ಕಲ್ಪ ಮೀಡಿಯಾ ಹೌಸ್ | ಬೆಂಗಳೂರು |
5 ವರ್ಷ ಪೂರ್ಣಾವಧಿಗೆ ಸಿದ್ದರಾಮಯ್ಯ #Siddharamaiah ಅವರೇ ಮುಖ್ಯಮಂತ್ರಿ ಆಗಿರುತ್ತಾರೆ ಎಂದು ಸಿಎಂ ಪುತ್ರ ಯತೀಂದ್ರ ಹೇಳಿಕೆ ನೀಡಿದ್ದು, ಈಗ ಮತ್ತೊಂದು ಸಂಘರ್ಷಕ್ಕೆ ದಾರಿ ಮಾಡಿ ಕೊಟ್ಟಿದೆ.
ಈ ಕುರಿತಂತೆ ಮಾತನಾಡಿರುವ ಯತೀಂದ್ರ, ನಾಯಕತ್ವ ಬದಲಾವಣೆ ಮಾಡಬೇಕು ಎಂಬ ಹಲವರ ಬೇಡಿಕೆಗೆ ಹೈಕಮಾಂಡ್ ಮನ್ನಣೆ ನೀಡಿಲ್ಲ. ಅದರ ಅರ್ಥ ನಮ್ಮ ತಂದೆ ಸಿದ್ದರಾಮಯ್ಯ ಅವರೇ 5 ವರ್ಷವೂ ಸಹ ಮುಖ್ಯಮಂತ್ರಿ #ChiefMinister ಆಗಿರುತ್ತಾರೆ ಎನ್ನುವುದಾಗಿದೆ. ಹೈಕಮಾಂಡ್ ಇದನ್ನು ನೇರವಾಗಿ ಹೇಳದೇ ಇದ್ದರೂ, ನಾಯಕರ ನಿರ್ಣಯಗಳೂ ಹಾಗೆಯೇ ಇವರ ಎಂದಿದ್ದಾರೆ.
ರಾಜ್ಯದ ಕೆಲವರು ನಾಯಕತ್ವ ಬದಲಾವಣೆಯಾಗಬೇಕು ಎಂದು ಹೈಕಮಾಂಡ್ ಮೇಲೆ ಒತ್ತಡ ಹೇರುತ್ತಿದ್ದಾರೆ. ಆದರೆ, ಅವರುಗಳಿಗೆ ಕೇಂದ್ರದ ನಾಯಕರು ಯಾವುದೇ ರೀತಿಯ ಮನ್ನಣೆ ನೀಡಿಲ್ಲ ಎಂದಿದ್ದಾರೆ.
ಡಿಸಿಎಂ ಡಿಕೆಶಿ ಟಕ್ಕರ್
ಇನ್ನು, 5 ವರ್ಷ ನಮ್ಮ ತಂದೆಯೇ ಸಿಎಂ ಆಗಿರುತ್ತಾರೆ ಎಂದಿರುವ ಯತೀಂದ್ರ ಮಾತಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ #DKShivakumar ಟಕ್ಕರ್ ನೀಡಿದ್ದಾರೆ.
ಈ ಕುರಿತಂತೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಅವರು, ಯತೀಂದ್ರ ಅವರೇ ನಮ್ಮ ಹೈಕಮಾಂಡ್. ಅವರು ಹೇಳಿದ ಮೇಲೆ ಮುಗಿಯಿತು. ಅವರೇ ನಮ್ಮ ಹೈಕಮಾಂಡ್ ಎಂದು ಅವರು ಹೇಳಿದ್ದನ್ನು ಗೌರವದಿಂದ ಸ್ವೀಕರಿಸೋಣ ಎಂದು ಹೇಳುವ ಮೂಲಕ ಚಾಟಿ ಬೀಸಿದ್ದಾರೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 



















