No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
  • Advertise With Us
  • Grievances
  • About Us
  • Contact Us
Thursday, July 23, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಚುಂಚಾದ್ರಿ ಕಪ್ | ಆ.11-14 ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿ

kalpa News by kalpa News
August 7, 2025
in ಶಿವಮೊಗ್ಗ
0
ಸೆ.2, 3 ಪದವಿ ಪೂರ್ವ ಕಾಲೇಜುಗಳ ಬಾಲಕರಿಗಾಗಿ ವಾಲಿಬಾಲ್ ಪಂದ್ಯಾವಳಿ
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್‍ವತಿಯಿಂದ ಆ.11 ರಿಂದ 14ರವರೆಗೆ ಶಿವಮೊಗ್ಗದ ನೆಹರೂ ಕ್ರೀಡಾಂಗಣದಲ್ಲಿ ಚುಂಚಾದ್ರಿ ಕಪ್ 23ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದೆ ಎಂದು ಆದಿಚುಂಚನಗಿರಿ ಆಂಗ್ಲ ಶಾಲೆಯ ಪ್ರಾಂಶುಪಾಲೆ ದಿವ್ಯ ಕರಣಂ ತಿಳಿಸಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಕಳೆದ 22ವರ್ಷಗಳಿಂದ ಚುಂಚಾದ್ರಿ ಕಪ್‍ನ್ನು ನಾವು ನಡೆಸುತ್ತಾ ಬಂದಿದ್ದೇವೆ. ಈ ಬಾರಿಯೂ ಕೂಡ ಆ.11ರಿಂದ 14ರ ವರೆಗೆ ನೆಹರೂ ಕ್ರೀಡಾಂಗಣದಲ್ಲಿ ಜಿಲ್ಲಾಮಟ್ಟದ ಆಹ್ವಾನಿತ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಈ ಸ್ಪರ್ಧೆ ಆಯೋಜಿಸಲಾಗಿದೆ. ಈಗಾಗಲೇ ಸುಮಾರು 64ಕ್ಕೂ ಹೆಚ್ಚು ಬಾಲಕ-ಬಾಲಕಿಯರ ತಂಡಗಳು ನೊಂದಾವಣೆ ಮಾಡಿಸಿಕೊಂಡಿವೆ. ಇದಕ್ಕಾಗಿ ವಸತಿ ಸೇರಿದಂತೆ ಎಲ್ಲಾ ರೀತಿಯ ಸಿದ್ಧತೆಮಾಡಿಕೊಳ್ಳಲಾಗಿದೆ ಎಂದರು.
79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಹಾಗೂ 23ನೇ ವರ್ಷದ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾವಳಿಯನ್ನು ಆಯೋಜಿಸಲಾಗಿದ್ದು, ಆ.14ರ ಸಂಜೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಈ ಕ್ರೀಡಾಕೂಟದ ದಿವ್ಯ ಸಾನ್ನಿಧ್ಯವನ್ನು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ವಾಮೀಜಿಯವರು ಸಾನಿಧ್ಯ ವಹಿಸಲಿದ್ದು, ಶ್ರೀ ಆದಿ ಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರು ದಿವ್ಯ ಉಪಸ್ಥಿತಿ ವಹಿಸುವರು ಎಂದರು.

