ಕಲ್ಪ ಮೀಡಿಯಾ ಹೌಸ್ | ತಿರುಪತಿ |
ಹಿಂದೂ ಹೊರತಾಗಿ ಅನ್ಯಧರ್ಮ ಅನುಸರಿಸುತ್ತಿರುವ ನಾಲ್ವರು ನೌಕರರನ್ನು ಟಿಟಿಡಿಯಿಂದ ಅಮಾನತು ಮಾಡಲಾಗಿದೆ.
ಈ ಕುರಿತಂತೆ ವರದಿಯಾಗಿದ್ದು, ಉಪ ಕಾರ್ಯನಿರ್ವಾಹಕ ಎಂಜಿನಿಯರ್ (ಗುಣಮಟ್ಟ ನಿಯಂತ್ರಣ) ಬಿ. ಎಲಿಜರ್, ಎಸ್ವಿ ಆಯುರ್ವೇದ ಫಾರ್ಮಸಿಯ ಜಿ. ಅಸುಂತ, ಬಾಲಾಜಿ ಇನ್ಸ್ಟಿಟ್ಯೂಟ್ ಆಫ್ ಸರ್ಜರಿ, ರಿಸರ್ಚ್ ಅಂಡ್ ರಿಹ್ಯಾಬಿಲಿಟೇಶನ್ ಫಾರ್ ದಿ ಡಿಸೇಬಲ್ಡ್ (ಬಿಐಆರ್ಆರ್ಡಿ) ಆಸ್ಪತ್ರೆಯ ನರ್ಸ್ ಎಸ್.ರೋಸಿ ಮತ್ತು ಗ್ರೇಡ್-ಐ ಫಾರ್ಮಾಸಿಸ್ಟ್ ಎಂ. ಪ್ರೇಮಾವತಿ ಅಮಾನತುಗೊಂಡ ನೌಕರರು ಎಂದು ತಿಳಿದುಬಂದಿದೆ.
ಮೇ ತಿಂಗಳಲ್ಲಿ ಮಂಡಳಿಯು ನಡೆಸುತ್ತಿರುವ ವಿವಿಧ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿರುವ ಹಿಂದೂಯೇತರರನ್ನು ಆಂಧ್ರಪ್ರದೇಶದ ಇತರ ಸರ್ಕಾರಿ ಇಲಾಖೆಗಳಿಗೆ ವರ್ಗಾಯಿಸಲಾಗುವುದು ಅಥವಾ ಅದರ ಸ್ವಯಂಪ್ರೇರಿತ ನಿವೃತ್ತಿ ಯೋಜನೆಯನ್ನು ಆಯ್ಕೆ ಮಾಡಿಕೊಳ್ಳಬಹುದು ಎಂದು ಟಿಟಿಡಿ ಹೇಳಿತ್ತು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















