ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಬಾಲ್ಯದಲ್ಲಿ ಕಾಣಿಸಿಕೊಳ್ಳುವ ಕಾಯಿಲೆಗಳಿಂದ ಶಿಶುಗಳನ್ನು ರಕ್ಷಿಸಲು ಸಹಾಯ ಮಾಡುವ ಪ್ರತಿಕಾಯಕಗಳನ್ನು ಹೊಂದಿರುತ್ತದೆ ಎಂದು ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ವೀರಯ್ಯ ಅಭಿಪ್ರಾಯಪಟ್ಟರು.
ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆ ಶಿವಮೊಗ್ಗ, ಇರ್ನ್ನ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ, ಮೈತ್ರಿ ಕಾಲೇಜ್ ಆಫ್ ನರ್ಸಿಂಗ್ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ದಿನದ ಅಂಗವಾಗಿ ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ದಿನವನ್ನು ಆಚರಿಸಲಾದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ತಾಯಿಯ ಎದೆ ಹಾಲು ಮಗುವಿಗೆ ಅತ್ಯುತ್ತಮವಾದ ಪೋಷಣೆ ಮತ್ತು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ. ಎದೆಹಾಲು ಮಗುವಿನ ಅರೋಗ್ಯಕರ ಬೆಳವಣಿಗೆಗೆ ಅಗತ್ಯವಾದ ಎಲ್ಲಾ ಪೋಷಕಾಂಶಗಳನ್ನು ಹೊಂದಿದ್ದು, ಇದು ಮಗುವಿನ ಆರೋಗ್ಯವನ್ನು ವೃದ್ಧಿಸುವುದು ಮಾತ್ರವಲ್ಲದೆ ಹಾಲುಣಿಸುವುದರಿಂದ ತಾಯಿ ಮತ್ತು ಮಗುವಿನ ನಡುವಿನ ವಾತ್ಸಲ್ಯ, ಬಾಂಧವ್ಯ ಮತ್ತು ಪ್ರೀತಿ ಸಹ ಹೆಚ್ಚಾಗುತ್ತದೆ. ಒಂದು ಕಟ್ಟಡ ಕಟ್ಟ ಬೇಕು ಎಂದರೆ ಅದರ ಫೌಂಡೇಶನ್ ಗಟ್ಟಿ ಇರಬೇಕು ಹಾಗೆಯೇ ಮಗು ಅರೋಗ್ಯವಾಗಿರಬೇಕು ಎಂದರೆ ಹುಟ್ಟಿದ ಮಗುವಿಗೆ ತಾಯಿ ಎದೆ ಹಾಲನ್ನು ಸಮರ್ಪಕವಾಗಿ ನೀಡಬೇಕು ಎಂದರು.

ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ ಅಧ್ಯಕ್ಷರಾದ ಅನ್ನಪೂರ್ಣ ರಂಗರಾಜನ್ ಮಾತನಾಡಿ, ಈಗಿನ ತಾಯಿಂದರು ಹಾಲುಣಿಸುವುದರಿಂದ ತಮ್ಮ ಸೌಂದರ್ಯ ಹಾಳಾಗುತ್ತದೆ ಎನ್ನುವ ತಪ್ಪು ಕಲ್ಪನೆಯನ್ನು ಮಾಡಿಕೊಳ್ಳುತ್ತಾರೆ. ಆದರೆ ತಾಯಿ ಮಗುವಿಗೆ ಎದೆ ಹಾಲು ಕೊಡುವುದರಿಂದ ಸೌಂದರ್ಯ ದುಪ್ಪಟ್ಟಾಗುತ್ತದೆ ಎಂದರು.

ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕರಾದ ಡಾ. ಪ್ರಶಾಂತ್ ವೀರಯ್ಯ, ವೈದ್ಯಕೀಯ ಅಧೀಕ್ಷಕರಾದ ಡಾ. ವಿಜಯ ಕುಮಾರ ಮಾಯೆರ, ಸರ್ಜಿ ಆಸ್ಪತ್ರೆಯ ಆಡಳಿತಾಧಿಕಾರಿಗಳಾದ ಮುರುಳಿರ್ಧ ರಾವ್ ಕುಲಕರ್ಣಿ, ಇನ್ನರ್ ವೀಲ್ ಕ್ಲಬ್ ಆಫ್ ಶಿವಮೊಗ್ಗ ಸೆಂಚುರಿ ಅಧ್ಯಕ್ಷರಾದ ಅನ್ನಪೂರ್ಣ ರಂಗರಾಜನ್, ಮಕ್ಕಳ ತಜ್ಞವೈದ್ಯರಾದ ಡಾ. ಶಮಿತಾ ಆರ್, ಡಾ.ವಿನಯ್ ಪಾಟೀಲ್, ಡಾ.ರಜತ್, ಡಾ ವಿಕ್ರಂ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news









Discussion about this post