ಕಲ್ಪ ಮೀಡಿಯಾ ಹೌಸ್ | ತೀರ್ಥಹಳ್ಳಿ |
ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಸಾವನ್ನು ಅಸ್ತ್ರವಾಗಿ ಹಿಡಿದು ಒಂದಿಷ್ಟು ಮಂದಿ ದುಡ್ಡು ಮಾಡುವ ದಂಧೆ ಮಾಡುತ್ತಿದ್ದಾರೆ. ಅವರಿಗೆ ಧರ್ಮಸ್ಥಳದ ಮಂಜುನಾಥ ದೇವರು ಶಿಕ್ಷೆ ಕೊಡದೆ ಇದ್ದರೂ, ಅಣ್ಣಪ್ಪ ಶಿಕ್ಷೆ ಕೊಟ್ಟೇ ಕೊಡುತ್ತಾನೆ ಎಂದು ವಸಂತ್ ಗಿಳಿಯಾರ್ ಹೇಳಿದರು.
ಇಂದು ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಧರ್ಮಸ್ಥಳದ ವಿರುದ್ಧ ಅಪಪ್ರಚಾರ ನಡೆಸುತ್ತಿರುವವರ ವಿರುದ್ಧ ಬೃಹತ್ ಪ್ರತಿಭಟನೆಯಲ್ಲಿ ಅವರು ಮಾತನಾಡಿ ಶಬರಿಮಲೆ, ತಿರುಪತಿ ದೇವಸ್ಥಾನದ ಮೇಲೆ ಆರೋಪ ಮಾಡಿ. ಈಗ ಧರ್ಮಸ್ಥಳದ ಮೇಲೆ ಏಡಪಂಥೀಯರು ಆರೋಪ ಮಾಡುತ್ತಿದ್ದಾರೆ. ಇದು ಎಲ್ಲಾ ಪಕ್ಷದ ಒಳಗಿರುವ ಒಂದಿಷ್ಟು ಮಂದಿ ನಕ್ಸಲ್ ಧೋಹಾಗೆ ಹೊಂದಿರುವವರು ಮಾಡುತ್ತಿದ್ದಾರೆ ಎಂದರು.
1974 ಭೂಸುಧಾರಣೆ ಕಾಯ್ದೆ ಬಂದ ಸಂದರ್ಭದಲ್ಲಿ ಸುಮಾರು 4072 ಎಕರೆ ಜಾಗ ಧರ್ಮಸ್ಥಳದ ಶ್ರೀ ಮಂಜುನಾಥನ ಹೆಸರಿನಲ್ಲಿತ್ತು. ಅಲ್ಲಿ ಸುಮಾರು 40 ಕುಟುಂಬಗಳು ದೇವರ ಹೆಸರಿನಲ್ಲಿದ್ದ ಜಾಗಕ್ಕೆ ಅರ್ಜಿಯನ್ನು ಸಲ್ಲಿಸಲು ಮುಂದಾಗಿರುವುದಿಲ್ಲ ಇಂತಹ ಸಮಯದಲ್ಲಿ ಸ್ವತಃ ವೀರೇಂದ್ರ ಹೆಗ್ಗಡೆಯವರು ಅವರನ್ನು ಮನವೊಲಿಸಿ ಅರ್ಜಿಯನ್ನು ಹಾಕಿಸಿ 3800 ಎಕರೆ ಬಡಜನರಿಗೆ ಬಿಟ್ಟುಕೊಟ್ಟಿದ್ದಾರೆ. ಅಂತವರ ವಿರುದ್ಧ ಅಪಪ್ರಚಾರ ಸಲ್ಲಿಸುತ್ತಿದ್ದಾರೆ ಎಂದು ಹೇಳಿದರು.

ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಾತನಾಡಿ ಸ್ವಾತಂತ್ರ್ಯ ಪೂರ್ವದಲ್ಲಿ ಘಜನಿ ಮಹಮ್ಮದ್, ಘೋರಿ ಮಹಮ್ಮದ್ ರವರು ನಮ್ಮ ದೇಶದ ದೇವಸ್ಥಾನಗಳ ಮೇಲೆ ದಾಳಿ ಮಾಡಿ ನಾಶ ಮಾಡಿದ್ದರು. ಹೀಗೆ ಏಡಪಂಥೀಯ ಒಂದಿಷ್ಟು ಘಜನಿ ರೂಪದವರು ಧರ್ಮಸ್ಥಳದ ಮೇಲೆ ಅಪಪ್ರಚಾರ ಮಾಡುತ್ತಿದ್ದಾರೆ ಎಂದರು.
