ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆರ್.ಆರ್. ಮೂವಿ ಮೇಕರ್ಸ್ ಬ್ಯಾನರ್ ಅಡಿ ನಿರ್ಮಾಣವಾಗಿರುವ ಭರವಸೆ ಚಲನಚಿತ್ರ ಆ. 8ರಂದು ಶಿವಮೊಗ್ಗ ಸೇರಿದಂತೆ ರಾಜ್ಯಾದ್ಯಂತ ಬಿಡುಗಡೆಯಾಗಲಿದೆ ಎಂದು ನಿರ್ದೇಶಕ ಎ.ಎನ್. ಮುತ್ತು ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಚಲನಚಿತ್ರವು ಶಿವಮೊಗ್ಗದಲ್ಲಿಯೇ ಹೆಚ್ಚು ಚಿತ್ರೀಕರಣವಾಗಿದೆ. 5 ಹಾಡುಗಳಿವೆ. ರಾಜೇಶ್ ಕೃಷ್ಣನ್, ಅನುರಾಧ ಭಟ್ ಸೇರಿದಂತೆ ಹಲವರು ಹಾಡಿದ್ದಾರೆ. ಜೀವನದಲ್ಲಿ ಏನನ್ನೋ ಪಡೆದುಕೊಳ್ಳುವ ಭರವಸೆಯಲ್ಲಿ ನಾವಿರುತ್ತೇವೆ. ಅದೇ ಚಿತ್ರದ ತಿರುಳಾಗಿರುತ್ತದೆ. ವ್ಯಕ್ತಿ ಮತ್ತು ವ್ಯಕ್ತಿತ್ವದ ನಡುವಿನ ಪ್ರೇಮದ ಭರವಸೆ ಈ ಚಿತ್ರದಲ್ಲಿದೆ ಎಂದರು.

ಪತ್ರಿಕಾಗೋಷ್ಠಿಯಲ್ಲಿ ನಿರ್ಮಾಪಕ ಹಾಗೂ ನಟ ಬಿ.ಸಿ. ನಾಗರಾಜ್, ಸಂತೋಷ್, ಚೇತನಾ ಶೆಟ್ಟಿ, ಗುರುಮೂರ್ತಿ, ಅರ್ಚನಾ ನಿರಂಜನ್, ಸ್ನೇಕ್ ಸುಹಾಸ್, ಸಿದ್ಧಾರ್ಥ ಮುಂತಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post