ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಅಪರಾಧ ಜಗತ್ತಿನ ಮೇಲೆ ನಗರದಲ್ಲಿ ಮತ್ತೆ ಪೊಲೀಸರ ಗುಂಡಿನ ಸಪ್ಪಳ ಮೊಳಗಿದೆ. ಮನೆಗಳ್ಳತನದ ಪ್ರಕರಣದಲ್ಲಿ ಅಂತರರಾಜ್ಯ ಕಳ್ಳನನ್ನು ಪೊಲೀಸರು ಗುಂಡು ಹಾರಿಸಿ ಬಂಧಿಸಿದ ಘಟನೆ ನಡೆದಿದೆ.
ಅಂತರರಾಜ್ಯ ಕಳ್ಳ ಕಲ್ಕೆರೆ ಮಂಜುನಾಥ್ ಅಲಿಯಾಸ್ ಕಲ್ಕೆರೆ ಮಂಜ (47) ಎಂಬಾತನೆ ಪೊಲೀಸರಿಂದ ಗುಂಡೇಟು ತಿಂದ ಆರೋಪಿ. ಈತ ಬೆಂಗಳೂರಿನ ಕಲ್ಕೆರೆ ನಿವಾಸಿ ಎನ್ನಲಾಗಿದೆ.
ಈತನ ವಿರುದ್ದ 24 ಪ್ರಕರಣ ದಾಖಲಾಗಿದ್ದು, ಇದರಲ್ಲಿ ಬಹುತೇಕ ಕಳ್ಳತನ ಪ್ರಕರಣಗಳಾಗಿವೆ. ಶಿವಮೊಗ್ಗದ ಗಾಂಧಿನಗರದಲ್ಲಿ ಕೆಲವು ದಿನಗಳ ಹಿಂದೆ ಮನೆಗಳ್ಳತನ ನಡೆದಿತ್ತು. ಈ ಕುರಿತು ನಿತಿನ್ ಎಂಬುವವರು ಜಯನಗರ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಮನೆಯ ಒಳಗೆ ಇದ್ದ ಐ 20 ಕಾರ್ ನ್ನು ಹಾಗೂ ಸುಮಾರು 11,30,000 ಚಿನ್ನಾಭರಣ, ನಗದು ಹಾಗೂ ಇತರ ವಸ್ತುಗಳನ್ನು ಕಳುವು ಮಾಡಿಕೊಂಡು ಹೋಗಿದ್ದ ಪ್ರಕರಣ ದೂರು ದಾಖಲಾಗಿತ್ತು
ಈ ನಡುವೆಯೂ ಆರೋಪಿ ನಗರದಲ್ಲಿ ಮತ್ತೆ ಮನೆಗಳ್ಳತನಕ್ಕೆ ಯತ್ನ ನಡೆಸಿದ್ದ. ಈ ಬಗ್ಗೆ ಜಯನಗರ ಪೊಲೀಸರಿಗೆ ಖಚಿತ ಮಾಹಿತಿ ಸಿಕ್ಕಿತ್ತು. ಈ ಹಿನ್ನೆಲೆಯಲ್ಲಿ ಆತನ ಬಂಧನಕ್ಕೆ ತೆರಳಿದ್ದ ಪೊಲೀಸರ ಮೇಲೆ ಆರೋಪಿ ಎಗುರಿಬಿದ್ದಿದ್ದಾನೆ. ಪೊಲೀಸ್ ಸಿಬ್ಬಂದಿ ದ್ಯಾಮಪ್ಪನ ಮೇಲೆ ಕಳ್ಳಮಂಜ ಹಲ್ಲೆ ಮಾಡಿದ್ದನು. ಪಿಎಸ್ಐ ನವೀನ್ ಕುಮಾರ್ ಗಾಳಿಯಲ್ಲಿ ಗುಂಡು ಹಾರಿಸಿ, ಎಚ್ಚರಿಕೆ ನೀಡಿದ್ರೂ ಚಾಕುವಿನಿಂದ ಹಲ್ಲೆ ನಡೆಸಿದ್ದನು.
ಈ ವೇಳೆ ಆತ್ಮರಕ್ಷಣೆಗೆ ನವೀನ್ ಕುಮಾರ್ ಆರೋಪಿ ಮಂಜನ ಕಾಲಿಗೆ ಫೈಯರ್ ಮಾಡಲಾಗಿದೆ. ಜಯನಗರ ಠಾಣೆ ಪಿಎಸ್ಐ ನವೀನ್ ಬ್ಯಾಕೋಡು ಅವರು ಫೈರಿಂಗ್ ಮಾಡಿದ್ದಾರೆ. ಬಳಿಕ ಆರೋಪಿ ಬಂಧನವಾಗಿದೆ. ಗಾಯಗೊಂಡ ಪೊಲೀಸ್ ಸಿಬ್ಬಂದಿ ಸಹ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ವಿನೋಬನಗರ ಠಾಣೆಯಲ್ಲಿ ಮತ್ತೊಂದು ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post