ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಶಿವಮೊಗ್ಗಕ್ಕೆ ಆಗಮಿಸಿದ್ದ ರಾಜ್ಯ ಚುನಾವಣಾ ಆಯೋಗದ ಆಯುಕ್ತರಾದ ಗದಿಗೆಪ್ಪ ಸಣ್ಣಬಸಪ್ಪ ಸಂಗ್ರೇಶಿ ಅವರನ್ನು ಶಾಸಕ ಚನ್ನಬಸಪ್ಪ #MLA Channabasappa ಅವರು ಸರ್ಕಿಟ್ ಹೌಸ್ನಲ್ಲಿ ಭೇಟಿಯಾಗಿ,
ಶಿವಮೊಗ್ಗ ಮಹಾನಗರ ಪಾಲಿಕೆಯ #Shivamogga Mahanagara Palike ಸದಸ್ಯರ ಆಡಳಿತಾವಧಿ 2023ರ ನವೆಂಬರ್ನಲ್ಲಿ ಪೂರ್ಣಗೊಂಡಿದ್ದು, ಸುಮಾರು ಒಂದೂವರೆ ವರ್ಷಗಳಿಂದ ನಗರದಲ್ಲಿ ಚುನಾಯಿತ ಪ್ರತಿನಿಧಿಗಳಿಲ್ಲದ ಸ್ಥಿತಿ ಎದುರಾಗಿದ್ದು, ನಾಗರಿಕರ ದೈನಂದಿನ ಸಮಸ್ಯೆಗಳ ಪರಿಹಾರ, ಅಭಿವೃದ್ಧಿ ಯೋಜನೆಗಳ ಅನುಷ್ಠಾನ ಹಾಗೂ ಜನರ ಆಶಯಗಳನ್ನು ಪ್ರತಿಬಿಂಬಿಸುವ ನಿಗದಿತ ನಾಯಕತ್ವದ ಅಗತ್ಯತೆಯಿದೆ.
ಹೀಗಾಗಿ ಪ್ರತಿ ವಾರ್ಡ್ ಗಳಲ್ಲಿ ಒಬ್ಬ ಜನಪ್ರತಿನಿಧಿಯ ಅವಶ್ಯಕತೆ ಇದ್ದು, ಮಹಾನಗರ ಪಾಲಿಕೆ ಚುನಾವಣೆಯ ಪ್ರಕ್ರಿಯೆ ತ್ವರಿತಗೊಳಿಸಿ, ನಗರ ಅಭಿವೃದ್ಧಿ ಹಾಗೂ ಸುಶಾಸನದ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಬೇಕೆಂದು ಶಿವಮೊಗ್ಗದ ನಾಗರಿಕರ ಪರವಾಗಿ ಹಾಗೂ ವೈಯಕ್ತಿಕವಾಗಿ ಮನವಿ ಸಲ್ಲಿಸಿದರು.
ಭೇಟಿಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಡಿ ಎಸ್ ಅರುಣ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಜಗದೀಶ್, ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಜಿಲ್ಲಾ ಹಾಗೂ ನಗರದ ಪ್ರಮುಖರು, ಮೋರ್ಚಾಗಳ ಸದಸ್ಯರು ಸೇರಿದಂತೆ ವಾರ್ಡ್ಗಳ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post