ಕಲ್ಪ ಮೀಡಿಯಾ ಹೌಸ್ | ಚಾಮರಾಜನಗರ |
ವಿಭಾಗದಾದ್ಯಂತ ಮಿಂಚಿನ ಸಂಚಾರ ನಡೆಸುತ್ತಿರುವ ನೈಋತ್ಯ ರೈಲ್ವೆಯ #SouthWesternRailway ಡಿಆರ್’ಎಂ ಮುದಿತ್ ಮಿತ್ತಲ್ ಅವರು ಇಂದು ಹಲವು ರೈಲ್ವೆ ನಿಲ್ದಾಣಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಚಾಮರಾಜನಗರ, ನಂಜನಗೂಡು ಟೌನ್, ಕಡಕೊಳ ಮತ್ತು ಅಶೋಕಪುರಂ ರೈಲು ನಿಲ್ದಾಣಗಳನ್ನು ಪರಿಶೀಲಿಸಿದರು.
ಚಾಮರಾಜನಗರದಲ್ಲಿ, #AmruthBharat ಅಮೃತ ಭಾರತ್ ಸ್ಟೇಶನ್ ಯೋಜನೆಯಡಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಅವರು ಪರಿಶೀಲಿಸಿ, ಪ್ರಯಾಣಿಕರ ಸೌಲಭ್ಯಗಳು, ಮೂಲಸೌಕರ್ಯ ಸುಧಾರಣೆಗಳು ಮತ್ತು ನಿಲ್ದಾಣ ಪುನರ್ವಿಕಾಸಕ್ಕೆ ಸಂಬಂಧಿಸಿದ ಅಂಶಗಳ ಮೇಲೆ ವಿಶೇಷ ಗಮನ ಹರಿಸಿದರು. ಅಲ್ಲದೇ, ನಿಲ್ದಾಣದಲ್ಲಿನ ಉದ್ಯೋಗಿಗಳು ಮತ್ತು ಸಿಬ್ಬಂದಿಗಳೊಂದಿಗೆ ಕೂಡ ಅವರು ಸಂವಾದ ನಡೆಸಿದರು.
ನಂಜನಗೂಡು ಟೌನ್’ನಲ್ಲಿ, ಡಿಆರ್’ಎಂ ಅವರು ಗೂಡ್ಸ್ ಶೆಡ್ ಪರಿಶೀಲಿಸಿ, ಅದರ ಕಾರ್ಯಾಚರಣಾ ದಕ್ಷತೆ ಹಾಗೂ ಭವಿಷ್ಯದ ಸಾಮರ್ಥ್ಯ ವೃದ್ಧಿ ಅಗತ್ಯಗಳನ್ನು ಅವಲೋಕಿಸಿದರು.
ಜೊತೆಯಲ್ಲಿ ಕಡಕೊಳ ರೈಲು ನಿಲ್ದಾಣಕ್ಕೆ ಭೇಟಿ ನೀಡಿ, ಕಂಟೇನರ್ ಲೋಡಿಯಿಂಗ್ ಪಾಯಿಂಟ್ ಕಾರ್ಯಕ್ಷಮತೆಯನ್ನು ಪರಿಶೀಲಿಸಿದರು. ಇಲ್ಲಿ, ಸರಕು ಹಸ್ತಾಂತರ ಸೌಲಭ್ಯಗಳು ಹಾಗೂ ಸರಕು ಸಾಗಣೆ ಕಾರ್ಯಕ್ಷಮತೆ ಮುಂಬರುವ ಅಭಿವೃದ್ಧಿ ಚಟುವಟಿಕೆಗಳನ್ನು ಅವರು ಪರಿಶೀಲಿಸಿದರು.
ಅಶೋಕಪುರಂ ರೈಲು ನಿಲ್ದಾಣದಲ್ಲಿ ಪ್ರಯಾಣಿಕರ ಸೌಲಭ್ಯಗಳು, ಸುರಕ್ಷತಾ ಕ್ರಮಗಳು ಹಾಗೂ ನಿಲ್ದಾಣದ ನಿರ್ವಹಣೆಯನ್ನೂ ಪರಿಶೀಲಿಸಿದರು.
ಈ ಸಂದರ್ಭದಲ್ಲಿ, ಗತಿ ಶಕ್ತಿ ಸಿಪಿಎಂ ಆನಂದ್ ಭಾರತಿ ಮತ್ತು ವಿವಿಧ ವಿಭಾಗದ ಹಿರಿಯ ಅಧಿಕಾರಿಗಳು ಅವರೊಂದಿಗೆ ಇದ್ದರು. ಮೈಸೂರು ವಿಭಾಗವು ತನ್ನ ಜಾಲದಲ್ಲಿ ಸೌಕರ್ಯ ವೃದ್ಧಿ, ಸುಧಾರಿತ ಸೌಲಭ್ಯಗಳು ಮತ್ತು ಕಾರ್ಯಾಚರಣಾ ದಕ್ಷತೆಯನ್ನು ಮುಂದುವರೆಸುತ್ತಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















