Thursday, December 4, 2025
  • Advertise With Us
  • Grievances
  • About Us
  • Contact Us
kalpa.news
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು
No Result
View All Result
kalpa.news
No Result
View All Result
Home ಜಿಲ್ಲೆ ಶಿವಮೊಗ್ಗ

ದಸರಾ ಅಮೂಲ್ಯ ಪ್ರತಿಭೆಗಳು ಹೊರಹೊಮ್ಮಲು ಸಹಕಾರಿ: ಎಸ್‌ಪಿ ಮಿಥುನ್ ಕುಮಾರ್

ಕಲಾ ದಸರಾ ಛಾಯಾಚಿತ್ರ ಪ್ರದರ್ಶನ, ಚಿತ್ರಕಲಾ ಪ್ರದರ್ಶನ ಮತ್ತು ಗೊಂಬೆ ಪ್ರದರ್ಶನಕ್ಕೆ ಚಾಲನೆ

September 25, 2025
in ಶಿವಮೊಗ್ಗ
0 0
0
Share on facebookShare on TwitterWhatsapp
Read - 3 minutes

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಮೈಸೂರು ದಸರಾ #Mysore Dasara ಬಿಟ್ಟರೆ ಶಿವಮೊಗ್ಗ ದಸರಾ #Shivamogga Dasara ಎರಡನೇ ವೈವಿಧ್ಯಮಯ ಅತಿ ದೊಡ್ಡ ದಸರಾವಾಗಿದ್ದು, ಈ ದಸರಾದಲ್ಲಿ ಅಮೂಲ್ಯ ಪ್ರತಿಭೆಗಳು ಮತ್ತು ಕಲಾವಿದರುಗಳಿಗೆ ಸನ್ಮಾನಿಸುತ್ತಿರುವುದು ಮತ್ತು ಅವರ ಪ್ರತಿಭೆ ಹೊರಹೊಮ್ಮಲು ವೇದಿಕೆ ಕಲ್ಪಿಸುತ್ತಿರುವುದು ವಿಶೇಷ ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ #SPMithun Kumar ಹೇಳಿದ್ದಾರೆ.

ಅವರು ಇಂದು ನಗರದ ಶಿವಪ್ಪನಾಯಕ ಅರಮನೆಯಲ್ಲಿ ಪಾಲಿಕೆ ವತಿಯಿಂದ ಹಮ್ಮಿಕೊಂಡಿದ್ದ ಕಲಾ ದಸರಾ ಛಾಯಾಚಿತ್ರ ಪ್ರದರ್ಶನ, ಚಿತ್ರಕಲಾ ಪ್ರದರ್ಶನ ಮತ್ತು ಗೊಂಬೆ ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ನಾನು 4 ವರ್ಷಗಳ ಹಿಂದೆ ದಸರಾದ ಮೊದಲ ದಿನವೇ ಇಲ್ಲಿಗೆ ಕರ್ತವ್ಯಕ್ಕೆ ಹಾಜರಾಗಿದ್ದೆ. ಅವತ್ತಿನಿಂದ ಪ್ರತಿವರ್ಷವೂ ದಸರಾ ವಿಜೃಂಭಣೆಯಿಂದ ನಡೆಯುತ್ತಿದೆ. ಇನ್ನಷ್ಟು ಕಲಾವಿದರಿಗೆ ಈ ವೇದಿಕೆಯಿಂದ ಪ್ರೋತ್ಸಾಹ ಸಿಗಲಿ ಎಂದು ಅವರು ಹಾರೈಸಿದರು.

