ಕಲ್ಪ ಮೀಡಿಯಾ ಹೌಸ್ | ಹುಬ್ಬಳ್ಳಿ |
ಹುಬ್ಬಳ್ಳಿ ವಿಭಾಗೀಯ ರೈಲ್ವೆ ಕಚೇರಿಯಲ್ಲಿ #Hubli Railway Divisional Office ಇಂದು ಮಹಾಪರಿನಿರ್ವಾಣ ದಿನದ ಅಂಗವಾಗಿ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ #Dr. B. R. Ambedkar ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಣೆ ಕಾರ್ಯಕ್ರಮವನ್ನು ಗೌರವಪೂರ್ಣವಾಗಿ ಆಯೋಜಿಸಲಾಗಿತ್ತು.
ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಶ್ರೀಮತಿ ಬೇಲಾ ಮೀನಾ ಅವರು ಪುಷ್ಪನಮನ ಸಲ್ಲಿಸಿ ಮಾತನಾಡಿದರು, ಡಾ. ಅಂಬೇಡ್ಕರವರು ದೇಶಕ್ಕೆ ನೀಡಿದ ಕೊಡುಗೆ ಅನನ್ಯ. ಅವರು ಕೇವಲ ಸಂವಿಧಾನ ಶಿಲ್ಪಿ ಮಾತ್ರವಲ್ಲ, ಸಾಮಾಜಿಕ ನ್ಯಾಯ, ಸಮಾನತೆ ಮತ್ತು ಮಾನವೀಯ ಮೌಲ್ಯಗಳ ಪರ ಹೋರಾಡಿದ ಮಹಾನ್ ಚಿಂತಕರು. ಅಂಬೇಡ್ಕರವರ ಜೀವನ ನಮಗೆ ಶ್ರಮ, ಸತ್ಯನಿಷ್ಠೆ ಮತ್ತು ಮಾನವಸೇವೆ ಎಂಬ ಮೌಲ್ಯಗಳನ್ನು ಕಲಿಸುತ್ತದೆ. ನಮ್ಮ ದೈನಂದಿನ ಕೆಲಸದಲ್ಲಿ ಪ್ರಾಮಾಣಿಕತೆ ಮತ್ತು ಶಿಸ್ತನ್ನು ಪಾಲಿಸಿ, ಸಾರ್ವಜನಿಕ ಸೇವೆಯನ್ನು ಅತ್ಯಂತ ಗೌರವಪೂರ್ಣವಾಗಿ ನಿರ್ವಹಿಸಬೇಕು ಎಂದರು.
ಈ ಕಾರ್ಯಕ್ರಮದಲ್ಲಿ ರೈಲ್ವೆಯ ವಿವಿಧ ಸಂಘಟನೆಗಳು, SWR ನೋಂದಾಯಿತ ಯೂನಿಯನ್ಗಳ ಪ್ರತಿನಿಧಿಗಳು, OBC ಮತ್ತು SC/ST ಸಂಘಟನೆಗಳ ಸದಸ್ಯರು, ಕನ್ನಡ ಸಂಘ ಹಾಗೂ ಹುಬ್ಬಳ್ಳಿ ವಿಭಾಗದ ಮಹಿಳಾ ಕಲ್ಯಾಣ ಸಂಘದ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಡಾ. ಅಂಬೇಡ್ಕರವರ ಸಂದೇಶಗಳನ್ನು ಸ್ಮರಿಸಿದರು ಮತ್ತು ರಾಷ್ಟ್ರ ನಿರ್ಮಾಣದಲ್ಲಿ ತಮ್ಮ ಪಾತ್ರವನ್ನು ಮತ್ತಷ್ಟು ಬಲಪಡಿಸುವಲ್ಲಿ ತಮ್ಮ ಬದ್ಧತೆಯನ್ನು ಪುನಃ ದೃಢಪಡಿಸಿದರು.
ಈ ಸಂದರ್ಭದಲ್ಲಿ ವಿವಿಧ ಶಾಖೆಗಳ ಹಿರಿಯ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















