No Result
View All Result
Kotak Mahindra Bank Announces Results
English Articles

Kotak Mahindra Bank Announces Results

by ಕಲ್ಪ ನ್ಯೂಸ್
May 4, 2026
0

Kalpa Media House  |  Bengaluru  | The Board of Directors of Kotak Mahindra Bank (“the Bank”) approved the audited standalone...

Read moreDetails
Landmark Heart Surgery in Davanagere | SS Narayana hospital completes first modified Bentall procedure

Landmark Heart Surgery in Davanagere | SS Narayana hospital completes first modified Bentall procedure

May 2, 2026
KRCS Shikaripura Achieves 100% Result in CBSE Class X Board Exams

KRCS Shikaripura Achieves 100% Result in CBSE Class X Board Exams

April 16, 2026
ಬೆಂಗಳೂರು–ಬಂಗಾರಪೇಟೆ ಮೆಮು ರೈಲುಗಳಿಗೆ ತಾತ್ಕಾಲಿಕ ನಿಲುಗಡೆ

Cancellation of Ashokapuram – KSR Bengaluru MEMU trains

April 16, 2026
First VALORANT Campus Cup Champions Crowned

First VALORANT Campus Cup Champions Crowned

April 15, 2026
  • Advertise With Us
  • Grievances
  • About Us
  • Contact Us
Wednesday, May 6, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home Special Articles

ಕರಾವಳಿಯ ಕಂಠಸಿರಿ ಆರ್.ಜೆ. ನಯನಾ | ಮಾತಿನಲ್ಲೇ ಮೋಡಿ ಮಾಡುವ ಸ್ಫೂರ್ತಿಯ ಚಿಲುಮೆ!

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 16, 2026
in Special Articles
0
ಕರಾವಳಿಯ ಕಂಠಸಿರಿ ಆರ್.ಜೆ. ನಯನಾ | ಮಾತಿನಲ್ಲೇ ಮೋಡಿ ಮಾಡುವ ಸ್ಫೂರ್ತಿಯ ಚಿಲುಮೆ!
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಲೇಖನ: ಸತೀಶ ಶೆಟ್ಟಿ ಚೇರ್ಕಾಡಿ ದೊಡ್ಡಮನೆ  |

ಮಂಗಳೂರಿನ ಮುಂಜಾನೆಯ ಮಂಜಿನ ಹನಿಗಳ ನಡುವೆ, ರೇಡಿಯೋ ಆನ್ ಮಾಡಿದರೆ ಸಾಕು, ಒಂದು ಆತ್ಮೀಯ ಧ್ವನಿ ನಮ್ಮನ್ನು ತಬ್ಬಿಕೊಳ್ಳುತ್ತದೆ. ಆ ಧ್ವನಿಯಲ್ಲಿ ಪ್ರೀತಿಯಿದೆ, ಸ್ನೇಹವಿದೆ, ಸಂಸ್ಕಾರವಿದೆ, ಸಾಮಾಜಿಕ ಕಳಕಳಿಯಿದೆ ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಬದುಕನ್ನು ಪ್ರೀತಿಸುವ ಅದಮ್ಯ ಚೈತನ್ಯವಿದೆ.
ಆ ದನಿಯೇ ಕರಾವಳಿಯ ಮನೆಮಾತಾಗಿರುವ ಆರ್.ಜೆ. ನಯನಾ ಸದಾನಂದ್ ಶೆಟ್ಟಿ.

ಕಳೆದ ಹದಿಮೂರು ವರ್ಷಗಳಿಂದ ರೇಡಿಯೋ ಲೋಕದ ನಕ್ಷತ್ರವಾಗಿ ಮಿನುಗುತ್ತಿರುವ ನಯನಾ, ಇದು ಕೇವಲ ಒಂದು ಧ್ವನಿಯಲ್ಲ, ಲಕ್ಷಾಂತರ ಕೇಳುಗರ ಪಾಲಿನ ಭರವಸೆಯ ಕಿರಣ.ಕರಾವಳಿ ಕಡಲತೀರ ಮತ್ತು ಪಶ್ಚಿಮ ಘಟ್ಟಗಳ ಪ್ರಕೃತಿಯ ನಡುವಿನ ಮಣ್ಣಿನ ಗುಣವೋ ಏನೋ, ನಯನಾ ಅವರ ಮಾತಿನಲ್ಲಿ ಅಪ್ರತಿಮ ಸ್ಪಷ್ಟತೆ ಮತ್ತು ಗಾಂಭೀರ್ಯವಿದೆ.