ಈ ಪಂದ್ಯಾವಳಿಯಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಬಾಲಕ, ಬಾಲಕಿಯರಿಗೆ “ಬೆಸ್ಟ್ ಅಟ್ಯಾಕರ್, ಬೆಸ್ಟ್ ಬೂಸ್ಟರ್, ಬೆಸ್ಟ್ ಆಲ್ ರೌಂಡರ್, ಬೆಸ್ಟ್ ಲೀಬ್ರೋ” ಸೆಂಟರ್ ಬ್ಲಾಕರ್ ಈ ಪ್ರಶಸ್ತಿಗಳನ್ನು ನೀಡಿ ಕ್ರೀಡಾ ಪಟುಗಳನ್ನು ಹುರಿದುಂಬಿಸಲಾಗುತ್ತಿದೆ, ವಿಜೇತ ತಂಡಗಳಿಗೆ ಆಕರ್ಷಕ ಪಾರಿತೋಷಕದೊಂದಿಗೆ ವೈಯಕ್ತಿಕ ಬಹುಮಾನಗಳನ್ನು ನೀಡಲಾಗುತ್ತಿದೆ. ಈ ಬಾರಿ ಬಾಲಕಿಯರ ವಿಭಾಗದಲ್ಲಿ 32ಕ್ಕಿಂತ ಹೆಚ್ಚು ತಂಡಗಳು ಭಾಗವಹಿಸುತ್ತಿರುವುದರಿಂದ ಈ ಬಾರಿಯೂ ತೃತೀಯ ಮತ್ತು ನಾಲ್ಕನೇ ಸ್ಥಾನ ಪಡೆದ ಬಾಲಕಿಯರ ತಂಡಕ್ಕೆ ನಗದು ಬಹುಮಾನ ಕೊಡುತ್ತಿ ರುವುದು ಮತ್ತೊಂದು ವಿಶೇಷ ಎಂದರು.
ಈ ಪಂದ್ಯಾವಳಿ ಆರಂಭವಾದಾಗಿನಿಂದ ಪ್ರತಿವರ್ಷವೂ ಶಿವಮೊಗ್ಗ ಜಿಲ್ಲೆಯ 20 ರಿಂದ 25 ವಾಲಿಬಾಲ್ ಕ್ರೀಡಾಪಟುಗಳು ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. ಭಾರತ ತಂಡವನ್ನು ಪ್ರತಿನಿಧಿಸಿ ಶಿವಮೊಗ್ಗ ಜಿಲ್ಲೆಗೆ ಹಾಗೂ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದ ಅವರು, ಈ ವರ್ಷ ನಡೆಯುವ ಪಂದ್ಯಾವಳಿಗಾಗಿ ಈಗಾಗಲೇ ನಾಲ್ಕು ಅಂಕಣಗಳಲ್ಲಿ ಸಿದ್ಧಪಡಿಸಲಾಗಿದೆ. ರಾಷ್ಟ್ರ ಮತ್ತು ರಾಜ್ಯಮಟ್ಟದ ನುರಿತ ವಾಲಿಬಾಲ್ ತೀರ್ಪುಗಾರರು ಆಗಮಿಸಲಿದ್ದಾರೆ ಎಂದರು.

ಶಿವಮೊಗ್ಗ ಜಿಲ್ಲಾ ವಾಲಿಬಾಲ್ ಸಂಸ್ಥೆಯ ಮಹಾಪೆÇೀಷಕರು ಹಾಗೂ ಕ್ರೀಡಾ ಪ್ರೇಮಿಗಳಾದ ಪೂಜ್ಯ ಶ್ರೀ ಪ್ರಸನ್ನನಾಥ ಸ್ವಾಮಿಜಿಯವರು ಪ್ರತಿ ವರ್ಷ ಈ ಪಂದ್ಯಾವಳಿಯನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿದ್ದಾರೆ. ಇವರೊಂದಿಗೆ ಜಿಲ್ಲಾ ವಾಲಿಬಾಲ್ ಸಂಸ್ಥೆಯು ಸಹ ಕೈಜೋಡಿಸಿದೆ ಎಂದರು.

ನಗದು ಬಹುಮಾನ : ಬಾಲಕರ ವಿಭಾಗ : ಪ್ರಥಮ ಸ್ಥಾನ 5000 ರೂ. ದ್ವಿತೀಯ ಸ್ಥಾನ 4000 ರೂ. ತೃತೀಯ ಸ್ಥಾನ 3000 ರೂ. ಮತ್ತು ನಾಲ್ಕನೇ ಸ್ಥಾನ 2000 ರೂ. ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು.
ಬಾಲಕಿಯರ ವಿಭಾಗ : ಪ್ರಥಮ ಸ್ಥಾನ ಪಡೆದ ತಂಡಕ್ಕೆ 5000 ರೂ. ಮತ್ತು ದ್ವಿತೀಯ ಸ್ಥಾನ ಪಡೆದ ತಂಡಕ್ಕೆ 4000 ರೂ. ತೃತೀಯ ಸ್ಥಾನ 3000 ರೂ. ಮತ್ತು ನಾಲ್ಕನೇ ಸ್ಥಾನ 2000 ರೂ. ನಗದು ಬಹುಮಾನಗಳನ್ನು ನೀಡಿ ಪ್ರೋತ್ಸಾಹಿಸಲಾಗುವುದು ಎಂದರು.

