No Result
View All Result
KRCS Shikaripura Achieves 100% Result in CBSE Class X Board Exams
English Articles

KRCS Shikaripura Achieves 100% Result in CBSE Class X Board Exams

by ಕಲ್ಪ ನ್ಯೂಸ್
April 16, 2026
0

Kalpa Media House  |  Shikaripura | Kumadvathi Residential Central School (KRCS), Shikaripura, has achieved a 100% pass result in the...

Read moreDetails
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

Welfare Impossible Without Dharma; Upholding Righteousness is Everyone’s Duty: Yadugiri Yatiraja Swamiji

April 13, 2026
Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

Berger Paints Responds to India’s Heat Challenge with ‘Garmi Gone, Thandak On’ Home Cooling Solutions Range

April 13, 2026
  • Advertise With Us
  • Grievances
  • About Us
  • Contact Us
Monday, April 27, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಉತ್ತರ ಕನ್ನಡ

ಭಾಷೆ ಸಂಸ್ಕೃತಿಯ ವಾಹಕ | ಸ್ವಭಾಷಾ ಸಂರಕ್ಷಣೆ ನಮ್ಮ ಹೊಣೆ: ರಾಘವೇಶ್ವರ ಶ್ರೀ

ಸ್ವಭಾಷಾ ಚಾತುರ್ಮಾಸ್ಯ ಅಭಿದಾನದೊಂದಿಗೆ ಜುಲೈ 10ರಿಂದ 32ನೇ ಚಾತುರ್ಮಾಸ್ಯ ವ್ರತ ಆಚರಣೆ

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
July 4, 2025
in ಉತ್ತರ ಕನ್ನಡ
0
ಮಾತಾಪಿತೃಗಳನ್ನು ದೈವಸಮಾನರಾಗಿ ಕಾಣಬೇಕು: ರಾಘವೇಶ್ವರ ಶ್ರೀ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಗೋಕರ್ಣ  |

ಗೋಕರ್ಣ ಮಂಡಲಾಧೀಶ್ವರ ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀ ಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿಯವರ #Raghaveshwara Shri 32ನೇ ಚಾತುರ್ಮಾಸ್ಯ ವ್ರತ ಆಷಾಢ ಶುದ್ಧ ಪೂರ್ಣಿಮೆಯಿಂದ ಅಂದರೆ 10ನೇ ಜುಲೈ 2025 ರಿಂದ ಭಾದ್ರಪದ ಶುದ್ಧ ಪೂರ್ಣಿಮೆಯವರಗೆ ಅಂದರೆ 7ನೇ ಸೆಪ್ಟೆಂಬರ್ 2025ರವರೆಗೆ ಗೋಕರ್ಣ ಅಶೋಕೆಯ ಪುಣ್ಯ ಪರಿಸರದಲ್ಲಿ ಸಂಪನ್ನಗೊಳ್ಳಲಿದೆ.

ಅಶೋಕೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಾತುರ್ಮಾಸ್ಯ ವೈಶಿಷ್ಟ್ಯಗಳ ಬಗ್ಗೆ ವಿವರ ನೀಡಿದ ರಾಘವೇಶ್ವರ ಶ್ರೀಗಳು, “ಭಾಷೆ ಸಂವಹನದ ಸಾಧನ ಮಾತ್ರವಲ್ಲ; ಅದು ಸಂಸ್ಕøತಿ ವಾಹಕವೂ ಹೌದು; ಭಾಷೆಯೊಡನೆ ಪರಂಪರೆ ಸಾಗಿಬಂದಿರುತ್ತದೆ. ಹಾಗಾಗಿ ಸ್ವಭಾಷೆಯನ್ನು ಸಂರಕ್ಷಿಸಿಕೊಳ್ಳಬೇಕು. ಅದರಿಂದ ಸ್ವಸಂಸ್ಕøತಿಯ ಸಂರಕ್ಷಣೆಯಾಗುತ್ತದೆ. ಭಾಷೆಯನ್ನು ರಕ್ಷಿಸುವುದೆಂದರೆ ಅದರಲ್ಲಿ ಮಾತನಾಡುವುದು; ಶುದ್ಧವಾಗಿ ಮಾತನಾಡುವುದು. ಮರೆತುಹೋದ ಮನೆಮಾತನ್ನು ಮರಳಿ ನೆನಪಿಸುವ ಉದ್ದೇಶದಿಂದ ಈ ಬಾರಿಯ ಚಾತುರ್ಮಾಸ್ಯವನ್ನು #Chathurmasa ಸ್ವಭಾಷಾ ಚಾತುರ್ಮಾಸ್ಯ ಎಂಬ ಅಭಿದಾನದೊಂದಿಗೆ ಆಚರಿಸಲಾಗುತ್ತಿದೆ. ಈ ಚಾತುರ್ಮಾಸ್ಯ ಸ್ವಭಾಷೆಯನ್ನು ಪರಿಶುದ್ಧವಾಗಿ ಮಾತನಾಡಲು ಪ್ರೇರೇಪಿಸುತ್ತದೆ” ಎಂದು ಬಣ್ಣಿಸಿದರು.
ನಾವು ನಮ್ಮ ಭಾಷೆಯನ್ನು ಮಾತನಾಡುವುದು ದೇಶ, ಸಂಸ್ಕøತಿ, ಭಾಷೆ, ಪರಂಪರೆಗೆ ನಾವು ಸಲ್ಲಿಸುವ ಅತಿದೊಡ್ಡ ಸೇವೆ. ಇದು ಜೀವನಕ್ಕೆ ಸ್ವಾರಸ್ಯವನ್ನೂ ತರುತ್ತದೆ. ಶುದ್ಧವಾದ ಮಾತೃಭಾಷೆಯನ್ನು ಮಾತನಾಡುವ ಪ್ರಯತ್ನ ಸ್ವಭಾಷಾ ಚಾತುರ್ಮಾಸ್ಯದ ತಿರುಳು. ಮರೆತ ಪದಗಳನ್ನು ನೆನಪಿಸಿಕೊಳ್ಳೋಣ. ಪರಕೀಯತೆ ನಮ್ಮ ನಾಲಿಗೆಯಲ್ಲೇ ಇದೆ. ನಮ್ಮ ನಾಲಿಗೆ ಕೆಡಿಸಿಕೊಳ್ಳದಿರೋಣ. ಸಂಸ್ಕಾರದಿಂದ ಶಬ್ದ. ಶಬ್ದದಿಂದ ವಾಕ್ಯ; ಅದು ಭಾಷೆಯ ಮೂಲ. ಆದ್ದರಿಂದ ಪ್ರತಿ ಪದವೂ ತನ್ನೊಂದಿಗೆ ಆ ಭಾಷೆಯ ಸಂಸ್ಕಾರವನ್ನು ತರುತ್ತದೆ ಎಂದು ವಿವರಿಸಿದರು.

ಇದೇ ಮೊಟ್ಟಮೊದಲ ಬಾರಿಗೆ ಇಂಥ ಸೂತ್ರ ಇಟ್ಟುಕೊಂಡು ಚಾತುರ್ಮಾಸ್ಯ ಆಚರಿಸಲಾಗುತ್ತಿದೆ. ಚಾತುರ್ಮಾಸ್ಯ ಧರ್ಮಕ್ಕೆ ಸೀಮಿತ ಎಂದು ವಾದಿಸುವವರಿದ್ದಾರೆ. ಭಾಷೆಯನ್ನು ಉಳಿಸುವುದು ಕೂಡಾ ಧರ್ಮದ ಒಂದು ಅಂಗ. ಉರಿಯುವುದು ಬೆಂಕಿಯ ಧರ್ಮ; ಹರಿಯುವುದು ನೀರಿನ ಧರ್ಮ; ಅಂತೆಯೇ ನಮ್ಮ ಭಾಷೆ ಮಾತನಾಡುವುದು ನಮ್ಮ ಧರ್ಮ ಎಂದು ವಿಶ್ಲೇಷಿಸಿದರು.
“ಮನೆಮಾತು ಮರೆತು ಹೋಗಿದೆ. ಉಪಭಾಷೆಗಳು ಬಹುತೇಕ ನಶಿಸಿವೆ. ಕನ್ನಡ ಮಾತನಾಡುವ ಸಂದರ್ಭದಲ್ಲೂ ಕನ್ನಡವನ್ನು ಕಡೆಗಣಿಸುತ್ತೇವೆ. ನಮ್ಮ ಭಾಷೆಯಲ್ಲಿ ಬೇರೆ ಭಾಷೆ ತೂರಿಕೊಂಡಿದೆ. ಈ ಬಾರಿಯ ಚಾತುರ್ಮಾಸ್ಯ ಭಾಷೆ ಶುದ್ಧಗೊಳಿಸುವ ಪ್ರಯತ್ನಕ್ಕೆ ಶ್ರೀಕಾರ ಹಾಕಲಿದೆ ಎಂದು ಹೇಳಿದರು.