ಜಿಲ್ಲಾಧಿಕಾರಿ ಗುರುದತ್ ಹೆಗಡೆ ಮಾತನಾಡಿ, ಶಿವಮೊಗ್ಗದಲ್ಲಿ ಅರ್ಥಪೂರ್ಣ ದಸರಾ ಆಚರಿಸಲಾಗುತ್ತಿದೆ. ಇದು ಸಾಂಸ್ಕೃತಿಕ ನಗರಿಯಾಗಿದ್ದು, ಶಿವಮೊಗ್ಗ ಜಿಲ್ಲೆಯನ್ನು ಪ್ರವಾಸಿ ಕೇಂದ್ರ ಮಾಡುವ ದೃಷ್ಟಿಯಿಂದ ಜಿಲ್ಲಾ ಟೂರಿಸಂ ಕೌನ್ಸಿಲ್ ನಿಂದ ಸೆ. 27ರಂದು ಕುವೆಂಪು ರಂಗಮಂದಿರದಲ್ಲಿ ಟೂರಿಸಂ ಡೇ ಎಂದು ಆಚರಿಸಲಾಗುತ್ತಿದ್ದು, ಜಿಲ್ಲೆಯ ಪ್ರತಿಭಾನ್ವಿತ ಛಾಯಾಗ್ರಾಹಕರಿಂದ ಛಾಯಾಚಿತ್ರ ಪ್ರದರ್ಶನ ಮತ್ತು ಈ ಕುರಿತು ಏರ್ಪಡಿಸಿದ ವಿವಿಧ ಪ್ರವಾಸಿ ತಾಣಗಳ ಛಾಯಾ ಚಿತ್ರಗಳನ್ನು ಕೂಡ ಪ್ರದರ್ಶಿಸಲಾಗುವುದು. ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ವಿನಂತಿಸಿದರು.
ಚಿತ್ರಕಲಾ ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಎಸ್. ದೀಪು ಮಾತನಾಡಿ, ಶಿವಮೊಗ್ಗದಲ್ಲಿ ಅನೇಕ ಕಲಾವಿದರಿದ್ದು, ನಮಗೊಂದು ಆರ್ಟ್ ಗ್ಯಾಲರಿಗೆ ಶಾಶ್ವತ ವ್ಯವಸ್ಥೆ ಮಾಡಿಕೊಡಬೇಕು ಎಂದು ವಿನಂತಿಸಿದರು.

ಶಾಸಕ ಎಸ್.ಎನ್. ಚನ್ನಬಸಪ್ಪ ಮಾತನಾಡಿ, ಪ್ರತಿ ಬಾರಿ ಕಲಾ ದಸರಾ ಉದ್ಘಾಟನೆಯ ಸಂದರ್ಭದಲ್ಲಿ ಕಲಾವಿದರು ಶಾಶ್ವತ ನೆಲೆ ಬಗ್ಗೆ ಬೇಡಿಕೆ ಇಡುತ್ತಾರೆ. ಈ ವೇದಿಕೆಯಲ್ಲಿ ಜಿಲ್ಲಾಧಿಕಾರಿಗಳು ಇದ್ದಾರೆ. ಅವರೂ ಕೂಡ ಆರ್ಟ್ ಗ್ಯಾಲರಿ ನಿರ್ಮಾಣಕ್ಕೆ ಸಹಕಾರ ನೀಡಲು ಒಪ್ಪಿದ್ದಾರೆ. ಸಂಘದ ವತಿಯಿಂದ ಪ್ರಯತ್ನ ಮುಂದುವರೆಸಬೇಕು. ನಮ್ಮ ಸಹಕಾರವಿದೆ ಎಂದರು.
ಅನೇಕ ಸಮಸ್ಯೆಗೆ ಪರಿಹಾರ ಹುಡುಕುವ ಜಿಲ್ಲಾಧಿಕಾರಿಗಳು ನಮಗೆ ಸಿಕ್ಕಿದ್ದಾರೆ. ಆರ್ಟ್ ಗ್ಯಾಲರಿ ಆಗಲೇಬೇಕು. ಅದನ್ನು ಮಾಡೋಣ. ಈ ಬಾರಿ ಕಲಾ ದಸರಾದಲ್ಲಿ ಗೊಂಬೆಗಳನ್ನು ಜೋಡಿಸಿಕೊಂಡಿದ್ದೇವೆ. ಹಿಂದೆ ಮೂರು ದಿನ ದಸರಾ ಮಾಡುತ್ತಿದ್ದೆವು. ಈಗ ಕಳೆದ ಕೆಲವು ವರ್ಷಗಳಿಂದ 14 ಸಮಿತಿ ರಚನೆಯಾಗಿದೆ. ಕ್ರಿಯಾಶೀಲರಾಗಿ ದಸರಾ ಕೆಲಸವನ್ನು ತಮ್ಮ ಮನೆಯ ಹಬ್ಬದಂತೆ ಆಚರಿಸುತ್ತಿದ್ದಾರೆ. ಈ ಹಬ್ಬವನ್ನು ಉಳಿಸಿ ಬೆಳೆಸಿಕೊಂಡು ಹೋಗುವ ಕೆಲಸ ನಾವೆಲ್ಲರೂ ಮಾಡಬೇಕು. ಹಿಂದೆ. ರಾಜ ಮಹಾರಾಜರು ಈ ಕಾರ್ಯ ಮಾಡುತ್ತಿದ್ದರು. ಈ ಬಾರಿ ಸರ್ಕಾರ ಈಗಾಗಲೇ 50 ಲಕ್ಷ ರೂ. ಅನುದಾನವನ್ನು ಕ್ಲಿಯರೆನ್ಸ್ ಮಾಡಿದೆ. ಇನ್ನು ಎರಡು ಕೋಟಿ ಹಣವನ್ನು ಜೋಡಿಸಬೇಕಾಗಿದೆ ಎಂದರು.