ಭಂಡಾರ್’ಕರ್ಸ್ ಕಾಲೇಜಿನ ‘ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್’ ಆಗಿ ಹೊರಬಂದಾಗಲೇ ಅವರಲ್ಲಿ ಒಬ್ಬ ನಾಯಕಿ ಸುಪ್ತವಾಗಿದ್ದರು. ಎಂಬಿಎ ಮುಗಿಸಿ ಬೆಂಗಳೂರಿನ ಕಾರ್ಪೊರೇಟ್ ಲೋಕದ ಎಸಿ ರೂಮಿನ ಉದ್ಯೋಗದಲ್ಲಿದ್ದ ಇವರನ್ನು ಕೈಬೀಸಿ ಕರೆದದ್ದು ಮಾಧ್ಯಮ ಕ್ಷೇತ್ರ. ಟೈಮ್ಸ್ ಗ್ರೂಪ್’ನಿಂದ ಆರಂಭವಾದ ಇವರ ಯಾನ, `ನಮಸ್ಕಾರ ಮಂಗಳೂರು’ ಮೂಲಕ ಜನಪ್ರಿಯತೆಯ ಶಿಖರಕ್ಕೇರಿ, ಇಂದು ರಿಲಯನ್ಸ್ ಬ್ರೋಡ್ ಕಾಸ್ಟ್ ಲಿಮಿಟೆಡ್ ನ 92.7 BIG FM ‘ಕುಡ್ಲ ಮಾರ್ನಿಂಗ್ಸ್’ ಮೂಲಕ ಜನರ ಬೆಳಗಿನ ಕಾಫಿಯಷ್ಟೇ ಅನಿವಾರ್ಯವಾಗಿ ಬಿಟ್ಟಿದ್ದಾರೆ.
ನಯನಾ ಅವರ ವ್ಯಕ್ತಿತ್ವಕ್ಕೆ ಕೇವಲ ರೇಡಿಯೋ ಸ್ಟುಡಿಯೋಗಳು ಗಡಿಯಲ್ಲ. ಅವರು ಜಾಗತಿಕ ಮಟ್ಟದ ನಿರೂಪಕಿ ಕೂಡ ಹೌದು. ದುಬೈ, ಮಸ್ಕತ್’ನಂತಹ ಅಂತಾರಾಷ್ಟ್ರೀಯ ವೇದಿಕೆಗಳಿಂದ ಹಿಡಿದು, ಕರ್ನಾಟಕದ ಬೇರೆ ಬೇರೆ ಜಿಲ್ಲೆಗಳು, ಮುಂಬೈ, ಬೆಂಗಳೂರಿನ ಬೃಹತ್ ವೇದಿಕೆಗಳವರೆಗೆ ಅವರ ವಾಕ್ಚತುರ್ಯ ಹರಡಿದೆ.

