ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಡಾ. ಅಶೋಕ್ ಪೈ ಅವರ ಜೀವನ ಹಾಗೂ ಸಾಧನೆ ವಿದ್ಯಾರ್ಥಿಗಳಿಗೆ ಆದರ್ಶವಾಗಲಿ ಎಂದು ಕಟೀಲ್ ಅಶೋಕ ಪೈ ಸ್ಮಾರಕ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಡಾ.ರಾಜೇಂದ್ರ ಚೆನ್ನಿ ಅಭಿಪ್ರಾಯಪಟ್ಟರು.
ಕಟೀಲ್ ಅಶೋಕ್ ಪೈ ಸ್ಮಾರಕ ನರ್ಸಿಂಗ್ ಕಾಲೇಜು #KateelAshokPaiCollege ಮತ್ತು ಮಾನಸ ವೃತ್ತಿಪರ ತರಬೇತಿ ಕೇಂದ್ರ ಇವರ ಆಶ್ರಯದಲ್ಲಿ ಬಿಎಸ್ಸಿ ನರ್ಸಿಂಗ್ ಹಾಗೂ ಎನ್ಸಿಆರ್ಟಿ ಕೋರ್ಸ್’ಗಳ 2025 ರಲ್ಲಿ ಪ್ರವೇಶಾತಿ ಪಡೆದ ನೂತನ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಪ್ರೇರಣಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಅಶೋಕ್ ಪೈ ಅವರ ಸಾಧನೆ, ವ್ಯಕ್ತಿತ್ವ ಅವರ ಕೊಡುಗೆಗಳ ಬಗ್ಗೆ ವಿದ್ಯಾರ್ಥಿಗಳು ಅರಿಯಬೇಕು. ಅಲ್ಲದೇ ಮಕ್ಕಳಿಗೆ ಶಿಕ್ಷಣದ ಗುರಿಯ ಜೊತೆಗೆ ಅಶೋಕ್ ಪೈ #AshokPai ಅವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವಂತೆ ತಿಳಿಸಿದರು.
ಡಾ.ಅರ್ಚನಾ ಭಟ್ ಅವರು ಮಾತನಾಡಿ, ನರ್ಸಿಂಗ್ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಮುಗಿಸಿದ ನಂತರ ಅವರ ವೃತ್ತಿಯು ಮಾನವೀಯ ಮೌಲ್ಯಧಾರಿತವಾಗಿರುತ್ತದೆ ಎಂದು ಶ್ಲಾಘಿಸಿದರು.
ಜೊತೆಯಲ್ಲಿ ರೋಗಿಗಳ ಕುಟುಂಬದವರಿಗೆ ಮತ್ತು ರೋಗಿಗಳ ಮರುಜೀವನಕ್ಕೆ ಆಸರೆಯಾಗುತ್ತಾರೆ ಎಂದು ಪ್ರೇರಣೆ ನೀಡಿದರು.
ಹೊಸ ವಿದ್ಯಾರ್ಥಿಗಳನ್ನು ಆತ್ಮೀಯವಾಗಿ ಸ್ವಾಗತಿಸಿ ಅವರಿಗೆ ಶೈಕ್ಷಣಿಕ ವಾತಾವರಣದೊಂದಿಗೆ ಹೊಂದಿಕೊಳ್ಳಲು ಸಹಾಯ ಮಾಡುವುದು ಈ ಕಾರ್ಯಕ್ರಮದ ಉದ್ದೇಶವಾಗಿತ್ತು.
ಈ ವಿಶೇಷ ಸಂದರ್ಭದಲ್ಲಿ ಕಾಲೇಜಿನ ಸ್ಥಾಪಕ ದಿವಂಗತ ಡಾ. ಅಶೋಕ್ ಪೈ ಅವರ ಜನ್ಮದಿನವನ್ನು ಭಕ್ತಿಪೂರ್ವಕವಾಗಿ ಆಚರಿಸಲಾಯಿತು. ಅವರ ಅಮೂಲ್ಯ ಸೇವೆ, ಮಾನಸಿಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಕ್ಕೆ ನೀಡಿದ ಕೊಡುಗೆಯನ್ನು ಸ್ಮರಿಸಿ ನುಡಿ ನಮನ ಮತ್ತು ಪುಷ್ಪ ನಮನವನ್ನು ಸಲ್ಲಿಸಲಾಯಿತು.
ಆಡಳಿತ ನಿರ್ವಾಹಕರಾದ ಪ್ರೊ.ರಾಮಚಂದ್ರ ಬಾಳಿಗ, ನರ್ಸಿಂಗ್ ಭಾಗದ ಪ್ರಾಂಶುಪಾಲರಾದ ಪ್ರೊ.ಎಸ್. ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 
