ಯಾವುದೇ ಸರ್ಕಾರ ಮಾಡಲು ಸಾಧ್ಯವಿಲ್ಲದ ಕೆಲಸವನ್ನು ಹೆಗಡೆಯವರು ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಗಳ ಮೂಲಕ ಮಾಡಿದ್ದಾರೆ. ಮದ್ಯವರ್ತಿ ಶಿಬಿರಗಳನ್ನು ಮಾಡಿ ಸಾವಿರಾರು ಕುಟುಂಬಗಳಿಗೆ ಬೆಳಕಾಗಿದ್ದಾರೆ. ಅಂತವರ ಮುಖಕ್ಕೆ ಮಸಿ ಬಳಿಯಲು ಹೊರಟ್ಟಿದ್ದಾರೆ. ಅದು ಸಾಧ್ಯವಿಲ್ಲ. ಏಡಪಂಥೀಯರಿಗೆ ಕ್ರೈಸ್ತ, ಮುಸ್ಲಿಂ ಧರ್ಮದ ಬಗ್ಗೆ ಮಾತನಾಡಿ ಬಂಡಿಸುವ ಧೈರ್ಯವಿಲ್ಲ. ಹಿಂದೂ ಧರ್ಮದವರು ದುರ್ಬಲರು ಎಂದು ಭಾವಿಸಿದ್ದಾರೆ. ಹಿಂದೂ ಧರ್ಮಕ್ಕೆ ಧಕ್ಕೆಯಾದರೆ ಹಿಂದೂ ಜನರು ಸೆಡ್ಡುಹೊಡೆದು ನಿಲ್ಲುತ್ತಾರೆ ಎಂದರು.
ಬೃಹತ್ ಪ್ರತಿಭಟನೆಯಲ್ಲಿ ತಾಲ್ಲೂಕು ಬಿಜೆಪಿಯ ಅಧ್ಯಕ್ಷರಾದ ನವೀನ್ ಹೆದ್ದೂರು, ಸೊಪ್ಪುಗುಡ್ಡೆ ರಾಘವೇಂದ್ರ, ಗೀತಾ ರಮೇಶ್ ಮುಂತಾದವರಿದ್ದರು.
ಧರ್ಮಸ್ಥಳದಲ್ಲಿ #Dharmasthala ಶವಗಳನ್ನು ಹೂತ್ತಿಟ್ಟಿದ್ದಾರೆ ಎಂಬ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಶ್ರೀಕ್ಷೇತ್ರದ ವಿರುದ್ಧ ಅಪಪ್ರಚಾರ ಮಾಡುತ್ತಿರುವವರ ಹಾಗೂ ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ತೀರ್ಥಹಳ್ಳಿ ಜನತೆ ಸಿಡಿದೆದ್ದಿದ್ದು, ಪಟ್ಟಣದಲ್ಲಿ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.
ತೀರ್ಥಹಳ್ಳಿಯ ಎಪಿಎಂಸಿ ಯಾರ್ಡ್’ನಿಂದ ತಾಲೂಕು ಕಚೇರಿವರೆಗೆ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಗುತ್ತಿದ್ದು, ತಾಲೂಕಿನ ಸಾವಿರಾರು ಭಕ್ತರು ಪಾಲ್ಗೊಂಡರು.
ಧರ್ಮಸ್ಥಳ ಭಕ್ತಾಧಿಗಳ ವೇದಿಕೆ ವತಿಯಿಂದ ನಡೆಯುತ್ತಿರುವ ಪ್ರತಿಭಟನೆಯಲ್ಲಿ ಪಾಲ್ಗೊಂಡ ಭಕ್ತರು ಶ್ರೀಕ್ಷೇತ್ರದ ವಿರುದ್ಧ ಷಡ್ಯಂತ್ರ ಮಾಡುತ್ತಿರುವವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news








Discussion about this post