ಕಲ್ಪ ಮೀಡಿಯಾ ಹೌಸ್ | ಬಳ್ಳಾರಿ |
ಮಾಜಿ ಸಚಿವರುಗಳಾದ ಜನಾರ್ಧನ ರೆಡ್ಡಿ ಹಾಗೂ ಶ್ರೀರಾಮುಲು #Janardhana Reddy – Shriramuluಅವರುಗಳ ಮಾಡೆಲ್ ಹೌಡ್’ಗೆ ದುಷ್ಕರ್ಮಿಗಳು ಬೆಂಕಿ ಹಚ್ಚಲಾಗಿದ್ದು, ಪ್ರಕರಣ ಸಂಬಂಧ ಪೊಲೀಸರು 8 ಯುವಕರನ್ನು ವಶಕ್ಕೆ ಪಡೆದಿದ್ದಾರೆ.
ಬಳ್ಳಾರಿಯ ಕೌಲ್ ಬಜಾರ್ ಪ್ರದೇಶ 8 ಯುವಕರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ರೀಲ್ಸ್ ಮಾಡಲು ಹೋಗಿ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ಸಂಬಂಧ ಬಳ್ಳಾರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಏನಿದು ಘಟನೆ?
ನಿನ್ನೆ ಶುಕ್ರವಾರ ಸಂಜೆ 5:30ರ ಸುಮಾರಿಗೆ ಇಪ್ಪತ್ತರಿಂದ ಇಪ್ಪತೈದು ವಯಸ್ಸಿನ ಎಂಟರಿಂದ ಹತ್ತು ಜನ ಕಿಡಿಗೇಡಿಗಳು ಬಂದು ಬೆಂಕಿ ಹಚ್ಚಿದ್ದಾರೆ.
ಜನಾರ್ಧನ ರೆಡ್ಡಿ ಅವರ ಪತ್ನಿ ಜಿ.ಲಕ್ಷ್ಮಿ ಅವರಿಗೆ ಸೇರಿದ್ದ ಮಾಡೆಲ್ ಹೌಸ್ ಇದಾಗಿದ್ದು, ದುರುದ್ದೇಶದಿಂದಲೇ ಮಾಡೆಲ್ ಹೌಸ್’ಗೆ ಬೆಂಕಿ ಹಚ್ಚಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.
ಘಟನೆಯಲ್ಲಿ ಮನೆಯ ಟಿವಿ, ಚೇರ್, ಸೋಫಾ ಸೆಟ್ಸ್, ಕಿಚನ್ ಸೆಟ್, ಎಸಿ, ಫ್ರಿಡ್ಜ್, ಮನೆಗೆ ಮಾಡಿಸಿದ್ದ ಪಿಓಇ, ವುಡನ್ ಡೋರ್ಸ್ ಸುಟ್ಟು ಕರಕಲಾಗಿದೆ. ಅಂದಾಜು 1.25 ಕೋಟಿ ಮೌಲ್ಯದ ವಸ್ತುಗಳು ಹಾನಿಯಾಗಿದೆ ಎಂದು ದೂರು ನೀಡಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ.
ಬ್ಯಾನರ್ ಗಲಭೆಯಲ್ಲಿ ಬಳ್ಳಾರಿಯನ್ನು ಭಸ್ಮ ಮಾಡುತ್ತೇವೆ ಎಂದು ಶಾಸಕ ಭರತ್ ರೆಡ್ಡಿ ಹೇಳಿಕೆ ಕೊಟ್ಟಿದ್ದರು. ಆ ದೆಸೆಯಲ್ಲಿ ತನಿಖೆ ಮಾಡುವಂತೆ ದೂರು ನೀಡಲಾಗಿದೆ.

ಘಟನೆ ಹಿಂದೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ ಕೈವಾಡ ಇದೆ ಎಂದು ರೆಡ್ಡಿ ಸಹೋದರ ಆರೋಪಿಸಿದ್ದಾರೆ. 2010ರಲ್ಲಿ ಈ ಕಟ್ಟಡ ನಿರ್ಮಾಣ ಮಾಡಿದ್ದು, ಕಟ್ಟಡ ಶಿಥಿಲಗೊಂಡಿತ್ತು. ಕಟ್ಟಡದ ಗಾಜು ಒಡೆದಿದ್ದವು. ಇನ್ನು ಪ್ರಕರಣ ಸಂಬಂಧ ಘಟನಾ ಸ್ಥಳಕ್ಕೆ ಎಫ್’ಎಸ್’ಎಲ್ ಟೀಂ ಭೇಟಿ ನೀಡಿದ್ದು, ಪೊಲೀಸರಿಂದ ಮಾಹಿತಿ ಪಡೆದಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news


