ಸಂಗೀತ ಲೋಕದ ಧ್ರುವತಾರೆಗಳಾದ ಎಸ್. ಜಾನಕಿ, ಕೆ.ಎಸ್. ಚಿತ್ರಾ, ರಾಜೇಶ್ ಕೃಷ್ಣನ್ ಹಂಸಲೇಖ ಮತ್ತು ವಿಜಯ್ ಪ್ರಕಾಶ್ ಅವರಂತಹ ದಿಗ್ಗಜರ ಕಾರ್ಯಕ್ರಮಗಳಿಗೆ ನಯನಾ ಅವರ ನಿರೂಪಣೆ ಒಂದು ಸಾಂಸ್ಕೃತಿಕ ಕಿರೀಟವಿದ್ದಂತೆ. ಇವರ ಮಾತುಗಳನ್ನು ಕೇಳುತ್ತಿದ್ದರೆ ಸಮಯ ಸರಿಯುವುದೇ ತಿಳಿಯದು; ಅಲ್ಲೊಂದು ಆತ್ಮೀಯತೆ, ಸೂಜಿಗಲ್ಲಿನ ಸೆಳೆತ ಪ್ರೇಕ್ಷಕರನ್ನು ಮೋದಿ ಮಾಡಿಬಿಡುತ್ತದೆ. ಅಷ್ಟರ ಮಟ್ಟಿಗೆ ಶಬ್ದಗಳನ್ನು ಪೋಣಿಸುವ ಕಲೆ ಇವರಿಗೆ ಸಿದ್ಧಿಸಿದೆ.ಆದರೆ, ನಯನಾ ಅವರನ್ನು ಇತರರಿಗಿಂತ ಭಿನ್ನವಾಗಿ ನಿಲ್ಲಿಸುವುದು ಅವರ ಸಾಮಾಜಿಕ ಬದ್ಧತೆ. ಸಮಾಜವನ್ನು ಬದಲಿಸುವುದು ಕೇವಲ ಭಾಷಣದಿಂದ ಸಾಧ್ಯವಿಲ್ಲ, ಅದು ಕ್ರಿಯೆಯಿಂದ ಸಾಧ್ಯ ಎಂದು ನಂಬಿದವರು ಅವರು. ಮಳೆನೀರು ಕೊಯ್ಲು, ಪರಿಸರ ಸಂರಕ್ಷಣೆ, ಅಂಗದಾನ ಮತ್ತು ಮಾದಕ ದ್ರವ್ಯ ಮುಕ್ತ ಸಮಾಜಕ್ಕಾಗಿ ಅವರು ನಡೆಸಿದ ಅಭಿಯಾನಗಳು ಕರಾವಳಿಯಲ್ಲಿ ದೊಡ್ಡ ಸಂಚಲನವನ್ನೇ ಮೂಡಿಸಿವೆ.

ಕರಾವಳಿಯ ಸಂಸ್ಕೃತಿ, ಹಬ್ಬಗಳು, ದೇವಸ್ಥಾನ, ಕೃಷಿ ಬದುಕು, ತುಳುನಾಡಿನ ಆಚಾರ ವಿಚಾರಗಳನ್ನು ಮುಂದಿನ ತಲೆಮಾರಿಗೆ ಕೊಂಡೊಯ್ಯಬೇಕು ಎನ್ನುವ ಹಂಬಲ ಇವರ ರೇಡಿಯೋ ಕಾರ್ಯಕ್ರಮಗಳಲ್ಲಿ ಎದ್ದು ಕಾಣುತ್ತದೆ. ರೇಡಿಯೋ ಜಾಕಿಯಾಗಿ ಒಳ್ಳೆ ವಿಚಾರಗಳನ್ನು ಸಮಾಜಮುಖಿ ಚಿಂತನೆಗಳನ್ನು, ಮನರಂಜನೆಯ ಜೊತೆಗೆ ಬದುಕು ಬದಲಿಸುವ ವಿಚಾರಗಳನ್ನು ಹಂಚಬಹುದು ಎಂದು ತೋರಿಸಿಕೊಟ್ಟ ಬೆರಳೆಣಿಕೆಯ ರೇಡಿಯೋ ಜಾಕಿಗಳಲ್ಲಿ ನಯನಾ ಕೂಡ ಒಬ್ಬರು ಎನ್ನುವುದು ಹೆಮ್ಮೆಯ ವಿಚಾರ.ಒಬ್ಬ ವ್ಯಕ್ತಿತ್ವ ವಿಕಸನ ತರಬೇತುದಾರಿಯಾಗಿ ರಾಜ್ಯದಾದ್ಯಂತ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ಬೆಳಕಾಗಿದ್ದಾರೆ. ಸೋತು ಸುಣ್ಣವಾದ ಅದೆಷ್ಟೋ ಮನಸ್ಸುಗಳು ಇವರ ಒಂದು ಪ್ರೇರಣಾದಾಯಕ ವೀಡಿಯೋ ನೋಡಿ ಮತ್ತೆ ಎದ್ದು ನಿಂತಿವೆ. ಇವರ ಇತ್ತೀಚಿನ ಕೃತಿ `ಈ ಪಯಣ’ ಪುಸ್ತಕಕ್ಕೆ ಸಿಗುತ್ತಿರುವ ಅಭೂತಪೂರ್ವ ಸ್ಪಂದನೆಯೇ ಇವರ ವಿಚಾರಧಾರೆಗೆ ಸಿಕ್ಕ ಜಯಪ್ರದ ಮುದ್ರೆ. ಇಷ್ಟೆಲ್ಲಾ ಸಾಧನೆಯ ಶಿಖರದಲ್ಲಿದ್ದರೂ ನಯನಾ ಅವರು ಇಂದಿಗೂ ಮಣ್ಣಿನ ಗುಣವನ್ನು ಮರೆತಿಲ್ಲ.