ಅಥ್ಲೇಟಿಕ್ ಕ್ಲಬ್ಬಿನ ಅಧ್ಯಕ್ಷ ಉದಯ್‍ಕುಮಾರ್ ಮಾತನಾಡಿ, ಇದೇ ಸಂದರ್ಭದಲ್ಲಿ ಬಾಲಕ-ಬಾಲಕಿಯರಿಗಾಗಿ ರಸ್ತೆ ಓಟದ ಸ್ಪರ್ಧೆಯನ್ನು, ಆ.14 ರಂದು ಆಯೋಜಿಸಲಾಗಿದೆ. ನೆಹರೂ ಕ್ರೀಡಾಂಗಣದಿಂದ ಪ್ರಾರಂಭವಾಗುವ ಈ ಓಟದ ಸ್ಪರ್ಧೆ ಬೆಳಗ್ಗೆ 6ಕ್ಕೆ ಆರಂಭವಾಗುತ್ತದೆ. ಶರಾವತಿ ನಗರದ ಬಿಜಿಎಸ್ ವಸತಿ ಶಾಲೆಯ ಆವರಣದಲ್ಲಿ ಕೊನೆಗೊಳ್ಳುತ್ತದೆ. ಪ್ರಾಥಮಿಕ ಶಾಲಾ ಬಾಲಕಿಯರಿಗೆ 2ಕಿ.ಮೀ. ಬಾಲಕರಿಗೆ 3ಕಿ.ಮೀ. ಹಾಗೂ ಪ್ರೌಢಶಾಲಾ ಬಾಲಕರಿಗೆ 5 ಕಿ.ಮೀ. ಸ್ಪರ್ಧೆ ನಡೆಸಲಾಗುವುದು ಎಂದರು.

ಪತ್ರಿಕಾಗೋಷ್ಠಿಯಲ್ಲಿ ವಾಲಿಬಾಲ್ ಸಂಸ್ಥೆಯ ಅಧ್ಯಕ್ಷ ಭಾಸ್ಕರ್ ಜಿ.ಕಾಮತ್, ಸಂಸ್ಥೆಯ ನಿರ್ದೇಶಕ ಕೊಳಿಗೆ ವಾಸಪ್ಪಗೌಡ. ಗುರುಪುರದ ಬಿಜಿಎಸ್ ಕಾಲೇಜಿನ ಪ್ರಾಂಶುಪಾಲ ಸುರೇಶ ಎಸ್.ಹೆಚ್., ಹಿರೇಮಠ್, ಶಿಕ್ಷಕಿ ಸುಜಾತ ಉಪಸ್ಥಿತರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

               

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsNews in KannadaNews KannadaShimogaShivamoggaNewsಮಲೆನಾಡು_ಸುದ್ಧಿಶಿವಮೊಗ್ಗಶಿವಮೊಗ್ಗ_ನ್ಯೂಸ್
Share196Tweet123Send
Aniruddha Vasishta S R

Aniruddha Vasishta S R

Editor-in-Chief

Previous Post

ಗಮನಿಸಿ! ತಾಳಗುಪ್ಪ-ಯಶವಂತಪುರ ವಿಶೇಷ ರೈಲಿನ ಸಮಯದಲ್ಲಿ ಪರಿಷ್ಕರಣೆಯಾಗಿದೆ

Next Post

ಸೆ.1ರಂದು ನೂತನ ದೇವಸ್ಥಾನ ಉದ್ಘಾಟನೆ-ಪ್ರತಿಭಾ ಪುರಸ್ಕಾರ: ಮಾಜಿ ಶಾಸಕ ಅಶೋಕ್‍ನಾಯ್ಕ

kalpa News

kalpa News

Next Post
ಶಿವಮೊಗ್ಗ ಗ್ರಾಮಾಂತರ ಶಾಸಕ ಕೆ.ಬಿ. ಅಶೋಕ್ ನಾಯ್ಕ್‌ ಅವರಿಗೆ ಕೊರೋನಾ ಪಾಸಿಟಿವ್

ಸೆ.1ರಂದು ನೂತನ ದೇವಸ್ಥಾನ ಉದ್ಘಾಟನೆ-ಪ್ರತಿಭಾ ಪುರಸ್ಕಾರ: ಮಾಜಿ ಶಾಸಕ ಅಶೋಕ್‍ನಾಯ್ಕ

Leave a Reply Cancel reply

Your email address will not be published. Required fields are marked *

No Result
View All Result
Nestlé India Reports Strong Q1 Growth
English Articles

Nestlé India Reports Strong Q1 Growth; Sales Up 25.4%, Profit Jumps 47.9%

by kalpa News
July 23, 2026
0

Kalpa Media House  |  New Delhi  | Nestlé India reaffirmed its commitment to sustainability, especially in strengthening its dairy value...

Read moreDetails
Thums Up Brings Back ThunderWheels Campaign

Thums Up Brings Back ThunderWheels Campaign

July 23, 2026
ABD Maestro Launches 3 Premium Whiskies in Hyderabad

ABD Maestro Launches 3 Premium Whiskies in Hyderabad

July 21, 2026
Shivamogga Murder Case Cracked Quickly, Two Arrested

Shivamogga Murder Case Cracked Quickly, Two Arrested

July 21, 2026
RPF Mysuru Division Records Notable Achievements in 2026

RPF Mysuru Division Records Notable Achievements in 2026

July 20, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL