ಕಲ್ಪ ಮೀಡಿಯಾ ಹೌಸ್ | ಗೋಕರ್ಣ |
ದಿನಕ್ಕೊಂದು ಇಂಗ್ಲಿಷ್ ಪದವನ್ನು ಬಿಡುವ ಮೂಲಕ ಸ್ವಭಾಷೆಯ ಶುದ್ಧೀಕರಣದ ಪ್ರಯತ್ನ ಮಾಡೋಣ ಎಂದು ಶ್ರೀಮಜ್ಜಗದ್ಗುರು ಶಂಕರಾಚಾರ್ಯ ಶ್ರೀರಾಘವೇಶ್ವರಭಾರತೀಮಹಾಸ್ವಾಮೀಜಿ ಸಲಹೆ ಮಾಡಿದರು.
ಅಶೋಕೆಯಲ್ಲಿ ಸ್ವಭಾಷಾ ಚಾತುರ್ಮಾಸ್ಯ ವ್ರತ ಕೈಗೊಂಡಿರುವ ಶ್ರೀಗಳು 21ನೇ ದಿನವಾದ ಬುಧವಾರ ಹಟ್ಟಿಯಂಗಡಿ ಶ್ರೀ ಸಿದಿವಿನಾಯಕ ದೇವಸ್ಥಾನದ ಧರ್ಮಕರ್ತರಾದ ಬಾಲಚಂದ್ರ ಭಟ್ ಕುಟುಂಬದವರಿಂದ ಸರ್ವಸೇವೆ ಸ್ವೀಕರಿಸಿ ಆಶೀರ್ವಚನ ನೀಡಿದರು.
ಇಂಗ್ಲಿಷ್ ವಾಸ್ತವವಾಗಿ ಶುದ್ಧಭಾಷೆಯಲ್ಲ; ಒಂದು ರೀತಿಯಲ್ಲಿ ಕಲುಷಿತ ಭಾಷೆ ಎಂದರೆ ತಪ್ಪಲ್ಲ. ಏಕೆಂದರೆ ಇಂಗ್ಲಿಷ್ನಲ್ಲಿ ಹಲವು ವರ್ಣಗಳೇ ಇಲ್ಲ. ಕನ್ನಡ ವರ್ಣಮಾಲೆಯಲ್ಲಿ 52 ಅಕ್ಷರಗಳಿದ್ದರೆ ಇಂಗ್ಲಿಷ್ನಲ್ಲಿ ಕೇವಲ 26 ಅಕ್ಷರಗಳಿವೆ. ನಮ್ಮ ಸಂಸ್ಕøತಿ- ಪರಂಪರೆಗೆ ಒಗ್ಗುವ ಭಾಷೆ ಕನ್ನಡ. ಆದರೆ ಇಂದು ನಮ್ಮ ಭಾಷೆಯ ಹಲವು ಪದಗಳನ್ನು ನಾವು ಮರೆತು ಇಂಗ್ಲಿಷ್ ಪದಗಳ ಕಲಬೆರಕೆ ಮಾಡಿದ್ದೇವೆ ಎಂದು ಅಭಿಪ್ರಾಯಪಟ್ಟರು.

ಇಂದು ಸೋಪು ಎಂಬ ಸಾಮಾನ್ಯ ಬಳಕೆಯಲ್ಲಿರುವ ಆಂಗ್ಲಪದವನ್ನು ಬಿಡೋಣ. ಕನ್ನಡದಲ್ಲಿ ಅಪರೂಪಕ್ಕೆ ಸಾಬೂನು ಪದ ಬಳಸುತ್ತೇವೆ. ಅದು ಕೂಡಾ ಮೂಲತಃ ಕನ್ನಡ ಶಬ್ದವಲ್ಲ; ಅದು ಪರ್ಷಿಯನ್ ಭಾಷೆಯಿಂದ ಬಂದದ್ದು. ಮೂಲವಾಗಿ ಲ್ಯಾಟಿನ್ ಭಾಷೆಯ ಸ್ಯಾಪೊ, ಕನ್ನಡದಲ್ಲಿ ಸೋಪು ಎಂದು ಬಳಕೆಯಾಗುತ್ತಿದೆ. ಇದಕ್ಕೆ ತಿಳಿಗನ್ನಡದಲ್ಲಿ ಸಬಕಾರ ಎಂಬ ಪರ್ಯಾಯ ಪದ ಇದೆ ಎಂದು ವಿವರಿಸಿದರು.

ಸೋಪು ಶಬ್ದ ಹೇಗೆ ಪಾಶ್ಚಾತ್ಯದ್ದೋ ಸೋಪಿನ ಸಂಸ್ಕøತಿಯೂ ಪಾಶ್ಚಾತ್ಯ. ಭಾರತದಲ್ಲಿ ಅನಾದಿಕಾಲದಿಂದಲೂ ಸ್ನಾನಚೂರ್ಣದ ಬಳಕೆ ಕಾಣುತ್ತೇವೆ. ಅದು ವೈಜ್ಞಾನಿಕ ಕೂಡಾ. ಸೋಪಿನ ಕಣಗಳು ಚರ್ಮದ ರಂಧ್ರವನ್ನು ಮುಚ್ಚಿ ತ್ವಚೆಯ ಉಸಿರಾಟಕ್ಕೆ ತೊಂದರೆ ಉಂಟುಮಾಡುತ್ತದೆ. ಆದರೆ ಭಾರತದಲ್ಲಿ ಬಳಕೆಯಲ್ಲಿದ್ದ ಸೀಗೆಕಾಯಿಯಂಥ ಒರಟು ಸ್ನಾನಚೂರ್ಣ ಹೆಚ್ಚು ಆರೋಗ್ಯಕಾರಿ ಎಂದು ವಿಶ್ಲೇಷಿಸಿದರು.

ವಿವಿವಿ ಸಮಿತಿ ಕಾರ್ಯದರ್ಶಿ ನಾಗರಾಜ ಭಟ್ ಪೆದಮಲೆ, ವಿವಿವಿ ಹಿರಿಯ ಲೋಕಸಂಪರ್ಕಾಧಿಕಾರಿ ಜಿ.ಕೆ.ಹೆಗಡೆ, ಹವ್ಯಕ ಮಹಾಮಂಡಲ ಪ್ರಧಾನ ಕಾರ್ಯದರ್ಶಿ ಮಹೇಶ್ ಚಟ್ನಳ್ಳಿ, ಚಾತುರ್ಮಾಸ್ಯ ತಂಡದ ಜಿ.ವಿ.ಹೆಗಡೆ, ಶ್ರೀಪರಿವಾರದ ರಾಘವೇಂದ್ರ ಮಧ್ಯಸ್ಥ, ಸುಚೇತನ ಶಾಸ್ತ್ರಿಗಳು ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post