ಕನ್ನಡವನ್ನು ಶುದ್ಧವಾಗಿ ಮಾತನಾಡಲು ಕಲಿಯೋಣ. ಭಾಷೆಯಲ್ಲಿ ಒಂದು ಪದ ಮರೆಯಾದರೆ ಅದಕ್ಕೆ ಸಂಬಂಧಿಸಿದ ಸಂಸ್ಕøತಿ- ಸಂಸ್ಕಾರ ಎಲ್ಲವೂ ನಾಶವಾಗುತ್ತದೆ. ಒಂದು ಪರಕೀಯ ಪದ ಆಯಾ ಭಾಷೆಯ ಸಂಸ್ಕಾರವನ್ನು ತರುತ್ತದೆ. ನಮಗೆ ಗೊತ್ತಾಗದಂತೆ ನಾವೇ ಪರಕೀಯರಾಗುತ್ತಿದ್ದೇವೆ. ಉದಾಹರಣೆಗೆ ಇಂಗ್ಲಿಷ್ ನಾವು ಆವಾಹಿಸಿಕೊಂಡಿರುವ ಆಕ್ರಮಣ. ನಮ್ಮತನವನ್ನು ಉಳಿಸಿಕೊಳ್ಳಬೇಕಾದರೆ ನಮ್ಮ ಭಾಷೆ ಉಳಿಸಿಕೊಳ್ಳುವುದು ಅನಿವಾರ್ಯ ಎಂದು ಪ್ರತಿಪಾದಿಸಿದರು.