ವೇದಿಕೆಯಲ್ಲಿ ಶೇಖರ್ ಗೌಳೇರ್, ಅಬ್ದುಲ್ ಮುಜೀಬ್, ಪ್ರಭು, ರಾಧಿಕಾ ಜಗದೀಶ್, ಮುರಳೀಧರ್, ಆಯುಕ್ತ ಮಾಯಣ್ಣಗೌಡ, ಉಪ ಆಯುಕ್ತ ತುಷಾರ್ ಹೊಸೂರ್, ಕಲಾ ದಸರಾ ತಂಡದ ಕಾರ್ಯದರ್ಶಿ ವಸಂತಕುಮಾರಿ ಇದ್ದರು.

ವಿವಿಧ ಕಲಾವಿದರಿಂದ ಗೊಂಚೆ ಪ್ರದರ್ಶನ ಮತ್ತು ಛಾಯಾಚಿತ್ರ ಪ್ರದರ್ಶನ ಆಕರ್ಷಣೀಯವಾಗಿದ್ದು, ಜಿಲ್ಲಾಧಿಕಾರಿಗಳು ಕುಂಚದಿAದ ಚಿತ್ರ ಬಿಡಿಸುವುದರ ಮೂಲಕ ಈ ಪ್ರದರ್ಶನಕ್ಕೆ ಚಾಲನೆ ನೀಡಿದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2025/09/Vedic-Maths-New.mp4
http://kalpa.news/wp-content/uploads/2024/04/VID-20240426-WA0008.mp4

Tags: Kannada NewsKannada News LiveKannada News Online ShivamoggaKannada WebsiteKannadaNewsWebsiteLatestNewsKannadaLocalNewsMalnadNewsmysore dasaraNews in KannadaNews KannadaShimogaShivamogga DasaraShivamoggaNewsSPMithun Kumarಜಿಲ್ಲಾ ಪೊಲೀಸ್ ಅಧೀಕ್ಷಕ ಮಿಥುನ್ ಕುಮಾರ್ಮಲೆನಾಡು_ಸುದ್ಧಿಮೈಸೂರು ದಸರಾಶಿವಮೊಗ್ಗಶಿವಮೊಗ್ಗ ದಸರಾಶಿವಮೊಗ್ಗ_ನ್ಯೂಸ್
Previous Post

ಶಿವಮೊಗ್ಗದಿಂದ ಹೊಸ ರೈಲು ಮಾರ್ಗಗಳಿಗೆ ಸಂಸದ ರಾಘವೇಂದ್ರ ಪ್ರಯತ್ನ | ಯಾವೆಲ್ಲಾ ನಗರಗಳಿಗೆ?

Next Post

ಹಾಕಿ ಇಂಡಿಯಾ ಲೀಗ್ ಸೀಸನ್ 2: SG ಪೈಪರ್ಸ್ ತಂಡಕ್ಕೆ 8 ಹೊಸ ಮಹಿಳಾ ಆಟಗಾರರ ಸೇರ್ಪಡೆ!

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post

ಹಾಕಿ ಇಂಡಿಯಾ ಲೀಗ್ ಸೀಸನ್ 2: SG ಪೈಪರ್ಸ್ ತಂಡಕ್ಕೆ 8 ಹೊಸ ಮಹಿಳಾ ಆಟಗಾರರ ಸೇರ್ಪಡೆ!

Discussion about this post

ಆಡಿಯನ್ಸ್ ಪೋಲ್

ಹಿಜಾಬ್ ವಿವಾದ/ಗಲಭೆ ಮತಾಂಧ ಶಕ್ತಿಗಳ ಷಡ್ಯಂತ್ರವೇ?

View Results

Loading ... Loading ...
https://kalahamsa.in/services/ https://kalahamsa.in/services/ https://kalahamsa.in/services/

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025

ಮೇವು ಕೊರತೆ ಪರಿಹಾರಕ್ಕೆ ರಸಮೇವು | ಕೃಷಿ ವಿದ್ಯಾರ್ಥಿಗಳಿಂದ ಪ್ರಾತ್ಯಕ್ಷಿತೆ

December 4, 2025
kalpa.news

Reproduction, in whole or in part, in any form or medium without the express written permission of Kapla News is strictly prohibited.

Follow Us

Browse by Category

  • Army
  • Counter
  • Editorial
  • English Articles
  • Others
  • Photo Gallery
  • Small Bytes
  • Special Articles
  • video
  • ಅಂಕಣ
  • ಅಜೇಯ್ ಕಿರಣ್ ಆಚಾರ್
  • ಅಂತಾರಾಷ್ಟ್ರೀಯ
  • ಅಧ್ಯಾತ್ಮ ಸಾಧನೆ
  • ಆನಂದ ಕಂದ
  • ಆರೋಗ್ಯ – ಜೀವನ ಶೈಲಿ
  • ಇದೊಂದು ಜಗತ್ತು
  • ಉಡುಪಿ
  • ಉತ್ತರ ಕನ್ನಡ
  • ಕಲಬುರಗಿ
  • ಕಾನೂನು ಕಲ್ಪ
  • ಕೈ ರುಚಿ
  • ಕೊಡಗು
  • ಕೊಪ್ಪಳ
  • ಕೋಲಾರ
  • ಕ್ರೀಡೆ
  • ಗದಗ
  • ಚಾಮರಾಜನಗರ
  • ಚಿಕ್ಕ ಬಳ್ಳಾಪುರ
  • ಚಿಕ್ಕಮಗಳೂರು
  • ಚಿತ್ರದುರ್ಗ
  • ಜಾಬ್-ಸ್ಟ್ರೀಟ್
  • ಜಿಲ್ಲೆ
  • ಜ್ಯೋತಿರ್ವಿಜ್ಞಾನ
  • ಡಾ.ಗುರುರಾಜ ಪೋಶೆಟ್ಟಿಹಳ್ಳಿ
  • ತೀರ್ಥಹಳ್ಳಿ
  • ತುಮಕೂರು
  • ದಕ್ಷ
  • ದಕ್ಷಿಣ ಕನ್ನಡ
  • ದಾವಣಗೆರೆ
  • ಧಾರವಾಡ
  • ನಾದ ಕಲ್ಪ
  • ನಿತ್ಯಾನಂದ ವಿವೇಕವಂಶಿ
  • ಪೀಪಲ್ ರಿಪೋರ್ಟಿಂಗ್
  • ಪುನೀತ್ ಜಿ. ಕೂಡ್ಲೂರು
  • ಪುರಾಣ ಮತ್ತು ಚರಿತ್ರೆ
  • ಪ್ರಕಾಶ್ ಅಮ್ಮಣ್ಣಾಯ
  • ಬಳ್ಳಾರಿ
  • ಬಾಗಲಕೋಟೆ
  • ಬೀದರ್
  • ಬೆಂ. ಗ್ರಾಮಾಂತರ
  • ಬೆಂಗಳೂರು ನಗರ
  • ಬೆಳಗಾವಿ
  • ಭದ್ರಾವತಿ
  • ಮಂಡ್ಯ
  • ಮೈಸೂರು
  • ಯಾದಗಿರಿ
  • ರಾಜಕೀಯ
  • ರಾಮನಗರ
  • ರಾಯಚೂರು
  • ರಾಷ್ಟ್ರೀಯ
  • ಲೈಫ್-ಸ್ಟೈಲ್
  • ವಾಣಿಜ್ಯ
  • ವಿಜಾಪುರ
  • ವಿಜ್ಞಾನ-ತಂತ್ರಜ್ಞಾನ
  • ವಿನಯ್ ಶಿವಮೊಗ್ಗ
  • ವೈದ್ಯೋ ನಾರಾಯಣೋ ಹರಿಃ
  • ವೈಶಿಷ್ಟ್ಯ
  • ಶಿಕಾರಿಪುರ
  • ಶಿವಮೊಗ್ಗ
  • ಸಚಿನ್ ಪಾರ್ಶ್ವನಾಥ್
  • ಸಾಗರ
  • ಸಿನೆಮಾ
  • ಸೊರಬ
  • ಹಾವೇರಿ
  • ಹಾಸನ
  • ಹೊಸನಗರ

