ಕಲ್ಪ ಮೀಡಿಯಾ ಹೌಸ್ | ಹಾಸನ |
ತಮ್ಮ ವಿರುದ್ಧ ದಾಖಲಾಗಿರುವ ಮೊದಲ ಅತ್ಯಾಚಾರ ಪ್ರಕರಣದಲ್ಲಿ ರದ್ದುಗೊಳಿಸುವಂತೆ ಮತ್ತು ಮಧ್ಯಂತರ ಜಾಮೀನು ಕೋರಿ ಮಾಜಿ ಸಂಸದ ಪ್ರಜ್ವಲ್ ರೇವಣ್ಣ #PrajwalRevanna ಸಲ್ಲಿಸಿದ್ದ ಅರ್ಜಿ ವಜಾಗೊಂಡಿದೆ.
ಈ ಕುರಿತಂತೆ ತಮ್ಮ ವಿರುದ್ಧ ಹಾಸನ ಜಿಲ್ಲೆಯ ಹೊಳೆನರಸೀಪುರ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಪ್ರಕರಣ ಹಾಗೂ ಶಿಕ್ಷೆಯನ್ನು ರದ್ದುಗೊಳಿಸುವಂತೆ ಹಾಗೂ ಮಧ್ಯಂತರ ಜಾಮೀನು ಕೋರಿ #HighCourt ಹೈಕೋರ್ಟ್’ನಲ್ಲಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಇಂದು ವಜಾಗೊಂಡಿದೆ.
ನ್ಯಾಯಮೂರ್ತಿ ಕೆ.ಎಸ್. ಮುದಗಲ್ ಮತ್ತು ನ್ಯಾಯಮೂರ್ತಿ ಟಿ. ವೆಂಕಟೇಶ್ ನಾಯಕ್ ಅವರ ವಿಭಾಗೀಯ ಪೀಠವು ಜಾಮೀನು ನೀಡಲು ಇದು ಸೂಕ್ತ ಪ್ರಕರಣವಲ್ಲ ಎಂದು ಹೇಳಿದ್ದು, ದಾಖಲೆಯಲ್ಲಿರುವ ವಿಷಯ, ಅಪರಾಧದ ಗುರುತ್ವ ಮತ್ತು ಮೇಲ್ಮನವಿ ಸಲ್ಲಿಸಿದವರ ವಿರುದ್ಧ ಬಾಕಿ ಇರುವ ಇತರ ಪ್ರಕರಣಗಳ ಮೇಲಿನ ಪರಿಣಾಮವನ್ನು ಪರಿಗಣಿಸಿ, ಮೇಲ್ಮನವಿ ಸಲ್ಲಿಸಿದ ವ್ಯಕ್ತಿಯನ್ನು ಜಾಮೀನಿನ ಮೇಲೆ ಬಿಡುಗಡೆ ಮಾಡಿದರೆ, ಶಿಕ್ಷೆ ಮತ್ತು ಜಾಮೀನು ಅಮಾನತುಗೊಳಿಸಲು ಇದು ಸೂಕ್ತ ಪ್ರಕರಣವಲ್ಲ ಎಂದು ಈ ನ್ಯಾಯಾಲಯವು ಪರಿಗಣಿಸಿದೆ ಎಂದು ಹೇಳಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news





