ತೆರೆಯ ಮುಂದೆ ಕಲಾವಿದೆಯಾಗಿ ಎಲ್ಲರ ಮುಖದಲ್ಲಿ ನಗುಅರಳಿಸುವ ನಯನಾ ತೆರೆಯ ಹಿಂದೆ ತನ್ನ ಮಾರ್ಗದರ್ಶನ ಬಯಸಿ ಬರುವ ವಿದ್ಯಾರ್ಥಿಗಳಿಗೆ ಭರವಸೆಯ ಬೆಳಕು. ಸೋತ ಮನಸುಗಳಿಗೆ ದಾರಿದೀಪವಾಗುವ ಆಪ್ತ ಸಮಾಲೋಚಕಿ ಜ್ಞಾನ ಪುಷ್ಪ, ಬಾಂಧವ್ಯಪ್ರಶಸ್ತಿ, ರೋಟರಿ ಲಯನ್ಸ್. ವಿಶ್ವ ಬಂಟರ ಸಮ್ಮೇಳನ, ಬೇರೆ ಸಂಘ ಹಾಗೂ ಸೇವಾ ಸಂಸ್ಥೆಗಳ ಹಲವು ಪ್ರಶಸ್ತಿಗಳು ಇವರ ಮುಡಿಗೇರಿವೆ.ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿಯಾಗಿದ್ದ ತಂದೆ ಬೈಂದೂರು ನೆಲ್ಯಾಡಿ ನಾರಾಯಣ ಶೆಟ್ಟಿ ಹಾಗೂ ಯರುಕೋಣೆ ಚೀತನಮಕ್ಕಿ ವಿನಯ ಶೆಟ್ಟಿ ದಂಪತಿಗಳ ಹಿರಿಯ ಮಗಳು.ಉದ್ಯಮಿಯಾಗಿರುವ ಪತಿ ಸದಾನಂದ ಶೆಟ್ಟಿ ಅವರ ಬೆಂಬಲದೊಂದಿಗೆ ಮಕ್ಕಳಾದ ಈಶಾನ್-ವಿಹಾನ್ ಅವರ ಜೊತೆಗೆ ವೃತ್ತಿ ಮತ್ತು ಪ್ರವೃತ್ತಿಯನ್ನು ಅದ್ಭುತವಾಗಿ ಸಮತೋಲನ ಮಾಡುತ್ತಿದ್ದಾರೆ.

ಒಟ್ಟಾರೆಯಾಗಿ ಹೇಳುವುದಾದರೆ, ಆರ್.ಜೆ. ನಯನಾ ಕೇವಲ ಮಾತುಗಾರ್ತಿಯಲ್ಲ, ಅವರು ಕರಾವಳಿಯ ಸಾಂಸ್ಕೃತಿಕ ರಾಯಭಾರಿ. ಅವರ ಮಾತುಗಳಲ್ಲಿ ಜೇನಿನ ಸವಿ ಇದೆ, ವಿಚಾರಗಳಲ್ಲಿ ವಜ್ರದ ಕಠಿಣತೆ ಇದೆ. ಬದಲಾವಣೆ ತರಲು ಹೊರಟ ಈ ಚೈತನ್ಯದ ಪಯಣ ಹೀಗೆಯೇ ನಿರಂತರವಾಗಿರಲಿ, ಅವರ ಧ್ವನಿ ಜಗತ್ತಿನಾದ್ಯಂತ ಇನ್ನೂ ಹತ್ತು ಹಲವು ಜನರಿಗೆ ಸ್ಫೂರ್ತಿಯಾಗಲಿ ಎನ್ನುವುದೇ ಎಲ್ಲರ ಹಾರೈಕೆ.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news

http://kalpa.news/wp-content/uploads/2024/04/VID-20240426-WA0008.mp4

  

