ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ಒಟ್ಟು 90 ತಳಿಗಳಲ್ಲಿ 737 ಪ್ರಯೋಗಗಳು ನಡೆದಿವೆ ಎಂದು ಕುಲಪತಿಗಳಾದ ಡಾ.ಆರ್.ಸಿ. ಜಗದೀಶ್ ಹೇಳಿದ್ದಾರೆ.
ಕೃಷಿ ಮತ್ತು ತೋಟಗಾರಿಕಾ ಮೇಳ -2025ರಲ್ಲಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯದ ವ್ಯಾಪ್ತಿಯಲ್ಲಿ 6 ಜಿಲ್ಲೆ ವಿದ್ಯಾರ್ಥಿಗಳು ಹಾಗೂ ರೈತರು ಬರಲಿದ್ದು, ರೈತರ ಅನುಕೂಲಕ್ಕಾಗಿ ಅನೇಕ ತಳಿಗಳನ್ನು ಬಿಡುಗಡೆ ಮಾಡಲಾಗಿದೆ ಎಂದರು.
13 ತಾಂತ್ರಿಕ ತಳಿಗಳನ್ನು ಬಿಡುಗಡೆ 205 ಸಂಶೋಧನೆಗಳನ್ನು ನಡೆಸಲಾಗಿದ್ದು 90 ತಳಿಗಳಲ್ಲಿ 737 ಪ್ರಯೋಗ ಮಾಡಿದ್ದೇವೆ. ವಿದ್ಯಾರ್ಥಿಗಳಿಗೆ ವಿದೇಶ ಪ್ರಯಾಣದ ಅವಕಾಶ ಮಾಡಿಕೊಡಲಾಗಿದ್ದು, ಪರೋಕ್ಷವಾಗಿ 4 ಲಕ್ಷ ರೈತರನ್ನು ತಲುಪುತ್ತಿದ್ದೇವೆ ಎಂದರು.
ಇರುವಕ್ಕಿಯಲ್ಲಿ ರೂ.255 ಕೋಟಿ ವೆಚ್ಚದಲ್ಲಿ ಕಟ್ಟಡ ನಿರ್ಮಿಸಿದ್ದು, ಇದಕ್ಕೆ ಅಗತ್ಯವಾದ ಪೀಠೋಪಕರಣಕ್ಕೆ ರೂ.10 ಕೋಟಿ ಅನುದಾನದ ಅವಶ್ಯಕತೆ ಇದೆ. 2013 ರಿಂದ ಇಲ್ಲಿಯವರೆಗೆ ವಿಶ್ವವಿದ್ಯಾಯದಲ್ಲಿ ಯಾವುದೇ ಹುದ್ದೆಗಳು ಭರ್ತಿಯಾಗಿಲ್ಲ, ಬೋಧಕ ಹಾಗೂ ಬೋಧಕೇತರ ಹುದ್ದೆಗಳನ್ನು ತುಂಬುವಂತೆ ಮನವಿ ಮಾಡಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news