ಗುಲಾಮಗಿರಿ, ದಾಸ್ಯದ ಸಂಕೇತ ಏಕೆ ಎಂದು ಈಗ ಪ್ರಶ್ನಿಸದಿದ್ದರೆ ಮುಂದಿನ ದಿನ ಈ ಪ್ರಶ್ನೆ ಎತ್ತುವವರೂ ಇರಲಾರರು. ರಾಮಚಂದ್ರಾಪುರ ಮಠ ಶುದ್ಧ ದೇಸಿ ತಳಿಯ ಗೋವು ಉಳಿಸಲು ಬಹುದೊಡ್ಡ ಆಂದೋಲನ ನಡೆಸಿದೆ. ಭಾರತೀಯ ತಳಿಗಳ ಪರಿಶುದ್ಧತೆ ಉಳಿಯಬೇಕು ಎಂಬ ಕಾರಣಕ್ಕೆ ತಳಿಸಂಕರ ವಿರೋಧಿಸುತ್ತಾ ಬಂದಿದೆ. ಗೋವಿನಲ್ಲಿ ತಳಿಸಂಕರ ಹೇಗೆ ಪ್ರಮಾದವೋ ಭಾಷೆಯಲ್ಲಿ ಕೂಡಾ ಸಂಕರ ಒಳ್ಳೆಯ ಬೆಳವಣಿಗೆಯಲ್ಲ ಎಂದು ಅಭಿಪ್ರಾಯಪಟ್ಟರು.
ನಮ್ಮ ಮಾತೃಭಾಷೆಯ ಹಲವು ಪದಗಳು ಮರೆತು ಹೋಗಿವೆ. ಕನ್ನಡ ಮಾತನಾಡುವ ಪ್ರಯತ್ನ ಇಂದಿನಿಂದಲೇ ಆರಂಭವಾಗಲಿ; ಕನ್ನಡ ಮಾತನಾಡಬೇಕಾದಲ್ಲಿ ಕನ್ನಡವನ್ನೇ ಮಾತನಾಡೋಣ. ಪರಿಸ್ಥಿತಿಗೆ ಅನುಗುಣವಾಗಿ ಆಂಗ್ಲಭಾಷೆ ಮಾನಾಡಿದರೆ ತಪ್ಪಲ್ಲ; ಆದರೆ ಕನ್ನಡದ ಜತೆ ಅದನ್ನು ಬೆರೆಸುವುದು ಬೇಡ. ಹಾಗೆ ಮಾಡಿದರೆ ಇಡೀ ಸಮಾಜವೇ ಭಾಷೆ ಇಲ್ಲದ ಸಮಾಜವಾಗಿ ಮಾರ್ಪಾಡಾಗುತ್ತದೆ. ಈ ಸಮಾಜವನ್ನು ಬದಲಾಯಿಸುವ ಕಾರ್ಯ ಇಂದಿನಿಂದಲೇ ಆರಂಭವಾಗಲಿ. ಮನೆಗಳಲ್ಲಿ ಕನ್ನಡ ಅಭ್ಯಸಿಸೋಣ. ಮರೆತು ಹೋದ ಹಳೆ ಪದಗಳ ಮರು ಅನ್ವೇಷಣೆ ನಡೆಯಲಿದೆ; ಮತ್ತೆ ಕೆಲ ಪದಗಳನ್ನು ಸೃಷ್ಟಿ ಮಾಡುವ ಪ್ರಮೇಯವೂ ಬರುತ್ತದೆ. ಅದನ್ನೂ ಮಾಡಲು ಈ ಚಾತುರ್ಮಾಸ್ಯ ಪ್ರೇರೇಪಿಸುತ್ತದೆ. ಮೊದಲ ಹಂತದಲ್ಲಿ ಪರಕೀಯ ಶಬ್ದಗಳನ್ನು ಕಡಿಮೆ ಮಾಡೋಣ; ಅಂತಿಮವಾಗಿ ಶುದ್ಧವಾದ ಭಾಷೆಯನ್ನು ಉಳಿಸಿ ಬೆಳೆಸೋಣ. ಚಾತುರ್ಮಾಸ್ಯದಲ್ಲಿ ನಾಲಿಗೆ ಶುದ್ಧೀಕರಣದ ಕಾರ್ಯ ಮಾಡೋಣ. ನಮ್ಮತನವನ್ನು ಉಳಿಸಿಕೊಳ್ಳೋಣ ಎಂದು ಆಶಿಸಿದರು.

ಗುರುವಾರ ಜುಲೈ 10ರಂದು ಶ್ರೀವ್ಯಾಸಪೂಜೆಯೊಂದಿಗೆ ಚಾತುರ್ಮಾಸ್ಯ ವ್ರತ ಆರಂಭವಾಗಲಿದೆ. ಚಾತುರ್ಮಾಸ್ಯ ಸಂದರ್ಭದಲ್ಲಿ 13ರಂದು ಶ್ರೀವರ್ಧಂತಿ ಕಾರ್ಯಕ್ರಮ ನಡೆಯಲಿದೆ. ಜುಲೈ 21 ಮತ್ತು ಆಗಸ್ಟ್ 19ರಂದು ಎರಡು ಸ್ವಭಾಷಾ ಗೋಷ್ಠಿ ನಡೆಯಲಿದೆ. ಆಗಸ್ಟ್ 16ರಂದು ಶ್ರೀಕೃಷ್ಣ ಜನ್ಮಾಷ್ಟಮಿ ಮತ್ತು 27ರಂದು ಶ್ರೀಗಣೇಶ ಚತುರ್ಥಿ ಆಚರಿಸಲಾಗುತ್ತದೆ. ಸೆಪ್ಟೆಂಬರ್ 7ರಂದು ಸೀಮೋಲ್ಲಂಘನದೊಂದಿಗೆ ಚಾತುರ್ಮಾಸ್ಯ ಸಂಪನ್ನಗೊಳ್ಳಲಿದೆ ಎಂದು ವಿವರಿಸಿದರು.

