No Result
View All Result
PESITM hosts Mock CET 2026 to Strengthen KCET Preparation
English Articles

PESITM hosts Mock CET 2026 to Strengthen KCET Preparation

by ಕಲ್ಪ ನ್ಯೂಸ್
March 31, 2026
0

Kalpa Media House  |  Shivamogga  | PES Institute of Technology and Management #PESITM conducted Mock CET 2026 on March 30...

Read moreDetails
India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

India’s Trauma Care Push Gets a Boost as HOSMAT Launches Golden Hour Network At First-Of-Its-Kind Trauma Conclave

March 30, 2026
SWR to run special trains for Good Friday, Easter rush

SWR to run special trains for Good Friday, Easter rush

March 30, 2026
ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ಪಿಆರ್‌ಓ ಪ್ರವೀಣ್ ಅಧಿಕಾರ ಸ್ವೀಕಾರ

South Western Railway | Praveen Takes Charge as Hubballi Divisional Public Relations Officer

March 28, 2026
26 ವರ್ಷದ ಯುವಕನಿಗೆ ಮರುಜೀವ ಕೊಟ್ಟ ಮೆಡಿಕವರ್ ಆಸ್ಪತ್ರೆ | ಏನಾಗಿತ್ತು ಯುವಕನಿಗೆ?

Critical Condition Turned Around with Timely Medical Intervention

March 27, 2026
  • Advertise With Us
  • Grievances
  • About Us
  • Contact Us
Wednesday, April 1, 2026
Follow Us
kalpa.news
Advertisement
ADVERTISEMENT
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ
Subscribe
kalpa.news
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
  • ಜಿಲ್ಲೆ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
  • ರೈಲ್ವೆ ಸುದ್ದಿಗಳು
  • ಇತರೆ
ADVERTISEMENT
Home ಜಿಲ್ಲೆ ಶಿವಮೊಗ್ಗ

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ನಡೆ ಖಂಡನೀಯ: ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್

ಕಲ್ಪ ನ್ಯೂಸ್ by ಕಲ್ಪ ನ್ಯೂಸ್
January 27, 2026
in ಶಿವಮೊಗ್ಗ
0
ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ ನಡೆ ಖಂಡನೀಯ: ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್
Share on FacebookShare on TwitterShare on WhatsApp

ಕಲ್ಪ ಮೀಡಿಯಾ ಹೌಸ್  |  ಶಿವಮೊಗ್ಗ  |

ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರ #Governor ನಡೆ ಕರ್ತವ್ಯಚ್ಯುತಿಯಾಗಿದ್ದು ಅದು ಖಂಡನೀಯ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಕಿಮ್ಮನೆ ರತ್ನಾಕರ್ #Kimmane Rathnakar ಹೇಳಿದರು.

ಅವರು ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಭಾಷಣ ಮಾಡುವುದು ಅವರ ಕರ್ತವ್ಯವಾಗಿದೆ. ಆದರೆ ಅವರು ಭಾಷಣವನ್ನು ಪೂರೈಸದೆ ರಾಷ್ಟ್ರಗೀತೆಯನ್ನೂ ಕೇಳಿಸಿಕೊಳ್ಳದೇ ಒಂದು ರೀತಿಯಲ್ಲಿ ಓಡಿ ಹೋಗಿದ್ದಾರೆ. ಇದು ಸರಿಯಲ್ಲ, ಅವರು ರಾಜ್ಯದ ಜನತೆಯ ಕ್ಷಮೆ ಕೇಳಬೇಕು ಇಲ್ಲವೇ ರಾಜೀನಾಮೆ ಕೊಡಬೇಕು. ರಾಜ್ಯಪಾಲರು ಯಾವ ಪಕ್ಷಕ್ಕೂ ಸೀಮಿತವಾಗಬಾರದು. ನ್ಯಾಯಾಧೀಶರಂತೆ ನಡೆದುಕೊಳ್ಳಬೇಕು. ಆದರೆ ಅವರು ತನ್ನ ಪೂರ್ವಶ್ರಮವನ್ನು ನೆನಪು ಮಾಡಿಕೊಂಡವರಂತೆ ಕೇಂದ್ರದ ಕೈಗೊಂಬೆಯಂತೆ ವರ್ತಿಸಿ ಹೋಗಿರುವುದು ಅತ್ಯಂತ ಖಂಡನೀಯ. ಅವರು ಸಾಮಂತ ರಾಜರಲ್ಲ, ಬಿಜೆಪಿಯ ಪ್ರತಿನಿಧಿಯೂ ಅಲ್ಲ, ಅವರಿಂದ ಹಕ್ಕುಚ್ಯುತಿಯಾಗಿದೆ ಎಂದು ಟೀಕಿಸಿದರು.
ಕೇಂದ್ರದ ಬಿಜೆಪಿ ಸರ್ಕಾರ ಅತಿಯಾಗಿ ವರ್ತಿಸುತ್ತಿದೆ. ಮನರೇಗಾ ವಿಷಯದಲ್ಲಿ ಇದು ಸ್ಪಷ್ಟವಾಗಿ ಗೋಚರವಾಗಿದೆ. ಗಾಂಧೀಜಿಯವರ  ಹೆಸರನ್ನು ತೆಗೆಯಲು ಕಾರಣ ಏನಿತ್ತು ? ಮನರೇಗಾ ವಿಶೇಷ ಅಧಿವೇಶನ ಕರೆದಿದ್ದು ವಿರೋಧಪಕ್ಷಗಳಿಗೆ ಚರ್ಚೆಮಾಡಲು ಅವಕಾಶ ಕೊಟ್ಟಿದ್ದಾರೆ. ಆದರೆ ಅವರು ಹಾಗೆ ಮಾಡಲೇ ಇಲ್ಲ. ಬಿಜೆಪಿಯವರಿಗೆ ಮನರೇಗಾ ಅರ್ಥವೇ ಆಗಿಲ್ಲ. ಈ ದೇಶದಲ್ಲಿ ೩೦ ಕೋಟಿ ಜನರಿಗೆ ಉದ್ಯೋಗ ಇಲ್ಲ. ಕೇಂದ್ರ ಸರ್ಕಾರದಿಂದ ಉದ್ಯೋಗ ಸೃಷ್ಟಿಯೂ ಇಲ್ಲ. ಸರ್ಕಾರಿ ಕೆಲಸ ನೀಡಲು ಸಾಧ್ಯವಿಲ್ಲ ನಿಜ. ಆದರೆ  ಮನರೇಗಾದಂತಹ ಕಾರ್ಯಕ್ರಮದಲ್ಲಿ ನಿರುದ್ಯೋಗಿಗಳಿಗೆ ಅವಕಾಶ ಕೊಡಬಹುದು. ಇದು ಒಂದು ಸಾಮಾಜಿಕ ಕೆಲಸವೂ ಹೌದು. ದೇಶದಲ್ಲಿ ಸುಮಾರು ೨ ಲಕ್ಷ ಗ್ರಾಮ ಪಂಚಾಯ್ತಿಗಳಿವೆ. ಗ್ರಾ.ಪಂ.ಮಟ್ಟದಲ್ಲಿ ಯುವಕರ ಕೈಗೆ ಉದ್ಯೋಗವಿಲ್ಲ. ಈಗ ಈ ಉದ್ಯೋಗಕ್ಕೂ ಕೇಂದ್ರ ಸರ್ಕಾರದ ಹೊಸ ಕಾಯ್ದೆ ಕಡಿವಾಣ ಹಾಕುತ್ತಿದೆ ಎಂದರು.

ಮನರೇಗಾ ಎಂಬುದು ಗ್ರಾಮೀಣ ಭಾರತದ ಕನಸು. ಕೇಂದ್ರದ ಹೊಸ ನಿರ್ಧಾರದಿಂದ ಗ್ರಾ.ಪಂ.ಗಳಿಗೆ ಯಾವ ಹಕ್ಕೂ ಇಲ್ಲ,  ಎಲ್ಲಾ ಅಧಿಕಾರವನ್ನು ಖಾಸಗಿಯವರಿಗೆ ನೀಡಲಾಗಿದೆ. ಕಳೆದ ೩ ವರ್ಷಗಳಿಂದ ಉದ್ಯೋಗಖಾತ್ರಿ ಯೋಜನೆಯಡಿ ಬರಬೇಕಾಗಿದ್ದ ಸುಮಾರು ೨೮೦೦ ಕೋಟಿ ರೂ. ಹಣ ಇನ್ನೂ ಬಿಡುಗಡೆಯಾಗಿಲ್ಲ. ಇದರ ಜೊತೆಗೆ ಹೊಸ ಕಾಯ್ದೆಯಲ್ಲಿ ರಾಜ್ಯ ಸರ್ಕಾರ ಶೇ.೪೦ರಷ್ಟು ಹಣ ನೀಡಬೇಕು ಎಂಬ ನಿಯಮವನ್ನು ಏಕೆ ಮಾಡಿದ್ದಾರೋ ಗೊತ್ತಿಲ್ಲ ಎಂದರು.
ಬಿಜೆಪಿ ಜಾತಿ, ಧರ್ಮದ ಆಧಾರದಲ್ಲಿ ಆಡಳಿತ ನಡೆಸಲು ಹೊರಟಿದೆ. ಅವರು ಹೇಳುವುದೇ ಒಂದು, ಮಾಡುವುದೇ ಮತ್ತೊಂದು ಒಂದು ರೀತಿಯಲ್ಲಿ ಸಕ್ಕರೆ ಲೇಪಿಸಿ ವಿಷ ಉಣಿಸುತ್ತಿದ್ದಾರೆ. ಒಕ್ಕೂಟ ವ್ಯವಸ್ಥೆಯನ್ನೇ ವಿರೋಧಿಸುತ್ತಿದ್ದಾರೆ. ಬಿಜೆಪಿಯವರಿಗೆ ಪ್ರಿಯವಾದ `ಬಂಚ್ ಆಫ್ ಥಾಟ್ಸ್ ಎಂಬ ಪುಸ್ತಕದಲ್ಲಿ ಒಕ್ಕೂಟದ ವಿರುದ್ಧದ ಸ್ಪಷ್ಟ ನಿರ್ದೇಶನವಿದೆ. ಹಿಂದೂ ಧರ್ಮದ ಬಗ್ಗೆ ಮಾತನಾಡುವ ಬಿಜೆಪಿಯವರು ಇಲ್ಲಿನ ಜಾತಿ ವ್ಯವಸ್ಥೆಯ ಬಗ್ಗೆ ಏಕೆ ಮಾತನಾಡುವುದಿಲ್ಲ. ಜಾತಿಯ ವ್ಯವಸ್ಥೆ ಎಂಬುದು ಹೊಸ್ತಿಲ ಒಳಗೆ ಮತ್ತು ಹೊಸ್ತಿಲ ಹೊರಗೆ ಬೇರೆ ಬೇರೆ ಇರುತ್ತದೆಯೇ ಎಂದರು.

ಹೊಸ ಹೊಸ ಕಾರ್ಯಕ್ರಮಗಳನ್ನು ಹಿಂದೂ ಹೆಸರಿನಲ್ಲಿ ಮಾಡುವ ಮೂಲಕ ನಾವೆಲ್ಲಾ ಒಂದು ಎಂದು ಹೇಳುವ ಬಿಜೆಪಿಗರಲ್ಲಿ ನಾವೆಲ್ಲಾ ಒಂದೇ ಎಂಬ ಭಾವನೆ ಎಲ್ಲಿದೆ ? ಅವರ ಪುಸ್ತಕಗಳಲ್ಲಿ ಮೀಸಲಾತಿಗಳ ವಿರೋಧವಿದೆ. ಸಂಸ್ಕೃತ ಒಂದೇ ಭಾಷೆ ಇರಬೇಕು ಎಂದು ಸ್ಪಷ್ಟವಾಗಿ ಹೇಳಲಾಗಿದೆ. ಸಂಪ್ರದಾಯ ಉಳಿಸಬೇಕು ಎಂದು ಸಾರಿ ಸಾರಿ ಚಿಂತನಾಗಂಗಾ ಸೇರಿದಂತೆ ಅವರ ಅನೇಕ ಪುಸ್ತಕಗಳಲ್ಲಿ ಹೇಳಿದ್ದಾರೆ. ಇದನ್ನೂ ಇವರು ಒಪ್ಪುತ್ತಾರೆಯೇ ? ಧೈರ್ಯವಿದ್ದರೆ ಈ ಪುಸ್ತಕಗಳನ್ನು ವಿರೋಧಿಸಲಿ. ಒಂದು ಭಾಷೆ, ಒಂದು ದೇಶ ಎಂದರೆ ಸಮಗ್ರತೆ ಹೇಗೆ ಬರಲು ಸಾಧ್ಯ ? ಇದು ಒಕ್ಕೂಟದ ವ್ಯವಸ್ಥೆ. ಇಲ್ಲಿ ಎಲ್ಲಾ ಧರ್ಮಗಳು, ಭಾಷೆಗಳು ಇವೆ.  ಇದೆಲ್ಲವನ್ನು ಬಿಟ್ಟು ಕೇವಲ ಧರ್ಮದ ಆಧಾರದಲ್ಲಿ ಒಗ್ಗೂಡುವುದು ಹೇಗೆ ಸಾಧ್ಯ. ಸಾಮಾಜಿಕ ಸಾಮರಸ್ಯದ ಬಗ್ಗೆ ಇವರ ಕಾರ್ಯಕ್ರಮಗಳಲ್ಲಿ ಏನಾದರೂ ಸ್ಪಷ್ಟತೆ ಇದೆಯಾ ? ಸ್ವದೇಶಪ್ರೇಮದ ಬಗ್ಗೆ ಮಾತನಾಡುವ ಇವರ ಮಕ್ಕಳುಗಳು ವಿದೇಶದಲ್ಲಿ ಸುಖವಾಗಿ ಇರುತ್ತಾರೆ. ಇವರ ನಡೆಗೂ-ನುಡಿಗೂ ಯಾವ ಸಂಬಂಧವೂ ಇಲ್ಲ. ರಾಷ್ಟ್ರಗೀತೆಗೆ ಗೌರವ ಕೊಡದೇ ಇರುವವರು ಒಂದೇ ಮಾತರಂ ಗೀತೆ ಹಿಡಿದುಕೊಂಡು ಒದ್ದಾಡುತ್ತಿದ್ದಾರೆ ಎಂದು ಟೀಕಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್, ಮಾಜಿ ಜಿ.ಪಂ. ಸದಸ್ಯ ಕಲಗೋಡು ರತ್ನಾಕರ್, ಪ್ರಮುಖರಾದ ರಾಘವೇಂದ್ರ, ಕೆಸ್ತೂರು ಮಂಜುನಾಥ್, ಪೂರ್ಣೇಶ್, ಅಮರನಾಥ್‌ಶೆಟ್ಟಿ, ಆದರ್ಶ, ಜಯಕರಶೆಟ್ಟಿ, ಶ್ರೇಯಸ್‌ರಾವ್ ಸೇರಿದಂತೆ ಹಲವರಿದ್ದರು.

ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news     

http://kalpa.news/wp-content/uploads/2024/04/VID-20240426-WA0008.mp4

Tags: GovernorKannada NewsKannada News LiveKannada News Online ShivamoggaKannada WebsiteKannadaNewsWebsiteKimmane rathnakarLatestNewsKannadaLocalNewsMalnadNewsNews in KannadaNews KannadaShimogaShivamoggaShivamoggaNewsಕಿಮ್ಮನೆ ರತ್ನಾಕರ್ಮಲೆನಾಡು_ಸುದ್ಧಿರಾಜ್ಯಪಾಲರುಶಿವಮೊಗ್ಗಶಿವಮೊಗ್ಗ_ನ್ಯೂಸ್
Share198Tweet124Send
Previous Post

ಶೋಚನೀಯ ಸ್ಥಿತಿಯಲ್ಲಿ ಪಶ್ಚಿಮಘಟ್ಟದ ಪ್ರವಾಸಿತಾಣಗಳು: ಡಿ.ಎಸ್. ಅರುಣ್ ಆಕ್ರೋಶ

Next Post

ಅಸುರಕ್ಷಿತ ಖಾಸಗಿ ಸಂಸ್ಥೆ ಹಾಲು ಬಳಸುವ ಮುನ್ನ ಎಚ್ಚರಿಕೆ ಅಗತ್ಯ: ವಿದ್ಯಾಧರ್ ಸಲಹೆ

ಕಲ್ಪ ನ್ಯೂಸ್

ಕಲ್ಪ ನ್ಯೂಸ್

Next Post
ಅಸುರಕ್ಷಿತ ಖಾಸಗಿ ಸಂಸ್ಥೆ ಹಾಲು ಬಳಸುವ ಮುನ್ನ ಎಚ್ಚರಿಕೆ ಅಗತ್ಯ:  ವಿದ್ಯಾಧರ್ ಸಲಹೆ

ಅಸುರಕ್ಷಿತ ಖಾಸಗಿ ಸಂಸ್ಥೆ ಹಾಲು ಬಳಸುವ ಮುನ್ನ ಎಚ್ಚರಿಕೆ ಅಗತ್ಯ: ವಿದ್ಯಾಧರ್ ಸಲಹೆ

Leave a Reply Cancel reply

Your email address will not be published. Required fields are marked *

  • Trending
  • Latest
ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

ಪೋಕ್ಸೋ ಪ್ರಕರಣ ಸಂತ್ರಸ್ತ ಬಾಲಕಿಗೆ ಗರ್ಭಪಾತ ಆರೋಪ: ವೈದ್ಯೆ ಅಮಾನತು

February 4, 2026
ಅರಸಾಳಿನಿಂದ ಶೃಂಗೇರಿ-ಚಿಕ್ಕಮಗಳೂರು ಮೂಲಕ ಹಾಸನ ರೈಲು ಸಂಪರ್ಕ | ಎಂಪಿ ರಾಘವೇಂದ್ರ ಹೇಳಿದ್ದೇನು?

ಯಶವಂತಪುರ-ಶಿವಮೊಗ್ಗ ರೈಲು ತಾಳಗುಪ್ಪಕ್ಕೆ ತಾತ್ಕಾಲಿಕ ವಿಸ್ತರಣೆ | ಶೀಘ್ರ ಆದೇಶ | ಎಂಪಿ ರಾಘವೇಂದ್ರ

January 29, 2026
ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

ಶಿವಮೊಗ್ಗ | ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ ಭೀಕರ ಅಪಘಾತ | ಕಾರ್ಕಳ ಮೂಲದ ವಿದ್ಯಾರ್ಥಿನಿ ದುರ್ಮರಣ

March 12, 2026
ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ರೈಲು ಸಂಪರ್ಕ | ಶಿವಮೊಗ್ಗದಿಂದ ಈ ಎಲ್ಲಾ ಕಡೆಗಳಿಗೆ ನೂತನ ಮಾರ್ಗ?

January 16, 2026
ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

ತಾಳಗುಪ್ಪ-ಬೆಂಗಳೂರು ರೈಲಿನಲ್ಲಿ ದರೋಡೆಕೋರನ ದಾಂಧಲೆ | ಮಾರಕಾಸ್ತ್ರದಿಂದ ಹಲ್ಲೆ ಯತ್ನ

February 12, 2026
ತಾಯಿಯ ಕೈಜಾರಿ ಬಾವಿಗೆ ಬಿದ್ದ ಒಂದೂವರೆ ವರ್ಷದ ಮಗು ಸಾವು

ಘೋರ ಘಟನೆ | ಶಿವಮೊಗ್ಗದಲ್ಲಿ ಶಾಲಾ ಬಸ್ ಡಿಕ್ಕಿ ಹೊಡೆದು ಒಂದೂವರೆ ವರ್ಷದ ಮಗು ದಾರುಣ ಸಾವು

March 31, 2026
ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

ಪ್ರಶಸ್ತಿಗಳು ಸಾಧಕರಿಗೆ ಗೌರವ ಇತರರಿಗೆ ಸ್ಪೂರ್ತಿ | ಡಾ. ಗಿರಿಧರ ಕಜೆ

March 31, 2026
ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ರಚನಾತ್ಮಕ ಸಿದ್ಧತೆ ಮುಖ್ಯ | ಡಾ.ಸ್ವಾಮಿ ಕರೆ

March 31, 2026
ರಾಜ್ಯದಲ್ಲಿನ ಕಾಂಗ್ರೆಸ್ ಸರ್ಕಾರ ನಿಷ್ಕ್ರಿಯ, ಅಭಿವೃದ್ಧಿ ಶೂನ್ಯ: ಶಾಸಕ ಚನ್ನಬಸಪ್ಪ ವಾಗ್ದಾಳಿ

