಲಿನ ಪ್ರಯಾಣದಲ್ಲಿ ಕಡಿಮೆ ದರದಲ್ಲಿ ಕ್ರಮಿಸುವ ದೂರವು ಹತ್ತಿರವಾಗಲಿದೆ. ಇದರಿಂದ ಮಧ್ಯಮ ವರ್ಗದ ರೈತರುಗಳಿಗೆ. ವಿದ್ಯಾರ್ಥಿಗಳಿಗೆ ತುಂಬಾ ಅನುಕೂಲವಾಗಲಿದೆ. ಈ ಹೊಸ ಮಾರ್ಗ ಮಾಡುವುದರಿಂದ ಶಿವಮೊಗ್ಗದಿಂದ ನೇರವಾಗಿ ಗುಂತಕಲ್ ಹೋಗಿ ಅಲ್ಲಿಂದ ಮಂತ್ರಾಲಯಂ, ಶಿರಡಿ, ಮುಂಬೈ, ದೆಹಲಿಗೆ ಪ್ರಯಾಣ ಮಾಡುವವರಿಗೆ ಸಾಕಷ್ಟು ರೈಲುಗಳ ಸಂಪರ್ಕ ಸೌಲಭ್ಯವಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯ ಜನತೆಗೆ ಅನುಕೂಲವಾಗಲಿದೆ.
ಭದ್ರಾವತಿ-ಚಿಕ್ಕಜಾಜೂರು ನಡುವಿನ 73 ಕಿ.ಮೀ ದೂರದ ಈ ಮಾರ್ಗ ಪೂರ್ಣಗೊಂಡಲ್ಲಿ ಬಳ್ಳಾರಿ ಜಿಲ್ಲೆಯ ಸಂಡೂರು ಮತ್ತು ಚಿತ್ರದುರ್ಗ ಜಿಲ್ಲೆಗಳಿಂದ ಭದ್ರಾವತಿಯ ವಿ.ಐ.ಎಸ್.ಎಲ್ ಕಾರ್ಖಾನೆಗೆ ಕಬ್ಬಿಣದ ಅದಿರು ಪೂರೈಸಲು ನೆರವಾಗುವ ಜೊತೆಗೆ ವಿ.ಐ.ಎಸ್.ಎಲ್ ಕಾರ್ಖಾನೆಯ ಪುನಶ್ಚತನಕ್ಕೂ ಈ ರೈಲು ಮಾರ್ಗ ನೆರವಾಗಲಿದೆ ಎಂದು ಹೇಳಲಾಗುತ್ತಿದೆ. ಈ ರೈಲು ಮಾರ್ಗ ನಿರ್ಮಾಣಕ್ಕೆ ಕೇಂದ್ರ ರೈಲ್ವೆ ಮಂಡಳಿ ಒಪ್ಪಿಗೆ ಸೂಚಿಸಿದೆ. ಸಮೀಕ್ಷೆ ಕಾರ್ಯ ಮುಗಿಯುತ್ತಿದ್ದಂತೆಯೇ ರೈಲು ಮಾರ್ಗ ನಿರ್ಮಾಣಕ್ಕೆ ಹಣ ಮೀಸಲಿರಿಸಿ ಕಾಮಗಾರಿ ಪ್ರಕ್ರಿಯೆ ಆರಂಭವಾಗಲಿದೆ ಎಂದಿದ್ದಾರೆ.
ಈ ನೂತನ ರೈಲು ಮಾರ್ಗಕ್ಕೆ ಅನುಮೋದನೆ ನೀಡಿದ ಪ್ರಧಾನ ಮಂತ್ರಿ ನರೇಂದ್ರ ಮೋದೀಜಿ, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಮತ್ತು ವಿ ಸೋಮಣ್ಣನವರಿಗೆ ಸಂಸದ ಬಿ.ವೈ. ರಾಘವೇಂದ್ರ ಅಭಿನಂದನೆ ಸಲ್ಲಿಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post