ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಈ ಬಾರಿಯ ಶ್ರೀ ಭಗವದ್ಗೀತಾ ಅಭಿಯಾನ-ಕರ್ನಾಟಕ 2025ರಲ್ಲಿ #Bhagavathgeetha Abhiyana ರಾಜ್ಯಾದ್ಯಂತ 1,000 ಉಪನ್ಯಾಸಗಳನ್ನು ಏರ್ಪಡಿಸುವ ಗುರಿ ಹೊಂದಲಾಗಿದೆ ಎಂದು ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತೀ ಮಹಾಸ್ವಾಮಿಗಳು #Sonda Swarnavalli Shri ತಿಳಿಸಿದರು.
ಅವರು ಇಂದು ನಗರದ ಶ್ರೀ ಶೃಂಗೇರಿ ಶಂಕರ ಮಠದಲ್ಲಿ ಆಯೋಜಿಸಿದ್ದ ಭಗವದ್ಗೀತಾ ಅಭಿಯಾನದ ಪೂರ್ವಭಾವಿ ಸಭೆಯ ಸಾನ್ನಿಧ್ಯವಹಿಸಿ ಮಾತನಾಡುತ್ತಿದ್ದರು.

ಅ.25 ರಂದು ಶಿವಮೊಗ್ಗದ ಶುಭಮಂಗಳ ಸಮುದಾಯ ಭವನದಲ್ಲಿ ಅಭಿಯಾನದ ಉದ್ಘಾಟನೆ ಆಗುತ್ತಿದ್ದು, ನ.30ರಂದು ಅಲ್ಲಮಪ್ರಭು ಮೈದಾನದಲ್ಲಿ ರಾಜ್ಯಮಟ್ಟದ ಮಹಾಸಮರ್ಪಣೆ ನಡೆಯುತ್ತದೆ ಎಂದ ಅವರು ವಿಶ್ವವಿದ್ಯಾಲಯಗಳಲ್ಲಿ ಭಗವದ್ಗೀತೆ ಮತ್ತು ಅಪರಾಧ ನಿಯಂತ್ರಣ ಕಾಯ್ದೆಗಳ ಕುರಿತ ವಿಚಾರಸಂಕಿರಣ ಹಮ್ಮಿಕೊಳ್ಳಲಾಗುವುದು. ವಿಶ್ವವಿದ್ಯಾಲಯದ ಆಡಳಿತಗಳು ಸಂತೋಷದಿಂದ ಈ ವಿಚಾರಸಂಕಿರಣಗಳನ್ನು ಆಯೋಜಿಸುತ್ತಾರೆ ಎಂದರು.

ಅಭಿಯಾನದ ಗೌರವಾಧ್ಯಕ್ಷ ಕೆ.ಎಸ್.ಈಶ್ವರಪ್ಪ, ಅಧ್ಯಕ್ಷ ಡಿ.ಎಸ್.ಅರುಣ್, ಕಾರ್ಯಾಧ್ಯಕ್ಷ ಅಶೋಕ್ ಜಿ.ಭಟ್, ಪ್ರಧಾನ ಕಾರ್ಯದರ್ಶಿ ಕೆ.ಇ.ಕಾಂತೇಶ್, ಮಾಜಿ ಎಂಎಲ್ಎ ಕೆ.ಬಿ. ಪ್ರಸನ್ನಕುಮಾರ್ ಮೊದಲಾದವರು ಅಭಿಯಾನದ ಯಶಸ್ಸಿಗೆ ಅಮೂಲ್ಯ ಸಲಹೆ ಸೂಚನೆ ನೀಡಿದರು.
ಡಾ.ಬಾಲಕೃಷ್ಣ ಹೆಗಡೆ, ಪಿ.ಪಿ.ಹೆಗಡೆ, ಸಂದೇಶ್ ಉಪಾಧ್ಯ, ಜಿಎಸ್ಬಿ ಸಮಾಜದ ಪ್ರಮುಖರಾದ ಭಾಸ್ಕರ ಕಾಮತ್, ರಮೇಶ್ ಶೆಣೈ, ಅನಂತ ಶಾನಭಾಗ ಮೊದಲಾದವರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news











Discussion about this post