ಚಾತುರ್ಮಾಸ್ಯ ಸೇವಾಬಿಂದುಗಳಾದ ಮಂಜುನಾಥ ಸುವರ್ಣಗದ್ದೆ, ಪ್ರಸನ್ನ ಕುಮಾರ್ ಟಿ.ಜಿ, ಜಿ.ಕೆ.ಹೆಗಡೆ, ಶ್ರೀಕಾಂತ್ ಪಂಡಿತ್, ಉದಯಶಂಕರ ಭಟ್, ಮಧು ಜಿ.ಕೆ, ಜಿ.ಎಸ್.ಹೆಗಡೆ, ಸುಬ್ರಾಯ ಭಟ್, ಆರ್.ಜಿ.ಹೆಗಡೆ, ಕೆ.ಎಲ್.ಹೆಗಡೆ, ರಾಜು ಹೆಬ್ಬಾರ್, ಉದಯ ಭಟ್, ರಾಜಾರಾಂ ಭಟ್, ಜಿ.ವಿ.ಹೆಗಡೆ, ಮಹೇಶ್ ಹೆಗಡೆ ಮತ್ತಿತರರು ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news  

http://kalpa.news/wp-content/uploads/2025/02/Kumadvati-College-Shikaripura-2025-Video.mp4
http://kalpa.news/wp-content/uploads/2024/04/VID-20240426-WA0008.mp4

   

Tags: ChathurmasaGokarnaKannada News WebsiteKannada_NewsKannada_News_LiveKannada_News_OnlineKannada_WebsiteLatest News KannadaNews_in_KannadaNews_KannadaRaghaveshwara shriUttara Kannadaಗೋಕರ್ಣಚಾತುರ್ಮಾಸ್ಯಶ್ರೀರಾಘವೇಶ್ವರಭಾರತೀ ಮಹಾಸ್ವಾಮೀಜಿ
Share196Tweet123Send
Previous Post

ಹಿರಿಯ ಜೀವಿಗಳು ಪರಂಪರೆಯ ಹರಿವಿನ ಕೊಂಡಿಗಳು

Next Post

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಗಮನಿಸಿ! ಹುಬ್ಬಳ್ಳಿ-ಹೃಷಿಕೇಶ ನಡುವೆ ವಿಶೇಷ ಸಾಪ್ತಾಹಿಕ ಎಕ್ಸ್’ಪ್ರೆಸ್ ರೈಲು | ಮಾರ್ಗ ಯಾವುದು?

ತುಮಕೂರು-ಶಿವಮೊಗ್ಗ ಮೆಮು, ತಾಳಗುಪ್ಪ-ಬೆಂಗಳೂರು ರೈಲುಗಳ ಬಿಗ್ ಲೇಟೆಸ್ಟ್ ಅಪ್ಡೇಟ್

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

ಸಂಗೀತ, ನೃತ್ಯದಂತಹ ಕಲೆಗಳು ಮಕ್ಕಳ ಮನೋವಿಕಾಸಕ್ಕೆ ಪೂರಕ | ಫಾದರ್ ರಾಬರ್ಟ್ ಡಿ’ಮೆಲ್ಲೋ

April 27, 2026
ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

ಒಲಿಂಪಿಕ್ ಪದಕದ ಕನಸಿಗೆ ಬಳ್ಳಾರಿಯಲ್ಲಿ ಬುನಾದಿ: IIS ನಿಂದ ಹೈ-ಪರ್ಫಾರ್ಮೆನ್ಸ್ ಟೇಕ್ವಾಂಡೋ ತರಬೇತಿ ಕೇಂದ್ರ ಆರಂಭ

April 27, 2026
ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

ಸೊರಬ | ಏ.29 ರಂದು ಪಂಡಿತಾರಾಧ್ಯರ ಶಿಲಾಮಂಟಪದ ಅಡಿಗಲ್ಲು ಸಮಾರಂಭ

April 27, 2026
ಗಮನಿಸಿ! ಜ.21-22ರಂದು ಶಿವಮೊಗ್ಗ ನಗರ, ಗ್ರಾಮಾಂತರದ ಈ ಬಡಾವಣೆಗಳಲ್ಲಿ ಕರೆಂಟ್ ಇರಲ್ಲ

ಗಮನಿಸಿ! ಎ.28ರ ನಾಳೆ ಭದ್ರಾವತಿಯ ಹಲವು ಕಡೆ ಕರೆಂಟ್ ಇರಲ್ಲ

April 27, 2026
ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ | ಮಾಸ್ಟರ್ ಮೈಂಡ್ ಶಾರಿಕ್’ಗೆ 10 ವರ್ಷ ಜೈಲು ಶಿಕ್ಷೆ

April 27, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL