Saturday, June 28, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ಶಿವಮೊಗ್ಗ | ಗಬ್ಬು ನಾರುತ್ತಿದೆ 30ನೇ ವಾರ್ಡ್ | ಪಾಲಿಕೆ ನಿರ್ಲಕ್ಷ್ಯ, ಮಾಜಿ ಸದಸ್ಯ ನಿರ್ಲಜ್ಜ

June 28, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 2 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮನುಷ್ಯರು ಕಾಲಿಡಲಾರದಷ್ಟು ಕೆಸರು. ಮಣ್ಣಿನ ಗುಡ್ಡೆಗಳು, ಅಗೆದ ರಸ್ತೆ, ಚರಂಡಿಯ ಗಬ್ಬು ವಾಸನೆ, ಸೊಳ್ಳೆಗಳ ಕಾಟ, ಹಂದಿಗಳ ಓಡಾಟ, ಕುಡಿಯುವ ನೀರಿನ ಕೊಳೆವೆಗೂ ಕೆಸರಿನ ಕಾಟ ಇವೆಲ್ಲಾ ನರಕದ ದೃಶ್ಯ ಶಿವಮೊಗ್ಗ ನಗರದ ೩೦ನೇ ವಾರ್ಡಿನಲ್ಲಿ ಕಂಡು ಬರುತ್ತದೆ.

ಮಳೆಯ ಜೊತೆಗೆ ಇಲ್ಲಿನ ವಾರ್ಡಿನಲ್ಲಿ ಜನರು ವಾಸಮಾಡುವುದೇ ನರಕಸದೃಶ್ಯವಾಗಿದೆ. ಮಹಿಳೆಯರು, ಮಕ್ಕಳು, ವಯಸ್ಸಾದವರು ಓಡಾಡುವುದೇ ಇಲ್ಲಿ ಕಷ್ಟವಾಗಿದೆ. ಕೊಳಚೆಯಿಂದ ಸಾಂಕ್ರಾಮಿಕ ರೋಗಕ್ಕೂ ಕಾರಣವಾಗಿದೆ. ರಸ್ತೆ ಅಗೆದು ಅದೆಷ್ಟೋ ತಿಂಗಳಾದರೂ ಮುಚ್ಚುವ ಸಾಹಸಕ್ಕೆ ಯಾರೂ ಕೈಹಾಕಿಲ್ಲ. ಇಲ್ಲಿನ ದೃಶ್ಯಗಳನ್ನು ನೋಡಿದರೆ ಯಾರಾದರೂ ಒಂದು ಕ್ಷಣ ಸಂಬಂಧಪಟ್ಟ ಇಲಾಖೆಗೆ ಉಗಿಯದೇ ಹೋಗುವುದಿಲ್ಲ. ರಸ್ತೆಯ ಒಳಚರಂಡಿಯ ವ್ಯವಸ್ಥೆಯಂತೂ ಗಬ್ಬೆದ್ದು ಹೋಗಿದೆ. ಮೂಗು ಮುಚ್ಚಿಕೊಂಡು ಓಡಾಡುವಂತಹ ಪರಿಸ್ಥಿತಿ ಬಂದಿದೆ. ಶಾಲೆಗೆ ಹೋಗುವ ಮಕ್ಕಳು ಆಸ್ಪತ್ರೆಗೆ ಹೋಗುವ ರೋಗಿಗಳು, ಅಂಗಡಿ ಮುಂತಾದ ಸಣ್ಣ-ಪುಟ್ಟ ಕೆಲಸಗಳಿಗೆ ಮನೆಯಿಂದ ಹೊರ ಹೋಗುವವರು ತುಂಬಾ ಆತಂಕದಲ್ಲಿದ್ದಾರೆ. ಹಲವು ಹಿರಿಯರು ಬಿದ್ದು ಪೆಟ್ಟು ಮಾಡಿಕೊಂಡಿದ್ದಾರೆ. ವಾಹನಗಳ ಸಂಚಾರವಿರಲಿ, ಮನುಷ್ಯರು ಓಡಾಡುವುದೇ ಕಷ್ಟವಾಗಿದೆ.
ಎಲ್ಲಿ ನೋಡಿದರಲ್ಲಿ ರಸ್ತೆಯನ್ನು ಅಗೆಯಲಾಗಿದೆ. ಅಗೆದ ಮಣ್ಣನ್ನು ರಸ್ತೆಯಲ್ಲೇ ಬಿಟ್ಟಿರುವುದರಿಂದ ಮನೆಯಿಂದ ಹೊರಬರಲು ಜನರು ಪರದಾಡಬೇಕಾಗಿದೆ. ಮನೆಯ ಮುಂದೆ ವಾಹನಗಳನ್ನು ನಿಲ್ಲಿಸಲು ಕೂಡ ಜಾಗವಿಲ್ಲವಾಗಿದೆ. ಇಷ್ಟೇಲ್ಲಾ ಸಮಸ್ಯೆಗಳ ಆಗರಗಳಿದ್ದರೂ ಮಹಾನಗರ ಪಾಲಿಕೆಯಾಗಲಿ, ಸಂಬAಧಪಟ್ಟ ಅಧಿಕಾರಿಗಳಾಗಲಿ ಇತ್ತಕಡೆ ಗಮನವೇಹರಿಸಿಲ್ಲ. ಈ ಬಗ್ಗೆ ಹಲವು ಬಾರಿ ಪಾಲಿಕೆಯ ಗಮನಕ್ಕೆ ತಂದಿದ್ದರೂ ಕೂಡ ಪ್ರಯೋಜನವಿಲ್ಲವಾಗಿದೆ. ಮಹಾನಗರ ಪಾಲಿಕೆಯ ನಿರ್ಲಕ್ಷö್ಯ ಆಡಳಿತಕ್ಕೂ ಇದು ಜೀವಂತ ಸಾಕ್ಷಿಯಾಗಿದೆ.

ಮನುಷ್ಯ ಮಾತ್ರದವರು ಇದನ್ನು ಸಹಿಸಿಕೊಳ್ಳಲು ಸಾಧ್ಯವೇ ಇಲ್ಲವಾಗಿದೆ. ಇದರ ಜೊತೆಗೆ ನಾಯಿ, ಹಂದಿಗಳ ಕಾಟ, ಸೊಳ್ಳೆಗಳಂತೂ ಹೇಳತೀರದಾಗಿದೆ. ಸುತ್ತಮುತ್ತಲ ಜನರು ಜ್ವರ, ಕೆಮ್ಮು ಮುಂತಾದ ಕಾಯಿಲೆಗಳಿಗೆ ಒಳಗಾಗಿದ್ದಾರೆ. ಈ ರಸ್ತೆಯಲ್ಲಿ ಆಸ್ಪತ್ರೆಗೆ ಹೋಗುವುದು ಕೂಡ ಅತ್ಯಂತ ಕಷ್ಟವಾಗಿದೆ.
ಈ ಹಿಂದೆ ಇಲ್ಲಿ ಶಂಕರ್‌ಗನ್ನಿ ಎಂಬುವವರು ಈ ವಾರ್ಡಿನ ಸದಸ್ಯರಾಗಿದ್ದರು. ಅವರ ಕಾಲದಲ್ಲಿಯೇ ಇಷ್ಟೇಲ್ಲಾ ಸಮಸ್ಯೆಗಳು ಉದ್ಭವವಾಗಿದ್ದವು. ಅದೆಷ್ಟೋಬಾರಿ ಜನರು ಅವರ ವಿರುದ್ಧ ರೊಚ್ಚಿಗೆದ್ದಿದ್ದರೂ ಕೂಡ ಅವರು ತಿರುಗಿಯೂ ನೋಡಿರಲಿಲ್ಲ. ನಂತರ ಅವರು ಈಶ್ವರಪ್ಪನವರ ರಾಷ್ಟçಭಕ್ತ ಬಳಗಕ್ಕೆ ಸೇರಿಕೊಂಡರು. ಇದೀಗ ಮತ್ತೆ ಪಾಲಿಕೆ ಸದಸ್ಯರಾಗಲು ಬಯಸಿ ಬಿಜೆಪಿಗೆ ಬಂದಿದ್ದಾರೆ.

