ಕಲ್ಪ ಮೀಡಿಯಾ ಹೌಸ್ | ಶಿಕಾರಿಪುರ |
ಸಕಾರಾತ್ಮಕ ಚಿಂತನೆಯು ವ್ಯಕ್ತಿಯ ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಸುಧಾರಿಸಿ, ಒತ್ತಡ ಕಡಿಮೆ ಮಾಡಿ, ದೀರ್ಘಾಯುಷ್ಯಕ್ಕೆ ದಾರಿ ಮಾಡಿಕೊಡುತ್ತದೆ ಎಂದು ಕುಮದ್ವತಿ ಶಿಕ್ಷಣ ಮಹಾವಿದ್ಯಾಲಯದ ಪ್ರಾಚಾರ್ಯರು ಮತ್ತು ಆಡಳಿತ ಮಂಡಳಿ ಪ್ರತಿನಿಧಿ ಡಾ. ಶಿವಕುಮಾರ್ ತಿಳಿಸಿದರು.
ನಗರದ ಭವಾನಿ ರಾವ್ ಕೇರಿಯ ಮೈತ್ರಿ ಪ್ರಾಥಮಿಕ ಮತ್ತು ಕುಮದ್ವತಿ ಪ್ರೌಢಶಾಲೆಯ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ವಿಶೇಷ ಪ್ರೇರಣಾತ್ಮಕ ನುಡಿಗಳು ಎಂಬ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಿ ಮಾತನಾಡಿದರು
ವಿದ್ಯಾರ್ಥಿಗಳು ಸಕಾರಾತ್ಮಕ ಚಿಂತನೆ ಬೆಳೆಸಿಕೊಳ್ಳುವುದರಿಂದ ಜೀವನದಲ್ಲಿ ಯಶಸ್ಸು ಗಳಿಸಬಹುದು.ಮಕ್ಕಳ ಮನಸ್ಸಿನಲ್ಲಿ ಕನಸುಗಳು ಇರಬೇಕು. ಇದು ಆತ್ಮವಿಶ್ವಾಸ ಹೆಚ್ಚಿಸುವುದರೊಂದಿಗೆ ಸವಾಲುಗಳನ್ನು ಎದುರಿಸುವ ಸಾಮರ್ಥ್ಯ, ಉತ್ತಮ ಸಂಬಂಧಗಳು ಮತ್ತು ಯಶಸ್ಸನ್ನು ಸಾಧಿಸಲು ಸಹಕಾರಿಯಾಗಿದೆ ಎಂದರು.
ವಿದ್ಯಾರ್ಥಿಗಳು ಇಂದು ಏನು ಕನಸು ಕಾಣುತ್ತಾರೋ ಮುಂದೆ ಅದೇ ಆಗುತ್ತಾರೆ. ಈ ಹಿನ್ನೆಲೆಯಲ್ಲಿ ಉತ್ತಮ ಕನಸುಗಳ ಜತೆಗೆ ಸ್ಪಷ್ಟ ಗುರಿ ಇರಬೇಕು. ಸುಶಿಕ್ಷಿತರಾಗುವ ಜತೆಗೆ ಉತ್ತಮ ವ್ಯಕ್ತಿತ್ವ ಮೈಗೂಡಿಸಿಕೊಳ್ಳಬೇಕು.ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಭದ್ರ ಬುನಾದಿಯಾಗುತ್ತದೆ.ಬಲಿಷ್ಟ ರಾಷ್ಟ್ರ ನಿರ್ಮಾಣದಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದ್ದು, ನಕಾರಾತ್ಮ ಚಿಂತನೆಯಿಂದ ದೂರ ಉಳಿದು ಸಕಾರಾತ್ಮಕ ಚಿಂತನೆಗಳ ಮೂಲಕ ಬದುಕಿನಲ್ಲಿ ಯಶಸ್ಸು ಸಾದಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಉಪನ್ಯಾಸ ನೀಡಿದ ವಿದ್ಯಾರ್ಥಿಗಳಲ್ಲಿ ಕಲಿಕಾ ಆಸಕ್ತಿ, ಆತ್ಮವಿಶ್ವಾಸ ಮತ್ತು ಶಿಸ್ತನ್ನು ಬೆಳೆಸಲು ಪ್ರೇರಣೆಯ ಕಾರ್ಯಕ್ರಮಗಳು ಅತ್ಯಗತ್ಯ. ಇವು ಗುರಿ-ಆಧಾರಿತ ಕಲಿಕೆ, ನೈಜ-ಪ್ರಪಂಚದ ಉದಾಹರಣೆಗಳು, ಸಕಾರಾತ್ಮಕ ಪರಿಸರ, ಮತ್ತು ಯಶಸ್ವಿ ವ್ಯಕ್ತಿಗಳ ಕಥೆಗಳ ಮೂಲಕ ಸ್ವಯಂ-ಪ್ರೇರಣೆಯನ್ನು ಉತ್ತೇಜಿಸುತ್ತವೆ, ಇದು ಒತ್ತಡವನ್ನು