Recent News

ಸೇಫ್ಟಿ ಅಪ್ಲೀಕೇಷನ್‍ಗಳು ಕಳೆದುಹೋದ ಮೊಬೈಲ್ ಶೋಧಕ್ಕೆ ಸಹಕಾರಿ: ಎಸ್‌ಪಿ ಮಿಥುನ್‌ಕುಮಾರ್

December 4, 2025

ಕನ್ನಡ ಬರೀ ಭಾಷೆ ಅಲ್ಲ ಸಂಸ್ಕೃತಿ: ಶಿವಮೊಗ್ಗ ಜಿಲ್ಲಾ ಕಸಾಪ ಅಧ್ಯಕ್ಷ ಮಂಜುನಾಥ

December 4, 2025

ಮೈಸೂರು ರೈಲ್ವೆ ನಿಲ್ದಾಣದ ವಿಶೇಷತೆಗಳೇನು? ನಿತ್ಯ ಎಷ್ಟು ಮಂದಿ ಸಂಚರಿಸುತ್ತಾರೆ? ಏನೆಲ್ಲಾ ಸೌಲಭ್ಯಗಳಿವೆ?

December 4, 2025
  • About
  • Advertise
  • Privacy & Policy
  • Contact

© 2025 Kalpa News - All Rights Reserved | Powered by Kalahamsa Infotech Pvt. ltd.

No Result
View All Result
  • ಮುಖಪುಟ
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಾಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
  • ಆರೋಗ್ಯ – ಜೀವನ ಶೈಲಿ
    • ವೈದ್ಯೋ ನಾರಾಯಣೋ ಹರಿಃ
  • ವಿಜ್ಞಾನ-ತಂತ್ರಜ್ಞಾನ
  • ಜಾಬ್-ಸ್ಟ್ರೀಟ್
  • ಸರಕಾರಿ ಯೋಜನೆಗಳು

© 2025 Kalpa News - All Rights Reserved | Powered by Kalahamsa Infotech Pvt. ltd.

Welcome Back!

Login to your account below

Forgotten Password?

Create New Account!

Fill the forms below to register

All fields are required. Log In

Retrieve your password

Please enter your username or email address to reset your password.

Log In
error: Content is protected by Kalpa News!!