ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಆಯನೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ಮೂರನೇ ತ್ರೈಮಾಸಿಕ ನಿರ್ವಹಣೆ ಕಾರ್ಯ ಹಾಗೂ ತುರ್ತು ಕಾಮಗಾರಿಯನ್ನು ನಿರ್ವಹಿಸುವುದರಿಂದ ಡಿ.17ರಂದು ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಆಯನೂರು ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಹಳ್ಳಿಗಳಾದ ಆಯನೂರು. ಮಂಡಘಟ್ಟ ಸಿರಿಗೆರೆ. ಸೂಡೂರು. ಕೂಡಿ. ಮಲೆಶಂಕರ, ದೊಡ್ಡಮತ್ತಲಿ, ತಮ್ಮಡಿಹಳ್ಳಿ, ಮೈಸವಳ್ಳಿ, ಸೇವಾಲಾಲ್ ನಗರ, ವೀರಣ್ಣನಬೆನವಳ್ಳಿ, ಚನ್ನಹಳ್ಳಿ, ಇಟ್ಟಿಗೇಹಳ್ಳಿ ಹಾಗೂ ಇನ್ನಿತರೆ ಸುತ್ತಮುತ್ತ ಗ್ರಾಮಗಳ ವ್ಯಾಪ್ತಿಯಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಶಿವಮೊಗ್ಗ ನಗರ ಉಪವಿಭಾಗ-1, ಘಟಕ-2ರ ವ್ಯಾಪ್ತಿಯ ರವೀಂದ್ರ ನಗರದಲ್ಲಿ ಓವರ್ ಹೆಡ್ ವಿದ್ಯುತ್ ಕಂಬಗಳನ್ನು ತೆರವುಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಡಿ.17 ರಂದು ಬೆಳಗ್ಗೆ 10 ರಿಂದ 6ರವರೆಗೆ ರವೀಂದ್ರನಗರದಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 


