ಕಡಿಮೆ ಮಾಡಿ ಉತ್ತಮ ಶೈಕ್ಷಣಿಕ ಸಾಧನೆಗೆ ದಾರಿ ಮಾಡಿಕೊಡುತ್ತದೆ. ವಿದ್ಯಾರ್ಥಿಗಳಿಗೆ ಸ್ವಯಂ ಪ್ರೇರಣೆ: ಯಶಸ್ವಿ ಜೀವನಕ್ಕೆ ಹಾದಿಯನ್ನು ತೆರೆಯುವುದು’ ಮೂಲಕ ನಿಮ್ಮ ಸಾಮರ್ಥ್ಯವನ್ನು ಅನ್ಲಾಕ್ ಮಾಡಿ. ಮಾರ್ಕ್ ಜುಕರ್ಬರ್ಗ್ ಮತ್ತು ಸ್ಟೀವ್ ಜಾಬ್ಸ್ರಂತಹ ಐಕಾನ್ಗಳಿಂದ ಪ್ರೇರಿತವಾದ ಸ್ವಯಂ ಪ್ರೇರಣೆಯ ಕೀಲಿಗಳನ್ನು ಅನ್ವೇಷಿಸಿ. ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಸಲಹೆಗಳು ಮತ್ತು ಮಾರ್ಗದರ್ಶನದೊಂದಿಗೆ ಸ್ವಯಂ ಪ್ರೇರಣೆ ನಿಮ್ಮ ಭವಿಷ್ಯವನ್ನು ಹೇಗೆ ರೂಪಿಸುತ್ತದೆ ಎಂಬುದನ್ನು ತಿಳಿಯಿರಿ ಎಂದು ತಿಳಿಸಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಪ್ರಾಚಾರ್ಯ ವಿಶ್ವನಾಥ ಪಿಮಾತನಾಡಿ, ಎಲ್ಲದರ ಬಗ್ಗೆಯೂ ಸಕಾರಾತ್ಮಕ ದೃಷ್ಟಿಕೋನವನ್ನು ಹೊಂದಿರಿ. ಇದು ನಿರಾಶಾವಾದಿ ಮನೋಭಾವವನ್ನು ನಾಶಪಡಿಸುತ್ತದೆ ಮತ್ತು ನಿಮ್ಮನ್ನು ಸಾಧನೆ ಮತ್ತು ಸಾಧನೆಯ ವೇದಿಕೆಗೆ ಕರೆದೊಯ್ಯುತ್ತದೆ.ಅರ್ಹ ಶಿಕ್ಷಕರಿಂದ ಸಮಾಲೋಚನೆಯು ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯಗಳನ್ನು ಅರ್ಥಮಾಡಿಕೊಳ್ಳಲು, ತಮ್ಮ ದುರ್ಬಲ ಕ್ಷೇತ್ರಗಳ ಬಗ್ಗೆ ಅವರ ಕಾಳಜಿಯನ್ನು ನಿವಾರಿಸಲು ಮತ್ತು ಅವರ ಕೆಟ್ಟ ಭಯಗಳನ್ನು ತೊಡೆದುಹಾಕಲು ಸಹಾಯ ಮಾಡುತ್ತದೆ.ಸಮಯ ನಿರ್ವಹಣೆ, ಒತ್ತಡ ನಿರ್ವಹಣೆ, ಕೌಶಲ್ಯ ವರ್ಧನೆ, ಅಧ್ಯಯನ ವಿಧಾನಗಳು ಇತ್ಯಾದಿಗಳ ಕುರಿತು ಈ ರೀತಿಯ ಸಮಾಲೋಚನೆ ಸಭೆಗಳನ್ನು ನಿರಂತರವಾಗಿ ಆಯೋಜಿಸಲಾಗುತ್ತದೆ. ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಒಟ್ಟಾರೆ ಅಭಿವೃದ್ಧಿಗೆ ಸಹಾಯ ಮಾಡುವ ಗುರಿಯನ್ನು ಈ ಕಾರ್ಯಕ್ರಮ ಹೊಂದಿದೆ ಎಂದರು.
ಕಾರ್ಯಕ್ರಮದಲ್ಲಿ ಶಾಲಾ ಪ್ರಾಭಾರಿ ಮುಖ್ಯ ಶಿಕ್ಷಕ ಪ್ರಶಾಂತ ಕುಬಸದ ಶಾಲಾ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಚಿರಂಜೀವಿ ಪ್ರಾರ್ಥಿಸಿ, ಪ್ರಿಯಾಂಕಗೌಡ ಸ್ವಾಗತಿಸಿ, ಪ್ರಣತಿ.ವಿ ವಂದಿಸಿ, ಅನಘ ಪಂಡಿತ ಕಾರ್ಯಕ್ರಮ ನಿರೂಪಿಸಿದರು.
ಸುದ್ಧಿ ಹಾಗೂ ಜಾಹೀರಾತಿಗಾಗಿ ಸಂಪರ್ಕಿಸಿ: Whatsapp: 9008761663, 9481252093 – info@kalpa.news 

















