ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಆಗುಂಬೆ ಘಾಟಿಯಲ್ಲಿ ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ.
ಆಗುಂಬೆಯ ಚೆಕ್ ಪೋಸ್ಟ್ ಬಳಿ ಬೃಹತ್ ಮರವೊಂದು ಧರೆಗೆ ಉರುಳಿದೆ. ಮರ ಉರುಳಿದ ಹಿನ್ನೆಲೆ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಒಂದು ಗಂಟೆಗೂ ಹೆಚ್ಚು ಕಾಲ ನಿಂತಲ್ಲೇ ವಾಹನಗಳು ನಿಲ್ಲುವಂತಾಗಿದೆ. ಟ್ರಾಫಿಕ್ ಜಾಮ್ ನಲ್ಲಿ ಆಂಬುಲೆನ್ಸ್ ಸಿಲುಕಿಕೊಂಡಿವೆ. ಮಣಿಪಾಲ್ ಮತ್ತು ವೆನ್ ಲಾಕ್ ಗೆ ತೆರಳುವ ಅಂಬ್ಯುಲೆನ್ಸ್ ಗಳು ಸಾಲುಗಟ್ಟಿ ನಿಂತಿದ್ದವು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news
Discussion about this post