ಜನರಿಗಂತೂ ಸಿಟ್ಟು ಇದ್ದೇಇದೆ. ಇಷ್ಟೇಲ್ಲಾ ಸಮಸ್ಯೆಗಳಿದ್ದರೂ ಕೂಡ ಅವರು ಈ ಕಡೆ ತಲೆಹಾಕಿಲ್ಲ. ವಾರ್ಡಿನ ಸದಸ್ಯರಾಗಬಯಸುವವರು ಕನಿಷ್ಠ ವಾರ್ಡಿನ ಸಮಸ್ಯೆಗಳನ್ನು ಗಮನಕ್ಕೆ ತರಬಹುದಿತ್ತು. ಆದರೂ ಕೂಡ ಸುಮ್ಮನಿದ್ದಾರೆ ಎಂದರೆ ಇದರ ಅರ್ಥ ಏನು ಎಂಬುದು ಗೊತ್ತಾಗುತ್ತದೆ. ಒಟ್ಟಾರೆ ಅವರ ವಿರುದ್ಧ ಇಲ್ಲಿನ ಜನರಿಗೆ ಆಕ್ರೋಶವಂತೂ ಇದ್ದೇ ಇದೆ.
ಇಷ್ಟೇಲ್ಲಾ ಸಮಸ್ಯೆಗಳಿದ್ದರೂ ಮಹಾನಗರ ಪಾಲಿಕೆ ಆಯುಕ್ತರು ಇತ್ತಕಡೆ ಗಮನಹರಿಸಿಲ್ಲ. ಶಾಸಕರಾದ ಚನ್ನಬಸಪ್ಪನವರು ಮತ್ತು ಈಗ ಹೊಸದಾಗಿ ಬಂದಿರುವ ಆಯುಕ್ತ ಮಾಯಣ್ಣಗೌಡ ಅವರು ಈ ಕೂಡಲೇ ಇಲ್ಲಿನ ಸಮಸ್ಯೆಯನ್ನು ಬಗೆಹರಿಸಬೇಕಾಗಿದೆ. ಜನರಿಗೆ ಸಂಕಷ್ಟದಿಂದ, ಕಿರಿಕಿರಿಯಿಂದ ಮುಕ್ತಗೊಳಿಸಬೇಕಾಗಿದೆ. ಆರೋಗ್ಯ ಇಲಾಖೆಯು ಕೂಡ ಇತ್ತಕಡೆ ಗಮನಹರಿಸಬೇಕಾಗಿದೆ. ಇಲ್ಲಿದಿದ್ದರೆ ಈ ವಾರ್ಡಿನ ಜನರು ಹೋರಾಟ ಮಾಡುವುದು ಅನಿವರ‍್ಯವಾಗುತ್ತದೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4
Tags: Kannada_NewsKannada_News_LiveKannada_News_Online ShivamoggaKannada_WebsiteKannadaNewsWebsiteLatestNewsKannadaLocalNewsMalnadNewsNews_in_KannadaNews_KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Previous Post

ಗಮನಿಸಿ! ಜೂನ್ 29ರಂದು ಶಿವಮೊಗ್ಗದ ಈ ಪ್ರಮುಖ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ

Next Post

ನೌಕರರ ಭವಿಷ್ಯ ನಿಧಿ | ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ನೌಕರರ ಭವಿಷ್ಯ ನಿಧಿ | ಹೈಯರ್ ಪೆನ್ಷನ್ ಸಮಸ್ಯೆಗೆ ಶೀಘ್ರ ಪರಿಹಾರ: ಸಚಿವೆ ಶೋಭಾ ಕರಂದ್ಲಾಜೆ ಭರವಸೆ

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025

ಹಾಸನ | ದೇವೇಗೌಡರ ಪ್ರಯತ್ನ | 30 ರಸ್ತೆಗಳ ಮೇಲ್ದರ್ಜೆಗೆ 30 ಕೋಟಿ ರೂ. ಅನುದಾನ | ಗಡ್ಕರಿ ಭರವಸೆ

June 28, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

Dyson announced the results of its first Global Wet Cleaning Study

June 28, 2025

ಅಮೂಲಾಗ್ರ ಹೆಜ್ಜೆ | ಧೂಳು & ಒದ್ದೆ ನೆಲ ಸ್ವಚ್ಛತೆಗೆ ಮಹತ್ವದ ಡೈಸನ್ ವಾಷ್ ಜಿ1 | ಏನಿದರ ವಿಶೇಷತೆ?

June 28, 2025

ಕ್ಯಾನ್ಸರ್ ತಡೆಗಟ್ಟಲು ಜಾಗೃತಿ ಅತ್ಯಗತ್ಯ: ಶಾಸಕ ಅರಗ ಜ್ಞಾನೇಂದ್ರ

June 28, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!