ಕಲ್ಪ ಮೀಡಿಯಾ ಹೌಸ್ | ಶಿವಮೊಗ್ಗ |
ಸಾಗರ ರಸ್ತೆಯಲ್ಲಿ ನಿಲ್ಲಿಸಿದ್ದ ಟ್ರಾಕ್ಟರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ವರದಿಯಾಗಿದೆ.
ಘಟನೆಯು ಮುದ್ದಿನಕೊಪ್ಪ ಟ್ರೀ ಪಾರ್ಕ್ ಬಳಿ ನಡೆದಿದ್ದು, ಚಾಮುಂಡಿಪುರ ಗ್ರಾಮದ ಶರವಣ (19) ಮೃತಪಟ್ಟ ಯುವಕ.
ಘಟನೆಯ ವಿವರ
ಯಮಹಾ ಬೈಕ್ನಲ್ಲಿ ಶಿವಮೊಗ್ಗದಿಂದ ಆಯನೂರು ಮಾರ್ಗವಾಗಿ ತೆರಳುತ್ತಿದ್ದರು. ಮುದ್ದಿನಕೊಪ್ಪ ಬಳಿ ಸೂಚನಾ ಫಲಕ ಅಥವಾ ರಿಫ್ಲೆಕ್ಟರ್ ಸ್ಟಿಕ್ಕರ್ ಇಲ್ಲದೆ ರಸ್ತೆಗೆ ಟ್ರಾಕ್ಟರ್ ನಿಲ್ಲಿಸಲಾಗಿತ್ತು. ಟ್ರಾಲಿಯ ಹಿಂಭಾಗಕ್ಕೆ ಬೈಕ್ ಡಿಕ್ಕಿ ಹೊಡೆದಿದ್ದು, ಶರವಣನ ಮುಖ ಮತ್ತು ಎದೆಗೆ ಗಂಭೀರ ಪೆಟ್ಟು ಬಿದ್ದಿದೆ. ತೀವ್ರ ರಕ್ತಸ್ರಾವದಿಂದಾಗಿ ಮೃತಪಟ್ಟಿದ್ದಾರೆ.
ಘಟನೆಗೆ ಟ್ರಾಕ್ಟರ್ ಚಾಲಕನ ಬೇಜವಾಬ್ದಾರಿತನವೇ ಕಾರಣ ಎಂದು ಶರವಣ ಅವರ ಪೋಷಕರು ದೂರಿನಲ್ಲಿ ಆರೋಪಿಸಿದ್ದಾರೆ.
ಕುಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news




