Tags: coastal newsKannada News WebsiteKaravaliKudlaLatest News KannadaMangaloreR J Nayana ShettyRadioTuluNaduಆರ್ ಜೆ ನಯನಾ ಶೆಟ್ಟಿಕರಾವಳಿಕುಡ್ಲ ಮಾರ್ನಿಂಗ್ಸ್ದುಬೈನಮಸ್ಕಾರ ಮಂಗಳೂರುಪಶ್ಚಿಮ ಘಟ್ಟಮಂಗಳೂರುರೇಡಿಯೋಸತೀಶ ಶೆಟ್ಟಿ ಚೇರ್ಕಾಡಿ
Share263Tweet164Send
Previous Post

ಇಂದಿನ ಪಂಚಾಂಗ | 2026ರ ಜನವರಿ 16, ಶುಕ್ರವಾರ

Next Post

ಸುತ್ತೂರು ಜಾತ್ರಾ ಮಹೋತ್ಸ | ಸಂಸ್ಕೃತಿ, ಪರಂಪರೆಯ ಪ್ರತೀಕ: ಸುರೇಶ್ ಋಗ್ವೇದಿ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಸುತ್ತೂರು ಜಾತ್ರಾ ಮಹೋತ್ಸ | ಸಂಸ್ಕೃತಿ, ಪರಂಪರೆಯ ಪ್ರತೀಕ: ಸುರೇಶ್ ಋಗ್ವೇದಿ

ಸುತ್ತೂರು ಜಾತ್ರಾ ಮಹೋತ್ಸ | ಸಂಸ್ಕೃತಿ, ಪರಂಪರೆಯ ಪ್ರತೀಕ: ಸುರೇಶ್ ಋಗ್ವೇದಿ

Leave a Reply Cancel reply

Your email address will not be published. Required fields are marked *

  • Trending
  • Latest
ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

ಭದ್ರಾವತಿಯ ಆರು ಆರೋಪಿಗಳಿಗೆ 3 & 7 ವರ್ಷ ಕಠಿಣ ಕಾರಾಗೃಹ ಶಿಕ್ಷೆ | ನಡೆದಿದ್ದ ಅಪರಾಧವೇನು?

May 5, 2026
ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

ಸೊರಬ | ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಪತ್ತೆ | ಆತ್ಮಹತ್ಯೆ? ಮಾನಸಿಕ ಹಿಂಸೆ ಕಾರಣವೇ?

April 28, 2026
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

ಸೊರಬದಲ್ಲೊಂದು ಅತಿ ಘೋರ | 5 ತಿಂಗಳ ಗರ್ಭಿಣಿ ಸೊಸೆಯನ್ನು ಜೀವಂತ ಸುಟ್ಟ ರಾಕ್ಷಸರು

April 3, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

ಬಂಗಾಳದ ಬೀದಿ ಬದಿಯ ‘ಝಲ್ ಮುರಿ’ ಮತ್ತು ಮೋದಿಯವರ ಜನಸಾಮಾನ್ಯರೊಂದಿಗಿನ ಬಾಂಧವ್ಯ: ಒಂದು ವಿಶ್ಲೇಷಣೆ

May 6, 2026
ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ್ದು ಧಾರ್ಮಿಕ ಸ್ವಾತಂತ್ರ್ಯಕ್ಕೆ ಧಕ್ಕೆ: ಗಣೇಶ್ ಆಕ್ರೋಶ

May 6, 2026
ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

ಕುವೆಂಪು ವಿವಿ ರಾಷ್ಟ್ರವೇ ತಿರುಗಿ ನೋಡುವಂತಹ ಸಾಧನೆ: ಸಚಿವ ಸುಧಾಕರ್ ಪ್ರಶಂಸೆ

May 6, 2026
ಶ್ರೀ ರವಿಶಂಕರ್ ಗುರೂಜಿಯವರ 70ನೇ ಜನ್ಮೋತ್ಸವ | ಏ.14ರಿಂದ ಆರು ದಿನ ವಿಶೇಷ ಸುದರ್ಶನ ಕ್ರಿಯಾ ಶಿಬಿರ

ಧ್ಯಾನ – ಸಾತ್ವಿಕ ಜೀವನಶೈಲಿ ಮನಸ್ಸನ್ನು ಶುದ್ಧಗೊಳಿಸುತ್ತವೆ: ಸಾಧ್ವಿ ಶುಭಕರಿ ಜೀ

May 6, 2026
ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

ಕೌಶಲ ಆಧಾರಿತ ಶಿಕ್ಷಣ ನೀಡಲು ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ: ಪ್ರೊ. ಅನಿಲ್ ಸಹಸ್ರಬುಧೆ

May 6, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL