ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ನಮ್ಮೂರ ಬಳಗ ಶಿವಮೊಗ್ಗದ ವತಿಯಿಂದ ಕೋಟೆ ಮಾರಿಕಾಂಬ ದೇವಿ ಜಾತ್ರಾ ಮಹೋತ್ಸವದ ಅಂಗವಾಗಿ ಫೆಬ್ರವರಿ 15ರಂದು ಹಮ್ಮಿಕೊಂಡಿರುವ ರಾಷ್ಟ್ರಮಟ್ಟದ ಬಾರಿ ಟಗರು ಕಾಳಗದ #National Level Tagaru Kalaga ಪೋಸ್ಟರ್ ನನ್ನು ಮಾನ್ಯ ಉಪಮುಖ್ಯಮಂತ್ರಿಡಿ.ಕೆ. ಶಿವಕುಮಾರ್ #DCM DK Shivakumar ಅವರು ನಗರದ ಕಿಮ್ಮನೆ ರೆಸಾರ್ಟ್ ನಲ್ಲಿ ಬಿಡುಗಡೆಗೊಳಿಸಿ ಶುಭ ಕೋರಿದರು.
ಈ ಸಂದರ್ಭದಲ್ಲಿ ಪ್ರಧಾನ ಸಂಚಾಲಕರಾದ ಕೆ.ರಂಗನಾಥ್, ಗೌರವ ಸಂಚಾಲಕ ಹೆಚ್.ಪಾಲಾಕ್ಷಿ, ಸಿ.ರವಿ ಹಾಪ್ ಕಾಮ್ಸ್ ಅಧ್ಯಕ್ಷ ವಿಜಯಕುಮಾರ್ ದನಿ, ಹಾಪ್ಕಾಮ್ಸ್ ನಿರ್ದೇಶಕ ಶರತ್ ಮರಿಯಪ್ಪ, ನಮ್ಮೂರ ಬಳಗದ ಸಂಚಾಲಕ ಹೆಚ್.ಪಿ. ಗಿರೀಶ್, ಟಿ. ಗುರುಪ್ರಸಾದ್, ದಿವಾಕರ್, ರಜನಿಕಾಂತ್ ಕೆ.ಎಲ್. ಪವನ್ ಹಾಗೂ ಇತರರು ಇದ್ದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 




