ಶಿವಮೊಗ್ಗದ ಸಾಂಸ್ಕೃತಿಕ ವೈಭವ, ಅಭಿವೃದ್ಧಿ ಕಾರ್ಯಗಳನ್ನು ಜಗತ್ತಿಗೆ ಪರಿಚಯಿಸಿ: ಶಾಸಕ ಚನ್ನಬಸಪ್ಪ

March 31, 2026
ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

ಶಿವಮೊಗ್ಗದಲ್ಲಿ ಸರಣಿ ಅಪಘಾತ | ಕಾರು-ಬಸ್ ನಡುವೆ ಸಿಲುಕಿದ ಆಟೋ ನಜ್ಜುಗುಜ್ಜು | ಘಟನೆ ನಡೆದಿದ್ದು ಹೇಗೆ?

March 31, 2026
kalpa.news

Copyright © 2026 Kalpa News. Designed by KIPL

Navigate Site

  • Advertise With Us
  • Grievances
  • Privacy & Policy
  • About Us
  • Contact Us

Follow Us

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected by Kalpa News!!
No Result
View All Result
  • Home
  • ರಾಜಕೀಯ
  • ಶಿವಮೊಗ್ಗ
    • ಶಿವಮೊಗ್ಗ
    • ಶಿಕಾರಿಪುರ
    • ಸಾಗರ
    • ಸೊರಬ
    • ಹೊಸನಗರ
    • ತೀರ್ಥಹಳ್ಳಿ
    • ಭದ್ರಾವತಿ
  • ಜಿಲ್ಲೆ
    • ಉಡುಪಿ
    • ಉತ್ತರ ಕನ್ನಡ
    • ಕಲಬುರಗಿ
    • ಕೊಪ್ಪಳ
    • ಕೋಲಾರ
    • ಗದಗ
    • ಚಾಮರಾಜನಗರ
    • ಚಿಕ್ಕ ಬಳ್ಳಾಪುರ
    • ಚಿಕ್ಕಮಗಳೂರು
    • ಚಿತ್ರದುರ್ಗ
    • ತುಮಕೂರು
    • ದಕ್ಷಿಣ ಕನ್ನಡ
    • ದಾವಣಗೆರೆ
    • ಹುಬ್ಬಳ್ಳಿ-ಧಾರವಾಡ
    • ಬಳ್ಳಾರಿ
    • ಬಾಗಲಕೋಟೆ
    • ಬೀದರ್
    • ಬೆಂಗಳೂರು ನಗರ
    • ಬೆಂ. ಗ್ರಾಮಾಂತರ
    • ಬೆಳಗಾವಿ
    • ಕೊಡಗು
    • ಮಂಡ್ಯ
    • ಮೈಸೂರು
    • ಯಾದಗಿರಿ
    • ರಾಮನಗರ
    • ರಾಯಚೂರು
    • ವಿಜಯಪುರ
    • ಶಿವಮೊಗ್ಗ
    • ಹಾವೇರಿ
    • ಹಾಸನ
    • ವಿಜಯನಗರ
  • ರಾಷ್ಟ್ರೀಯ
  • ಸಿನೆಮಾ
  • ವಾಣಿಜ್ಯ
  • ಅಂಕಣ
    • ಅಜೇಯ್ ಕಿರಣ್ ಆಚಾರ್
    • ಪುನೀತ್ ಜಿ. ಕೂಡ್ಲೂರು
    • ಆನಂದ ಕಂದ
    • ನಾದ ಕಲ್ಪ
    • ಡಾ. ಮೈತ್ರೇಯಿ ಆದಿತ್ಯಪ್ರಸಾದ್
  • ರೈಲ್ವೆ ಸುದ್ದಿಗಳು
  • ಇತರೆ
    • ವಿಜ್ಞಾನ-ತಂತ್ರಜ್ಞಾನ
    • ಜಾಬ್-ಸ್ಟ್ರೀಟ್
    • ಕೈ ರುಚಿ
    • ನಿತ್ಯ ಪಂಚಾಂಗ/ದಿನ ವಿಶೇಷ
    • ಮುಂಜಾನೆ ಸುವಿಚಾರ
    • ಆಧ್ಯಾತ್ಮ/ಭಕ್ತಿಭಾವ

Copyright © 2026 Kalpa News. Designed by KIPL